Homeಅಂತರಾಷ್ಟ್ರೀಯಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ...

ಕಾಗದಕ್ಕೆ ಸೀಮಿತವಾದ ಕದನ ವಿರಾಮ : ಗಾಝಾ ಮೇಲೆ ಅಕ್ರಮಣ ಮುಂದುವರಿಸಿದ ಇಸ್ರೇಲ್; ನೂರಾರು ಪ್ಯಾಲೆಸ್ತೀನಿಯರ ಹತ್ಯೆ

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಬೆನ್ನನ್ನು ತಾನೇ ತಟ್ಟಿಕೊಂಡ, ಅರಬ್ ದೇಶದವರೂ ಸೇರಿದಂತೆ ಜಾಗತಿಕ ನಾಯಕರು ಟ್ರಂಪ್ ಅವರನ್ನು ‘ಶಾಂತಿಯ ರಾಯಭಾರಿ’ಯಾಗಿಸಿದ ಗಾಝಾ ಕದನ ವಿರಾಮ ಒಪ್ಪಂದಕ್ಕೆ ವಾರದೊಳಗೆ ಇಸ್ರೇಲ್ ಎಳ್ಳು ನೀರು ಬಿಟ್ಟಿದೆ.

ಅರ್ಥಾತ್, ಹಮಾಸ್ ಮತ್ತು ಇಸ್ರೇಲ್ ನಡುವಿನ ‘ಗಾಝಾ ಶಾಂತಿ ಒಪ್ಪಂದ’ ಕೇವಲ ಕಾಗದಕ್ಕೆ ಸೀಮಿತವಾಗಿದೆ. ಗಾಝಾದಲ್ಲಿ ಅಮಾಯಕರ ನರಮೇಧವನ್ನು ಇಸ್ರೇಲ್ ರಾಜಾರೋಷವಾಗಿ ಮುಂದುವರಿಸಿದೆ.

ಅಕ್ಟೋಬರ್ 9ರಂದು ಇಸ್ರೇಲ್-ಹಮಾಸ್ ಗಾಝಾ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಟ್ರಂಪ್ ಘೋಷಿಸಿದ್ದರು. ಅಂದಿನಿಂದ ಇಂದಿನವರೆಗೆ (ಅ.21) ಕನಿಷ್ಠ 97 ರಿಂದ 100 ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಹತ್ಯೆ ಮಾಡಿದೆ. ಸಾವೀಗೀಡಾದವರ ಸಂಖ್ಯೆ ಇನ್ನೂ ಹೆಚ್ಚಿರುವ ಸಾಧ್ಯತೆ ಇದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಇಸ್ರೇಲ್ ಕದನ ವಿರಾಮ ಒಪ್ಪಂದ ಮುರಿದು ಅಮಾಯಕರ ಹತ್ಯೆ ಮಾಡುತ್ತಿದ್ದರೂ, ಅಮೆರಿಕ ಹಮಾಸ್‌ನತ್ತ ಕೈ ತೋರಿಸುತ್ತಿದೆ. “ಹಮಾಸ್‌ ಅನ್ನು ನಿರ್ಣಾಮ ಮಾಡುತ್ತೇವೆ, ನರಕ ತೋರಿಸುತ್ತೇವೆ” ಎಂದು ಟ್ರಂಪ್ ಪುನರುಚ್ಚರಿಸಿದ್ದಾರೆ.

ಕದನ ವಿರಾಮ ಒಪ್ಪಂದದ ಮೊದಲ ಹಂತವಾಗಿ ಹಮಾಸ್ ಜೀವಂತ ಇಸ್ರೇಲಿ ಒತ್ತೆಯಾಳುಗಳನ್ನು ಹಸ್ತಾಂತರಿಸಿದೆ. ಇದಕ್ಕೆ ಪ್ರತಿಯಾಗಿ 2 ಸಾವಿರ ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಬಿಡುಗಡೆ ಮಾಡಬೇಕಿತ್ತು.

ವರದಿಗಳ ಪ್ರಕಾರ, ಇಸ್ರೇಲ್ ಸುಮಾರು 1, 950ರಷ್ಟು ಬಂಧಿತ ಪ್ಯಾಲೆಸ್ತೀನಿಯರನ್ನು ಬಿಡುಗಡೆ ಮಾಡಿದೆ. ಆದರೆ, ಅವರಲ್ಲಿ ಕೆಲವರನ್ನು ಬೇರೆ ಬೇರೆ ದೇಶಗಳಲ್ಲಿ ಕರೆದೊಯ್ದು ಬಿಡುವ ಮೂಲಕ ಅಮಾನವೀಯ ಕೃತ್ಯವೆಸಗಿದ ಆರೋಪವಿದೆ.

ಹಮಾಸ್ ಬಿಡುಗಡೆ ಮಾಡಿದ ಒತ್ತೆಯಾಳುಗಳು ಆರೋಗ್ಯವಂತರಾಗಿದ್ದರೆ, ಇಸ್ರೇಲ್ ಬಿಡುಗಡೆ ಮಾಡಿದ ಪ್ಯಾಲೆಸ್ತೀನಿಯರ ಪರಿಸ್ಥಿತಿ ಶೋಚಣೀಯವಾಗಿದೆ. ಇಸ್ರೇಲಿ ಬಂಧಿಖಾನೆಗಳಲ್ಲಿ ಅವರು ತೀವ್ರ ಹಿಂಸೆಗೆ ಒಳಗಾಗಿರುವುದನ್ನು ಅವರ ದೇಹದ ಸ್ಥಿತಿ ತೋರಿಸುತ್ತಿದೆ ಎಂದು ಹಲವಾರು ವರದಿಗಳು ಹೇಳಿವೆ.

ಹಮಾಸ್ 28 ಮೃತ ಒತ್ತೆಯಾಳುಗಳ ಪೈಕಿ, ಬಹುತೇಕರ ದೇಹಗಳನ್ನು ಇಸ್ರೇಲ್‌ಗೆ ಹಸ್ತಾಂತರಿಸಿದೆ. ಈ ನಡುವೆ ಹಮಾಸ್ ಮೃತದೇಹ ಹಸ್ತಾಂತರಿಸಲು ವಿಳಂಬ ಮಾಡುತ್ತಿದೆ ಎಂದು ಇಸ್ರೇಲ್ ಆರೋಪಿಸಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಹಮಾಸ್, ಇಸ್ರೇಲ್ ಇಡೀ ಗಾಝಾ ಪಟ್ಟಿಯನ್ನು ನಾಶ ಮಾಡಿರುವ ಪರಿಣಾಮ ಮೃತದೇಹಗಳ ಹಸ್ತಾಂತರಕ್ಕೆ ಅಡೆತಡೆಗಳು ಉಂಟಾಗಿವೆ ಎಂದಿದೆ.

ಇನ್ನು, ಇಸ್ರೇಲ್ ಕದನ ವಿರಾಮ ಮುರಿದು ಈಗಾಗಲೇ ದಾಳಿ ಆರಂಭಿಸಿರುವ ಹಿನ್ನೆಲೆ, ಎಲ್ಲಾ ಮೃತದೇಹಗಳನ್ನು ಹಸ್ತಾಂತರಿಸಿದರೆ ಅಮೆರಿಕ ಮತ್ತು ಇಸ್ರೇಲ್ ಸೇರಿಕೊಂಡು ಮಾತು ಬದಲಿಸುವ ಆತಂಕವನ್ನು ಹಮಾಸ್ ವ್ಯಕ್ತಪಡಿಸಿದೆ. ಇವೆಲ್ಲದರ ಪರಿಣಾಮ ಗಾಝಾದ ಅಮಾಯಕರ ನಾಗರಿಕರು ನರಳುವಂತಾಗಿದೆ.

ಇಸ್ರೇಲ್-ಹಮಾಸ್ ನಡುವಿನ ಗಾಝಾ ಕದನ ವಿರಾಮ ಒಪ್ಪಂದವನ್ನು ಮತ್ತೆ ಹಳಿಗೆ ತರಲು ಅಮೆರಿಕ ಪ್ರಯತ್ನಿಸುತ್ತಿದೆ ಎಂದು ವರದಿಗಳು ಹೇಳಿವೆ.

ಈ ನಡುವೆ ಸೋಮವಾರ ಪೂರ್ವ ಗಾಝಾ ನಗರದ ತುಫಾ ಸಮೀಪದ ಅಲ್-ಶಾಫ್ ಪ್ರದೇಶದಲ್ಲಿ ಎರಡು ಪ್ರತ್ಯೇಕ ದಾಳಿಗಳಲ್ಲಿ ನಾಲ್ವರು ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಹತ್ಯೆ ಮಾಡಿದೆ. ಎರಡೂ ಬಾರಿಯೂ ಅಮಾಯಕರ ಜನರು ತಮ್ಮ ಮನೆಗಳನ್ನು ಪರಿಶೀಲಿಸಲು ವಾಪಾಸ್ ಬಂದಾಗ ಇಸ್ರೇಲ್ ಗುಂಡಿನ ದಾಳಿ ಮಾಡಿದೆ ಎಂದು ಗಾಝಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ.

ಹಳದಿ ಗಡಿ ರೇಖೆ ಅಥವಾ ಯೆಲ್ಲೋ ಲೇನ್ ದಾಟಿ ತುಫಾಹ್‌ಗೆ ಹೊಂದಿಕೊಂಡಿರುವ ಶುಜಾಯೆಯಾ ಸಮೀಪ ಸೈನಿಕರನ್ನು ಸಮೀಪಿಸಿದ ಉಗ್ರಗಾಮಿಗಳ ಮೇಲೆ ಗುಂಡು ಹಾರಿಸಿರುವುದಾಗಿ ಇಸ್ರೇಲ್ ಸಮರ್ಥಿಸಿಕೊಂಡಿದೆ.

ಅಕ್ಟೋಬರ್ 4ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡ ನಕ್ಷೆಯಲ್ಲಿ ಸೂಚಿಸಲಾದ ಹಳದಿ ರೇಖೆಯು, ಇಸ್ರೇಲಿ ಪಡೆಗಳು ಹಿಂದೆ ಸರಿದು ಹಮಾಸ್ ಜೊತೆಗಿನ ಕದನ ವಿರಾಮ ಒಪ್ಪಂದದ ಅಡಿಯಲ್ಲಿ ನೆಲೆಗೊಂಡಿರುವ ಗಡಿಯಾಗಿದೆ.

ಗಾಝಾ ನಗರದ ನಿವಾಸಿಗಳು ಈ ಹಳದಿ ಗಡಿ ರೇಖೆಯ ಬಗ್ಗೆ ಗೊಂದಲ ವ್ಯಕ್ತಪಡಿಸಿದ್ದಾರೆ. “ಇಲ್ಲಿ ಕಣ್ಣಿಗೆ ಗೋಚರಿಸುವ ಯಾವುದೇ ಗಡಿ ರೇಖೆ ಗುರುತುಗಳಿಲ್ಲ. ಇಡೀ ಪ್ರದೇಶ ಹಾಳಾಗಿದೆ. ಹೀಗಿರುವಾಗ ಗಡಿರೇಖೆ ಎಲ್ಲಿದೆ ಎಂದು ನಮಗೆ ಗೊತ್ತಿಲ್ಲ” ಗಾಝಾ ನಗರದ ಪೂರ್ವದಲ್ಲಿರುವ ತುಫಾದಲ್ಲಿ ವಾಸಿಸುವ 50 ವರ್ಷದ ಸಮೀರ್ ಹೇಳಿದ್ದಾರೆ ಎಂದು ಅಲ್‌-ಜಝೀರಾ ವರದಿ ವಿವರಿಸಿದೆ.

ತೈಲ ಆಮದು: ರಷ್ಯಾದಿಂದ ತೈಲ ಖರೀದಿ ಮುಂದುವರಿಸಿದರೆ ‘ಭಾರಿ ಸುಂಕ’ ಭಾರತಕ್ಕೆ ಟ್ರಂಪ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...