Homeಅಂಕಣಗಳುಸಾವನ್ನು ಸಂಭ್ರಮಿಸುವ ಮನಸ್ಥಿತಿ: ಮೂಲ ಮತ್ತು ಮೂಲೋತ್ಪಾಟನೆ

ಸಾವನ್ನು ಸಂಭ್ರಮಿಸುವ ಮನಸ್ಥಿತಿ: ಮೂಲ ಮತ್ತು ಮೂಲೋತ್ಪಾಟನೆ

ಸಂತಾಪಸೂಚಕ ಸಂದೇಶಗಳ ಅಲೆಯೊಂದಿಗೆ ಸಮಾಜದ ಇನ್ನೊಂದು ಕರಾಳ ಮುಖವೂ ನಮ್ಮೆದುರಿಗೆ ರಾಚಿದೆ

- Advertisement -
- Advertisement -

ಸಂಪಾದಕೀಯ |
ಸೋಮವಾರ ಬೆಳಗ್ಗೆ ನಾಡಿನ ಅತ್ಯಂತ ಪ್ರಮುಖ ಬರಹಗಾರ, ನಾಟಕಕಾರ, ಬಹುಮುಖ ಪ್ರತಿಭೆ ಗಿರೀಶ್ ಕಾರ್ನಾಡ್ ಇಲ್ಲವಾದರು. ಸಂತಾಪಸೂಚಕ ಸಂದೇಶಗಳ ಅಲೆಯೊಂದಿಗೆ ಸಮಾಜದ ಇನ್ನೊಂದು ಕರಾಳ ಮುಖವೂ ನಮ್ಮೆದುರಿಗೆ ರಾಚಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕಾರ್ನಾಡ್ ಅವರ ಸಾವನ್ನು ಸಂಭ್ರಮಿಸುವ ಹಲವಾರು ಪೋಸ್ಟ್‍ಗಳು ಕಾಣಿಸಿಕೊಂಡಿವೆ. ಕಳೆದ ವರ್ಷ ಗೌರಿ ಲಂಕೇಶ್ ಹತ್ಯೆಯಾದಾಗಲೂ ಇಂತಹ ಪೋಸ್ಟ್‍ಗಳು ಕಂಡುಬಂದಿದ್ದವು.
ಎಲ್ಲೋ ಒಂದೋ ಎರಡೋ ಇಂತಹ ಪೋಸ್ಟ್‍ಗಳು ಕಂಡುಬಂದಿದ್ದರೆ ಸಮಾಜದಲ್ಲಿ ಕೆಲವು ವಿಕೃತ ಮನಸ್ಥಿತಿಗಳು ಇದ್ದೇ ಇರುತ್ತಾರೆ ಎಂದು ಸುಮ್ಮನಾಗಬಹುದಿತ್ತು. ಆದರೆ ಇಂತಹವರ ಸಂಖ್ಯೆ ಸುಮ್ಮನಾಗುವಷ್ಟು ವಿರಳವಾಗಿಲ್ಲ. ಹಾಗೂ ಇಂಥವರನ್ನು ಬೈದು, ಸಮಾಜಕ್ಕೆ, ಧರ್ಮಕ್ಕೆ ನೀವು ಕಳಂಕ ಎಂದು ಹೇಳಿಯೂ ಸುಮ್ಮನಾಗುವ ಹಾಗಿಲ್ಲ.
ಗಿರೀಶ್ ಕಾರ್ನಾಡ್ ಅವರು ಒಬ್ಬ ಚಿಂತಕರಾಗಿದ್ದರು, ಅವರು ಸಮಾಜದ ಆಗುಹೋಗುಗಳಿಗೆ ಸ್ಪಂದಿಸಿ ಸಮಾಜಕ್ಕೆ ತಮ್ಮ ಕರ್ತವ್ಯವವನ್ನು ತಮ್ಮದೇ ಆದ ರೀತಿಯಲ್ಲಿ ನಿಭಾಯಿಸುತ್ತಿದ್ದರು. ಕೋಮು ಸೌಹಾರ್ದತೆಯ ಬಗ್ಗೆ, ಜಾತ್ಯತೀತತೆಯ ಬಗ್ಗೆ ಸ್ಪಷ್ಟ ನಿಲುವನ್ನು ಹೊಂದಿದವರಾಗಿದ್ದರು. ತಮ್ಮ ನಿಲುವುಗಳನ್ನು ಸ್ಪಷ್ಟಪಡಿಸುವುದಕ್ಕೆ ಎಂದೂ ಹಿಂಜರಿಯಲಿಲ್ಲ. ಅದೇ ಕಾರಣಕ್ಕೆ ಅವರಿಗೆ ಕೆಲವರಿಂದ ವಿರೋಧವೂ ವ್ಯಕ್ತವಾಗಿತ್ತು. ಆದರೆ ಅವರ ಸಾವನ್ನು ಸಂಭ್ರಮಿಸುವವರು ಕೇವಲ ಅವರ ವಿರೋಧಿಗಳಾಗಿಲ್ಲ ಹಾಗೂ ಪ್ರಜಾತಂತ್ರ, ಸಮಾನತೆ, ಉದಾರತೆಯಂತಹ ಆಶಯಗಳನ್ನೇ ವಿರೋಧಿಸುವವರಾಗಿದ್ದಾರೆ. ಅಂತಹವರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿರುವುದರಿಂದ ಅವರನ್ನು, ಈ ವಿಕೃತ ಸಂಭ್ರಮವನ್ನು ಮೊದಲು ನಾವು ಒಂದು ವಾಸ್ತವ ಮತ್ತು ಗಂಭೀರ ಸಮಸ್ಯೆ ಎಂದು ಒಪ್ಪಿಕೊಳ್ಳಬೇಕಿದೆ. ಇಲ್ಲಿ ಕಾಣಿಸುತ್ತಿರುವುದು ಸಮಾಜದ ವಿಕೃತಿ.
ಕಾರ್ನಾಡ್ ಅವರು ಹಿಂದೂ ಧರ್ಮದ ವಿರೋಧಿಯಾಗಿದ್ದರು ಹಾಗೂ ಧರ್ಮದ ವಿರೋಧಿ ಸಾವನ್ನು ಸಂಭ್ರಮಿಸುವುದರಲ್ಲಿ ತಪ್ಪೇನೂ ಇಲ್ಲ ಎನ್ನುವುದು ಈ ಸಾವನ್ನು ಸಂಭ್ರಮಿಸಿದವರ ವಾದ.
ಧರ್ಮಾತ್ಮ, ಧರ್ಮ-ಕರ್ಮ, ಮಾನವೀಯತೆಯೇ ಧರ್ಮ, ದಯವೇ ಧರ್ಮ ಇತ್ಯಾದಿಗಳೆಲ್ಲಾ ಧರ್ಮವಾಗಿದ್ದರೆ ಕಾರ್ನಾಡ್ ಅವರು ಧರ್ಮದ ಪರ ಇರುವವರಾಗಿರುತ್ತಿದ್ದರು ಎಂಬ ಮಾತನ್ನು ನಾವು ಹೇಳುವುದು ಪ್ರಯೋಜನವಾಗುತ್ತಿಲ್ಲ. ಬಲಿ ಚಕ್ರವರ್ತಿ ಮತ್ತು ಅಸುರರನ್ನು (ಯಾರು ಅಸುರರು ಎಂಬುದಕ್ಕೆ ಬದಲಾದ ವ್ಯಾಖ್ಯಾನವಿರುವಾಗ) ಕೊಂದದ್ದಕ್ಕೆ ಹಬ್ಬ ಆಚರಿಸುತ್ತಿರುವ ಸಂಸ್ಕೃತಿಯೂ ಈ ದೇಶದಲ್ಲಿದೆ. ಅದನ್ನೇ ‘ಅಧಾರ್ಮಿಕರು’ ಸಮರ್ಥನೆಯಾಗಿ ಬಳಸುತ್ತಿದ್ದಾರೆ.
ನಮ್ಮ ಸಮಾಜವನ್ನು ನಿರ್ಮಿಸುವಲ್ಲಿ ಧರ್ಮವು ಸಕಾರಾತ್ಮಕ ಪಾತ್ರವನ್ನೇ ನಿರ್ವಹಿಸಿದೇ ಅಂತೇನಲ್ಲ. ಆದರೆ ಅದರ ಪಾತ್ರವಂತೂ ಅತ್ಯಂತ ದೊಡ್ಡದು. ಬಡತನ ಮತ್ತು ಅಭದ್ರತೆಯಿಂದ ಬಳಲುತ್ತ ಸಿನಿಕತೆಯನ್ನು ಮೈಗೂಡಿಸಿಕೊಂಡ ನಮ್ಮ ಸಮಾಜದಲ್ಲಿ ಇವುಗಳನ್ನು ಮತ್ತು ಎಲ್ಲೋ ಹುದುಗಿರುವ ದ್ವೇಷವನ್ನೂ ಬಳಸಿಕೊಂಡು ಮಾಡುತ್ತಿರುವ ರಾಜಕಾರಣಕ್ಕೆ ಪ್ರಗತಿಪರರು ಇದುವರೆಗೆ ನೀಡಿರುವ ಉತ್ತರ ಸಾಕಾಗುವುದಿಲ್ಲ ಎಂಬುದನ್ನಷ್ಟೇ ಇವೆಲ್ಲವೂ ತೋರುತ್ತಿದೆ. ಅವರು ದ್ವೇಷವನ್ನು ಬಿತ್ತಿಬಳಸಿದರೆ ನಾವುಗಳು ಭಾರತವು ಎಂದಿಗೂ ಸೌಹಾರ್ದದ ನಾಡಾಗಿತ್ತು, ಕೋಮು ದ್ವೇಷ, ದಳ್ಳುರಿ ಎಂದಿಗೂ ಇದ್ದಿಲ್ಲ, ಹಿಂದೂ ಧರ್ಮ ಅಹಿಂಸೆಯ ಪ್ರತೀಕ ಎನ್ನುವ ಅರೆಸತ್ಯಗಳಿಂದ ಎದುರಿಸಲಾಗುವುದಿಲ್ಲ. ಹಾಗೂ ಹಿಂದು ಧರ್ಮವೆಂದರೆ ಜಾತಿ ತಾರತಮ್ಯ, ಹಿಂದು ಧರ್ಮವೆಂದರೆ ಕಂದಾಚಾರ ಮತ್ತು ಶೋಷಣೆ ಎನ್ನುವುದಷ್ಟೇ ಸರಿಯಲ್ಲ. ಈ ಎಲ್ಲಾ ವಾದಗಳನ್ನು ನಾವು ಮೀರಬೇಕಿದೆ. ಹಾಗೂ ಸಮಾಜವನ್ನು ನಿರ್ಮಿಸುವುದರಲ್ಲಿ ಧರ್ಮ ಮುಖ್ಯ ಪಾತ್ರ ನಿರ್ವಹಿಸುತ್ತದೆ ಎಂದು ಒಪ್ಪಿಕೊಂಡು ಅದರ ಮರ್ಮವನ್ನು ಅರಿಯುವ ಪ್ರಯತ್ನವನ್ನೂ ಮಾಡಬೇಕಿದೆ. ಬೇರೊಂದು ಧರ್ಮವೇ ದೇಶದ ಅತಿದೊಡ್ಡ ಶತ್ರು ಎಂದು ನಂಬಿಸಿ, ದ್ವೇಷವನ್ನೇ ಬಂಡವಾಳ ಮಾಡಿಕೊಂಡು ರಾಜಕೀಯವಾಗಿ ಗೆಲ್ಲುತ್ತಿರುವಾಗ ಅದನ್ನು ವಿರೋಧಿಸಿದ ಕಾರ್ನಾಡರಂತಹ ಚೇತನಗಳು ಇಲ್ಲವಾದಾಗ ಕಾಣಿಸಿಕೊಳ್ಳುವ ಸಂಭ್ರಮ ನಮಗೆ ಅಚ್ಚರಿ/ಆಘಾತವನ್ನಷ್ಟೇ ಮೂಡಿಸಬಾರದು. ಈ ಮನುಷ್ಯತ್ವ ವಿರೋಧಿ ಶಕ್ತಿಗಳು ಧರ್ಮದ ಪರಿಕಲ್ಪನೆಯನ್ನು ತಿರುಚಿ, ಧರ್ಮದ ಅರ್ಥವನ್ನು ಸಂಕುಚಿತಗೊಳಿಸಿ, ಧರ್ಮದ ಪಾಲನೆಯೆಂದರೆ ಅನ್ಯ ಧರ್ಮದ ವಿರೋಧ ಎಂದು ನಂಬಿಸುವಲ್ಲಿ ಬಹುಮಟ್ಟಿಗೆ ಯಶಸ್ವಿಯಾಗಿವೆ. ಇಂತಹ ಸಂದರ್ಭದಲ್ಲಿ ನಾವು ಧಾರ್ಮಿಕತೆಯ ವರ್ಸಸ್ ಜಾತ್ಯತೀತತೆ ಎಂದಾಗಿಬಿಟ್ಟಿರುವ ಸರಳ ಬೈನರಿಗಳನ್ನು ಕೈಬಿಡಬೇಕಿದೆ. ಸಾವನ್ನು ಸಂಭ್ರಮಿಸಿದವರಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡದೇ ಅರಿವು ಮೂಡಿಸಬೇಕಿದೆ.
ಗಿರೀಶ ಕಾರ್ನಾಡ ಅವರು ನಮ್ಮ ದೇಶದ ಇತಿಹಾಸ ಮತ್ತು ಪುರಾಣಗಳನ್ನು ಆಳವಾಗಿ ಅಭ್ಯಸಿಸಿ ಸಾಹಿತ್ಯವನ್ನು ಸೃಷ್ಟಿಸಿದ ವ್ಯಕ್ತಿ. ಅವರ ಸಾಹಿತ್ಯದಲ್ಲೇ ಅವರ ಸಾವನ್ನು ಸಂಭ್ರಮಿಸುತ್ತಿರುವವರಿಗೆ ಸಾಕಷ್ಟು ಉತ್ತರಗಳು ಸಿಗುತ್ತವೆ. ನಾಡಿಗೆ ಈ ಚೇತನ ನೀಡಿದ ಕೊಡುಗೆಗಳನ್ನು ಸಂಭ್ರಮಿಸೋಣ. ಇನ್ನೊಮ್ಮೆ ಯಾರ ಸಾವನ್ನೂ ಸಂಭ್ರಮಿಸದ ಸಮಾಜವನ್ನು ಸೃಷ್ಟಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...