Homeಮುಖಪುಟಕದನ ವಿರಾಮ ಒಪ್ಪದಿದ್ದರೆ ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ; ಮೋದಿ ಒಪ್ಪಿಕೊಂಡಿದ್ದೇಕೆ? ವ್ಯಾಪಾರಿಗಳು ಯಾರು?

ಕದನ ವಿರಾಮ ಒಪ್ಪದಿದ್ದರೆ ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ; ಮೋದಿ ಒಪ್ಪಿಕೊಂಡಿದ್ದೇಕೆ? ವ್ಯಾಪಾರಿಗಳು ಯಾರು?

- Advertisement -
- Advertisement -

ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಾಗಿ ಹೇಳಿಕೊಂಡಿದ್ದ ಟ್ರಂಪ್, ಸೋಮವಾರ ಹೊಸದಾಗಿ, ವ್ಯಾಪಾರ ನಿಲ್ಲಿಸುವುದಾಗಿ ಬೆದರಿಕೆ ಹಾಕಿದ ಕಾರಣಕ್ಕೆ ಉಭಯ ದೇಶಗಳು ಒಪ್ಪಂದಕ್ಕೆ ಒಪ್ಪಿಕೊಂಡವು ಎಂದು ಹೇಳಿದ ನಂತರ ದೇಶದಾದ್ಯಂತ ಭಾರತದ ಸಾರ್ವಭೌಮತೆಯ ಬಗ್ಗೆ ವಿವಾದಗಳು ಎದ್ದಿವೆ. ಈ ಬಗ್ಗೆ ವಿಪಕ್ಷಗಳು ಸೇರಿದಂತೆ ಹೋರಾಟಗಾರರು ಪ್ರಧಾನಿ ಮೋದಿಗೆ ಸ್ಪಷ್ಟನೆ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ. ವ್ಯಾಪಾರಿಗಳ ಹಿತಾಸಕ್ತಿಗಾಗಿ ಪ್ರಧಾನಿ ಮೋದಿ ದೇಶದ ಸಾರ್ವಭೌಮತೆಯನ್ನು, ದೇಶದ ಗೌರವವನ್ನು ಮತ್ತೊಂದು ದೇಶದ ಮುಂದೆ ಕಳೆದುಕೊಳ್ಳುವುದು ಸರಿಯೆ ಎಂದು ಪ್ರಶ್ನಿಸಿದ್ದಾರೆ. ಕದನ ವಿರಾಮ ಒಪ್ಪದಿದ್ದರೆ

ಪಹಲ್ಗಾಮ್ ದಾಳಿಯು ಪಾಕಿಸ್ತಾನ ಪ್ರೇರಿತ ಎಂದು ಹೇಳಿಕೊಂಡಿದ್ದ ಭಾರತ, ಆಪರೇಷನ್ ಸಿಂಧೂರವನ್ನು ನಡೆಸಿ ನೆರೆಯ ದೇಶದ 9 ಭಯೋತ್ಪಾದಕ ಕೇಂದ್ರಗಳನ್ನು ನಾಶ ಮಾಡಿದ್ದಾಗಿ ತಿಳಿಸಿತ್ತು. ಇದರ ನಂತರ ಉಭಯ ದೇಶಗಳ ನಡುವೆ ನಾಲ್ಕು ದಿನಗಳ ಕಾಲ ನಡೆದ ಮಿಲಿಟರಿ ಸಂಘರ್ಷದಲ್ಲಿ ಭಾರತದ ಹಲವಾರು ನಾಗರಿಕರು ಮತ್ತು ಸೈನಿಕರು ಮೃತಪಟ್ಟಿದ್ದರು. ಅದಾಗ್ಯೂ, ಶನಿವಾರ ಕದನ ವಿರಾಮಕ್ಕೆ ಉಭಯ ದೇಶಗಳು ಒಪ್ಪಿಕೊಂಡಿದೆ ಎಂದು ಭಾರತ ಘೋಷಿಸುವ ಮುಂಚೆಯೆ, ಕದನ ವಿರಾಮಕ್ಕೆ ತಾನು ಮಧ್ಯಸ್ಥಿಕೆ ವಹಿಸಿದ್ದಾಗಿ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದರು.

ಅದಾಗ್ಯೂ, ಈ ವೇಳೆ ಕೂಡಾ ಭಾರತದ ಸಾರ್ವಭೌಮತೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಅದರ ನಂತರ ಸೋಮವಾರ ಮತ್ತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಮಾಡಲಾಗಿರುವ ವಿಡಿಯೊದಲ್ಲಿ ಅಮೆರಿಕೆ ಅಧ್ಯಕ್ಷ ಉಭಯ ದೇಶಗಳಿಗೆ ವ್ಯಾಪಾರ ಬೇಕೆಂದರೆ ಯುದ್ಧ ನಿಲ್ಲಿಸಿ ಎಂದು ಹೇಳಿದ ನಂತರ ಅವು ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದವು ಎಂದು ಹೇಳಿದ್ದಾರೆ. ಈ ಹೇಳಿಕೆಯ ನಂತರ ಭಾರತ ಸಾರ್ವಭೌಮತೆಯ ಬಗ್ಗೆ ದೇಶದಾದ್ಯಂತ ಪ್ರಶ್ನೆಗಳು ಎದ್ದಿವೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಸಮಸ್ಯೆಗಳನ್ನು ದ್ವಿಪಕ್ಷೀಯ ಒಪ್ಪಂದದ ಮೂಲಕ ಸಾಧ್ಯವಿಲ್ಲವೆ ಎಂದು ವಿಪಕ್ಷಗಳು ಕೇಳಿದ್ದು, ಅದಕ್ಕಾಗಿ ಮತ್ತೊಂದು ದೇಶದ ಮಧ್ಯಸ್ಥಿಕೆ ಯಾಕೆ ಬೇಕು ಎಂದು ಪ್ರಶ್ನಿಸಿದ್ದಾರೆ.

ಭಾರತ ಮತ್ತು ಅಮೆರಿಕದ ನಡುವಿನ ವ್ಯಾಪಾರ

ಭಾರತ ಮತ್ತು ಅಮೆರಿಕ ಸಂಯುಕ್ತ ಸಂಸ್ಥಾನಗಳ ನಡುವಿನ ವ್ಯಾಪಾರ ಸಂಬಂಧಗಳು ವಿಶ್ವದ ಅತಿದೊಡ್ಡ ಆರ್ಥಿಕ ಸಂಬಂಧಗಳಲ್ಲಿ ಒಂದಾಗಿದೆ. ಇದು ದ್ವಿಪಕ್ಷೀಯ ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ ಸಹಕಾರದ ಮೂಲಕ ಗುಣಾತ್ಮಕವಾಗಿ ಬೆಳೆಯುತ್ತಿದೆ. 2023ರಲ್ಲಿ, ಭಾರತ-ಅಮೆರಿಕ ಒಟ್ಟು ವ್ಯಾಪಾರವು ಸರಕು ಮತ್ತು ಸೇವೆಗಳಲ್ಲಿ $191 ಬಿಲಿಯನ್‌ಗೆ ತಲುಪಿದೆ. ಇದರಲ್ಲಿ ಭಾರತದಿಂದ ಅಮೆರಿಕಕ್ಕೆ ರಫ್ತು $118 ಬಿಲಿಯನ್ ಮತ್ತು ಆಮದು $73 ಬಿಲಿಯನ್ ಆಗಿತ್ತು.

ಅಮೆರಿಕಾದಲ್ಲಿ ಭಾರತೀಯ ಕಂಪನಿಗಳಿಂದ ಒಟ್ಟು ವಿದೇಶಿ ನೇರ ಹೂಡಿಕೆ (FDI) $40 ಬಿಲಿಯನ್‌ಗಿಂತ ಹೆಚ್ಚಾಗಿದೆ. ಅಮೆರಿಕಾದಲ್ಲಿ ಭಾರತದ 163 ಕಂಪನಿಗಳು ಒಟ್ಟು $40 ಬಿಲಿಯನ್ ಹೂಡಿಕೆಯನ್ನು ಮಾಡಿದೆ.

ಪ್ರಮುಖ ಸರಕುಗಳು: ಭಾರತವು ಅಮೆರಿಕಕ್ಕೆ ಔಷಧಗಳು, ಜವಳಿ, ರತ್ನಗಂಬಳಿಗಳು, ಮಾಹಿತಿ ತಂತ್ರಜ್ಞಾನ ಉತ್ಪನ್ನಗಳು ಮತ್ತು ಯಂತ್ರೋಪಕರಣಗಳನ್ನು ರಫ್ತು ಮಾಡುತ್ತದೆ. ಅಮೆರಿಕದಿಂದ ಭಾರತಕ್ಕೆ ವಿಮಾನಯಾನ ಉತ್ಪನ್ನಗಳು, ಯಂತ್ರೋಪಕರಣಗಳು, ಕೃಷಿ ಉತ್ಪನ್ನಗಳು ಮತ್ತು ತೈಲ-ಗ್ಯಾಸ್ ಆಮದಾಗುತ್ತವೆ.

ಸೇವೆಗಳು: ಭಾರತದ ಐಟಿ ಮತ್ತು ಸಾಫ್ಟ್‌ವೇರ್ ಸೇವೆಗಳು, ವಿಶೇಷವಾಗಿ ಬೆಂಗಳೂರು ಮತ್ತು ಹೈದರಾಬಾದ್‌ನಿಂದ, ಅಮೆರಿಕದ ಮಾರುಕಟ್ಟೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. 2022ರಲ್ಲಿ, ಭಾರತದ ಸೇವಾ ರಫ್ತು ಅಮೆರಿಕಕ್ಕೆ $32 ಬಿಲಿಯನ್‌ಗಿಂತ ಹೆಚ್ಚಿತ್ತು.

ವಿದೇಶಿ ನೇರ ಹೂಡಿಕೆ (FDI):

ಅಮೆರಿಕವು ಭಾರತದಲ್ಲಿ ಅತಿದೊಡ್ಡ ವಿದೇಶಿ ಹೂಡಿಕೆದಾರರಲ್ಲಿ ಒಂದಾಗಿದೆ, 2000-2023ರ ನಡುವೆ $61 ಬಿಲಿಯನ್‌ಗಿಂತ ಹೆಚ್ಚಿನ FDI ಹರಿದುಬಂದಿದೆ. ಅಮೆರಿಕದ ಕಂಪನಿಗಳಾದ ಗೂಗಲ್, ಅಮೆಜಾನ್, ಮತ್ತು ಟೆಸ್ಲಾ ಭಾರತದಲ್ಲಿ ತಮ್ಮ ಕಾರ್ಯಾಚರಣೆಯನ್ನು ವಿಸ್ತರಿಸುತ್ತಿವೆ. ಭಾರತೀಯ ಕಂಪನಿಗಳಾದ ಟಾಟಾ, ರಿಲಯನ್ಸ್, ಮತ್ತು ಇನ್ಫೋಸಿಸ್ ಅಮೆರಿಕದಲ್ಲಿ ತಂತ್ರಜ್ಞಾನ, ಉತ್ಪಾದನೆ ಮತ್ತು ಸೇವಾ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಿವೆ.

ಅಮೆರಿಕಾದಲ್ಲಿ ಅತ್ಯಂತ ಹೆಚ್ಚು ಹೂಡಿಕೆ ಮಾಡಿರುವವರು ಯಾರು?

ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿಗಳಾದ ಗೌತಮ್ ಅದಾನಿ (ಅದಾನಿ ಗ್ರೂಪ್) ಮತ್ತು ಮುಕೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್) ಅಮೆರಿಕದಲ್ಲಿ ಅತ್ಯಂತ ಹೆಚ್ಚು ಹೂಡಿಕೆ ಮಾಡಿರುವ ಭಾರತೀಯ ಉದ್ಯಮಿಗಳಾಗಿದ್ದಾರೆ. ಈ ಇಬ್ಬರು ಉದ್ಯಮಿಗಳ ಕಂಪನಿಗಳು ಶಕ್ತಿ, ಮೂಲಸೌಕರ್ಯ, ತಂತ್ರಜ್ಞಾನ, ಮತ್ತು ಚಿಲ್ಲರೆ ವ್ಯಾಪಾರ ಕ್ಷೇತ್ರಗಳಲ್ಲಿ ಗಮನಾರ್ಹ ಹೂಡಿಕೆಗಳನ್ನು ಮಾಡಿವೆ.

ಗೌತಮ್ ಅದಾನಿ (ಅದಾನಿ ಗ್ರೂಪ್):

ಅದಾನಿ ಗ್ರೂಪ್ 2024ರಲ್ಲಿ ಅಮೆರಿಕದಲ್ಲಿ $10 ಬಿಲಿಯನ್ (ಸುಮಾರು ₹83,000 ಕೋಟಿ) ಹೂಡಿಕೆಯ ಯೋಜನೆಯನ್ನು ಘೋಷಿಸಿತ್ತು. ಇದು ಶಕ್ತಿ (ವಿಶೇಷವಾಗಿ ಹಸಿರು ಶಕ್ತಿ) ಮತ್ತು ಮೂಲಸೌಕರ್ಯ ಕ್ಷೇತ್ರಗಳನ್ನು ಒಳಗೊಂಡಿದೆ. ಈ ಹೂಡಿಕೆಯು ಭಾರತೀಯ ಕಂಪನಿಗಳು ಅಮೆರಿಕಾದಲ್ಲಿ ಮಾಡಲಾದ ಒಟ್ಟು $40 ಬಿಲಿಯನ್ ಹೂಡಿಕೆಯಲ್ಲಿ ಸುಮಾರು 25% ಪಾಲನ್ನು ಹೊಂದಿದೆ.

ಮುಕೇಶ್ ಅಂಬಾನಿ (ರಿಲಯನ್ಸ್ ಇಂಡಸ್ಟ್ರೀಸ್):

ವಾಸ್ತವದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌ನ ನೇರ ಹೂಡಿಕೆಯ ನಿಖರ ಮೊತ್ತವನ್ನು ಸಾರ್ವಜನಿಕವಾಗಿ ಬಹಿರಂಗವಾಗಿಲ್ಲ ಎಂದು ವರದಿಗಳು ಹೇಳುತ್ತವೆ. ಅದಾಗ್ಯೂ ಅಂದಾಜಿನ ಪ್ರಕಾರ, ಅಮೆರಿಕಾದಲ್ಲಿ ಭಾರತೀಯರು ಹೂಡಿಕೆ ಮಾಡಿರುವ ಒಟ್ಟು ಮೊತ್ತದ 10-15% ಪಾಲಿನಷ್ಟಿದೆ ಎನ್ನಲಾಗಿದೆ.

ಮುಖೇಶ್ ಅಂಬಾನಿಯ ರಿಲಯನ್ಸ್‌ ಸಂಸ್ಥೆಯು ತೈಲ ಶುದ್ಧೀಕರಣ ಮತ್ತು ಪೆಟ್ರೋಕೆಮಿಕಲ್ ವ್ಯವಹಾರಗಳನ್ನು ನಡೆಸುತ್ತಿದೆ. ಕಂಪನಿಯು ಅಮೆರಿಕದಿಂದ $33 ಬಿಲಿಯನ್ ಮೌಲ್ಯದ ಕಚ್ಚಾ ತೈಲ ಆಮದು ಮಾಡಿಕೊಂಡಿದ್ದು, ಶಕ್ತಿ ಮತ್ತು ಡಿಜಿಟಲ್ ಕ್ಷೇತ್ರಗಳಲ್ಲಿ ಗಮನಾರ್ಹ ಹೂಡಿಕೆಗಳನ್ನು ಮಾಡಿದೆ ಎನ್ನಲಾಗಿದೆ. Jio Platforms ಮೂಲಕ ಡಿಜಿಟಲ್ ಸೇವೆಗಳು ಮತ್ತು ಟೆಕ್ ಆವಿಷ್ಕಾರಗಳನ್ನು, ರೀಟೇಲ್ ಮತ್ತು ಇ-ಕಾಮರ್ಸ್ ವಿಭಾಗಗಳಲ್ಲಿ ಹೂಡಿಕೆ ಮಾಡಿದೆ ಎಂದು ವರದಿಯಾಗಿದೆ.

ಇತರ ಗಮನಾರ್ಹ ಭಾರತೀಯ ಕಂಪನಿಗಳ ಹೂಡಿಕೆ:

ಅದಾನಿ ಮತ್ತು ಅಂಬಾನಿ ಮಾತ್ರವಲ್ಲದೆ ಭಾರತದ ಇತರ ಕಂಪನಿಗಳು ಕೂಡಾ ಅಮೆರಿಕದಲ್ಲಿ ಗಣನೀಯ ಹೂಡಿಕೆ ಮಾಡಿವೆ:

  • ಟಾಟಾ ಗ್ರೂಪ್: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ಮತ್ತು ಜಾಗ್ವಾರ್ ಲ್ಯಾಂಡ್ ರೋವರ್ (JLR) ಮೂಲಕ $20 ಬಿಲಿಯನ್ಗಿಂತ ಹೆಚ್ಚಿನ ವಿಲೀನ-ಸ್ವಾಧೀನ (M&A) ಒಪ್ಪಂದಗಳನ್ನು ಮಾಡಿಕೊಂಡಿದೆ.
  • ಆದಿತ್ಯ ಬಿರ್ಲಾ ಗ್ರೂಪ್: 2025ರಲ್ಲಿ ಟೆಕ್ಸಾಸ್‌ನಲ್ಲಿ $50 ಮಿಲಿಯನ್ ಹೂಡಿಕೆಯೊಂದಿಗೆ ಎಪಾಕ್ಸಿ ರೆಸಿನ್ ಉತ್ಪಾದನಾ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿದೆ.
  • ಒಯೊ: 2025ರಲ್ಲಿ ಅಮೆರಿಕದ G6 ಹಾಸ್ಪಿಟಾಲಿಟಿಯ ಡಿಜಿಟಲ್ ಆಸ್ತಿಗಳಲ್ಲಿ $10 ಮಿಲಿಯನ್ (₹86.69 ಕೋಟಿ) ಹೂಡಿಕೆ ಘೋಷಿಸಿದೆ.
  • ಜಯ್ ಚೌಧರಿ (Zscaler): ಜಯ್ ಚೌಧರಿ ಅವರ Zscaler ಕಂಪನಿಯು ಸೈಬರ್‌ಸೆಕ್ಯುರಿಟಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತದೆ. ಅವರ ಆಸ್ತಿಯ ಮೌಲ್ಯ $9.37 ಬಿಲಿಯನ್ ಆಗಿದೆ. ಕದನ ವಿರಾಮ ಒಪ್ಪದಿದ್ದರೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...