Homeಅಂತರಾಷ್ಟ್ರೀಯಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

- Advertisement -
- Advertisement -

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ.

ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್ ಆಫ್ ದಿ ನೇಟಿವಿಟಿಯ ಹೊರಗೆ ಕ್ರಿಸ್‌ಮಸ್ ಮರವನ್ನು ಬೆಳಗಿಸಲಾಗಿದೆ. ಗಾಝಾದ ನರಮೇಧದ ನೋವಿನಿಂದ ಕಳೆದ ಎರಡು ವರ್ಷಗಳಲ್ಲಿ ಮಂಕಾಗಿದ್ದ ಜನರ ಮನಸ್ಸಿನಲ್ಲಿ, ಆ ಬೆಳಕು ಈ ಕೊಂಚ ಭರವಸೆ ಮತ್ತು ಸಮೃದ್ಧಿಯ ಕಿರಣವನ್ನು ಮೂಡಿಸಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಈ ಬಾರಿ ಕ್ರಿಸ್‌ಮಸ್‌ ಮರವನ್ನು ಬೆಳಗಿದ್ದರೂ, ಜನರಿಲ್ಲಿ ಈ ಹಿಂದಿನ ಸಂಭ್ರಮ ಇಲ್ಲ. ಜನರು ಕುಣಿದು ಕುಪ್ಪಳಿಸುವ ಮೂಲಕ ಹಬ್ಬದ ಸಂಭ್ರವನ್ನು ಅನುಭವಿಸುತ್ತಿದ್ದರು. ಆದರೆ, ಈ ಬಾರಿ ಕೇವಲ ಶಾಂತಿಯುತ ಪ್ರಾರ್ಥನೆಯಲ್ಲಿ ಮಾತ್ರ ತೊಡಗಿಕೊಂಡಿದ್ದಾರೆ ಎಂದು ವರದಿ ವಿವರಿಸಿದೆ.

ಗಾಝಾ ಮತ್ತು ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ನಡೆಸಿದ ಸತತ ಎರಡು ವರ್ಷಗಳ ನರಮೇಧ ಮತ್ತು ಈಗಲೂ ಪಶ್ಚಿಮ ದಂಡೆಯಲ್ಲಿ ನಡೆಸುತ್ತಿರುವ ದೌರ್ಜನ್ಯದಿಂದ ಬೆಥ್ಲೆಹೆಮ್‌ಗೆ ಭೇಟಿ ನೀಡುವ ಜನರ ಸಂಖ್ಯೆ ಕಡಿಮೆಯಾಗಿದೆ. ಇದು ಅಲ್ಲಿನ ಪ್ರವಾಸೋದ್ಯಮದ ಮೇಲೆ ದೊಡ್ಡ ಪರಿಣಾಮ ಬೀರಿದೆ. ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಪರದಾಡುವಂತಾಗಿದೆ ಎಂದು ವರದಿ ಹೇಳಿದೆ.

ನಿರುದ್ಯೋಗವು ಶೇಕಡ 34ರಷ್ಟಿದೆ ಮತ್ತು ಬಡತನ ರೇಖೆಯ ಕೆಳಗೆ ವಾಸಿಸುವವರ ಸಂಖ್ಯೆ ಹೆಚ್ಚಾಗಿದೆ. ಶೇಕಡ 40ಕ್ಕೂ ಹೆಚ್ಚು ಜನರು ಜೀವಿಸಲು ಕಷ್ಟಪಡುತ್ತಿದ್ದಾರೆ ಎಂದು ಅಲ್‌-ಜಝೀರಾ ವರದಿ ತಿಳಿಸಿದೆ.

“ಕ್ರಿಸ್‌ಮಸ್ ಹೇಗಿರಬೇಕು ಎಂಬ ಸಂದೇಶವನ್ನು ನಾವು ಜಗತ್ತಿಗೆ ಸಾರುತ್ತೇವೆ. ಈ ವರ್ಷ, ಕ್ರಿಸ್‌ಮಸ್ ಶಾಂತಿಯುತವಾಗಿದ್ದರೆ, ಅದು ಇಡೀ ಜಗತ್ತಿಗೆ ಒಳ್ಳೆಯ ಸಂದೇಶವನ್ನು ನೀಡುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಸ್ಥಳೀಯ ಆಭರಣ ವಿನ್ಯಾಸಕಿ ನಾಡಿಯಾ ಹಜ್‌ಬೌನ್ ಹೇಳಿರುವುದಾಗಿ ಬಿಬಿಸಿ ವರದಿ ಮಾಡಿದೆ.

ಗಾಝಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದ್ದ ಹಿನ್ನೆಲೆ, ಕಳೆದ ಎರಡು ವರ್ಷಗಳ ಕಾಲ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್ ಸಂಭ್ರಮಾಚರಣೆ ಕಳೆಗುಂದಿತ್ತು. ನಮ್ಮ ಸಹೋದರರು ಸಾಯುತ್ತಿರುವಾಗ ನಾವು ಹೇಗೆ ಸಂಭ್ರಮಪಡಲಿ ಎಂದು ಮಾನವೀಯ ಮನಸ್ಸುಳ್ಳು ಬೆಥ್ಲೆಹೆಮ್‌ನ ಜನರು ಪ್ರಶ್ನಿಸಿದ್ದರು. ಬೀದಿಗಿಳಿದು ಇಸ್ರೇಲ್‌ನ ಆಕ್ರಮಣವನ್ನು ಪ್ರತಿಭಟಿಸಿದ್ದರು.

ಕ್ಯಾಥೋಲಿಕ್ ಪಂಗಡದ ಪರಮೋಚ್ಚ ನಾಯಕರಾಗಿದ್ದ ದಿವಂಗತ ಪೋಪ್ ಫ್ರಾನ್ಸಿಸ್ ಅವರು ಇಸ್ರೇಲ್ ಆಕ್ರಮಣವನ್ನು ತೀವ್ರವಾಗಿ ಖಂಡಿಸಿದ್ದರು. ಗಾಝಾ ಜನತೆಯ ಜೊತೆ ನಿಲ್ಲುವಂತೆ ಜಾಗತಿಕ ಕ್ರೈಸ್ತ ಸಮುದಾಯಕ್ಕೆ ಕರೆ ಕೊಟ್ಟಿದ್ದರು. ಕದನ ವಿರಾಮಕ್ಕೆ ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...