Homeಮುಖಪುಟಕದನ ವಿರಾಮ ಒಪ್ಪದಿದ್ದರೆ ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ; ಮೋದಿ ಒಪ್ಪಿಕೊಂಡಿದ್ದೇಕೆ? ವ್ಯಾಪಾರಿಗಳು ಯಾರು?

ಕದನ ವಿರಾಮ ಒಪ್ಪದಿದ್ದರೆ ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ; ಮೋದಿ ಒಪ್ಪಿಕೊಂಡಿದ್ದೇಕೆ? ವ್ಯಾಪಾರಿಗಳು ಯಾರು?

- Advertisement -
- Advertisement -

ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಾಗಿ ಹೇಳಿಕೊಂಡಿದ್ದ ಟ್ರಂಪ್, ಸೋಮವಾರ ಹೊಸದಾಗಿ, ವ್ಯಾಪಾರ ನಿಲ್ಲಿಸುವುದಾಗಿ ಬೆದರಿಕೆ ಹಾಕಿದ ಕಾರಣಕ್ಕೆ ಉಭಯ ದೇಶಗಳು ಒಪ್ಪಂದಕ್ಕೆ ಒಪ್ಪಿಕೊಂಡವು ಎಂದು ಹೇಳಿದ ನಂತರ ದೇಶದಾದ್ಯಂತ ಭಾರತದ ಸಾರ್ವಭೌಮತೆಯ ಬಗ್ಗೆ ವಿವಾದಗಳು ಎದ್ದಿವೆ. ಈ ಬಗ್ಗೆ ವಿಪಕ್ಷಗಳು ಸೇರಿದಂತೆ ಹೋರಾಟಗಾರರು ಪ್ರಧಾನಿ ಮೋದಿಗೆ ಸ್ಪಷ್ಟನೆ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ. ವ್ಯಾಪಾರಿಗಳ ಹಿತಾಸಕ್ತಿಗಾಗಿ ಪ್ರಧಾನಿ ಮೋದಿ ದೇಶದ ಸಾರ್ವಭೌಮತೆಯನ್ನು, ದೇಶದ ಗೌರವವನ್ನು ಮತ್ತೊಂದು ದೇಶದ ಮುಂದೆ ಕಳೆದುಕೊಳ್ಳುವುದು ಸರಿಯೆ ಎಂದು ಪ್ರಶ್ನಿಸಿದ್ದಾರೆ. ಕದನ ವಿರಾಮ ಒಪ್ಪದಿದ್ದರೆ

ಪಹಲ್ಗಾಮ್ ದಾಳಿಯು ಪಾಕಿಸ್ತಾನ ಪ್ರೇರಿತ ಎಂದು ಹೇಳಿಕೊಂಡಿದ್ದ ಭಾರತ, ಆಪರೇಷನ್ ಸಿಂಧೂರವನ್ನು ನಡೆಸಿ ನೆರೆಯ ದೇಶದ 9 ಭಯೋತ್ಪಾದಕ ಕೇಂದ್ರಗಳನ್ನು ನಾಶ ಮಾಡಿದ್ದಾಗಿ ತಿಳಿಸಿತ್ತು. ಇದರ ನಂತರ ಉಭಯ ದೇಶಗಳ ನಡುವೆ ನಾಲ್ಕು ದಿನಗಳ ಕಾಲ ನಡೆದ ಮಿಲಿಟರಿ ಸಂಘರ್ಷದಲ್ಲಿ ಭಾರತದ ಹಲವಾರು ನಾಗರಿಕರು ಮತ್ತು ಸೈನಿಕರು ಮೃತಪಟ್ಟಿದ್ದರು. ಅದಾಗ್ಯೂ, ಶನಿವಾರ ಕದನ ವಿರಾಮಕ್ಕೆ ಉಭಯ ದೇಶಗಳು ಒಪ್ಪಿಕೊಂಡಿದೆ ಎಂದು ಭಾರತ ಘೋಷಿಸುವ ಮುಂಚೆಯೆ, ಕದನ ವಿರಾಮಕ್ಕೆ ತಾನು ಮಧ್ಯಸ್ಥಿಕೆ ವಹಿಸಿದ್ದಾಗಿ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದರು.

ಅದಾಗ್ಯೂ, ಈ ವೇಳೆ ಕೂಡಾ ಭಾರತದ ಸಾರ್ವಭೌಮತೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಅದರ ನಂತರ ಸೋಮವಾರ ಮತ್ತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಮಾಡಲಾಗಿರುವ ವಿಡಿಯೊದಲ್ಲಿ ಅಮೆರಿಕೆ ಅಧ್ಯಕ್ಷ ಉಭಯ ದೇಶಗಳಿಗೆ ವ್ಯಾಪಾರ ಬೇಕೆಂದರೆ ಯುದ್ಧ ನಿಲ್ಲಿಸಿ ಎಂದು ಹೇಳಿದ ನಂತರ ಅವು ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದವು ಎಂದು ಹೇಳಿದ್ದಾರೆ. ಈ ಹೇಳಿಕೆಯ ನಂತರ ಭಾರತ ಸಾರ್ವಭೌಮತೆಯ ಬಗ್ಗೆ ದೇಶದಾದ್ಯಂತ ಪ್ರಶ್ನೆಗಳು ಎದ್ದಿವೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಸಮಸ್ಯೆಗಳನ್ನು ದ್ವಿಪಕ್ಷೀಯ ಒಪ್ಪಂದದ ಮೂಲಕ ಸಾಧ್ಯವಿಲ್ಲವೆ ಎಂದು ವಿಪಕ್ಷಗಳು ಕೇಳಿದ್ದು, ಅದಕ್ಕಾಗಿ ಮತ್ತೊಂದು ದೇಶದ ಮಧ್ಯಸ್ಥಿಕೆ ಯಾಕೆ ಬೇಕು ಎಂದು ಪ್ರಶ್ನಿಸಿದ್ದಾರೆ.

ಭಾರತ ಮತ್ತು ಅಮೆರಿಕದ ನಡುವಿನ ವ್ಯಾಪಾರ

ಭಾರತ ಮತ್ತು ಅಮೆರಿಕ ಸಂಯುಕ್ತ ಸಂಸ್ಥಾನಗಳ ನಡುವಿನ ವ್ಯಾಪಾರ ಸಂಬಂಧಗಳು ವಿಶ್ವದ ಅತಿದೊಡ್ಡ ಆರ್ಥಿಕ ಸಂಬಂಧಗಳಲ್ಲಿ ಒಂದಾಗಿದೆ. ಇದು ದ್ವಿಪಕ್ಷೀಯ ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ ಸಹಕಾರದ ಮೂಲಕ ಗುಣಾತ್ಮಕವಾಗಿ ಬೆಳೆಯುತ್ತಿದೆ. 2023ರಲ್ಲಿ, ಭಾರತ-ಅಮೆರಿಕ ಒಟ್ಟು ವ್ಯಾಪಾರವು ಸರಕು ಮತ್ತು ಸೇವೆಗಳಲ್ಲಿ $191 ಬಿಲಿಯನ್‌ಗೆ ತಲುಪಿದೆ. ಇದರಲ್ಲಿ ಭಾರತದಿಂದ ಅಮೆರಿಕಕ್ಕೆ ರಫ್ತು $118 ಬಿಲಿಯನ್ ಮತ್ತು ಆಮದು $73 ಬಿಲಿಯನ್ ಆಗಿತ್ತು.

ಅಮೆರಿಕಾದಲ್ಲಿ ಭಾರತೀಯ ಕಂಪನಿಗಳಿಂದ ಒಟ್ಟು ವಿದೇಶಿ ನೇರ ಹೂಡಿಕೆ (FDI) $40 ಬಿಲಿಯನ್‌ಗಿಂತ ಹೆಚ್ಚಾಗಿದೆ. ಅಮೆರಿಕಾದಲ್ಲಿ ಭಾರತದ 163 ಕಂಪನಿಗಳು ಒಟ್ಟು $40 ಬಿಲಿಯನ್ ಹೂಡಿಕೆಯನ್ನು ಮಾಡಿದೆ.

ಪ್ರಮುಖ ಸರಕುಗಳು: ಭಾರತವು ಅಮೆರಿಕಕ್ಕೆ ಔಷಧಗಳು, ಜವಳಿ, ರತ್ನಗಂಬಳಿಗಳು, ಮಾಹಿತಿ ತಂತ್ರಜ್ಞಾನ ಉತ್ಪನ್ನಗಳು ಮತ್ತು ಯಂತ್ರೋಪಕರಣಗಳನ್ನು ರಫ್ತು ಮಾಡುತ್ತದೆ. ಅಮೆರಿಕದಿಂದ ಭಾರತಕ್ಕೆ ವಿಮಾನಯಾನ ಉತ್ಪನ್ನಗಳು, ಯಂತ್ರೋಪಕರಣಗಳು, ಕೃಷಿ ಉತ್ಪನ್ನಗಳು ಮತ್ತು ತೈಲ-ಗ್ಯಾಸ್ ಆಮದಾಗುತ್ತವೆ.

ಸೇವೆಗಳು: ಭಾರತದ ಐಟಿ ಮತ್ತು ಸಾಫ್ಟ್‌ವೇರ್ ಸೇವೆಗಳು, ವಿಶೇಷವಾಗಿ ಬೆಂಗಳೂರು ಮತ್ತು ಹೈದರಾಬಾದ್‌ನಿಂದ, ಅಮೆರಿಕದ ಮಾರುಕಟ್ಟೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. 2022ರಲ್ಲಿ, ಭಾರತದ ಸೇವಾ ರಫ್ತು ಅಮೆರಿಕಕ್ಕೆ $32 ಬಿಲಿಯನ್‌ಗಿಂತ ಹೆಚ್ಚಿತ್ತು.

ವಿದೇಶಿ ನೇರ ಹೂಡಿಕೆ (FDI):

ಅಮೆರಿಕವು ಭಾರತದಲ್ಲಿ ಅತಿದೊಡ್ಡ ವಿದೇಶಿ ಹೂಡಿಕೆದಾರರಲ್ಲಿ ಒಂದಾಗಿದೆ, 2000-2023ರ ನಡುವೆ $61 ಬಿಲಿಯನ್‌ಗಿಂತ ಹೆಚ್ಚಿನ FDI ಹರಿದುಬಂದಿದೆ. ಅಮೆರಿಕದ ಕಂಪನಿಗಳಾದ ಗೂಗಲ್, ಅಮೆಜಾನ್, ಮತ್ತು ಟೆಸ್ಲಾ ಭಾರತದಲ್ಲಿ ತಮ್ಮ ಕಾರ್ಯಾಚರಣೆಯನ್ನು ವಿಸ್ತರಿಸುತ್ತಿವೆ. ಭಾರತೀಯ ಕಂಪನಿಗಳಾದ ಟಾಟಾ, ರಿಲಯನ್ಸ್, ಮತ್ತು ಇನ್ಫೋಸಿಸ್ ಅಮೆರಿಕದಲ್ಲಿ ತಂತ್ರಜ್ಞಾನ, ಉತ್ಪಾದನೆ ಮತ್ತು ಸೇವಾ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಿವೆ.

ಅಮೆರಿಕಾದಲ್ಲಿ ಅತ್ಯಂತ ಹೆಚ್ಚು ಹೂಡಿಕೆ ಮಾಡಿರುವವರು ಯಾರು?

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿಗಳಾದ ಗೌತಮ್ ಅದಾನಿ (ಅದಾನಿ ಗ್ರೂಪ್) ಮತ್ತು ಮುಕೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್) ಅಮೆರಿಕದಲ್ಲಿ ಅತ್ಯಂತ ಹೆಚ್ಚು ಹೂಡಿಕೆ ಮಾಡಿರುವ ಭಾರತೀಯ ಉದ್ಯಮಿಗಳಾಗಿದ್ದಾರೆ. ಈ ಇಬ್ಬರು ಉದ್ಯಮಿಗಳ ಕಂಪನಿಗಳು ಶಕ್ತಿ, ಮೂಲಸೌಕರ್ಯ, ತಂತ್ರಜ್ಞಾನ, ಮತ್ತು ಚಿಲ್ಲರೆ ವ್ಯಾಪಾರ ಕ್ಷೇತ್ರಗಳಲ್ಲಿ ಗಮನಾರ್ಹ ಹೂಡಿಕೆಗಳನ್ನು ಮಾಡಿವೆ.

ಗೌತಮ್ ಅದಾನಿ (ಅದಾನಿ ಗ್ರೂಪ್):

ಅದಾನಿ ಗ್ರೂಪ್ 2024ರಲ್ಲಿ ಅಮೆರಿಕದಲ್ಲಿ $10 ಬಿಲಿಯನ್ (ಸುಮಾರು ₹83,000 ಕೋಟಿ) ಹೂಡಿಕೆಯ ಯೋಜನೆಯನ್ನು ಘೋಷಿಸಿತ್ತು. ಇದು ಶಕ್ತಿ (ವಿಶೇಷವಾಗಿ ಹಸಿರು ಶಕ್ತಿ) ಮತ್ತು ಮೂಲಸೌಕರ್ಯ ಕ್ಷೇತ್ರಗಳನ್ನು ಒಳಗೊಂಡಿದೆ. ಈ ಹೂಡಿಕೆಯು ಭಾರತೀಯ ಕಂಪನಿಗಳು ಅಮೆರಿಕಾದಲ್ಲಿ ಮಾಡಲಾದ ಒಟ್ಟು $40 ಬಿಲಿಯನ್ ಹೂಡಿಕೆಯಲ್ಲಿ ಸುಮಾರು 25% ಪಾಲನ್ನು ಹೊಂದಿದೆ.

ಮುಕೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್):

ವಾಸ್ತವದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌ನ ನೇರ ಹೂಡಿಕೆಯ ನಿಖರ ಮೊತ್ತವನ್ನು ಸಾರ್ವಜನಿಕವಾಗಿ ಬಹಿರಂಗವಾಗಿಲ್ಲ ಎಂದು ವರದಿಗಳು ಹೇಳುತ್ತವೆ. ಅದಾಗ್ಯೂ ಅಂದಾಜಿನ ಪ್ರಕಾರ, ಅಮೆರಿಕಾದಲ್ಲಿ ಭಾರತೀಯರು ಹೂಡಿಕೆ ಮಾಡಿರುವ ಒಟ್ಟು ಮೊತ್ತದ 10-15% ಪಾಲಿನಷ್ಟಿದೆ ಎನ್ನಲಾಗಿದೆ.

ಮುಖೇಶ್ ಅಂಬಾನಿಯ ರಿಲಯನ್ಸ್‌ ಸಂಸ್ಥೆಯು ತೈಲ ಶುದ್ಧೀಕರಣ ಮತ್ತು ಪೆಟ್ರೋಕೆಮಿಕಲ್ ವ್ಯವಹಾರಗಳನ್ನು ನಡೆಸುತ್ತಿದೆ. ಕಂಪನಿಯು ಅಮೆರಿಕದಿಂದ $33 ಬಿಲಿಯನ್ ಮೌಲ್ಯದ ಕಚ್ಚಾ ತೈಲ ಆಮದು ಮಾಡಿಕೊಂಡಿದ್ದು, ಶಕ್ತಿ ಮತ್ತು ಡಿಜಿಟಲ್ ಕ್ಷೇತ್ರಗಳಲ್ಲಿ ಗಮನಾರ್ಹ ಹೂಡಿಕೆಗಳನ್ನು ಮಾಡಿದೆ ಎನ್ನಲಾಗಿದೆ. Jio Platforms ಮೂಲಕ ಡಿಜಿಟಲ್ ಸೇವೆಗಳು ಮತ್ತು ಟೆಕ್ ಆವಿಷ್ಕಾರಗಳನ್ನು, ರೀಟೇಲ್ ಮತ್ತು ಇ-ಕಾಮರ್ಸ್ ವಿಭಾಗಗಳಲ್ಲಿ ಹೂಡಿಕೆ ಮಾಡಿದೆ ಎಂದು ವರದಿಯಾಗಿದೆ.

ಇತರ ಗಮನಾರ್ಹ ಭಾರತೀಯ ಕಂಪನಿಗಳ ಹೂಡಿಕೆ:

ಅದಾನಿ ಮತ್ತು ಅಂಬಾನಿ ಮಾತ್ರವಲ್ಲದೆ ಭಾರತದ ಇತರ ಕಂಪನಿಗಳು ಕೂಡಾ ಅಮೆರಿಕದಲ್ಲಿ ಗಣನೀಯ ಹೂಡಿಕೆ ಮಾಡಿವೆ:

  • ಟಾಟಾ ಗ್ರೂಪ್: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ಮತ್ತು ಜಾಗ್ವಾರ್ ಲ್ಯಾಂಡ್ ರೋವರ್ (JLR) ಮೂಲಕ $20 ಬಿಲಿಯನ್ಗಿಂತ ಹೆಚ್ಚಿನ ವಿಲೀನ-ಸ್ವಾಧೀನ (M&A) ಒಪ್ಪಂದಗಳನ್ನು ಮಾಡಿಕೊಂಡಿದೆ.
  • ಆದಿತ್ಯ ಬಿರ್ಲಾ ಗ್ರೂಪ್: 2025ರಲ್ಲಿ ಟೆಕ್ಸಾಸ್‌ನಲ್ಲಿ $50 ಮಿಲಿಯನ್ ಹೂಡಿಕೆಯೊಂದಿಗೆ ಎಪಾಕ್ಸಿ ರೆಸಿನ್ ಉತ್ಪಾದನಾ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿದೆ.
  • ಒಯೊ: 2025ರಲ್ಲಿ ಅಮೆರಿಕದ G6 ಹಾಸ್ಪಿಟಾಲಿಟಿಯ ಡಿಜಿಟಲ್ ಆಸ್ತಿಗಳಲ್ಲಿ $10 ಮಿಲಿಯನ್ (₹86.69 ಕೋಟಿ) ಹೂಡಿಕೆ ಘೋಷಿಸಿದೆ.
  • ಜಯ್ ಚೌಧರಿ (Zscaler): ಜಯ್ ಚೌಧರಿ ಅವರ Zscaler ಕಂಪನಿಯು ಸೈಬರ್‌ಸೆಕ್ಯುರಿಟಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತದೆ. ಅವರ ಆಸ್ತಿಯ ಮೌಲ್ಯ $9.37 ಬಿಲಿಯನ್ ಆಗಿದೆ. ಕದನ ವಿರಾಮ ಒಪ್ಪದಿದ್ದರೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...