Homeಅಂತರಾಷ್ಟ್ರೀಯಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ...

ಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ ಹತ್ಯೆ

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಬೆನ್ನನ್ನು ತಾನೇ ತಟ್ಟಿಕೊಂಡ, ಅರಬ್ ದೇಶದವರೂ ಸೇರಿದಂತೆ ಜಾಗತಿಕ ನಾಯಕರು ಟ್ರಂಪ್ ಅವರನ್ನು ‘ಶಾಂತಿಯ ರಾಯಭಾರಿ’ಯಾಗಿಸಿದ ಗಾಝಾ ಕದನ ವಿರಾಮ ಒಪ್ಪಂದಕ್ಕೆ ವಾರದೊಳಗೆ ಇಸ್ರೇಲ್ ಎಳ್ಳು ನೀರು ಬಿಟ್ಟಿದೆ.

ಅರ್ಥಾತ್, ಹಮಾಸ್ ಮತ್ತು ಇಸ್ರೇಲ್ ನಡುವಿನ ‘ಗಾಝಾ ಶಾಂತಿ ಒಪ್ಪಂದ’ ಕೇವಲ ಕಾಗದಕ್ಕೆ ಸೀಮಿತವಾಗಿದೆ. ಗಾಝಾದಲ್ಲಿ ಅಮಾಯಕರ ನರಮೇಧವನ್ನು ಇಸ್ರೇಲ್ ರಾಜಾರೋಷವಾಗಿ ಮುಂದುವರಿಸಿದೆ.

ಅಕ್ಟೋಬರ್ 9ರಂದು ಇಸ್ರೇಲ್-ಹಮಾಸ್ ಗಾಝಾ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಟ್ರಂಪ್ ಘೋಷಿಸಿದ್ದರು. ಅಂದಿನಿಂದ ಇಂದಿನವರೆಗೆ (ಅ.21) ಕನಿಷ್ಠ 97 ರಿಂದ 100 ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಹತ್ಯೆ ಮಾಡಿದೆ. ಸಾವೀಗೀಡಾದವರ ಸಂಖ್ಯೆ ಇನ್ನೂ ಹೆಚ್ಚಿರುವ ಸಾಧ್ಯತೆ ಇದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಇಸ್ರೇಲ್ ಕದನ ವಿರಾಮ ಒಪ್ಪಂದ ಮುರಿದು ಅಮಾಯಕರ ಹತ್ಯೆ ಮಾಡುತ್ತಿದ್ದರೂ, ಅಮೆರಿಕ ಹಮಾಸ್‌ನತ್ತ ಕೈ ತೋರಿಸುತ್ತಿದೆ. “ಹಮಾಸ್‌ ಅನ್ನು ನಿರ್ಣಾಮ ಮಾಡುತ್ತೇವೆ, ನರಕ ತೋರಿಸುತ್ತೇವೆ” ಎಂದು ಟ್ರಂಪ್ ಪುನರುಚ್ಚರಿಸಿದ್ದಾರೆ.

ಕದನ ವಿರಾಮ ಒಪ್ಪಂದದ ಮೊದಲ ಹಂತವಾಗಿ ಹಮಾಸ್ ಜೀವಂತ ಇಸ್ರೇಲಿ ಒತ್ತೆಯಾಳುಗಳನ್ನು ಹಸ್ತಾಂತರಿಸಿದೆ. ಇದಕ್ಕೆ ಪ್ರತಿಯಾಗಿ 2 ಸಾವಿರ ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಬಿಡುಗಡೆ ಮಾಡಬೇಕಿತ್ತು.

ವರದಿಗಳ ಪ್ರಕಾರ, ಇಸ್ರೇಲ್ ಸುಮಾರು 1, 950ರಷ್ಟು ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಿದೆ. ಆದರೆ, ಅವರಲ್ಲಿ ಕೆಲವರನ್ನು ಬೇರೆ ಬೇರೆ ದೇಶಗಳಲ್ಲಿ ಕರೆದೊಯ್ದು ಬಿಡುವ ಮೂಲಕ ಅಮಾನವೀಯ ಕೃತ್ಯವೆಸಗಿದ ಆರೋಪವಿದೆ.

ಹಮಾಸ್ ಬಿಡುಗಡೆ ಮಾಡಿದ ಒತ್ತೆಯಾಳುಗಳು ಆರೋಗ್ಯವಂತರಾಗಿದ್ದರೆ, ಇಸ್ರೇಲ್ ಬಿಡುಗಡೆ ಮಾಡಿದ ಪ್ಯಾಲೆಸ್ತೀನಿಯರ ಪರಿಸ್ಥಿತಿ ಶೋಚಣೀಯವಾಗಿದೆ. ಇಸ್ರೇಲಿ ಬಂಧಿಖಾನೆಗಳಲ್ಲಿ ಅವರು ತೀವ್ರ ಹಿಂಸೆಗೆ ಒಳಗಾಗಿರುವುದನ್ನು ಅವರ ದೇಹದ ಸ್ಥಿತಿ ತೋರಿಸುತ್ತಿದೆ ಎಂದು ಹಲವಾರು ವರದಿಗಳು ಹೇಳಿವೆ.

ಹಮಾಸ್ 28 ಮೃತ ಒತ್ತೆಯಾಳುಗಳ ಪೈಕಿ, ಬಹುತೇಕರ ದೇಹಗಳನ್ನು ಇಸ್ರೇಲ್‌ಗೆ ಹಸ್ತಾಂತರಿಸಿದೆ. ಈ ನಡುವೆ ಹಮಾಸ್ ಮೃತದೇಹ ಹಸ್ತಾಂತರಿಸಲು ವಿಳಂಬ ಮಾಡುತ್ತಿದೆ ಎಂದು ಇಸ್ರೇಲ್ ಆರೋಪಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಹಮಾಸ್, ಇಸ್ರೇಲ್ ಇಡೀ ಗಾಝಾ ಪಟ್ಟಿಯನ್ನು ನಾಶ ಮಾಡಿರುವ ಪರಿಣಾಮ ಮೃತದೇಹಗಳ ಹಸ್ತಾಂತರಕ್ಕೆ ಅಡೆತಡೆಗಳು ಉಂಟಾಗಿವೆ ಎಂದಿದೆ.

ಇನ್ನು, ಇಸ್ರೇಲ್ ಕದನ ವಿರಾಮ ಮುರಿದು ಈಗಾಗಲೇ ದಾಳಿ ಆರಂಭಿಸಿರುವ ಹಿನ್ನೆಲೆ, ಎಲ್ಲಾ ಮೃತದೇಹಗಳನ್ನು ಹಸ್ತಾಂತರಿಸಿದರೆ ಅಮೆರಿಕ ಮತ್ತು ಇಸ್ರೇಲ್ ಸೇರಿಕೊಂಡು ಮಾತು ಬದಲಿಸುವ ಆತಂಕವನ್ನು ಹಮಾಸ್ ವ್ಯಕ್ತಪಡಿಸಿದೆ. ಇವೆಲ್ಲದರ ಪರಿಣಾಮ ಗಾಝಾದ ಅಮಾಯಕರ ನಾಗರಿಕರು ನರಳುವಂತಾಗಿದೆ.

ಇಸ್ರೇಲ್-ಹಮಾಸ್ ನಡುವಿನ ಗಾಝಾ ಕದನ ವಿರಾಮ ಒಪ್ಪಂದವನ್ನು ಮತ್ತೆ ಹಳಿಗೆ ತರಲು ಅಮೆರಿಕ ಪ್ರಯತ್ನಿಸುತ್ತಿದೆ ಎಂದು ವರದಿಗಳು ಹೇಳಿವೆ.

ಈ ನಡುವೆ ಸೋಮವಾರ ಪೂರ್ವ ಗಾಝಾ ನಗರದ ತುಫಾ ಸಮೀಪದ ಅಲ್-ಶಾಫ್ ಪ್ರದೇಶದಲ್ಲಿ ಎರಡು ಪ್ರತ್ಯೇಕ ದಾಳಿಗಳಲ್ಲಿ ನಾಲ್ವರು ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಹತ್ಯೆ ಮಾಡಿದೆ. ಎರಡೂ ಬಾರಿಯೂ ಅಮಾಯಕರ ಜನರು ತಮ್ಮ ಮನೆಗಳನ್ನು ಪರಿಶೀಲಿಸಲು ವಾಪಾಸ್ ಬಂದಾಗ ಇಸ್ರೇಲ್ ಗುಂಡಿನ ದಾಳಿ ಮಾಡಿದೆ ಎಂದು ಗಾಝಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ.

ಹಳದಿ ಗಡಿ ರೇಖೆ ಅಥವಾ ಯೆಲ್ಲೋ ಲೇನ್ ದಾಟಿ ತುಫಾಹ್‌ಗೆ ಹೊಂದಿಕೊಂಡಿರುವ ಶುಜಾಯೆಯಾ ಸಮೀಪ ಸೈನಿಕರನ್ನು ಸಮೀಪಿಸಿದ ಉಗ್ರಗಾಮಿಗಳ ಮೇಲೆ ಗುಂಡು ಹಾರಿಸಿರುವುದಾಗಿ ಇಸ್ರೇಲ್ ಸಮರ್ಥಿಸಿಕೊಂಡಿದೆ.

ಅಕ್ಟೋಬರ್ 4ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡ ನಕ್ಷೆಯಲ್ಲಿ ಸೂಚಿಸಲಾದ ಹಳದಿ ರೇಖೆಯು, ಇಸ್ರೇಲಿ ಪಡೆಗಳು ಹಿಂದೆ ಸರಿದು ಹಮಾಸ್ ಜೊತೆಗಿನ ಕದನ ವಿರಾಮ ಒಪ್ಪಂದದ ಅಡಿಯಲ್ಲಿ ನೆಲೆಗೊಂಡಿರುವ ಗಡಿಯಾಗಿದೆ.

ಗಾಝಾ ನಗರದ ನಿವಾಸಿಗಳು ಈ ಹಳದಿ ಗಡಿ ರೇಖೆಯ ಬಗ್ಗೆ ಗೊಂದಲ ವ್ಯಕ್ತಪಡಿಸಿದ್ದಾರೆ. “ಇಲ್ಲಿ ಕಣ್ಣಿಗೆ ಗೋಚರಿಸುವ ಯಾವುದೇ ಗಡಿ ರೇಖೆ ಗುರುತುಗಳಿಲ್ಲ. ಇಡೀ ಪ್ರದೇಶ ಹಾಳಾಗಿದೆ. ಹೀಗಿರುವಾಗ ಗಡಿರೇಖೆ ಎಲ್ಲಿದೆ ಎಂದು ನಮಗೆ ಗೊತ್ತಿಲ್ಲ” ಗಾಝಾ ನಗರದ ಪೂರ್ವದಲ್ಲಿರುವ ತುಫಾದಲ್ಲಿ ವಾಸಿಸುವ 50 ವರ್ಷದ ಸಮೀರ್ ಹೇಳಿದ್ದಾರೆ ಎಂದು ಅಲ್‌-ಜಝೀರಾ ವರದಿ ವಿವರಿಸಿದೆ.

ತೈಲ ಆಮದು: ರಷ್ಯಾದಿಂದ ತೈಲ ಖರೀದಿ ಮುಂದುವರಿಸಿದರೆ ‘ಭಾರಿ ಸುಂಕ’ ಭಾರತಕ್ಕೆ ಟ್ರಂಪ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...