Homeಮುಖಪುಟಕದನ ವಿರಾಮ ಒಪ್ಪದಿದ್ದರೆ ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ; ಮೋದಿ ಒಪ್ಪಿಕೊಂಡಿದ್ದೇಕೆ? ವ್ಯಾಪಾರಿಗಳು ಯಾರು?

ಕದನ ವಿರಾಮ ಒಪ್ಪದಿದ್ದರೆ ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ; ಮೋದಿ ಒಪ್ಪಿಕೊಂಡಿದ್ದೇಕೆ? ವ್ಯಾಪಾರಿಗಳು ಯಾರು?

- Advertisement -
- Advertisement -

ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಾಗಿ ಹೇಳಿಕೊಂಡಿದ್ದ ಟ್ರಂಪ್, ಸೋಮವಾರ ಹೊಸದಾಗಿ, ವ್ಯಾಪಾರ ನಿಲ್ಲಿಸುವುದಾಗಿ ಬೆದರಿಕೆ ಹಾಕಿದ ಕಾರಣಕ್ಕೆ ಉಭಯ ದೇಶಗಳು ಒಪ್ಪಂದಕ್ಕೆ ಒಪ್ಪಿಕೊಂಡವು ಎಂದು ಹೇಳಿದ ನಂತರ ದೇಶದಾದ್ಯಂತ ಭಾರತದ ಸಾರ್ವಭೌಮತೆಯ ಬಗ್ಗೆ ವಿವಾದಗಳು ಎದ್ದಿವೆ. ಈ ಬಗ್ಗೆ ವಿಪಕ್ಷಗಳು ಸೇರಿದಂತೆ ಹೋರಾಟಗಾರರು ಪ್ರಧಾನಿ ಮೋದಿಗೆ ಸ್ಪಷ್ಟನೆ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ. ವ್ಯಾಪಾರಿಗಳ ಹಿತಾಸಕ್ತಿಗಾಗಿ ಪ್ರಧಾನಿ ಮೋದಿ ದೇಶದ ಸಾರ್ವಭೌಮತೆಯನ್ನು, ದೇಶದ ಗೌರವವನ್ನು ಮತ್ತೊಂದು ದೇಶದ ಮುಂದೆ ಕಳೆದುಕೊಳ್ಳುವುದು ಸರಿಯೆ ಎಂದು ಪ್ರಶ್ನಿಸಿದ್ದಾರೆ. ಕದನ ವಿರಾಮ ಒಪ್ಪದಿದ್ದರೆ

ಪಹಲ್ಗಾಮ್ ದಾಳಿಯು ಪಾಕಿಸ್ತಾನ ಪ್ರೇರಿತ ಎಂದು ಹೇಳಿಕೊಂಡಿದ್ದ ಭಾರತ, ಆಪರೇಷನ್ ಸಿಂಧೂರವನ್ನು ನಡೆಸಿ ನೆರೆಯ ದೇಶದ 9 ಭಯೋತ್ಪಾದಕ ಕೇಂದ್ರಗಳನ್ನು ನಾಶ ಮಾಡಿದ್ದಾಗಿ ತಿಳಿಸಿತ್ತು. ಇದರ ನಂತರ ಉಭಯ ದೇಶಗಳ ನಡುವೆ ನಾಲ್ಕು ದಿನಗಳ ಕಾಲ ನಡೆದ ಮಿಲಿಟರಿ ಸಂಘರ್ಷದಲ್ಲಿ ಭಾರತದ ಹಲವಾರು ನಾಗರಿಕರು ಮತ್ತು ಸೈನಿಕರು ಮೃತಪಟ್ಟಿದ್ದರು. ಅದಾಗ್ಯೂ, ಶನಿವಾರ ಕದನ ವಿರಾಮಕ್ಕೆ ಉಭಯ ದೇಶಗಳು ಒಪ್ಪಿಕೊಂಡಿದೆ ಎಂದು ಭಾರತ ಘೋಷಿಸುವ ಮುಂಚೆಯೆ, ಕದನ ವಿರಾಮಕ್ಕೆ ತಾನು ಮಧ್ಯಸ್ಥಿಕೆ ವಹಿಸಿದ್ದಾಗಿ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದರು.

ಅದಾಗ್ಯೂ, ಈ ವೇಳೆ ಕೂಡಾ ಭಾರತದ ಸಾರ್ವಭೌಮತೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಅದರ ನಂತರ ಸೋಮವಾರ ಮತ್ತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಮಾಡಲಾಗಿರುವ ವಿಡಿಯೊದಲ್ಲಿ ಅಮೆರಿಕೆ ಅಧ್ಯಕ್ಷ ಉಭಯ ದೇಶಗಳಿಗೆ ವ್ಯಾಪಾರ ಬೇಕೆಂದರೆ ಯುದ್ಧ ನಿಲ್ಲಿಸಿ ಎಂದು ಹೇಳಿದ ನಂತರ ಅವು ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದವು ಎಂದು ಹೇಳಿದ್ದಾರೆ. ಈ ಹೇಳಿಕೆಯ ನಂತರ ಭಾರತ ಸಾರ್ವಭೌಮತೆಯ ಬಗ್ಗೆ ದೇಶದಾದ್ಯಂತ ಪ್ರಶ್ನೆಗಳು ಎದ್ದಿವೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಸಮಸ್ಯೆಗಳನ್ನು ದ್ವಿಪಕ್ಷೀಯ ಒಪ್ಪಂದದ ಮೂಲಕ ಸಾಧ್ಯವಿಲ್ಲವೆ ಎಂದು ವಿಪಕ್ಷಗಳು ಕೇಳಿದ್ದು, ಅದಕ್ಕಾಗಿ ಮತ್ತೊಂದು ದೇಶದ ಮಧ್ಯಸ್ಥಿಕೆ ಯಾಕೆ ಬೇಕು ಎಂದು ಪ್ರಶ್ನಿಸಿದ್ದಾರೆ.

ಭಾರತ ಮತ್ತು ಅಮೆರಿಕದ ನಡುವಿನ ವ್ಯಾಪಾರ

ಭಾರತ ಮತ್ತು ಅಮೆರಿಕ ಸಂಯುಕ್ತ ಸಂಸ್ಥಾನಗಳ ನಡುವಿನ ವ್ಯಾಪಾರ ಸಂಬಂಧಗಳು ವಿಶ್ವದ ಅತಿದೊಡ್ಡ ಆರ್ಥಿಕ ಸಂಬಂಧಗಳಲ್ಲಿ ಒಂದಾಗಿದೆ. ಇದು ದ್ವಿಪಕ್ಷೀಯ ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ ಸಹಕಾರದ ಮೂಲಕ ಗುಣಾತ್ಮಕವಾಗಿ ಬೆಳೆಯುತ್ತಿದೆ. 2023ರಲ್ಲಿ, ಭಾರತ-ಅಮೆರಿಕ ಒಟ್ಟು ವ್ಯಾಪಾರವು ಸರಕು ಮತ್ತು ಸೇವೆಗಳಲ್ಲಿ $191 ಬಿಲಿಯನ್‌ಗೆ ತಲುಪಿದೆ. ಇದರಲ್ಲಿ ಭಾರತದಿಂದ ಅಮೆರಿಕಕ್ಕೆ ರಫ್ತು $118 ಬಿಲಿಯನ್ ಮತ್ತು ಆಮದು $73 ಬಿಲಿಯನ್ ಆಗಿತ್ತು.

ಅಮೆರಿಕಾದಲ್ಲಿ ಭಾರತೀಯ ಕಂಪನಿಗಳಿಂದ ಒಟ್ಟು ವಿದೇಶಿ ನೇರ ಹೂಡಿಕೆ (FDI) $40 ಬಿಲಿಯನ್‌ಗಿಂತ ಹೆಚ್ಚಾಗಿದೆ. ಅಮೆರಿಕಾದಲ್ಲಿ ಭಾರತದ 163 ಕಂಪನಿಗಳು ಒಟ್ಟು $40 ಬಿಲಿಯನ್ ಹೂಡಿಕೆಯನ್ನು ಮಾಡಿದೆ.

ಪ್ರಮುಖ ಸರಕುಗಳು: ಭಾರತವು ಅಮೆರಿಕಕ್ಕೆ ಔಷಧಗಳು, ಜವಳಿ, ರತ್ನಗಂಬಳಿಗಳು, ಮಾಹಿತಿ ತಂತ್ರಜ್ಞಾನ ಉತ್ಪನ್ನಗಳು ಮತ್ತು ಯಂತ್ರೋಪಕರಣಗಳನ್ನು ರಫ್ತು ಮಾಡುತ್ತದೆ. ಅಮೆರಿಕದಿಂದ ಭಾರತಕ್ಕೆ ವಿಮಾನಯಾನ ಉತ್ಪನ್ನಗಳು, ಯಂತ್ರೋಪಕರಣಗಳು, ಕೃಷಿ ಉತ್ಪನ್ನಗಳು ಮತ್ತು ತೈಲ-ಗ್ಯಾಸ್ ಆಮದಾಗುತ್ತವೆ.

ಸೇವೆಗಳು: ಭಾರತದ ಐಟಿ ಮತ್ತು ಸಾಫ್ಟ್‌ವೇರ್ ಸೇವೆಗಳು, ವಿಶೇಷವಾಗಿ ಬೆಂಗಳೂರು ಮತ್ತು ಹೈದರಾಬಾದ್‌ನಿಂದ, ಅಮೆರಿಕದ ಮಾರುಕಟ್ಟೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. 2022ರಲ್ಲಿ, ಭಾರತದ ಸೇವಾ ರಫ್ತು ಅಮೆರಿಕಕ್ಕೆ $32 ಬಿಲಿಯನ್‌ಗಿಂತ ಹೆಚ್ಚಿತ್ತು.

ವಿದೇಶಿ ನೇರ ಹೂಡಿಕೆ (FDI):

ಅಮೆರಿಕವು ಭಾರತದಲ್ಲಿ ಅತಿದೊಡ್ಡ ವಿದೇಶಿ ಹೂಡಿಕೆದಾರರಲ್ಲಿ ಒಂದಾಗಿದೆ, 2000-2023ರ ನಡುವೆ $61 ಬಿಲಿಯನ್‌ಗಿಂತ ಹೆಚ್ಚಿನ FDI ಹರಿದುಬಂದಿದೆ. ಅಮೆರಿಕದ ಕಂಪನಿಗಳಾದ ಗೂಗಲ್, ಅಮೆಜಾನ್, ಮತ್ತು ಟೆಸ್ಲಾ ಭಾರತದಲ್ಲಿ ತಮ್ಮ ಕಾರ್ಯಾಚರಣೆಯನ್ನು ವಿಸ್ತರಿಸುತ್ತಿವೆ. ಭಾರತೀಯ ಕಂಪನಿಗಳಾದ ಟಾಟಾ, ರಿಲಯನ್ಸ್, ಮತ್ತು ಇನ್ಫೋಸಿಸ್ ಅಮೆರಿಕದಲ್ಲಿ ತಂತ್ರಜ್ಞಾನ, ಉತ್ಪಾದನೆ ಮತ್ತು ಸೇವಾ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಿವೆ.

ಅಮೆರಿಕಾದಲ್ಲಿ ಅತ್ಯಂತ ಹೆಚ್ಚು ಹೂಡಿಕೆ ಮಾಡಿರುವವರು ಯಾರು?

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿಗಳಾದ ಗೌತಮ್ ಅದಾನಿ (ಅದಾನಿ ಗ್ರೂಪ್) ಮತ್ತು ಮುಕೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್) ಅಮೆರಿಕದಲ್ಲಿ ಅತ್ಯಂತ ಹೆಚ್ಚು ಹೂಡಿಕೆ ಮಾಡಿರುವ ಭಾರತೀಯ ಉದ್ಯಮಿಗಳಾಗಿದ್ದಾರೆ. ಈ ಇಬ್ಬರು ಉದ್ಯಮಿಗಳ ಕಂಪನಿಗಳು ಶಕ್ತಿ, ಮೂಲಸೌಕರ್ಯ, ತಂತ್ರಜ್ಞಾನ, ಮತ್ತು ಚಿಲ್ಲರೆ ವ್ಯಾಪಾರ ಕ್ಷೇತ್ರಗಳಲ್ಲಿ ಗಮನಾರ್ಹ ಹೂಡಿಕೆಗಳನ್ನು ಮಾಡಿವೆ.

ಗೌತಮ್ ಅದಾನಿ (ಅದಾನಿ ಗ್ರೂಪ್):

ಅದಾನಿ ಗ್ರೂಪ್ 2024ರಲ್ಲಿ ಅಮೆರಿಕದಲ್ಲಿ $10 ಬಿಲಿಯನ್ (ಸುಮಾರು ₹83,000 ಕೋಟಿ) ಹೂಡಿಕೆಯ ಯೋಜನೆಯನ್ನು ಘೋಷಿಸಿತ್ತು. ಇದು ಶಕ್ತಿ (ವಿಶೇಷವಾಗಿ ಹಸಿರು ಶಕ್ತಿ) ಮತ್ತು ಮೂಲಸೌಕರ್ಯ ಕ್ಷೇತ್ರಗಳನ್ನು ಒಳಗೊಂಡಿದೆ. ಈ ಹೂಡಿಕೆಯು ಭಾರತೀಯ ಕಂಪನಿಗಳು ಅಮೆರಿಕಾದಲ್ಲಿ ಮಾಡಲಾದ ಒಟ್ಟು $40 ಬಿಲಿಯನ್ ಹೂಡಿಕೆಯಲ್ಲಿ ಸುಮಾರು 25% ಪಾಲನ್ನು ಹೊಂದಿದೆ.

ಮುಕೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್):

ವಾಸ್ತವದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌ನ ನೇರ ಹೂಡಿಕೆಯ ನಿಖರ ಮೊತ್ತವನ್ನು ಸಾರ್ವಜನಿಕವಾಗಿ ಬಹಿರಂಗವಾಗಿಲ್ಲ ಎಂದು ವರದಿಗಳು ಹೇಳುತ್ತವೆ. ಅದಾಗ್ಯೂ ಅಂದಾಜಿನ ಪ್ರಕಾರ, ಅಮೆರಿಕಾದಲ್ಲಿ ಭಾರತೀಯರು ಹೂಡಿಕೆ ಮಾಡಿರುವ ಒಟ್ಟು ಮೊತ್ತದ 10-15% ಪಾಲಿನಷ್ಟಿದೆ ಎನ್ನಲಾಗಿದೆ.

ಮುಖೇಶ್ ಅಂಬಾನಿಯ ರಿಲಯನ್ಸ್‌ ಸಂಸ್ಥೆಯು ತೈಲ ಶುದ್ಧೀಕರಣ ಮತ್ತು ಪೆಟ್ರೋಕೆಮಿಕಲ್ ವ್ಯವಹಾರಗಳನ್ನು ನಡೆಸುತ್ತಿದೆ. ಕಂಪನಿಯು ಅಮೆರಿಕದಿಂದ $33 ಬಿಲಿಯನ್ ಮೌಲ್ಯದ ಕಚ್ಚಾ ತೈಲ ಆಮದು ಮಾಡಿಕೊಂಡಿದ್ದು, ಶಕ್ತಿ ಮತ್ತು ಡಿಜಿಟಲ್ ಕ್ಷೇತ್ರಗಳಲ್ಲಿ ಗಮನಾರ್ಹ ಹೂಡಿಕೆಗಳನ್ನು ಮಾಡಿದೆ ಎನ್ನಲಾಗಿದೆ. Jio Platforms ಮೂಲಕ ಡಿಜಿಟಲ್ ಸೇವೆಗಳು ಮತ್ತು ಟೆಕ್ ಆವಿಷ್ಕಾರಗಳನ್ನು, ರೀಟೇಲ್ ಮತ್ತು ಇ-ಕಾಮರ್ಸ್ ವಿಭಾಗಗಳಲ್ಲಿ ಹೂಡಿಕೆ ಮಾಡಿದೆ ಎಂದು ವರದಿಯಾಗಿದೆ.

ಇತರ ಗಮನಾರ್ಹ ಭಾರತೀಯ ಕಂಪನಿಗಳ ಹೂಡಿಕೆ:

ಅದಾನಿ ಮತ್ತು ಅಂಬಾನಿ ಮಾತ್ರವಲ್ಲದೆ ಭಾರತದ ಇತರ ಕಂಪನಿಗಳು ಕೂಡಾ ಅಮೆರಿಕದಲ್ಲಿ ಗಣನೀಯ ಹೂಡಿಕೆ ಮಾಡಿವೆ:

  • ಟಾಟಾ ಗ್ರೂಪ್: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ಮತ್ತು ಜಾಗ್ವಾರ್ ಲ್ಯಾಂಡ್ ರೋವರ್ (JLR) ಮೂಲಕ $20 ಬಿಲಿಯನ್ಗಿಂತ ಹೆಚ್ಚಿನ ವಿಲೀನ-ಸ್ವಾಧೀನ (M&A) ಒಪ್ಪಂದಗಳನ್ನು ಮಾಡಿಕೊಂಡಿದೆ.
  • ಆದಿತ್ಯ ಬಿರ್ಲಾ ಗ್ರೂಪ್: 2025ರಲ್ಲಿ ಟೆಕ್ಸಾಸ್‌ನಲ್ಲಿ $50 ಮಿಲಿಯನ್ ಹೂಡಿಕೆಯೊಂದಿಗೆ ಎಪಾಕ್ಸಿ ರೆಸಿನ್ ಉತ್ಪಾದನಾ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿದೆ.
  • ಒಯೊ: 2025ರಲ್ಲಿ ಅಮೆರಿಕದ G6 ಹಾಸ್ಪಿಟಾಲಿಟಿಯ ಡಿಜಿಟಲ್ ಆಸ್ತಿಗಳಲ್ಲಿ $10 ಮಿಲಿಯನ್ (₹86.69 ಕೋಟಿ) ಹೂಡಿಕೆ ಘೋಷಿಸಿದೆ.
  • ಜಯ್ ಚೌಧರಿ (Zscaler): ಜಯ್ ಚೌಧರಿ ಅವರ Zscaler ಕಂಪನಿಯು ಸೈಬರ್‌ಸೆಕ್ಯುರಿಟಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತದೆ. ಅವರ ಆಸ್ತಿಯ ಮೌಲ್ಯ $9.37 ಬಿಲಿಯನ್ ಆಗಿದೆ. ಕದನ ವಿರಾಮ ಒಪ್ಪದಿದ್ದರೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...