Homeಅಂತರಾಷ್ಟ್ರೀಯಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ...

ಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ ಹತ್ಯೆ

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಬೆನ್ನನ್ನು ತಾನೇ ತಟ್ಟಿಕೊಂಡ, ಅರಬ್ ದೇಶದವರೂ ಸೇರಿದಂತೆ ಜಾಗತಿಕ ನಾಯಕರು ಟ್ರಂಪ್ ಅವರನ್ನು ‘ಶಾಂತಿಯ ರಾಯಭಾರಿ’ಯಾಗಿಸಿದ ಗಾಝಾ ಕದನ ವಿರಾಮ ಒಪ್ಪಂದಕ್ಕೆ ವಾರದೊಳಗೆ ಇಸ್ರೇಲ್ ಎಳ್ಳು ನೀರು ಬಿಟ್ಟಿದೆ.

ಅರ್ಥಾತ್, ಹಮಾಸ್ ಮತ್ತು ಇಸ್ರೇಲ್ ನಡುವಿನ ‘ಗಾಝಾ ಶಾಂತಿ ಒಪ್ಪಂದ’ ಕೇವಲ ಕಾಗದಕ್ಕೆ ಸೀಮಿತವಾಗಿದೆ. ಗಾಝಾದಲ್ಲಿ ಅಮಾಯಕರ ನರಮೇಧವನ್ನು ಇಸ್ರೇಲ್ ರಾಜಾರೋಷವಾಗಿ ಮುಂದುವರಿಸಿದೆ.

ಅಕ್ಟೋಬರ್ 9ರಂದು ಇಸ್ರೇಲ್-ಹಮಾಸ್ ಗಾಝಾ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಟ್ರಂಪ್ ಘೋಷಿಸಿದ್ದರು. ಅಂದಿನಿಂದ ಇಂದಿನವರೆಗೆ (ಅ.21) ಕನಿಷ್ಠ 97 ರಿಂದ 100 ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಹತ್ಯೆ ಮಾಡಿದೆ. ಸಾವೀಗೀಡಾದವರ ಸಂಖ್ಯೆ ಇನ್ನೂ ಹೆಚ್ಚಿರುವ ಸಾಧ್ಯತೆ ಇದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಇಸ್ರೇಲ್ ಕದನ ವಿರಾಮ ಒಪ್ಪಂದ ಮುರಿದು ಅಮಾಯಕರ ಹತ್ಯೆ ಮಾಡುತ್ತಿದ್ದರೂ, ಅಮೆರಿಕ ಹಮಾಸ್‌ನತ್ತ ಕೈ ತೋರಿಸುತ್ತಿದೆ. “ಹಮಾಸ್‌ ಅನ್ನು ನಿರ್ಣಾಮ ಮಾಡುತ್ತೇವೆ, ನರಕ ತೋರಿಸುತ್ತೇವೆ” ಎಂದು ಟ್ರಂಪ್ ಪುನರುಚ್ಚರಿಸಿದ್ದಾರೆ.

ಕದನ ವಿರಾಮ ಒಪ್ಪಂದದ ಮೊದಲ ಹಂತವಾಗಿ ಹಮಾಸ್ ಜೀವಂತ ಇಸ್ರೇಲಿ ಒತ್ತೆಯಾಳುಗಳನ್ನು ಹಸ್ತಾಂತರಿಸಿದೆ. ಇದಕ್ಕೆ ಪ್ರತಿಯಾಗಿ 2 ಸಾವಿರ ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಬಿಡುಗಡೆ ಮಾಡಬೇಕಿತ್ತು.

ವರದಿಗಳ ಪ್ರಕಾರ, ಇಸ್ರೇಲ್ ಸುಮಾರು 1, 950ರಷ್ಟು ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಿದೆ. ಆದರೆ, ಅವರಲ್ಲಿ ಕೆಲವರನ್ನು ಬೇರೆ ಬೇರೆ ದೇಶಗಳಲ್ಲಿ ಕರೆದೊಯ್ದು ಬಿಡುವ ಮೂಲಕ ಅಮಾನವೀಯ ಕೃತ್ಯವೆಸಗಿದ ಆರೋಪವಿದೆ.

ಹಮಾಸ್ ಬಿಡುಗಡೆ ಮಾಡಿದ ಒತ್ತೆಯಾಳುಗಳು ಆರೋಗ್ಯವಂತರಾಗಿದ್ದರೆ, ಇಸ್ರೇಲ್ ಬಿಡುಗಡೆ ಮಾಡಿದ ಪ್ಯಾಲೆಸ್ತೀನಿಯರ ಪರಿಸ್ಥಿತಿ ಶೋಚಣೀಯವಾಗಿದೆ. ಇಸ್ರೇಲಿ ಬಂಧಿಖಾನೆಗಳಲ್ಲಿ ಅವರು ತೀವ್ರ ಹಿಂಸೆಗೆ ಒಳಗಾಗಿರುವುದನ್ನು ಅವರ ದೇಹದ ಸ್ಥಿತಿ ತೋರಿಸುತ್ತಿದೆ ಎಂದು ಹಲವಾರು ವರದಿಗಳು ಹೇಳಿವೆ.

ಹಮಾಸ್ 28 ಮೃತ ಒತ್ತೆಯಾಳುಗಳ ಪೈಕಿ, ಬಹುತೇಕರ ದೇಹಗಳನ್ನು ಇಸ್ರೇಲ್‌ಗೆ ಹಸ್ತಾಂತರಿಸಿದೆ. ಈ ನಡುವೆ ಹಮಾಸ್ ಮೃತದೇಹ ಹಸ್ತಾಂತರಿಸಲು ವಿಳಂಬ ಮಾಡುತ್ತಿದೆ ಎಂದು ಇಸ್ರೇಲ್ ಆರೋಪಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಹಮಾಸ್, ಇಸ್ರೇಲ್ ಇಡೀ ಗಾಝಾ ಪಟ್ಟಿಯನ್ನು ನಾಶ ಮಾಡಿರುವ ಪರಿಣಾಮ ಮೃತದೇಹಗಳ ಹಸ್ತಾಂತರಕ್ಕೆ ಅಡೆತಡೆಗಳು ಉಂಟಾಗಿವೆ ಎಂದಿದೆ.

ಇನ್ನು, ಇಸ್ರೇಲ್ ಕದನ ವಿರಾಮ ಮುರಿದು ಈಗಾಗಲೇ ದಾಳಿ ಆರಂಭಿಸಿರುವ ಹಿನ್ನೆಲೆ, ಎಲ್ಲಾ ಮೃತದೇಹಗಳನ್ನು ಹಸ್ತಾಂತರಿಸಿದರೆ ಅಮೆರಿಕ ಮತ್ತು ಇಸ್ರೇಲ್ ಸೇರಿಕೊಂಡು ಮಾತು ಬದಲಿಸುವ ಆತಂಕವನ್ನು ಹಮಾಸ್ ವ್ಯಕ್ತಪಡಿಸಿದೆ. ಇವೆಲ್ಲದರ ಪರಿಣಾಮ ಗಾಝಾದ ಅಮಾಯಕರ ನಾಗರಿಕರು ನರಳುವಂತಾಗಿದೆ.

ಇಸ್ರೇಲ್-ಹಮಾಸ್ ನಡುವಿನ ಗಾಝಾ ಕದನ ವಿರಾಮ ಒಪ್ಪಂದವನ್ನು ಮತ್ತೆ ಹಳಿಗೆ ತರಲು ಅಮೆರಿಕ ಪ್ರಯತ್ನಿಸುತ್ತಿದೆ ಎಂದು ವರದಿಗಳು ಹೇಳಿವೆ.

ಈ ನಡುವೆ ಸೋಮವಾರ ಪೂರ್ವ ಗಾಝಾ ನಗರದ ತುಫಾ ಸಮೀಪದ ಅಲ್-ಶಾಫ್ ಪ್ರದೇಶದಲ್ಲಿ ಎರಡು ಪ್ರತ್ಯೇಕ ದಾಳಿಗಳಲ್ಲಿ ನಾಲ್ವರು ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಹತ್ಯೆ ಮಾಡಿದೆ. ಎರಡೂ ಬಾರಿಯೂ ಅಮಾಯಕರ ಜನರು ತಮ್ಮ ಮನೆಗಳನ್ನು ಪರಿಶೀಲಿಸಲು ವಾಪಾಸ್ ಬಂದಾಗ ಇಸ್ರೇಲ್ ಗುಂಡಿನ ದಾಳಿ ಮಾಡಿದೆ ಎಂದು ಗಾಝಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ.

ಹಳದಿ ಗಡಿ ರೇಖೆ ಅಥವಾ ಯೆಲ್ಲೋ ಲೇನ್ ದಾಟಿ ತುಫಾಹ್‌ಗೆ ಹೊಂದಿಕೊಂಡಿರುವ ಶುಜಾಯೆಯಾ ಸಮೀಪ ಸೈನಿಕರನ್ನು ಸಮೀಪಿಸಿದ ಉಗ್ರಗಾಮಿಗಳ ಮೇಲೆ ಗುಂಡು ಹಾರಿಸಿರುವುದಾಗಿ ಇಸ್ರೇಲ್ ಸಮರ್ಥಿಸಿಕೊಂಡಿದೆ.

ಅಕ್ಟೋಬರ್ 4ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡ ನಕ್ಷೆಯಲ್ಲಿ ಸೂಚಿಸಲಾದ ಹಳದಿ ರೇಖೆಯು, ಇಸ್ರೇಲಿ ಪಡೆಗಳು ಹಿಂದೆ ಸರಿದು ಹಮಾಸ್ ಜೊತೆಗಿನ ಕದನ ವಿರಾಮ ಒಪ್ಪಂದದ ಅಡಿಯಲ್ಲಿ ನೆಲೆಗೊಂಡಿರುವ ಗಡಿಯಾಗಿದೆ.

ಗಾಝಾ ನಗರದ ನಿವಾಸಿಗಳು ಈ ಹಳದಿ ಗಡಿ ರೇಖೆಯ ಬಗ್ಗೆ ಗೊಂದಲ ವ್ಯಕ್ತಪಡಿಸಿದ್ದಾರೆ. “ಇಲ್ಲಿ ಕಣ್ಣಿಗೆ ಗೋಚರಿಸುವ ಯಾವುದೇ ಗಡಿ ರೇಖೆ ಗುರುತುಗಳಿಲ್ಲ. ಇಡೀ ಪ್ರದೇಶ ಹಾಳಾಗಿದೆ. ಹೀಗಿರುವಾಗ ಗಡಿರೇಖೆ ಎಲ್ಲಿದೆ ಎಂದು ನಮಗೆ ಗೊತ್ತಿಲ್ಲ” ಗಾಝಾ ನಗರದ ಪೂರ್ವದಲ್ಲಿರುವ ತುಫಾದಲ್ಲಿ ವಾಸಿಸುವ 50 ವರ್ಷದ ಸಮೀರ್ ಹೇಳಿದ್ದಾರೆ ಎಂದು ಅಲ್‌-ಜಝೀರಾ ವರದಿ ವಿವರಿಸಿದೆ.

ತೈಲ ಆಮದು: ರಷ್ಯಾದಿಂದ ತೈಲ ಖರೀದಿ ಮುಂದುವರಿಸಿದರೆ ‘ಭಾರಿ ಸುಂಕ’ ಭಾರತಕ್ಕೆ ಟ್ರಂಪ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...