Homeಮುಖಪುಟಕದನ ವಿರಾಮ ಒಪ್ಪದಿದ್ದರೆ ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ; ಮೋದಿ ಒಪ್ಪಿಕೊಂಡಿದ್ದೇಕೆ? ವ್ಯಾಪಾರಿಗಳು ಯಾರು?

ಕದನ ವಿರಾಮ ಒಪ್ಪದಿದ್ದರೆ ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ; ಮೋದಿ ಒಪ್ಪಿಕೊಂಡಿದ್ದೇಕೆ? ವ್ಯಾಪಾರಿಗಳು ಯಾರು?

- Advertisement -
- Advertisement -

ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಾಗಿ ಹೇಳಿಕೊಂಡಿದ್ದ ಟ್ರಂಪ್, ಸೋಮವಾರ ಹೊಸದಾಗಿ, ವ್ಯಾಪಾರ ನಿಲ್ಲಿಸುವುದಾಗಿ ಬೆದರಿಕೆ ಹಾಕಿದ ಕಾರಣಕ್ಕೆ ಉಭಯ ದೇಶಗಳು ಒಪ್ಪಂದಕ್ಕೆ ಒಪ್ಪಿಕೊಂಡವು ಎಂದು ಹೇಳಿದ ನಂತರ ದೇಶದಾದ್ಯಂತ ಭಾರತದ ಸಾರ್ವಭೌಮತೆಯ ಬಗ್ಗೆ ವಿವಾದಗಳು ಎದ್ದಿವೆ. ಈ ಬಗ್ಗೆ ವಿಪಕ್ಷಗಳು ಸೇರಿದಂತೆ ಹೋರಾಟಗಾರರು ಪ್ರಧಾನಿ ಮೋದಿಗೆ ಸ್ಪಷ್ಟನೆ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ. ವ್ಯಾಪಾರಿಗಳ ಹಿತಾಸಕ್ತಿಗಾಗಿ ಪ್ರಧಾನಿ ಮೋದಿ ದೇಶದ ಸಾರ್ವಭೌಮತೆಯನ್ನು, ದೇಶದ ಗೌರವವನ್ನು ಮತ್ತೊಂದು ದೇಶದ ಮುಂದೆ ಕಳೆದುಕೊಳ್ಳುವುದು ಸರಿಯೆ ಎಂದು ಪ್ರಶ್ನಿಸಿದ್ದಾರೆ. ಕದನ ವಿರಾಮ ಒಪ್ಪದಿದ್ದರೆ

ಪಹಲ್ಗಾಮ್ ದಾಳಿಯು ಪಾಕಿಸ್ತಾನ ಪ್ರೇರಿತ ಎಂದು ಹೇಳಿಕೊಂಡಿದ್ದ ಭಾರತ, ಆಪರೇಷನ್ ಸಿಂಧೂರವನ್ನು ನಡೆಸಿ ನೆರೆಯ ದೇಶದ 9 ಭಯೋತ್ಪಾದಕ ಕೇಂದ್ರಗಳನ್ನು ನಾಶ ಮಾಡಿದ್ದಾಗಿ ತಿಳಿಸಿತ್ತು. ಇದರ ನಂತರ ಉಭಯ ದೇಶಗಳ ನಡುವೆ ನಾಲ್ಕು ದಿನಗಳ ಕಾಲ ನಡೆದ ಮಿಲಿಟರಿ ಸಂಘರ್ಷದಲ್ಲಿ ಭಾರತದ ಹಲವಾರು ನಾಗರಿಕರು ಮತ್ತು ಸೈನಿಕರು ಮೃತಪಟ್ಟಿದ್ದರು. ಅದಾಗ್ಯೂ, ಶನಿವಾರ ಕದನ ವಿರಾಮಕ್ಕೆ ಉಭಯ ದೇಶಗಳು ಒಪ್ಪಿಕೊಂಡಿದೆ ಎಂದು ಭಾರತ ಘೋಷಿಸುವ ಮುಂಚೆಯೆ, ಕದನ ವಿರಾಮಕ್ಕೆ ತಾನು ಮಧ್ಯಸ್ಥಿಕೆ ವಹಿಸಿದ್ದಾಗಿ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದರು.

ಅದಾಗ್ಯೂ, ಈ ವೇಳೆ ಕೂಡಾ ಭಾರತದ ಸಾರ್ವಭೌಮತೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಅದರ ನಂತರ ಸೋಮವಾರ ಮತ್ತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಮಾಡಲಾಗಿರುವ ವಿಡಿಯೊದಲ್ಲಿ ಅಮೆರಿಕೆ ಅಧ್ಯಕ್ಷ ಉಭಯ ದೇಶಗಳಿಗೆ ವ್ಯಾಪಾರ ಬೇಕೆಂದರೆ ಯುದ್ಧ ನಿಲ್ಲಿಸಿ ಎಂದು ಹೇಳಿದ ನಂತರ ಅವು ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದವು ಎಂದು ಹೇಳಿದ್ದಾರೆ. ಈ ಹೇಳಿಕೆಯ ನಂತರ ಭಾರತ ಸಾರ್ವಭೌಮತೆಯ ಬಗ್ಗೆ ದೇಶದಾದ್ಯಂತ ಪ್ರಶ್ನೆಗಳು ಎದ್ದಿವೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಸಮಸ್ಯೆಗಳನ್ನು ದ್ವಿಪಕ್ಷೀಯ ಒಪ್ಪಂದದ ಮೂಲಕ ಸಾಧ್ಯವಿಲ್ಲವೆ ಎಂದು ವಿಪಕ್ಷಗಳು ಕೇಳಿದ್ದು, ಅದಕ್ಕಾಗಿ ಮತ್ತೊಂದು ದೇಶದ ಮಧ್ಯಸ್ಥಿಕೆ ಯಾಕೆ ಬೇಕು ಎಂದು ಪ್ರಶ್ನಿಸಿದ್ದಾರೆ.

ಭಾರತ ಮತ್ತು ಅಮೆರಿಕದ ನಡುವಿನ ವ್ಯಾಪಾರ

ಭಾರತ ಮತ್ತು ಅಮೆರಿಕ ಸಂಯುಕ್ತ ಸಂಸ್ಥಾನಗಳ ನಡುವಿನ ವ್ಯಾಪಾರ ಸಂಬಂಧಗಳು ವಿಶ್ವದ ಅತಿದೊಡ್ಡ ಆರ್ಥಿಕ ಸಂಬಂಧಗಳಲ್ಲಿ ಒಂದಾಗಿದೆ. ಇದು ದ್ವಿಪಕ್ಷೀಯ ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ ಸಹಕಾರದ ಮೂಲಕ ಗುಣಾತ್ಮಕವಾಗಿ ಬೆಳೆಯುತ್ತಿದೆ. 2023ರಲ್ಲಿ, ಭಾರತ-ಅಮೆರಿಕ ಒಟ್ಟು ವ್ಯಾಪಾರವು ಸರಕು ಮತ್ತು ಸೇವೆಗಳಲ್ಲಿ $191 ಬಿಲಿಯನ್‌ಗೆ ತಲುಪಿದೆ. ಇದರಲ್ಲಿ ಭಾರತದಿಂದ ಅಮೆರಿಕಕ್ಕೆ ರಫ್ತು $118 ಬಿಲಿಯನ್ ಮತ್ತು ಆಮದು $73 ಬಿಲಿಯನ್ ಆಗಿತ್ತು.

ಅಮೆರಿಕಾದಲ್ಲಿ ಭಾರತೀಯ ಕಂಪನಿಗಳಿಂದ ಒಟ್ಟು ವಿದೇಶಿ ನೇರ ಹೂಡಿಕೆ (FDI) $40 ಬಿಲಿಯನ್‌ಗಿಂತ ಹೆಚ್ಚಾಗಿದೆ. ಅಮೆರಿಕಾದಲ್ಲಿ ಭಾರತದ 163 ಕಂಪನಿಗಳು ಒಟ್ಟು $40 ಬಿಲಿಯನ್ ಹೂಡಿಕೆಯನ್ನು ಮಾಡಿದೆ.

ಪ್ರಮುಖ ಸರಕುಗಳು: ಭಾರತವು ಅಮೆರಿಕಕ್ಕೆ ಔಷಧಗಳು, ಜವಳಿ, ರತ್ನಗಂಬಳಿಗಳು, ಮಾಹಿತಿ ತಂತ್ರಜ್ಞಾನ ಉತ್ಪನ್ನಗಳು ಮತ್ತು ಯಂತ್ರೋಪಕರಣಗಳನ್ನು ರಫ್ತು ಮಾಡುತ್ತದೆ. ಅಮೆರಿಕದಿಂದ ಭಾರತಕ್ಕೆ ವಿಮಾನಯಾನ ಉತ್ಪನ್ನಗಳು, ಯಂತ್ರೋಪಕರಣಗಳು, ಕೃಷಿ ಉತ್ಪನ್ನಗಳು ಮತ್ತು ತೈಲ-ಗ್ಯಾಸ್ ಆಮದಾಗುತ್ತವೆ.

ಸೇವೆಗಳು: ಭಾರತದ ಐಟಿ ಮತ್ತು ಸಾಫ್ಟ್‌ವೇರ್ ಸೇವೆಗಳು, ವಿಶೇಷವಾಗಿ ಬೆಂಗಳೂರು ಮತ್ತು ಹೈದರಾಬಾದ್‌ನಿಂದ, ಅಮೆರಿಕದ ಮಾರುಕಟ್ಟೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. 2022ರಲ್ಲಿ, ಭಾರತದ ಸೇವಾ ರಫ್ತು ಅಮೆರಿಕಕ್ಕೆ $32 ಬಿಲಿಯನ್‌ಗಿಂತ ಹೆಚ್ಚಿತ್ತು.

ವಿದೇಶಿ ನೇರ ಹೂಡಿಕೆ (FDI):

ಅಮೆರಿಕವು ಭಾರತದಲ್ಲಿ ಅತಿದೊಡ್ಡ ವಿದೇಶಿ ಹೂಡಿಕೆದಾರರಲ್ಲಿ ಒಂದಾಗಿದೆ, 2000-2023ರ ನಡುವೆ $61 ಬಿಲಿಯನ್‌ಗಿಂತ ಹೆಚ್ಚಿನ FDI ಹರಿದುಬಂದಿದೆ. ಅಮೆರಿಕದ ಕಂಪನಿಗಳಾದ ಗೂಗಲ್, ಅಮೆಜಾನ್, ಮತ್ತು ಟೆಸ್ಲಾ ಭಾರತದಲ್ಲಿ ತಮ್ಮ ಕಾರ್ಯಾಚರಣೆಯನ್ನು ವಿಸ್ತರಿಸುತ್ತಿವೆ. ಭಾರತೀಯ ಕಂಪನಿಗಳಾದ ಟಾಟಾ, ರಿಲಯನ್ಸ್, ಮತ್ತು ಇನ್ಫೋಸಿಸ್ ಅಮೆರಿಕದಲ್ಲಿ ತಂತ್ರಜ್ಞಾನ, ಉತ್ಪಾದನೆ ಮತ್ತು ಸೇವಾ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಿವೆ.

ಅಮೆರಿಕಾದಲ್ಲಿ ಅತ್ಯಂತ ಹೆಚ್ಚು ಹೂಡಿಕೆ ಮಾಡಿರುವವರು ಯಾರು?

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿಗಳಾದ ಗೌತಮ್ ಅದಾನಿ (ಅದಾನಿ ಗ್ರೂಪ್) ಮತ್ತು ಮುಕೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್) ಅಮೆರಿಕದಲ್ಲಿ ಅತ್ಯಂತ ಹೆಚ್ಚು ಹೂಡಿಕೆ ಮಾಡಿರುವ ಭಾರತೀಯ ಉದ್ಯಮಿಗಳಾಗಿದ್ದಾರೆ. ಈ ಇಬ್ಬರು ಉದ್ಯಮಿಗಳ ಕಂಪನಿಗಳು ಶಕ್ತಿ, ಮೂಲಸೌಕರ್ಯ, ತಂತ್ರಜ್ಞಾನ, ಮತ್ತು ಚಿಲ್ಲರೆ ವ್ಯಾಪಾರ ಕ್ಷೇತ್ರಗಳಲ್ಲಿ ಗಮನಾರ್ಹ ಹೂಡಿಕೆಗಳನ್ನು ಮಾಡಿವೆ.

ಗೌತಮ್ ಅದಾನಿ (ಅದಾನಿ ಗ್ರೂಪ್):

ಅದಾನಿ ಗ್ರೂಪ್ 2024ರಲ್ಲಿ ಅಮೆರಿಕದಲ್ಲಿ $10 ಬಿಲಿಯನ್ (ಸುಮಾರು ₹83,000 ಕೋಟಿ) ಹೂಡಿಕೆಯ ಯೋಜನೆಯನ್ನು ಘೋಷಿಸಿತ್ತು. ಇದು ಶಕ್ತಿ (ವಿಶೇಷವಾಗಿ ಹಸಿರು ಶಕ್ತಿ) ಮತ್ತು ಮೂಲಸೌಕರ್ಯ ಕ್ಷೇತ್ರಗಳನ್ನು ಒಳಗೊಂಡಿದೆ. ಈ ಹೂಡಿಕೆಯು ಭಾರತೀಯ ಕಂಪನಿಗಳು ಅಮೆರಿಕಾದಲ್ಲಿ ಮಾಡಲಾದ ಒಟ್ಟು $40 ಬಿಲಿಯನ್ ಹೂಡಿಕೆಯಲ್ಲಿ ಸುಮಾರು 25% ಪಾಲನ್ನು ಹೊಂದಿದೆ.

ಮುಕೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್):

ವಾಸ್ತವದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌ನ ನೇರ ಹೂಡಿಕೆಯ ನಿಖರ ಮೊತ್ತವನ್ನು ಸಾರ್ವಜನಿಕವಾಗಿ ಬಹಿರಂಗವಾಗಿಲ್ಲ ಎಂದು ವರದಿಗಳು ಹೇಳುತ್ತವೆ. ಅದಾಗ್ಯೂ ಅಂದಾಜಿನ ಪ್ರಕಾರ, ಅಮೆರಿಕಾದಲ್ಲಿ ಭಾರತೀಯರು ಹೂಡಿಕೆ ಮಾಡಿರುವ ಒಟ್ಟು ಮೊತ್ತದ 10-15% ಪಾಲಿನಷ್ಟಿದೆ ಎನ್ನಲಾಗಿದೆ.

ಮುಖೇಶ್ ಅಂಬಾನಿಯ ರಿಲಯನ್ಸ್‌ ಸಂಸ್ಥೆಯು ತೈಲ ಶುದ್ಧೀಕರಣ ಮತ್ತು ಪೆಟ್ರೋಕೆಮಿಕಲ್ ವ್ಯವಹಾರಗಳನ್ನು ನಡೆಸುತ್ತಿದೆ. ಕಂಪನಿಯು ಅಮೆರಿಕದಿಂದ $33 ಬಿಲಿಯನ್ ಮೌಲ್ಯದ ಕಚ್ಚಾ ತೈಲ ಆಮದು ಮಾಡಿಕೊಂಡಿದ್ದು, ಶಕ್ತಿ ಮತ್ತು ಡಿಜಿಟಲ್ ಕ್ಷೇತ್ರಗಳಲ್ಲಿ ಗಮನಾರ್ಹ ಹೂಡಿಕೆಗಳನ್ನು ಮಾಡಿದೆ ಎನ್ನಲಾಗಿದೆ. Jio Platforms ಮೂಲಕ ಡಿಜಿಟಲ್ ಸೇವೆಗಳು ಮತ್ತು ಟೆಕ್ ಆವಿಷ್ಕಾರಗಳನ್ನು, ರೀಟೇಲ್ ಮತ್ತು ಇ-ಕಾಮರ್ಸ್ ವಿಭಾಗಗಳಲ್ಲಿ ಹೂಡಿಕೆ ಮಾಡಿದೆ ಎಂದು ವರದಿಯಾಗಿದೆ.

ಇತರ ಗಮನಾರ್ಹ ಭಾರತೀಯ ಕಂಪನಿಗಳ ಹೂಡಿಕೆ:

ಅದಾನಿ ಮತ್ತು ಅಂಬಾನಿ ಮಾತ್ರವಲ್ಲದೆ ಭಾರತದ ಇತರ ಕಂಪನಿಗಳು ಕೂಡಾ ಅಮೆರಿಕದಲ್ಲಿ ಗಣನೀಯ ಹೂಡಿಕೆ ಮಾಡಿವೆ:

  • ಟಾಟಾ ಗ್ರೂಪ್: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ಮತ್ತು ಜಾಗ್ವಾರ್ ಲ್ಯಾಂಡ್ ರೋವರ್ (JLR) ಮೂಲಕ $20 ಬಿಲಿಯನ್ಗಿಂತ ಹೆಚ್ಚಿನ ವಿಲೀನ-ಸ್ವಾಧೀನ (M&A) ಒಪ್ಪಂದಗಳನ್ನು ಮಾಡಿಕೊಂಡಿದೆ.
  • ಆದಿತ್ಯ ಬಿರ್ಲಾ ಗ್ರೂಪ್: 2025ರಲ್ಲಿ ಟೆಕ್ಸಾಸ್‌ನಲ್ಲಿ $50 ಮಿಲಿಯನ್ ಹೂಡಿಕೆಯೊಂದಿಗೆ ಎಪಾಕ್ಸಿ ರೆಸಿನ್ ಉತ್ಪಾದನಾ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿದೆ.
  • ಒಯೊ: 2025ರಲ್ಲಿ ಅಮೆರಿಕದ G6 ಹಾಸ್ಪಿಟಾಲಿಟಿಯ ಡಿಜಿಟಲ್ ಆಸ್ತಿಗಳಲ್ಲಿ $10 ಮಿಲಿಯನ್ (₹86.69 ಕೋಟಿ) ಹೂಡಿಕೆ ಘೋಷಿಸಿದೆ.
  • ಜಯ್ ಚೌಧರಿ (Zscaler): ಜಯ್ ಚೌಧರಿ ಅವರ Zscaler ಕಂಪನಿಯು ಸೈಬರ್‌ಸೆಕ್ಯುರಿಟಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತದೆ. ಅವರ ಆಸ್ತಿಯ ಮೌಲ್ಯ $9.37 ಬಿಲಿಯನ್ ಆಗಿದೆ. ಕದನ ವಿರಾಮ ಒಪ್ಪದಿದ್ದರೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...