Homeಮುಖಪುಟಗಾಝಾದಲ್ಲಿ ಕದನ ವಿರಾಮ: ವಿಶ್ವಸಂಸ್ಥೆ ನಿರ್ಣಯ ಬೆಂಬಲಿಸಿದ ಭಾರತ

ಗಾಝಾದಲ್ಲಿ ಕದನ ವಿರಾಮ: ವಿಶ್ವಸಂಸ್ಥೆ ನಿರ್ಣಯ ಬೆಂಬಲಿಸಿದ ಭಾರತ

- Advertisement -
- Advertisement -

ಗಾಝಾ ಮೇಲೆ ಇಸ್ರೇಲ್ ಸೇನೆ ನಡೆಸುತ್ತಿರುವ ದಾಳಿಯನ್ನು ಕೊನೆಗೊಳಿಸಿ ಕದನ ವಿರಾಮ ಘೋಷಿಸುವಂತೆ ಒತ್ತಾಯಿಸುವ ವಿಶ್ವಸಂಸ್ಥೆಯ ನಿರ್ಣಯದ ಪರ ಭಾರತ ಮತ ಹಾಕಿದೆ.

ಕಳೆದ ಎರಡು ತಿಂಗಳ ಹಿಂದೆ ಇದೇ ರೀತಿಯ ನಿರ್ಣಯವನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಂಡಿಸಲಾಗಿತ್ತು. ಈ ನಿರ್ಣಯದ ಮತದಾನದಿಂದ ಭಾರತ ದೂರ ಉಳಿದಿತ್ತು.

ನ್ಯೂಯಾರ್ಕ್‌ನಲ್ಲಿ ಮಂಗಳವಾರ ನಡೆದ ವಿಶ್ವಸಂಸ್ಥೆಯ 10ನೇ ತುರ್ತು ವಿಶೇಷ ಅಧಿವೇಶನಲ್ಲಿ ಸುಮಾರು 80% ಸದಸ್ಯ ರಾಷ್ಟ್ರಗಳು ” ಗಾಝಾದ ನಾಗರಿಕರ ರಕ್ಷಣೆ, ಕಾನೂನು ಮತ್ತು ಮಾನವೀಯ ನೆರವನ್ನು ಎತ್ತಿಹಿಡಿಯುವ” ನಿರ್ಣಯದ ಪರವಾಗಿ ಮತ ಚಲಾಯಿಸಿವೆ.

ಆಕ್ರಮಿತ ಪೂರ್ವ ಜೆರುಸಲೆಮ್ ಮತ್ತು ಉಳಿದ ಆಕ್ರಮಿತ ಪ್ಯಾಲೇಸ್ತೀನಿಯನ್ ಪ್ರದೇಶಗಳಲ್ಲಿ ಇಸ್ರೇಲ್ ಸೇನೆ ನಡೆಸುತ್ತಿರುವ ಕಾನೂನುಬಾಹಿರ ಕ್ರಮಗಳನ್ನು ವಿರುದ್ಧ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.

ಕಳೆದ ಅಕ್ಟೋಬರ್‌ನಲ್ಲಿ, ಗಾಝಾದಲ್ಲಿ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸುವಂತೆ ಕರೆ ನೀಡಿದ್ದ ವಿಶ್ವಸಂಸ್ಥೆಯ ನಿರ್ಣಯದ ಮತದಾನಕ್ಕೆ ಗೈರು ಹಾಜರಾದ 45 ರಾಷ್ಟ್ರಗಳಲ್ಲಿ ಭಾರತವೂ ಸೇರಿತ್ತು. ಅಕ್ಟೋಬರ್ 26ರಂದು ಮಂಡಿಸಿದ ಈ ನಿರ್ಣಯದ ಪರವಾಗಿ 120 ಮತ್ತು ವಿರುದ್ಧವಾಗಿ 14 ರಾಷ್ಟ್ರಗಳು ಮತ ಹಾಕಿತ್ತು.

ಯುಎಸ್, ಆಸ್ಟ್ರಿಯಾ, ಜೆಕಿಯಾ, ಲೈಬೀರಿಯಾ ಮತ್ತು ಪೆಸಿಫಿಕ್ ಮಿತ್ರರಾಷ್ಟ್ರಗಳನ್ನು ಒಳಗೊಂಡ ಗುಂಪು ಈ ಬಾರಿಯೂ ಕದನ ವಿರಾಮ ನಿರ್ಣಯದ ವಿರುದ್ಧ ಮತ ಹಾಕಿವೆ. ಆದರೂ, ಕಳೆದ ಬಾರಿಗಿಂತ ಈ ಬಾರಿ ವಿರುದ್ಧ ಮತ ಹಾಕಿದ ಒಟ್ಟು ರಾಷ್ಟ್ರಗಳ ಸಂಖ್ಯೆಯು 45 ರಿಂದ 23 ಕ್ಕೆ ಇಳಿಕೆಯಾಗಿದೆ.

ಅರಬ್ ಗ್ರೂಪ್ ಮತ್ತು ಆರ್ಗನೈಸೇಶನ್ ಆಫ್ ಇಸ್ಲಾಮಿಕ್ ಕೋಆಪರೇಷನ್ ಮಂಡಿಸಿದ ನಿರ್ಣಯವನ್ನು ಬೆಂಬಸಿಲಿದ ರಾಷ್ಟ್ರಗಳ ಸಂಖ್ಯೆ, ರಷ್ಯಾ-ಉಕ್ರೇನ್ ಕದನ ವಿರಾಮದ ಬೆಂಬಲಿಸಿದ ರಾಷ್ಟ್ರಗಳಿಗಿಂತ ಹೆಚ್ಚಿತ್ತು.

ಇಂದಿಗೆ(ಡಿ.13) 68 ದಿನಗಳನ್ನು ಪೂರೈಸಿದ ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ಇದುವರೆಗೆ ಸುಮಾರು 18 ಸಾವಿರ ಗಾಝಾ ಅಥವಾ ಪ್ಯಾಲೆಸ್ತೀನಿಯನ್ ನಾಗರಿಕರು ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆ ಮಾಹಿತಿ ನೀಡಿದೆ. ಅಕ್ಟೋಬರ್ 7ರಂದು ದಕ್ಷಿಣ ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿಯಲ್ಲಿ 1,200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಹಮಾಸ್ 240 ಜನರನ್ನು ಒತ್ತೆಯಾಳಾಗಿ ಇಟ್ಟುಕೊಂಡಿತ್ತು. ಈ ಪೈಕಿ ಹಲವರನ್ನು ಈಗಾಗಲೇ ಬಿಡುಗಡೆ ಮಾಡಿದೆ.

ಇದನ್ನೂ ಓದಿ : ಮೋದಿ ಟೀಕಾಕಾರನ್ನು ಗುರಿಯಾಗಿಸಿ ಭಾರತದಿಂದ ರಹಸ್ಯ ಕಾರ್ಯಾಚರಣೆ: ವಾಷಿಂಗ್ಟನ್ ಪೋಸ್ಟ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...