Homeಅಂತರಾಷ್ಟ್ರೀಯಕದನ ವಿರಾಮ ಉಲ್ಲಂಘನೆ | ಪ್ಯಾಲೆಸ್ತೀನಿಯರನ್ನು ಉತ್ತರ ಗಾಜಾಗೆ ಮರಳುವುದನ್ನು ನಿರ್ಬಂಧಿಸಿದ ಇಸ್ರೇಲ್

ಕದನ ವಿರಾಮ ಉಲ್ಲಂಘನೆ | ಪ್ಯಾಲೆಸ್ತೀನಿಯರನ್ನು ಉತ್ತರ ಗಾಜಾಗೆ ಮರಳುವುದನ್ನು ನಿರ್ಬಂಧಿಸಿದ ಇಸ್ರೇಲ್

- Advertisement -
- Advertisement -

ಉತ್ತರ ಗಾಜಾಗೆ ಪ್ಯಾಲೆಸ್ಟೀನಿಯನ್ನರನ್ನು ಹಿಂತಿರುಗಿಸಲು ಅವಕಾಶ ನೀಡುವ ಯೋಜನೆಗಳನ್ನು ನಿಲ್ಲಿಸುತ್ತಿರುವುದಾಗಿ ಇಸ್ರೇಲ್ ಭಾನುವಾರ ಘೋಷಿಸಿದ್ದು, ಕದನ ವಿರಾಮ ಒಪ್ಪಂದವನ್ನು ಫ್ಯಾಲೆಸ್ತೀನ್ ಪ್ರತಿರೋಧ ಗುಂಪು ಹಮಾಸ್ ಉಲ್ಲಂಘಿಸಿದೆ ಎಂದು ಅದು ಆರೋಪಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಕದನ ವಿರಾಮ ಉಲ್ಲಂಘನೆ

ಶನಿವಾರ, ಹಮಾಸ್ ಗಾಜಾದಲ್ಲಿ ಒತ್ತೆಯಾಳುಗಳಾಗಿ ಇರಿಸಲಾಗಿದ್ದ ನಾಲ್ಕು ಮಹಿಳಾ ಇಸ್ರೇಲಿ ಸೈನಿಕರನ್ನು ಬಿಡುಗಡೆ ಮಾಡಿತು. ಜನವರಿ 19 ರಂದು ಜಾರಿಗೆ ಬಂದ ಹಮಾಸ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮ ಒಪ್ಪಂದದ ಅಡಿಯಲ್ಲಿ ಇದು ಎರಡನೇ ಒತ್ತೆಯಾಳು ವಿನಿಮಯವಾಗಿದ್ದು, ಪರಿಣಾಮ 15 ತಿಂಗಳ ಹಿಂದೆ ಪ್ರಾರಂಭವಾದ ಸಂಘರ್ಷವನ್ನು ವಿರಾಮಗೊಳಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕದನ ಒಪ್ಪಂದಕ್ಕೆ ಬಂದ ಕೂಡಲೇ, ಗಾಜಾದಲ್ಲಿ ಇರಿಸಲಾಗಿದ್ದ ಮೂವರು ಒತ್ತೆಯಾಳುಗಳಿಗೆ ಬದಲಾಗಿ ಇಸ್ರೇಲ್ 90 ಪ್ಯಾಲೆಸ್ತೀನಿ ಕೈದಿಗಳನ್ನು ಬಿಡುಗಡೆ ಮಾಡಿತ್ತು. “ಹಿಂದಿರುಗಿ ಬಂದ ನಾಲ್ವರು ಒತ್ತೆಯಾಳುಗಳು ಐಡಿಎಫ್ [ಇಸ್ರೇಲ್ ರಕ್ಷಣಾ ಪಡೆಗಳು] ಮತ್ತು ಐಎಸ್ಎ [ಇಸ್ರೇಲಿ ಭದ್ರತಾ ಸಂಸ್ಥೆ] ಪಡೆಗಳೊಂದಿಗೆ ಇಸ್ರೇಲಿ ಪ್ರದೇಶವನ್ನು ದಾಟಿದ್ದಾರೆ” ಎಂದು ಇಸ್ರೇಲ್ ಸರ್ಕಾರ ಶನಿವಾರ ತಿಳಿಸಿತ್ತು.

ಆದಾಗ್ಯೂ, ಭಾನುವಾರ ಅರ್ಬೆಲ್ ಯೆಹುದ್ ಎಂಬ ಮಹಿಳಾ ನಾಗರಿಕ ಎಂಬ ಮತ್ತೊಬ್ಬ ಒತ್ತೆಯಾಳು ಬಿಡುಗಡೆಯಾಗಬೇಕಿತ್ತು. ಆದರೆ, ಹಮಾಸ್ ಯೆಹೂದ್ ಅವರನ್ನು ಬಿಡುಗಡೆ ಮಾಡದಿರುವುದು ಕದನ ವಿರಾಮ ಒಪ್ಪಂದದ ಉಲ್ಲಂಘನೆಯಾಗಿದೆ ಎಂದು ಇಸ್ರೇಲಿ ಮಿಲಿಟರಿ ವಕ್ತಾರರು ಹೇಳಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಕದನ ವಿರಾಮ ಉಲ್ಲಂಘನೆ

ಅದಾಗ್ಯೂ, ಹಮಾಸ್ ಇದನ್ನು ತಾಂತ್ರಿಕ ಸಮಸ್ಯೆ ಎಂದು ಕರೆದಿದ್ದು, ಒತ್ತೆಯಾಳು ಯೆಹೂದ್ ಸುರಕ್ಷಿತವಾಗಿದ್ದಾರೆ ಎಂದು ಮಧ್ಯವರ್ತಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದೆ. ಮುಂದಿನ ಶನಿವಾರ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ಅದು ಹೇಳಿದೆ. ಆದರೆ, ಸಮಸ್ಯೆ ಬಗೆಹರಿಯುವವರೆಗೆ ಪ್ಯಾಲೆಸ್ತೀನಿಯನ್ನರನ್ನು ಉತ್ತರ ಗಾಜಾಗೆ ಹಿಂತಿರುಗಲು ಅವಕಾಶ ನೀಡಲಾಗುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.

ಹಾಗಾಗಿ, ಉತ್ತರ ಗಾಝಾಕ್ಕೆ ಮರಳುವ ಆಶಯದೊಂದಿಗೆ ರಸ್ತೆಗಳಲ್ಲಿ ಜಮಾಯಿಸಿದ್ದ ಜನಸಮೂಹದ ಮೇಲೆ ಇಸ್ರೇಲಿ ಮಿಲಿಟರಿ ಗುಂಡು ಹಾರಿಸಿದೆ ಎಂದು ವರದಿಯಾಗಿದೆ. ಗುಂಡಿನ ದಾಳಿಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡರು ಎಂದು ಎಪಿ ವರದಿ ಮಾಡಿದೆ.

ಅದಾಗ್ಯೂ, ಕದನ ವಿರಾಮ ಒಪ್ಪಂದದ ಭಾಗವಾಗಿ ಇಸ್ರೇಲ್ ಸರ್ಕಾರ ಶನಿವಾರ ಇನ್ನೂರು ಕೈದಿಗಳನ್ನು ಬಿಡುಗಡೆ ಮಾಡಿದೆ ಎಂದು ಹಮಾಸ್ ಬಿಡುಗಡೆ ಮಾಡಿದ ಪಟ್ಟಿಯನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ. ಆದರೆ, ಇಸ್ರೇಲಿಗಳನ್ನು ಕೊಂದ ಆರೋಪದಲ್ಲಿ ಶಿಕ್ಷೆಗೊಳಗಾದವರನ್ನು ಮನೆಗೆ ಮರಳಲು ಅನುಮತಿಸಲಾಗುವುದಿಲ್ಲ ಎಂದು ಅದು ತಿಳಿಸಿದೆ. ಬಿಡುಗಡೆಯಾದವರಲ್ಲಿ ಸುಮಾರು 70 ಜನರನ್ನು ಅಲ್ಲಿಂದ ಈಜಿಪ್ಟ್ ಮತ್ತು ಇನ್ನೊಂದು ದೇಶಕ್ಕೆ ಗಡೀಪಾರು ಮಾಡಲಾಗುವುದು ಎಂದು ಪ್ಯಾಲೆಸ್ತೀನಿ ಅಧಿಕಾರಿಗಳು ತಿಳಿಸಿದ್ದಾರೆ.

ಜನವರಿ 15 ರಂದು, ಕತಾರ್ ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮ ಮತ್ತು ಒತ್ತೆಯಾಳು ವಿನಿಮಯ ಒಪ್ಪಂದಕ್ಕೆ ಬರಲಾಗಿದೆ ಎಂದು ಘೋಷಿಸಿತು. ಈ ಮಾತುಕತೆಗಳಲ್ಲಿ ಕತಾರ್‌ ಪ್ರಮುಖ ಮಧ್ಯವರ್ತಿಯಾಗಿತ್ತು. ಜನವರಿ 18 ರಂದು ಇಸ್ರೇಲಿ ಸಚಿವ ಸಂಪುಟ ಈ ಒಪ್ಪಂದಕ್ಕೆ ಅನುಮೋದನೆ ನೀಡಿತು.

ಭಾನುವಾರ ಪ್ರಾರಂಭವಾದ ಕದನ ವಿರಾಮದ ಮೊದಲ ಆರು ವಾರಗಳ ಹಂತದಲ್ಲಿ ನೂರಾರು ಪ್ಯಾಲೆಸ್ತೀನಿ ಬಂಧಿತರಿಗೆ ಬದಲಾಗಿ 33 ಒತ್ತೆಯಾಳುಗಳನ್ನು ವಿನಿಮಯ ಮಾಡಿಕೊಳ್ಳಲಾಗುತ್ತದೆ. ಈ ಹಂತದಲ್ಲಿ ಇಸ್ರೇಲ್ ಸೇನೆಯು ಗಾಜಾದ ಎಲ್ಲಾ ಜನನಿಬಿಡ ಪ್ರದೇಶಗಳಿಂದ ಹಿಂದೆ ಸರಿಯಬೇಕಾಗುತ್ತದೆ ಮತ್ತು ಮುತ್ತಿಗೆ ಹಾಕಿದ ಪ್ರದೇಶಕ್ಕೆ ಮಾನವೀಯ ನೆರವು ನೀಡಲಾಗುತ್ತದೆ.

ಒಪ್ಪಂದವು ಲಕ್ಷಾಂತರ ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯನ್ನರು ಗಾಜಾದ ತಮ್ಮ ಪ್ರದೇಶಗಳಿಗೆ ಮರಳಲು ಸಹ ಅನುಮತಿಸುತ್ತದೆ. ವಿಶ್ವಸಂಸ್ಥೆಯ ಪ್ಯಾಲೆಸ್ತೀನಿಯನ್ ನಿರಾಶ್ರಿತರ ಸಂಸ್ಥೆಯ ಪ್ರಕಾರ, ಅಕ್ಟೋಬರ್ 2023 ರಿಂದ ಗಾಜಾದಲ್ಲಿ ಸುಮಾರು 19 ಲಕ್ಷ ಜನರು ಸ್ಥಳಾಂತರಗೊಂಡಿದ್ದಾರೆ.

ಎರಡನೇ ಹಂತದ ಕದನ ವಿರಾಮದ ಹದಿನಾರನೇ ದಿನದಂದು ಮಾತುಕತೆಗಳು ಪ್ರಾರಂಭವಾಗಲಿವೆ ಮತ್ತು “ಯುದ್ಧಕ್ಕೆ ಶಾಶ್ವತ ಅಂತ್ಯ” ವನ್ನು ಗುರಿಯಾಗಿರಿಸಿಕೊಳ್ಳಲಾಗುತ್ತದೆ. ಇಸ್ರೇಲ್ ಹಿಡಿದಿರುವ ಹೆಚ್ಚಿನ ಪ್ಯಾಲೆಸ್ಟೀನಿಯನ್ ಕೈದಿಗಳಿಗೆ ಬದಲಾಗಿ ಪುರುಷರು ಸೇರಿದಂತೆ ಉಳಿದ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದನ್ನು ಇದು ಒಳಗೊಂಡಿರುತ್ತದೆ.

ಇದನ್ನೂಓದಿ:  5 ವರ್ಷಗಳಲ್ಲಿ ಬಿಜೆಪಿಯಿಂದ  400-500 ಜನರ ₹10 ಲಕ್ಷ ಕೋಟಿ ಸಾಲ ಮನ್ನಾ: ಅರವಿಂದ್ ಕೇಜ್ರಿವಾಲ್

5 ವರ್ಷಗಳಲ್ಲಿ ಬಿಜೆಪಿಯಿಂದ  400-500 ಜನರ ₹10 ಲಕ್ಷ ಕೋಟಿ ಸಾಲ ಮನ್ನಾ: ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...