Homeಅಂತರಾಷ್ಟ್ರೀಯಕುರ್ದಿಶ್‌ ಪಡೆಗಳ ಜೊತೆ ಕದನ ವಿರಾಮ : ಹಲವು ಪ್ರದೇಶಗಳ ಮೇಲೆ ಹಿಡಿತ ಸಾಧಿಸಿದ ಸಿರಿಯಾ...

ಕುರ್ದಿಶ್‌ ಪಡೆಗಳ ಜೊತೆ ಕದನ ವಿರಾಮ : ಹಲವು ಪ್ರದೇಶಗಳ ಮೇಲೆ ಹಿಡಿತ ಸಾಧಿಸಿದ ಸಿರಿಯಾ ಸೇನೆ

- Advertisement -
- Advertisement -

ಕುರ್ದಿಶ್ ನೇತೃತ್ವದ ಸಿರಿಯನ್ ಡೆಮಾಕ್ರಟಿಕ್ ಫೋರ್ಸಸ್ (ಎಸ್‌ಡಿಎಫ್‌) ಜೊತೆಗಿನ ಎರಡು ವಾರಗಳ ಭಾರೀ ಕಾದಾಟದ ನಂತರ, ಸಿರಿಯಾದ ಸರ್ಕಾರಿ ಪಡೆಗಳು ಉತ್ತರ ಮತ್ತು ಈಶಾನ್ಯ ಸಿರಿಯಾದ ಹಲವಾರು ಪ್ರಮುಖ ಪ್ರದೇಶಗಳ ಮೇಲೆ ಹಿಡಿತ ಸಾಧಿಸಿವೆ ಎಂದು ವರದಿಯಾಗಿದೆ.

ಭಾನುವಾರ (ಜ.18) ಎರಡೂ ಪಕ್ಷಗಳು ದೇಶವನ್ನು ಮತ್ತೆ ಒಗ್ಗೂಡಿಸುವ ಗುರಿಯನ್ನು ಹೊಂದಿರುವ ತಕ್ಷಣದ ಕದನ ವಿರಾಮವನ್ನು ಘೋಷಿಸಿವೆ ಎಂದು ವರದಿ ಹೇಳಿದೆ.

ಕದನ ವಿರಾಮಕ್ಕೂ ಮುನ್ನ, ಸಿರಿಯಾ ಸೇನೆಯು ತನ್ನ ಮಿಲಿಟರಿ ವಾಯುನೆಲೆ ಮತ್ತು ತಬ್ಕಾ ಅಣೆಕಟ್ಟು (ಸಿರಿಯಾದ ಅತಿದೊಡ್ಡ) ಒಳಗೊಂಡ ಆಯಕಟ್ಟಿನ ಪಟ್ಟಣವಾದ ತಬ್ಕಾವನ್ನು ವಶಪಡಿಸಿಕೊಂಡಿದೆ. ದೇಶದ ಅತಿದೊಡ್ಡ ಅಲ್-ಒಮರ್ ತೈಲ ಕ್ಷೇತ್ರ ಕೂಡ ಸೇನೆಯ ವಶವಾಗಿದೆ.

ಎಸ್‌ಡಿಎಫ್ ಗುಂಪುಗಳನ್ನು ಯೂಫ್ರಟಿಸ್ ನದಿಯ ಪೂರ್ವಕ್ಕೆ ಹಿಮ್ಮೆಟ್ಟಿಸಿದ ಸರ್ಕಾರಿ ಪಡೆಗಳು, ರಕ್ಕಾ ಮತ್ತು ಅಲೆಪ್ಪೊದ ಪೂರ್ವಕ್ಕೆ ಡೀರ್ ಹಫರ್ ಹಾಗೂ ಮಸ್ಕಾನಾ ಸೇರಿದಂತೆ ಹಲವು ಪಟ್ಟಣಗಳಿಗೆ ಪ್ರವೇಶಿಸಿವೆ.

ಅಧ್ಯಕ್ಷ ಅಹ್ಮದ್ ಅಲ್-ಶರಾ ಮತ್ತು ಎಸ್‌ಡಿಎಫ್‌ ನಾಯಕ ಮಜ್ಲೌಮ್ ಅಬ್ದಿ ಅವರು 14 ಅಂಶಗಳ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಎಲ್ಲಾ ಎಸ್‌ಡಿಎಫ್‌ ಪಡೆಗಳು ಯೂಫ್ರಟಿಸ್ ನದಿಯ ಪೂರ್ವಕ್ಕೆ ಹಿಂದೆ ಸರಿಯಬೇಕು ಎಂಬುವುದು ಒಪ್ಪಂದದ ಪ್ರಮುಖ ಅಂಶವಾಗಿದೆ.

ದೀರ್ ಎಜ್-ಜೋರ್, ರಖ್ಖಾ ಮತ್ತು ಹಸಾಕಾ ಪ್ರಾಂತ್ಯಗಳ ಸಂಪೂರ್ಣ ಆಡಳಿತವನ್ನು ಸರ್ಕಾರಕ್ಕೆ ಹಸ್ತಾಂತರಿಸಬೇಕು. ಎಸ್‌ಡಿಎಫ್‌ ಸಂಘಟನೆಯನ್ನು ವಿಸರ್ಜಿಸಿ, ಅದರ ಹೋರಾಟಗಾರರನ್ನು ಸಿರಿಯನ್ ರಾಷ್ಟ್ರೀಯ ಸೈನ್ಯಕ್ಕೆ ಸೇರಿಸಿಕೊಳ್ಳಲಾಗುವುದು ಎಂಬುವುದು ಒಪ್ಪಂದಲ್ಲಿದೆ.

ಈ ಬೆಳವಣಿಗೆಯ ಭಾಗವಾಗಿ, ಸಿರಿಯಾ ಸರ್ಕಾರವು ಕುರ್ದಿಶ್ ಭಾಷೆಯನ್ನು ರಾಷ್ಟ್ರೀಯ ಭಾಷೆಯೆಂದು ಅಧಿಕೃತವಾಗಿ ಗುರುತಿಸಿದೆ ಮತ್ತು ಕುರ್ದಿಶ್ ಸಿರಿಯನ್ನರಿಗೆ ನಾಗರಿಕತ್ವವನ್ನು ಮರುಸ್ಥಾಪಿಸಿದೆ ಎಂದು ವರದಿಯಾಗಿದೆ.

ಈ ಒಪ್ಪಂದವು 2024ರಲ್ಲಿ ಅಸ್ಸಾದ್ ಆಡಳಿತದ ಪತನದ ನಂತರ ಸಿರಿಯಾವನ್ನು ಪುನರ್ ಏಕೀಕರಣಗೊಳಿಸುವತ್ತ ಮಹತ್ವದ ಹೆಜ್ಜೆಯೆಂದು ಪರಿಗಣಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...