Homeಮುಖಪುಟಗಾಝಾದಲ್ಲಿ ಕದನ ವಿರಾಮ: ವಿಶ್ವಸಂಸ್ಥೆ ನಿರ್ಣಯ ಬೆಂಬಲಿಸಿದ ಭಾರತ

ಗಾಝಾದಲ್ಲಿ ಕದನ ವಿರಾಮ: ವಿಶ್ವಸಂಸ್ಥೆ ನಿರ್ಣಯ ಬೆಂಬಲಿಸಿದ ಭಾರತ

- Advertisement -
- Advertisement -

ಗಾಝಾ ಮೇಲೆ ಇಸ್ರೇಲ್ ಸೇನೆ ನಡೆಸುತ್ತಿರುವ ದಾಳಿಯನ್ನು ಕೊನೆಗೊಳಿಸಿ ಕದನ ವಿರಾಮ ಘೋಷಿಸುವಂತೆ ಒತ್ತಾಯಿಸುವ ವಿಶ್ವಸಂಸ್ಥೆಯ ನಿರ್ಣಯದ ಪರ ಭಾರತ ಮತ ಹಾಕಿದೆ.

ಕಳೆದ ಎರಡು ತಿಂಗಳ ಹಿಂದೆ ಇದೇ ರೀತಿಯ ನಿರ್ಣಯವನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಂಡಿಸಲಾಗಿತ್ತು. ಈ ನಿರ್ಣಯದ ಮತದಾನದಿಂದ ಭಾರತ ದೂರ ಉಳಿದಿತ್ತು.

ನ್ಯೂಯಾರ್ಕ್‌ನಲ್ಲಿ ಮಂಗಳವಾರ ನಡೆದ ವಿಶ್ವಸಂಸ್ಥೆಯ 10ನೇ ತುರ್ತು ವಿಶೇಷ ಅಧಿವೇಶನಲ್ಲಿ ಸುಮಾರು 80% ಸದಸ್ಯ ರಾಷ್ಟ್ರಗಳು ” ಗಾಝಾದ ನಾಗರಿಕರ ರಕ್ಷಣೆ, ಕಾನೂನು ಮತ್ತು ಮಾನವೀಯ ನೆರವನ್ನು ಎತ್ತಿಹಿಡಿಯುವ” ನಿರ್ಣಯದ ಪರವಾಗಿ ಮತ ಚಲಾಯಿಸಿವೆ.

ಆಕ್ರಮಿತ ಪೂರ್ವ ಜೆರುಸಲೆಮ್ ಮತ್ತು ಉಳಿದ ಆಕ್ರಮಿತ ಪ್ಯಾಲೇಸ್ತೀನಿಯನ್ ಪ್ರದೇಶಗಳಲ್ಲಿ ಇಸ್ರೇಲ್ ಸೇನೆ ನಡೆಸುತ್ತಿರುವ ಕಾನೂನುಬಾಹಿರ ಕ್ರಮಗಳನ್ನು ವಿರುದ್ಧ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.

ಕಳೆದ ಅಕ್ಟೋಬರ್‌ನಲ್ಲಿ, ಗಾಝಾದಲ್ಲಿ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸುವಂತೆ ಕರೆ ನೀಡಿದ್ದ ವಿಶ್ವಸಂಸ್ಥೆಯ ನಿರ್ಣಯದ ಮತದಾನಕ್ಕೆ ಗೈರು ಹಾಜರಾದ 45 ರಾಷ್ಟ್ರಗಳಲ್ಲಿ ಭಾರತವೂ ಸೇರಿತ್ತು. ಅಕ್ಟೋಬರ್ 26ರಂದು ಮಂಡಿಸಿದ ಈ ನಿರ್ಣಯದ ಪರವಾಗಿ 120 ಮತ್ತು ವಿರುದ್ಧವಾಗಿ 14 ರಾಷ್ಟ್ರಗಳು ಮತ ಹಾಕಿತ್ತು.

ಯುಎಸ್, ಆಸ್ಟ್ರಿಯಾ, ಜೆಕಿಯಾ, ಲೈಬೀರಿಯಾ ಮತ್ತು ಪೆಸಿಫಿಕ್ ಮಿತ್ರರಾಷ್ಟ್ರಗಳನ್ನು ಒಳಗೊಂಡ ಗುಂಪು ಈ ಬಾರಿಯೂ ಕದನ ವಿರಾಮ ನಿರ್ಣಯದ ವಿರುದ್ಧ ಮತ ಹಾಕಿವೆ. ಆದರೂ, ಕಳೆದ ಬಾರಿಗಿಂತ ಈ ಬಾರಿ ವಿರುದ್ಧ ಮತ ಹಾಕಿದ ಒಟ್ಟು ರಾಷ್ಟ್ರಗಳ ಸಂಖ್ಯೆಯು 45 ರಿಂದ 23 ಕ್ಕೆ ಇಳಿಕೆಯಾಗಿದೆ.

ಅರಬ್ ಗ್ರೂಪ್ ಮತ್ತು ಆರ್ಗನೈಸೇಶನ್ ಆಫ್ ಇಸ್ಲಾಮಿಕ್ ಕೋಆಪರೇಷನ್ ಮಂಡಿಸಿದ ನಿರ್ಣಯವನ್ನು ಬೆಂಬಸಿಲಿದ ರಾಷ್ಟ್ರಗಳ ಸಂಖ್ಯೆ, ರಷ್ಯಾ-ಉಕ್ರೇನ್ ಕದನ ವಿರಾಮದ ಬೆಂಬಲಿಸಿದ ರಾಷ್ಟ್ರಗಳಿಗಿಂತ ಹೆಚ್ಚಿತ್ತು.

ಇಂದಿಗೆ(ಡಿ.13) 68 ದಿನಗಳನ್ನು ಪೂರೈಸಿದ ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ಇದುವರೆಗೆ ಸುಮಾರು 18 ಸಾವಿರ ಗಾಝಾ ಅಥವಾ ಪ್ಯಾಲೆಸ್ತೀನಿಯನ್ ನಾಗರಿಕರು ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆ ಮಾಹಿತಿ ನೀಡಿದೆ. ಅಕ್ಟೋಬರ್ 7ರಂದು ದಕ್ಷಿಣ ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿಯಲ್ಲಿ 1,200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಹಮಾಸ್ 240 ಜನರನ್ನು ಒತ್ತೆಯಾಳಾಗಿ ಇಟ್ಟುಕೊಂಡಿತ್ತು. ಈ ಪೈಕಿ ಹಲವರನ್ನು ಈಗಾಗಲೇ ಬಿಡುಗಡೆ ಮಾಡಿದೆ.

ಇದನ್ನೂ ಓದಿ : ಮೋದಿ ಟೀಕಾಕಾರನ್ನು ಗುರಿಯಾಗಿಸಿ ಭಾರತದಿಂದ ರಹಸ್ಯ ಕಾರ್ಯಾಚರಣೆ: ವಾಷಿಂಗ್ಟನ್ ಪೋಸ್ಟ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...