Homeಮುಖಪುಟಗಾಝಾದಲ್ಲಿ ಕದನ ವಿರಾಮ: ವಿಶ್ವಸಂಸ್ಥೆ ನಿರ್ಣಯ ಬೆಂಬಲಿಸಿದ ಭಾರತ

ಗಾಝಾದಲ್ಲಿ ಕದನ ವಿರಾಮ: ವಿಶ್ವಸಂಸ್ಥೆ ನಿರ್ಣಯ ಬೆಂಬಲಿಸಿದ ಭಾರತ

- Advertisement -
- Advertisement -

ಗಾಝಾ ಮೇಲೆ ಇಸ್ರೇಲ್ ಸೇನೆ ನಡೆಸುತ್ತಿರುವ ದಾಳಿಯನ್ನು ಕೊನೆಗೊಳಿಸಿ ಕದನ ವಿರಾಮ ಘೋಷಿಸುವಂತೆ ಒತ್ತಾಯಿಸುವ ವಿಶ್ವಸಂಸ್ಥೆಯ ನಿರ್ಣಯದ ಪರ ಭಾರತ ಮತ ಹಾಕಿದೆ.

ಕಳೆದ ಎರಡು ತಿಂಗಳ ಹಿಂದೆ ಇದೇ ರೀತಿಯ ನಿರ್ಣಯವನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಂಡಿಸಲಾಗಿತ್ತು. ಈ ನಿರ್ಣಯದ ಮತದಾನದಿಂದ ಭಾರತ ದೂರ ಉಳಿದಿತ್ತು.

ನ್ಯೂಯಾರ್ಕ್‌ನಲ್ಲಿ ಮಂಗಳವಾರ ನಡೆದ ವಿಶ್ವಸಂಸ್ಥೆಯ 10ನೇ ತುರ್ತು ವಿಶೇಷ ಅಧಿವೇಶನಲ್ಲಿ ಸುಮಾರು 80% ಸದಸ್ಯ ರಾಷ್ಟ್ರಗಳು ” ಗಾಝಾದ ನಾಗರಿಕರ ರಕ್ಷಣೆ, ಕಾನೂನು ಮತ್ತು ಮಾನವೀಯ ನೆರವನ್ನು ಎತ್ತಿಹಿಡಿಯುವ” ನಿರ್ಣಯದ ಪರವಾಗಿ ಮತ ಚಲಾಯಿಸಿವೆ.

ಆಕ್ರಮಿತ ಪೂರ್ವ ಜೆರುಸಲೆಮ್ ಮತ್ತು ಉಳಿದ ಆಕ್ರಮಿತ ಪ್ಯಾಲೇಸ್ತೀನಿಯನ್ ಪ್ರದೇಶಗಳಲ್ಲಿ ಇಸ್ರೇಲ್ ಸೇನೆ ನಡೆಸುತ್ತಿರುವ ಕಾನೂನುಬಾಹಿರ ಕ್ರಮಗಳನ್ನು ವಿರುದ್ಧ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.

ಕಳೆದ ಅಕ್ಟೋಬರ್‌ನಲ್ಲಿ, ಗಾಝಾದಲ್ಲಿ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸುವಂತೆ ಕರೆ ನೀಡಿದ್ದ ವಿಶ್ವಸಂಸ್ಥೆಯ ನಿರ್ಣಯದ ಮತದಾನಕ್ಕೆ ಗೈರು ಹಾಜರಾದ 45 ರಾಷ್ಟ್ರಗಳಲ್ಲಿ ಭಾರತವೂ ಸೇರಿತ್ತು. ಅಕ್ಟೋಬರ್ 26ರಂದು ಮಂಡಿಸಿದ ಈ ನಿರ್ಣಯದ ಪರವಾಗಿ 120 ಮತ್ತು ವಿರುದ್ಧವಾಗಿ 14 ರಾಷ್ಟ್ರಗಳು ಮತ ಹಾಕಿತ್ತು.

ಯುಎಸ್, ಆಸ್ಟ್ರಿಯಾ, ಜೆಕಿಯಾ, ಲೈಬೀರಿಯಾ ಮತ್ತು ಪೆಸಿಫಿಕ್ ಮಿತ್ರರಾಷ್ಟ್ರಗಳನ್ನು ಒಳಗೊಂಡ ಗುಂಪು ಈ ಬಾರಿಯೂ ಕದನ ವಿರಾಮ ನಿರ್ಣಯದ ವಿರುದ್ಧ ಮತ ಹಾಕಿವೆ. ಆದರೂ, ಕಳೆದ ಬಾರಿಗಿಂತ ಈ ಬಾರಿ ವಿರುದ್ಧ ಮತ ಹಾಕಿದ ಒಟ್ಟು ರಾಷ್ಟ್ರಗಳ ಸಂಖ್ಯೆಯು 45 ರಿಂದ 23 ಕ್ಕೆ ಇಳಿಕೆಯಾಗಿದೆ.

ಅರಬ್ ಗ್ರೂಪ್ ಮತ್ತು ಆರ್ಗನೈಸೇಶನ್ ಆಫ್ ಇಸ್ಲಾಮಿಕ್ ಕೋಆಪರೇಷನ್ ಮಂಡಿಸಿದ ನಿರ್ಣಯವನ್ನು ಬೆಂಬಸಿಲಿದ ರಾಷ್ಟ್ರಗಳ ಸಂಖ್ಯೆ, ರಷ್ಯಾ-ಉಕ್ರೇನ್ ಕದನ ವಿರಾಮದ ಬೆಂಬಲಿಸಿದ ರಾಷ್ಟ್ರಗಳಿಗಿಂತ ಹೆಚ್ಚಿತ್ತು.

ಇಂದಿಗೆ(ಡಿ.13) 68 ದಿನಗಳನ್ನು ಪೂರೈಸಿದ ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ಇದುವರೆಗೆ ಸುಮಾರು 18 ಸಾವಿರ ಗಾಝಾ ಅಥವಾ ಪ್ಯಾಲೆಸ್ತೀನಿಯನ್ ನಾಗರಿಕರು ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆ ಮಾಹಿತಿ ನೀಡಿದೆ. ಅಕ್ಟೋಬರ್ 7ರಂದು ದಕ್ಷಿಣ ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿಯಲ್ಲಿ 1,200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಹಮಾಸ್ 240 ಜನರನ್ನು ಒತ್ತೆಯಾಳಾಗಿ ಇಟ್ಟುಕೊಂಡಿತ್ತು. ಈ ಪೈಕಿ ಹಲವರನ್ನು ಈಗಾಗಲೇ ಬಿಡುಗಡೆ ಮಾಡಿದೆ.

ಇದನ್ನೂ ಓದಿ : ಮೋದಿ ಟೀಕಾಕಾರನ್ನು ಗುರಿಯಾಗಿಸಿ ಭಾರತದಿಂದ ರಹಸ್ಯ ಕಾರ್ಯಾಚರಣೆ: ವಾಷಿಂಗ್ಟನ್ ಪೋಸ್ಟ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...