Homeಅಂತರಾಷ್ಟ್ರೀಯಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ...

ಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ ಹತ್ಯೆ

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಬೆನ್ನನ್ನು ತಾನೇ ತಟ್ಟಿಕೊಂಡ, ಅರಬ್ ದೇಶದವರೂ ಸೇರಿದಂತೆ ಜಾಗತಿಕ ನಾಯಕರು ಟ್ರಂಪ್ ಅವರನ್ನು ‘ಶಾಂತಿಯ ರಾಯಭಾರಿ’ಯಾಗಿಸಿದ ಗಾಝಾ ಕದನ ವಿರಾಮ ಒಪ್ಪಂದಕ್ಕೆ ವಾರದೊಳಗೆ ಇಸ್ರೇಲ್ ಎಳ್ಳು ನೀರು ಬಿಟ್ಟಿದೆ.

ಅರ್ಥಾತ್, ಹಮಾಸ್ ಮತ್ತು ಇಸ್ರೇಲ್ ನಡುವಿನ ‘ಗಾಝಾ ಶಾಂತಿ ಒಪ್ಪಂದ’ ಕೇವಲ ಕಾಗದಕ್ಕೆ ಸೀಮಿತವಾಗಿದೆ. ಗಾಝಾದಲ್ಲಿ ಅಮಾಯಕರ ನರಮೇಧವನ್ನು ಇಸ್ರೇಲ್ ರಾಜಾರೋಷವಾಗಿ ಮುಂದುವರಿಸಿದೆ.

ಅಕ್ಟೋಬರ್ 9ರಂದು ಇಸ್ರೇಲ್-ಹಮಾಸ್ ಗಾಝಾ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಟ್ರಂಪ್ ಘೋಷಿಸಿದ್ದರು. ಅಂದಿನಿಂದ ಇಂದಿನವರೆಗೆ (ಅ.21) ಕನಿಷ್ಠ 97 ರಿಂದ 100 ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಹತ್ಯೆ ಮಾಡಿದೆ. ಸಾವೀಗೀಡಾದವರ ಸಂಖ್ಯೆ ಇನ್ನೂ ಹೆಚ್ಚಿರುವ ಸಾಧ್ಯತೆ ಇದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಇಸ್ರೇಲ್ ಕದನ ವಿರಾಮ ಒಪ್ಪಂದ ಮುರಿದು ಅಮಾಯಕರ ಹತ್ಯೆ ಮಾಡುತ್ತಿದ್ದರೂ, ಅಮೆರಿಕ ಹಮಾಸ್‌ನತ್ತ ಕೈ ತೋರಿಸುತ್ತಿದೆ. “ಹಮಾಸ್‌ ಅನ್ನು ನಿರ್ಣಾಮ ಮಾಡುತ್ತೇವೆ, ನರಕ ತೋರಿಸುತ್ತೇವೆ” ಎಂದು ಟ್ರಂಪ್ ಪುನರುಚ್ಚರಿಸಿದ್ದಾರೆ.

ಕದನ ವಿರಾಮ ಒಪ್ಪಂದದ ಮೊದಲ ಹಂತವಾಗಿ ಹಮಾಸ್ ಜೀವಂತ ಇಸ್ರೇಲಿ ಒತ್ತೆಯಾಳುಗಳನ್ನು ಹಸ್ತಾಂತರಿಸಿದೆ. ಇದಕ್ಕೆ ಪ್ರತಿಯಾಗಿ 2 ಸಾವಿರ ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಬಿಡುಗಡೆ ಮಾಡಬೇಕಿತ್ತು.

ವರದಿಗಳ ಪ್ರಕಾರ, ಇಸ್ರೇಲ್ ಸುಮಾರು 1, 950ರಷ್ಟು ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಿದೆ. ಆದರೆ, ಅವರಲ್ಲಿ ಕೆಲವರನ್ನು ಬೇರೆ ಬೇರೆ ದೇಶಗಳಲ್ಲಿ ಕರೆದೊಯ್ದು ಬಿಡುವ ಮೂಲಕ ಅಮಾನವೀಯ ಕೃತ್ಯವೆಸಗಿದ ಆರೋಪವಿದೆ.

ಹಮಾಸ್ ಬಿಡುಗಡೆ ಮಾಡಿದ ಒತ್ತೆಯಾಳುಗಳು ಆರೋಗ್ಯವಂತರಾಗಿದ್ದರೆ, ಇಸ್ರೇಲ್ ಬಿಡುಗಡೆ ಮಾಡಿದ ಪ್ಯಾಲೆಸ್ತೀನಿಯರ ಪರಿಸ್ಥಿತಿ ಶೋಚಣೀಯವಾಗಿದೆ. ಇಸ್ರೇಲಿ ಬಂಧಿಖಾನೆಗಳಲ್ಲಿ ಅವರು ತೀವ್ರ ಹಿಂಸೆಗೆ ಒಳಗಾಗಿರುವುದನ್ನು ಅವರ ದೇಹದ ಸ್ಥಿತಿ ತೋರಿಸುತ್ತಿದೆ ಎಂದು ಹಲವಾರು ವರದಿಗಳು ಹೇಳಿವೆ.

ಹಮಾಸ್ 28 ಮೃತ ಒತ್ತೆಯಾಳುಗಳ ಪೈಕಿ, ಬಹುತೇಕರ ದೇಹಗಳನ್ನು ಇಸ್ರೇಲ್‌ಗೆ ಹಸ್ತಾಂತರಿಸಿದೆ. ಈ ನಡುವೆ ಹಮಾಸ್ ಮೃತದೇಹ ಹಸ್ತಾಂತರಿಸಲು ವಿಳಂಬ ಮಾಡುತ್ತಿದೆ ಎಂದು ಇಸ್ರೇಲ್ ಆರೋಪಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಹಮಾಸ್, ಇಸ್ರೇಲ್ ಇಡೀ ಗಾಝಾ ಪಟ್ಟಿಯನ್ನು ನಾಶ ಮಾಡಿರುವ ಪರಿಣಾಮ ಮೃತದೇಹಗಳ ಹಸ್ತಾಂತರಕ್ಕೆ ಅಡೆತಡೆಗಳು ಉಂಟಾಗಿವೆ ಎಂದಿದೆ.

ಇನ್ನು, ಇಸ್ರೇಲ್ ಕದನ ವಿರಾಮ ಮುರಿದು ಈಗಾಗಲೇ ದಾಳಿ ಆರಂಭಿಸಿರುವ ಹಿನ್ನೆಲೆ, ಎಲ್ಲಾ ಮೃತದೇಹಗಳನ್ನು ಹಸ್ತಾಂತರಿಸಿದರೆ ಅಮೆರಿಕ ಮತ್ತು ಇಸ್ರೇಲ್ ಸೇರಿಕೊಂಡು ಮಾತು ಬದಲಿಸುವ ಆತಂಕವನ್ನು ಹಮಾಸ್ ವ್ಯಕ್ತಪಡಿಸಿದೆ. ಇವೆಲ್ಲದರ ಪರಿಣಾಮ ಗಾಝಾದ ಅಮಾಯಕರ ನಾಗರಿಕರು ನರಳುವಂತಾಗಿದೆ.

ಇಸ್ರೇಲ್-ಹಮಾಸ್ ನಡುವಿನ ಗಾಝಾ ಕದನ ವಿರಾಮ ಒಪ್ಪಂದವನ್ನು ಮತ್ತೆ ಹಳಿಗೆ ತರಲು ಅಮೆರಿಕ ಪ್ರಯತ್ನಿಸುತ್ತಿದೆ ಎಂದು ವರದಿಗಳು ಹೇಳಿವೆ.

ಈ ನಡುವೆ ಸೋಮವಾರ ಪೂರ್ವ ಗಾಝಾ ನಗರದ ತುಫಾ ಸಮೀಪದ ಅಲ್-ಶಾಫ್ ಪ್ರದೇಶದಲ್ಲಿ ಎರಡು ಪ್ರತ್ಯೇಕ ದಾಳಿಗಳಲ್ಲಿ ನಾಲ್ವರು ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಹತ್ಯೆ ಮಾಡಿದೆ. ಎರಡೂ ಬಾರಿಯೂ ಅಮಾಯಕರ ಜನರು ತಮ್ಮ ಮನೆಗಳನ್ನು ಪರಿಶೀಲಿಸಲು ವಾಪಾಸ್ ಬಂದಾಗ ಇಸ್ರೇಲ್ ಗುಂಡಿನ ದಾಳಿ ಮಾಡಿದೆ ಎಂದು ಗಾಝಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ.

ಹಳದಿ ಗಡಿ ರೇಖೆ ಅಥವಾ ಯೆಲ್ಲೋ ಲೇನ್ ದಾಟಿ ತುಫಾಹ್‌ಗೆ ಹೊಂದಿಕೊಂಡಿರುವ ಶುಜಾಯೆಯಾ ಸಮೀಪ ಸೈನಿಕರನ್ನು ಸಮೀಪಿಸಿದ ಉಗ್ರಗಾಮಿಗಳ ಮೇಲೆ ಗುಂಡು ಹಾರಿಸಿರುವುದಾಗಿ ಇಸ್ರೇಲ್ ಸಮರ್ಥಿಸಿಕೊಂಡಿದೆ.

ಅಕ್ಟೋಬರ್ 4ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡ ನಕ್ಷೆಯಲ್ಲಿ ಸೂಚಿಸಲಾದ ಹಳದಿ ರೇಖೆಯು, ಇಸ್ರೇಲಿ ಪಡೆಗಳು ಹಿಂದೆ ಸರಿದು ಹಮಾಸ್ ಜೊತೆಗಿನ ಕದನ ವಿರಾಮ ಒಪ್ಪಂದದ ಅಡಿಯಲ್ಲಿ ನೆಲೆಗೊಂಡಿರುವ ಗಡಿಯಾಗಿದೆ.

ಗಾಝಾ ನಗರದ ನಿವಾಸಿಗಳು ಈ ಹಳದಿ ಗಡಿ ರೇಖೆಯ ಬಗ್ಗೆ ಗೊಂದಲ ವ್ಯಕ್ತಪಡಿಸಿದ್ದಾರೆ. “ಇಲ್ಲಿ ಕಣ್ಣಿಗೆ ಗೋಚರಿಸುವ ಯಾವುದೇ ಗಡಿ ರೇಖೆ ಗುರುತುಗಳಿಲ್ಲ. ಇಡೀ ಪ್ರದೇಶ ಹಾಳಾಗಿದೆ. ಹೀಗಿರುವಾಗ ಗಡಿರೇಖೆ ಎಲ್ಲಿದೆ ಎಂದು ನಮಗೆ ಗೊತ್ತಿಲ್ಲ” ಗಾಝಾ ನಗರದ ಪೂರ್ವದಲ್ಲಿರುವ ತುಫಾದಲ್ಲಿ ವಾಸಿಸುವ 50 ವರ್ಷದ ಸಮೀರ್ ಹೇಳಿದ್ದಾರೆ ಎಂದು ಅಲ್‌-ಜಝೀರಾ ವರದಿ ವಿವರಿಸಿದೆ.

ತೈಲ ಆಮದು: ರಷ್ಯಾದಿಂದ ತೈಲ ಖರೀದಿ ಮುಂದುವರಿಸಿದರೆ ‘ಭಾರಿ ಸುಂಕ’ ಭಾರತಕ್ಕೆ ಟ್ರಂಪ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...