Homeಅಂತರಾಷ್ಟ್ರೀಯಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

- Advertisement -
- Advertisement -

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ.

ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್ ಆಫ್ ದಿ ನೇಟಿವಿಟಿಯ ಹೊರಗೆ ಕ್ರಿಸ್‌ಮಸ್ ಮರವನ್ನು ಬೆಳಗಿಸಲಾಗಿದೆ. ಗಾಝಾದ ನರಮೇಧದ ನೋವಿನಿಂದ ಕಳೆದ ಎರಡು ವರ್ಷಗಳಲ್ಲಿ ಮಂಕಾಗಿದ್ದ ಜನರ ಮನಸ್ಸಿನಲ್ಲಿ, ಆ ಬೆಳಕು ಈ ಕೊಂಚ ಭರವಸೆ ಮತ್ತು ಸಮೃದ್ಧಿಯ ಕಿರಣವನ್ನು ಮೂಡಿಸಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಈ ಬಾರಿ ಕ್ರಿಸ್‌ಮಸ್‌ ಮರವನ್ನು ಬೆಳಗಿದ್ದರೂ, ಜನರಿಲ್ಲಿ ಈ ಹಿಂದಿನ ಸಂಭ್ರಮ ಇಲ್ಲ. ಜನರು ಕುಣಿದು ಕುಪ್ಪಳಿಸುವ ಮೂಲಕ ಹಬ್ಬದ ಸಂಭ್ರವನ್ನು ಅನುಭವಿಸುತ್ತಿದ್ದರು. ಆದರೆ, ಈ ಬಾರಿ ಕೇವಲ ಶಾಂತಿಯುತ ಪ್ರಾರ್ಥನೆಯಲ್ಲಿ ಮಾತ್ರ ತೊಡಗಿಕೊಂಡಿದ್ದಾರೆ ಎಂದು ವರದಿ ವಿವರಿಸಿದೆ.

ಗಾಝಾ ಮತ್ತು ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ನಡೆಸಿದ ಸತತ ಎರಡು ವರ್ಷಗಳ ನರಮೇಧ ಮತ್ತು ಈಗಲೂ ಪಶ್ಚಿಮ ದಂಡೆಯಲ್ಲಿ ನಡೆಸುತ್ತಿರುವ ದೌರ್ಜನ್ಯದಿಂದ ಬೆಥ್ಲೆಹೆಮ್‌ಗೆ ಭೇಟಿ ನೀಡುವ ಜನರ ಸಂಖ್ಯೆ ಕಡಿಮೆಯಾಗಿದೆ. ಇದು ಅಲ್ಲಿನ ಪ್ರವಾಸೋದ್ಯಮದ ಮೇಲೆ ದೊಡ್ಡ ಪರಿಣಾಮ ಬೀರಿದೆ. ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಪರದಾಡುವಂತಾಗಿದೆ ಎಂದು ವರದಿ ಹೇಳಿದೆ.

ನಿರುದ್ಯೋಗವು ಶೇಕಡ 34ರಷ್ಟಿದೆ ಮತ್ತು ಬಡತನ ರೇಖೆಯ ಕೆಳಗೆ ವಾಸಿಸುವವರ ಸಂಖ್ಯೆ ಹೆಚ್ಚಾಗಿದೆ. ಶೇಕಡ 40ಕ್ಕೂ ಹೆಚ್ಚು ಜನರು ಜೀವಿಸಲು ಕಷ್ಟಪಡುತ್ತಿದ್ದಾರೆ ಎಂದು ಅಲ್‌-ಜಝೀರಾ ವರದಿ ತಿಳಿಸಿದೆ.

“ಕ್ರಿಸ್‌ಮಸ್ ಹೇಗಿರಬೇಕು ಎಂಬ ಸಂದೇಶವನ್ನು ನಾವು ಜಗತ್ತಿಗೆ ಸಾರುತ್ತೇವೆ. ಈ ವರ್ಷ, ಕ್ರಿಸ್‌ಮಸ್ ಶಾಂತಿಯುತವಾಗಿದ್ದರೆ, ಅದು ಇಡೀ ಜಗತ್ತಿಗೆ ಒಳ್ಳೆಯ ಸಂದೇಶವನ್ನು ನೀಡುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಸ್ಥಳೀಯ ಆಭರಣ ವಿನ್ಯಾಸಕಿ ನಾಡಿಯಾ ಹಜ್‌ಬೌನ್ ಹೇಳಿರುವುದಾಗಿ ಬಿಬಿಸಿ ವರದಿ ಮಾಡಿದೆ.

ಗಾಝಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದ್ದ ಹಿನ್ನೆಲೆ, ಕಳೆದ ಎರಡು ವರ್ಷಗಳ ಕಾಲ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್ ಸಂಭ್ರಮಾಚರಣೆ ಕಳೆಗುಂದಿತ್ತು. ನಮ್ಮ ಸಹೋದರರು ಸಾಯುತ್ತಿರುವಾಗ ನಾವು ಹೇಗೆ ಸಂಭ್ರಮಪಡಲಿ ಎಂದು ಮಾನವೀಯ ಮನಸ್ಸುಳ್ಳು ಬೆಥ್ಲೆಹೆಮ್‌ನ ಜನರು ಪ್ರಶ್ನಿಸಿದ್ದರು. ಬೀದಿಗಿಳಿದು ಇಸ್ರೇಲ್‌ನ ಆಕ್ರಮಣವನ್ನು ಪ್ರತಿಭಟಿಸಿದ್ದರು.

ಕ್ಯಾಥೋಲಿಕ್ ಪಂಗಡದ ಪರಮೋಚ್ಚ ನಾಯಕರಾಗಿದ್ದ ದಿವಂಗತ ಪೋಪ್ ಫ್ರಾನ್ಸಿಸ್ ಅವರು ಇಸ್ರೇಲ್ ಆಕ್ರಮಣವನ್ನು ತೀವ್ರವಾಗಿ ಖಂಡಿಸಿದ್ದರು. ಗಾಝಾ ಜನತೆಯ ಜೊತೆ ನಿಲ್ಲುವಂತೆ ಜಾಗತಿಕ ಕ್ರೈಸ್ತ ಸಮುದಾಯಕ್ಕೆ ಕರೆ ಕೊಟ್ಟಿದ್ದರು. ಕದನ ವಿರಾಮಕ್ಕೆ ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...