Homeಅಂಕಣಗಳುಸಾವನ್ನು ಸಂಭ್ರಮಿಸುವ ಮನಸ್ಥಿತಿ: ಮೂಲ ಮತ್ತು ಮೂಲೋತ್ಪಾಟನೆ

ಸಾವನ್ನು ಸಂಭ್ರಮಿಸುವ ಮನಸ್ಥಿತಿ: ಮೂಲ ಮತ್ತು ಮೂಲೋತ್ಪಾಟನೆ

ಸಂತಾಪಸೂಚಕ ಸಂದೇಶಗಳ ಅಲೆಯೊಂದಿಗೆ ಸಮಾಜದ ಇನ್ನೊಂದು ಕರಾಳ ಮುಖವೂ ನಮ್ಮೆದುರಿಗೆ ರಾಚಿದೆ

- Advertisement -
- Advertisement -

ಸಂಪಾದಕೀಯ |
ಸೋಮವಾರ ಬೆಳಗ್ಗೆ ನಾಡಿನ ಅತ್ಯಂತ ಪ್ರಮುಖ ಬರಹಗಾರ, ನಾಟಕಕಾರ, ಬಹುಮುಖ ಪ್ರತಿಭೆ ಗಿರೀಶ್ ಕಾರ್ನಾಡ್ ಇಲ್ಲವಾದರು. ಸಂತಾಪಸೂಚಕ ಸಂದೇಶಗಳ ಅಲೆಯೊಂದಿಗೆ ಸಮಾಜದ ಇನ್ನೊಂದು ಕರಾಳ ಮುಖವೂ ನಮ್ಮೆದುರಿಗೆ ರಾಚಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕಾರ್ನಾಡ್ ಅವರ ಸಾವನ್ನು ಸಂಭ್ರಮಿಸುವ ಹಲವಾರು ಪೋಸ್ಟ್‍ಗಳು ಕಾಣಿಸಿಕೊಂಡಿವೆ. ಕಳೆದ ವರ್ಷ ಗೌರಿ ಲಂಕೇಶ್ ಹತ್ಯೆಯಾದಾಗಲೂ ಇಂತಹ ಪೋಸ್ಟ್‍ಗಳು ಕಂಡುಬಂದಿದ್ದವು.
ಎಲ್ಲೋ ಒಂದೋ ಎರಡೋ ಇಂತಹ ಪೋಸ್ಟ್‍ಗಳು ಕಂಡುಬಂದಿದ್ದರೆ ಸಮಾಜದಲ್ಲಿ ಕೆಲವು ವಿಕೃತ ಮನಸ್ಥಿತಿಗಳು ಇದ್ದೇ ಇರುತ್ತಾರೆ ಎಂದು ಸುಮ್ಮನಾಗಬಹುದಿತ್ತು. ಆದರೆ ಇಂತಹವರ ಸಂಖ್ಯೆ ಸುಮ್ಮನಾಗುವಷ್ಟು ವಿರಳವಾಗಿಲ್ಲ. ಹಾಗೂ ಇಂಥವರನ್ನು ಬೈದು, ಸಮಾಜಕ್ಕೆ, ಧರ್ಮಕ್ಕೆ ನೀವು ಕಳಂಕ ಎಂದು ಹೇಳಿಯೂ ಸುಮ್ಮನಾಗುವ ಹಾಗಿಲ್ಲ.
ಗಿರೀಶ್ ಕಾರ್ನಾಡ್ ಅವರು ಒಬ್ಬ ಚಿಂತಕರಾಗಿದ್ದರು, ಅವರು ಸಮಾಜದ ಆಗುಹೋಗುಗಳಿಗೆ ಸ್ಪಂದಿಸಿ ಸಮಾಜಕ್ಕೆ ತಮ್ಮ ಕರ್ತವ್ಯವವನ್ನು ತಮ್ಮದೇ ಆದ ರೀತಿಯಲ್ಲಿ ನಿಭಾಯಿಸುತ್ತಿದ್ದರು. ಕೋಮು ಸೌಹಾರ್ದತೆಯ ಬಗ್ಗೆ, ಜಾತ್ಯತೀತತೆಯ ಬಗ್ಗೆ ಸ್ಪಷ್ಟ ನಿಲುವನ್ನು ಹೊಂದಿದವರಾಗಿದ್ದರು. ತಮ್ಮ ನಿಲುವುಗಳನ್ನು ಸ್ಪಷ್ಟಪಡಿಸುವುದಕ್ಕೆ ಎಂದೂ ಹಿಂಜರಿಯಲಿಲ್ಲ. ಅದೇ ಕಾರಣಕ್ಕೆ ಅವರಿಗೆ ಕೆಲವರಿಂದ ವಿರೋಧವೂ ವ್ಯಕ್ತವಾಗಿತ್ತು. ಆದರೆ ಅವರ ಸಾವನ್ನು ಸಂಭ್ರಮಿಸುವವರು ಕೇವಲ ಅವರ ವಿರೋಧಿಗಳಾಗಿಲ್ಲ ಹಾಗೂ ಪ್ರಜಾತಂತ್ರ, ಸಮಾನತೆ, ಉದಾರತೆಯಂತಹ ಆಶಯಗಳನ್ನೇ ವಿರೋಧಿಸುವವರಾಗಿದ್ದಾರೆ. ಅಂತಹವರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿರುವುದರಿಂದ ಅವರನ್ನು, ಈ ವಿಕೃತ ಸಂಭ್ರಮವನ್ನು ಮೊದಲು ನಾವು ಒಂದು ವಾಸ್ತವ ಮತ್ತು ಗಂಭೀರ ಸಮಸ್ಯೆ ಎಂದು ಒಪ್ಪಿಕೊಳ್ಳಬೇಕಿದೆ. ಇಲ್ಲಿ ಕಾಣಿಸುತ್ತಿರುವುದು ಸಮಾಜದ ವಿಕೃತಿ.
ಕಾರ್ನಾಡ್ ಅವರು ಹಿಂದೂ ಧರ್ಮದ ವಿರೋಧಿಯಾಗಿದ್ದರು ಹಾಗೂ ಧರ್ಮದ ವಿರೋಧಿ ಸಾವನ್ನು ಸಂಭ್ರಮಿಸುವುದರಲ್ಲಿ ತಪ್ಪೇನೂ ಇಲ್ಲ ಎನ್ನುವುದು ಈ ಸಾವನ್ನು ಸಂಭ್ರಮಿಸಿದವರ ವಾದ.
ಧರ್ಮಾತ್ಮ, ಧರ್ಮ-ಕರ್ಮ, ಮಾನವೀಯತೆಯೇ ಧರ್ಮ, ದಯವೇ ಧರ್ಮ ಇತ್ಯಾದಿಗಳೆಲ್ಲಾ ಧರ್ಮವಾಗಿದ್ದರೆ ಕಾರ್ನಾಡ್ ಅವರು ಧರ್ಮದ ಪರ ಇರುವವರಾಗಿರುತ್ತಿದ್ದರು ಎಂಬ ಮಾತನ್ನು ನಾವು ಹೇಳುವುದು ಪ್ರಯೋಜನವಾಗುತ್ತಿಲ್ಲ. ಬಲಿ ಚಕ್ರವರ್ತಿ ಮತ್ತು ಅಸುರರನ್ನು (ಯಾರು ಅಸುರರು ಎಂಬುದಕ್ಕೆ ಬದಲಾದ ವ್ಯಾಖ್ಯಾನವಿರುವಾಗ) ಕೊಂದದ್ದಕ್ಕೆ ಹಬ್ಬ ಆಚರಿಸುತ್ತಿರುವ ಸಂಸ್ಕೃತಿಯೂ ಈ ದೇಶದಲ್ಲಿದೆ. ಅದನ್ನೇ ‘ಅಧಾರ್ಮಿಕರು’ ಸಮರ್ಥನೆಯಾಗಿ ಬಳಸುತ್ತಿದ್ದಾರೆ.
ನಮ್ಮ ಸಮಾಜವನ್ನು ನಿರ್ಮಿಸುವಲ್ಲಿ ಧರ್ಮವು ಸಕಾರಾತ್ಮಕ ಪಾತ್ರವನ್ನೇ ನಿರ್ವಹಿಸಿದೇ ಅಂತೇನಲ್ಲ. ಆದರೆ ಅದರ ಪಾತ್ರವಂತೂ ಅತ್ಯಂತ ದೊಡ್ಡದು. ಬಡತನ ಮತ್ತು ಅಭದ್ರತೆಯಿಂದ ಬಳಲುತ್ತ ಸಿನಿಕತೆಯನ್ನು ಮೈಗೂಡಿಸಿಕೊಂಡ ನಮ್ಮ ಸಮಾಜದಲ್ಲಿ ಇವುಗಳನ್ನು ಮತ್ತು ಎಲ್ಲೋ ಹುದುಗಿರುವ ದ್ವೇಷವನ್ನೂ ಬಳಸಿಕೊಂಡು ಮಾಡುತ್ತಿರುವ ರಾಜಕಾರಣಕ್ಕೆ ಪ್ರಗತಿಪರರು ಇದುವರೆಗೆ ನೀಡಿರುವ ಉತ್ತರ ಸಾಕಾಗುವುದಿಲ್ಲ ಎಂಬುದನ್ನಷ್ಟೇ ಇವೆಲ್ಲವೂ ತೋರುತ್ತಿದೆ. ಅವರು ದ್ವೇಷವನ್ನು ಬಿತ್ತಿಬಳಸಿದರೆ ನಾವುಗಳು ಭಾರತವು ಎಂದಿಗೂ ಸೌಹಾರ್ದದ ನಾಡಾಗಿತ್ತು, ಕೋಮು ದ್ವೇಷ, ದಳ್ಳುರಿ ಎಂದಿಗೂ ಇದ್ದಿಲ್ಲ, ಹಿಂದೂ ಧರ್ಮ ಅಹಿಂಸೆಯ ಪ್ರತೀಕ ಎನ್ನುವ ಅರೆಸತ್ಯಗಳಿಂದ ಎದುರಿಸಲಾಗುವುದಿಲ್ಲ. ಹಾಗೂ ಹಿಂದು ಧರ್ಮವೆಂದರೆ ಜಾತಿ ತಾರತಮ್ಯ, ಹಿಂದು ಧರ್ಮವೆಂದರೆ ಕಂದಾಚಾರ ಮತ್ತು ಶೋಷಣೆ ಎನ್ನುವುದಷ್ಟೇ ಸರಿಯಲ್ಲ. ಈ ಎಲ್ಲಾ ವಾದಗಳನ್ನು ನಾವು ಮೀರಬೇಕಿದೆ. ಹಾಗೂ ಸಮಾಜವನ್ನು ನಿರ್ಮಿಸುವುದರಲ್ಲಿ ಧರ್ಮ ಮುಖ್ಯ ಪಾತ್ರ ನಿರ್ವಹಿಸುತ್ತದೆ ಎಂದು ಒಪ್ಪಿಕೊಂಡು ಅದರ ಮರ್ಮವನ್ನು ಅರಿಯುವ ಪ್ರಯತ್ನವನ್ನೂ ಮಾಡಬೇಕಿದೆ. ಬೇರೊಂದು ಧರ್ಮವೇ ದೇಶದ ಅತಿದೊಡ್ಡ ಶತ್ರು ಎಂದು ನಂಬಿಸಿ, ದ್ವೇಷವನ್ನೇ ಬಂಡವಾಳ ಮಾಡಿಕೊಂಡು ರಾಜಕೀಯವಾಗಿ ಗೆಲ್ಲುತ್ತಿರುವಾಗ ಅದನ್ನು ವಿರೋಧಿಸಿದ ಕಾರ್ನಾಡರಂತಹ ಚೇತನಗಳು ಇಲ್ಲವಾದಾಗ ಕಾಣಿಸಿಕೊಳ್ಳುವ ಸಂಭ್ರಮ ನಮಗೆ ಅಚ್ಚರಿ/ಆಘಾತವನ್ನಷ್ಟೇ ಮೂಡಿಸಬಾರದು. ಈ ಮನುಷ್ಯತ್ವ ವಿರೋಧಿ ಶಕ್ತಿಗಳು ಧರ್ಮದ ಪರಿಕಲ್ಪನೆಯನ್ನು ತಿರುಚಿ, ಧರ್ಮದ ಅರ್ಥವನ್ನು ಸಂಕುಚಿತಗೊಳಿಸಿ, ಧರ್ಮದ ಪಾಲನೆಯೆಂದರೆ ಅನ್ಯ ಧರ್ಮದ ವಿರೋಧ ಎಂದು ನಂಬಿಸುವಲ್ಲಿ ಬಹುಮಟ್ಟಿಗೆ ಯಶಸ್ವಿಯಾಗಿವೆ. ಇಂತಹ ಸಂದರ್ಭದಲ್ಲಿ ನಾವು ಧಾರ್ಮಿಕತೆಯ ವರ್ಸಸ್ ಜಾತ್ಯತೀತತೆ ಎಂದಾಗಿಬಿಟ್ಟಿರುವ ಸರಳ ಬೈನರಿಗಳನ್ನು ಕೈಬಿಡಬೇಕಿದೆ. ಸಾವನ್ನು ಸಂಭ್ರಮಿಸಿದವರಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡದೇ ಅರಿವು ಮೂಡಿಸಬೇಕಿದೆ.
ಗಿರೀಶ ಕಾರ್ನಾಡ ಅವರು ನಮ್ಮ ದೇಶದ ಇತಿಹಾಸ ಮತ್ತು ಪುರಾಣಗಳನ್ನು ಆಳವಾಗಿ ಅಭ್ಯಸಿಸಿ ಸಾಹಿತ್ಯವನ್ನು ಸೃಷ್ಟಿಸಿದ ವ್ಯಕ್ತಿ. ಅವರ ಸಾಹಿತ್ಯದಲ್ಲೇ ಅವರ ಸಾವನ್ನು ಸಂಭ್ರಮಿಸುತ್ತಿರುವವರಿಗೆ ಸಾಕಷ್ಟು ಉತ್ತರಗಳು ಸಿಗುತ್ತವೆ. ನಾಡಿಗೆ ಈ ಚೇತನ ನೀಡಿದ ಕೊಡುಗೆಗಳನ್ನು ಸಂಭ್ರಮಿಸೋಣ. ಇನ್ನೊಮ್ಮೆ ಯಾರ ಸಾವನ್ನೂ ಸಂಭ್ರಮಿಸದ ಸಮಾಜವನ್ನು ಸೃಷ್ಟಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...