Homeಅಂತರಾಷ್ಟ್ರೀಯಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

- Advertisement -
- Advertisement -

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ.

ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್ ಆಫ್ ದಿ ನೇಟಿವಿಟಿಯ ಹೊರಗೆ ಕ್ರಿಸ್‌ಮಸ್ ಮರವನ್ನು ಬೆಳಗಿಸಲಾಗಿದೆ. ಗಾಝಾದ ನರಮೇಧದ ನೋವಿನಿಂದ ಕಳೆದ ಎರಡು ವರ್ಷಗಳಲ್ಲಿ ಮಂಕಾಗಿದ್ದ ಜನರ ಮನಸ್ಸಿನಲ್ಲಿ, ಆ ಬೆಳಕು ಈ ಕೊಂಚ ಭರವಸೆ ಮತ್ತು ಸಮೃದ್ಧಿಯ ಕಿರಣವನ್ನು ಮೂಡಿಸಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಈ ಬಾರಿ ಕ್ರಿಸ್‌ಮಸ್‌ ಮರವನ್ನು ಬೆಳಗಿದ್ದರೂ, ಜನರಿಲ್ಲಿ ಈ ಹಿಂದಿನ ಸಂಭ್ರಮ ಇಲ್ಲ. ಜನರು ಕುಣಿದು ಕುಪ್ಪಳಿಸುವ ಮೂಲಕ ಹಬ್ಬದ ಸಂಭ್ರವನ್ನು ಅನುಭವಿಸುತ್ತಿದ್ದರು. ಆದರೆ, ಈ ಬಾರಿ ಕೇವಲ ಶಾಂತಿಯುತ ಪ್ರಾರ್ಥನೆಯಲ್ಲಿ ಮಾತ್ರ ತೊಡಗಿಕೊಂಡಿದ್ದಾರೆ ಎಂದು ವರದಿ ವಿವರಿಸಿದೆ.

ಗಾಝಾ ಮತ್ತು ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ನಡೆಸಿದ ಸತತ ಎರಡು ವರ್ಷಗಳ ನರಮೇಧ ಮತ್ತು ಈಗಲೂ ಪಶ್ಚಿಮ ದಂಡೆಯಲ್ಲಿ ನಡೆಸುತ್ತಿರುವ ದೌರ್ಜನ್ಯದಿಂದ ಬೆಥ್ಲೆಹೆಮ್‌ಗೆ ಭೇಟಿ ನೀಡುವ ಜನರ ಸಂಖ್ಯೆ ಕಡಿಮೆಯಾಗಿದೆ. ಇದು ಅಲ್ಲಿನ ಪ್ರವಾಸೋದ್ಯಮದ ಮೇಲೆ ದೊಡ್ಡ ಪರಿಣಾಮ ಬೀರಿದೆ. ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಪರದಾಡುವಂತಾಗಿದೆ ಎಂದು ವರದಿ ಹೇಳಿದೆ.

ನಿರುದ್ಯೋಗವು ಶೇಕಡ 34ರಷ್ಟಿದೆ ಮತ್ತು ಬಡತನ ರೇಖೆಯ ಕೆಳಗೆ ವಾಸಿಸುವವರ ಸಂಖ್ಯೆ ಹೆಚ್ಚಾಗಿದೆ. ಶೇಕಡ 40ಕ್ಕೂ ಹೆಚ್ಚು ಜನರು ಜೀವಿಸಲು ಕಷ್ಟಪಡುತ್ತಿದ್ದಾರೆ ಎಂದು ಅಲ್‌-ಜಝೀರಾ ವರದಿ ತಿಳಿಸಿದೆ.

“ಕ್ರಿಸ್‌ಮಸ್ ಹೇಗಿರಬೇಕು ಎಂಬ ಸಂದೇಶವನ್ನು ನಾವು ಜಗತ್ತಿಗೆ ಸಾರುತ್ತೇವೆ. ಈ ವರ್ಷ, ಕ್ರಿಸ್‌ಮಸ್ ಶಾಂತಿಯುತವಾಗಿದ್ದರೆ, ಅದು ಇಡೀ ಜಗತ್ತಿಗೆ ಒಳ್ಳೆಯ ಸಂದೇಶವನ್ನು ನೀಡುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಸ್ಥಳೀಯ ಆಭರಣ ವಿನ್ಯಾಸಕಿ ನಾಡಿಯಾ ಹಜ್‌ಬೌನ್ ಹೇಳಿರುವುದಾಗಿ ಬಿಬಿಸಿ ವರದಿ ಮಾಡಿದೆ.

ಗಾಝಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದ್ದ ಹಿನ್ನೆಲೆ, ಕಳೆದ ಎರಡು ವರ್ಷಗಳ ಕಾಲ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್ ಸಂಭ್ರಮಾಚರಣೆ ಕಳೆಗುಂದಿತ್ತು. ನಮ್ಮ ಸಹೋದರರು ಸಾಯುತ್ತಿರುವಾಗ ನಾವು ಹೇಗೆ ಸಂಭ್ರಮಪಡಲಿ ಎಂದು ಮಾನವೀಯ ಮನಸ್ಸುಳ್ಳು ಬೆಥ್ಲೆಹೆಮ್‌ನ ಜನರು ಪ್ರಶ್ನಿಸಿದ್ದರು. ಬೀದಿಗಿಳಿದು ಇಸ್ರೇಲ್‌ನ ಆಕ್ರಮಣವನ್ನು ಪ್ರತಿಭಟಿಸಿದ್ದರು.

ಕ್ಯಾಥೋಲಿಕ್ ಪಂಗಡದ ಪರಮೋಚ್ಚ ನಾಯಕರಾಗಿದ್ದ ದಿವಂಗತ ಪೋಪ್ ಫ್ರಾನ್ಸಿಸ್ ಅವರು ಇಸ್ರೇಲ್ ಆಕ್ರಮಣವನ್ನು ತೀವ್ರವಾಗಿ ಖಂಡಿಸಿದ್ದರು. ಗಾಝಾ ಜನತೆಯ ಜೊತೆ ನಿಲ್ಲುವಂತೆ ಜಾಗತಿಕ ಕ್ರೈಸ್ತ ಸಮುದಾಯಕ್ಕೆ ಕರೆ ಕೊಟ್ಟಿದ್ದರು. ಕದನ ವಿರಾಮಕ್ಕೆ ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...