Homeಅಂಕಣಗಳುಆ ವಾರದ ಕಣ್ಣೋಟ | ಗೌರಿ ಲಂಕೇಶ್ಮಂಡೂರಿನಲ್ಲಿ ಒಂದು ಸಂಭ್ರಮ: ಸಂಘಟಿತ ಹೋರಾಟಕ್ಕೆ ಸಿಕ್ಕ ಜಯ

ಮಂಡೂರಿನಲ್ಲಿ ಒಂದು ಸಂಭ್ರಮ: ಸಂಘಟಿತ ಹೋರಾಟಕ್ಕೆ ಸಿಕ್ಕ ಜಯ

ಮಂಡೂರಿನ ಜನ ತಮ್ಮ ಸಂಘಟಿತ ಹೋರಾಟದಿಂದಲೇ ತಮ್ಮ ಊರಿಗೆ ಹಿಡಿದ ಶಾಪವನ್ನು ಹೊಗಲಾಡಿಸಿದ್ದಾರೆ. ಅವತ್ತು ಮಂಡೂರಿನ ಜನರ ಸಂಭ್ರಮದಲ್ಲಿ 'ಜನಶಕ್ತಿ’ ಎಂತಹದ್ದು ಎಂಬುದು ಎದ್ದು ಕಾಣಿಸುತ್ತಿತ್ತು...

- Advertisement -
- Advertisement -

ಕಳೆದ ಭಾನುವಾರ ಮಂಡೂರಿನಲ್ಲಿ ಹಬ್ಬದ ವಾತಾವರಣ. ಮಂಡೂರು ಮತ್ತು ಸುತ್ತಮುತ್ತಲಿನ ಹಳ್ಳಿಗಳ ಮಹಿಳೆಯರು ಬೆಳಗ್ಗೆಯೇ ತಮ್ಮ ಮನೆಕೆಲಸಗಳನ್ನು ಮುಗಿಸಿ, ನೀಟಾದ ಸೀರೆ ತೊಟ್ಟು, ಕೂದಲಲ್ಲಿ ಹೂಮುಡಿದು ಹಾಜರಾಗಿದ್ದರು. ಯುವಕರು ಉತ್ಸಾಹದಿಂದ ಓಡಾಡುತ್ತಿದ್ದರು. ಮಕ್ಕಳು ಅಲ್ಲಲ್ಲಿ ಆಟದಲ್ಲಿ ಮುಳುಗಿದ್ದರು. ಹತ್ತಾರು ವೃದ್ಧರೂ ಕಾರ್ಯಕ್ರಮ ಶುರುವಾಗಲು ಕಾಯುತ್ತಿದ್ದರು.

ಕಾರಣ: ಕಳೆದ ವರ್ಷ ಅವರೆಲ್ಲ ಜೊತೆಗೂಡಿ ನಡೆಸಿದ ಹೋರಾಟ ಯಶಸ್ವಿಯಾಗಿತ್ತು. ಅವರೆಲ್ಲರಿಗೆ ನೈತಿಕ ಬೆಂಬಲ ನೀಡಿದ್ದಲ್ಲದೆ ಅವರ ಹೆಗಲಿಗೆ ಹೆಗಲು ಕೊಟ್ಟು ಹೋರಾಡಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ರವಿಕೃಷ್ಣ ರೆಡ್ಡಿ ಅವರಿಗೆ ಸನ್ಮಾನಿಸಿ ಧನ್ಯವಾದಗಳನ್ನು ವ್ಯಕ್ತಪಡಿಸಲು ಮಂಡೂರಿನ ಜನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಎಲ್ಲರಿಗೂ ಗೊತ್ತಿರುವಂತೆ ಮಂಡೂರು ಹೋದ ವರ್ಷ ದೊಡ್ಡ ಸುದ್ದಿಯಾಗಿತ್ತು. ಕಳೆದ ಏಳು ವರ್ಷಗಳಿಂದ ಬೆಂಗಳೂರಿನ ಜನ ಪ್ರತಿದಿನ `ಉತ್ಪಾದಿಸುವ’ 4,500 ಟನ್ ಕಸವನ್ನು ನಗರಪಾಲಿಕೆಯ ಗುತ್ತಿಗೆದಾರರು ಮಂಡೂರಿಗೆ ಸಾಗಿಸಿ ಅಲ್ಲಿ ಬಿಸಾಡುತ್ತಿದ್ದರು. ನೋಡುನೋಡುತ್ತಿದ್ದಂತೆ ಅಲ್ಲಿನ 150 ಎಕರೆಗಳಲ್ಲಿ ಕಸದ ಬೆಟ್ಟಗಳೇ ನಿರ್ಮಾಣವಾದವು. 2013ರ ಹೊತ್ತಿಗೆ ಅಲ್ಲಿ ಒಟ್ಟು ಬಿಸಾಡಿದ್ದ ಕಸದ ರಾಶಿ 40 ಲಕ್ಷ ಟನ್‍ನಷ್ಟಾಯಿತು.

ಈ ಕಸದ ರಾಶಿಯಿಂದಾಗಿ ಎಲ್ಲೆಡೆ ಗಬ್ಬುನಾತ. ವಾಯು ಮಾಲಿನ್ಯದ ಜೊತೆಗೆ ಕುಡಿಯುವ ನೀರು ವಿಷಕಾರಿ ಆಯಿತು. ನಾಯಿ ಮತ್ತು ಸೊಳ್ಳೆಗಳ ಕಾಟ ನಿರಂತರವಾಯಿತು. ಸೊಳ್ಳೆಗಳು ಕಾಯಿಲೆಗಳನ್ನು ಹಬ್ಬಿಸುವುದರಿಂದ ಸುತ್ತಮುತ್ತ ಹಳ್ಳಿಗಳ ಮಕ್ಕಳು ಅನಾರೋಗ್ಯಪೀಡಿತರಾದರು. ಹಿರಿಯರು ಶ್ವಾಸಕೋಶ ಸಮಸ್ಯೆಗಳಿಗೆ ಬಲಿಯಾಗಲಾರಂಭಿಸಿದರು. ಆದರೆ ಕಸ ವಿಲೇವಾರಿ ಮಾಡುತ್ತಿದ್ದ ಗುತ್ತಿಗೆದಾರರೊಂದಿಗೆ ರಾಜಕಾರಣಿಗಳು ಕೈಜೋಡಿಸಿದ್ದರಿಂದ ಮಂಡೂರಿನ ಜನತೆಯ ಗೋಳನ್ನು ಕೇಳುವವರೇ ಇಲ್ಲದಂತಾಗಿತ್ತು.

ದಿನನಿತ್ಯ ಅಲ್ಲಿನ ಜನರು ಅನುಭವಿಸುತ್ತಿದ್ದ ಕಷ್ಟಗಳು ಅಸಹನೀಯವಾದಾಗ ಅವರು ಅಧಿಕಾರಸ್ಥರನ್ನು ಎಡತಾಕಲಾರಂಭಿಸಿದರು. ಆಗ ಶಾಸಕರಾಗಿದ್ದ ಬಿಜೆಪಿಯ ನಿಂಬಾವಳಿ “ನಿಮ್ಮ ಸಮಸ್ಯೆ ಬಗೆಹರಿಸುತ್ತೇನೆ’’ ಎಂದರೆ ಹೊರತು ಆ ನಿಟ್ಟಿನಲ್ಲಿ ಏನನ್ನೂ ಮಾಡಲಿಲ್ಲ. ಇನ್ನು ನಗರಪಾಲಿಕೆಯ ಅಧಿಕಾರಿಗಳು “ಪರ್ಯಾಯ ವ್ಯವಸ್ಥೆಯನ್ನು ಮಾಡುವವರೆಗೂ ಸಹಕರಿಸಿ, ಸಮಯ ಕೊಡಿ’’ ಎನ್ನುತ್ತಿದ್ದರೇ ಹೊರತು ಅಲ್ಲಿ ಕಸದ ರಾಶಿಯನ್ನು ಹಾಕುವುದನ್ನು ಮಾತ್ರ ನಿಲ್ಲಿಸಲಿಲ್ಲ, ಪರ್ಯಾಯವನ್ನೂ ಹುಡುಕಲಿಲ್ಲ.

ಕೊನೆಗೂ ಮಂಡೂರಿನ ಜನರ ತಾಳ್ಮೆಯ ಕಟ್ಟಲೆ ಒಡೆಯಿತು. ಯಾವ ರಾಜಕಾರಣಿಯನ್ನಾಗಲಿ, ನಗರಪಾಲಿಕೆಯ ಅಧಿಕಾರಿಯನ್ನಾಗಲಿ ನಂಬದೆ ಹೋರಾಟ ಮಾಡಲು ನಿರ್ಧರಿಸಿದರು. “ಇನ್ನು ಮುಂದೆ ಯಾವ ಕಾರಣಕ್ಕೂ ನಮ್ಮೂರಲ್ಲಿ ಕಸ ಹಾಕಲು ಬಿಡುವುದಿಲ್ಲ’’ ಎಂದು ಎದ್ದು ನಿಂತರು. ಆಗ ಅವರ ನೆರವಿಗೆ ಧಾವಿಸಿದ್ದು ದೊರೆಸ್ವಾಮಿಯವರು. ಕಸದ ಲಾರಿಗಳು ತಮ್ಮೂರನ್ನು ಪ್ರವೇಶಿಸದಂತೆ ಊರಿನ ಅಂಚಿನಲ್ಲೇ ಅಡ್ಡಗಟ್ಟಿ ನಿಂತರು. ಆಗ ಪೊಲೀಸರು ನಿಷೇಧಾಜ್ಞೆಯನ್ನು ಘೋಷಿಸಿ ಲಾರಿಗಳು ಮುಂದೆ ಸಾಗುವಂತೆ ನೋಡಿಕೊಂಡರು. ಲಾರಿಗಳು ಊರಿನ ಹತ್ತಿರ ಬಂದರೆ ತಾನೆ ಮುಂದೆ ಸಾಗುವುದು ಎಂದು ತರ್ಕಿಸಿದ ಗ್ರಾಮಸ್ಥರು ಅವುಗಳನ್ನು ಹೈವೇಯಲ್ಲೇ ತಡೆಗಟ್ಟಲಾರಂಭಿಸಿದರು. ಅಲ್ಲಿಗೂ ಪೊಲೀಸರು ಬಂದಾಗ ತಮ್ಮ ಹೋರಾಟವನ್ನು ಕೆ.ಆರ್. ಪುರಂವರೆಗೂ ತೆಗೆದುಕೊಂಡು ಹೋದರು.

ಅಷ್ಟು ಹೊತ್ತಿಗೆ ರವಿಕೃಷ್ಣ ರೆಡ್ಡಿ ಕೂಡ ಮಂಡೂರು ಹೋರಾಟಗರರ ಜೊತೆ ಸೇರಿದ್ದರು. ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ದೊರೆಸ್ವಾಮಿಯವರ ಮಾರ್ಗದರ್ಶನದಲ್ಲಿ ಜೂನ್ 1 ರಿಂದ ಸರಣಿ ಉಪವಾಸ ಪ್ರಾರಂಭಿಸಲು ನಿರ್ಧರಿಸಿದರು. ದೊರೆಸ್ವಾಮಿಯವರಿಗೆ 96 ವರ್ಷ ವಯಸ್ಸಾಗಿದ್ದರೂ ಪ್ರತಿದಿನ ತಮ್ಮ ಮನೆಯಿಂದ ಸುಮಾರು 40 ಕಿಲೋಮೀಟರ್ ದೂರವಿರುವ ಮಂಡೂರಿಗೆ ಹೋಗಿ ಅಲ್ಲಿನ ಜನರ ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದರು. ಇಷ್ಟೆಲ್ಲ ಆಗುತ್ತಿದ್ದರೂ ಸರ್ಕಾರ “ಸಮಸ್ಯೆ ಬಗೆಹರಿಸುವುದಕ್ಕೆ ಆರು ತಿಂಗಳ ಸಮಯ ಕೊಡಿ’’ ಎನ್ನುತ್ತಿದ್ದರೆ ಹೊರತು ಅದಕ್ಕಿಂತ ಹೆಚ್ಚಿನದ್ದೇನನ್ನೂ ಮಾಡಲು ಮುಂದಾಗಲಿಲ್ಲ.

ಆಗ ದೊರೆಸ್ವಾಮಿಯವರು “ಬಂಧನಕ್ಕೆ ಒಳಗಾದರೂ ಪರವಾಗಿಲ್ಲ, ನೀವೆಷ್ಟು ಶಾಪಗ್ರಸ್ಥರು ಎಂಬುದು ಅಧಿಕಾರಿಗಳಿಗೆ ಅರ್ಥವಾಗಬೇಕು. ನಿಮ್ಮಲ್ಲಿ ಎಷ್ಟು ಜನ ಬಂಧನಕ್ಕೆ ಸಿದ್ಧರಿದ್ದೀರಿ? ಅವರೆಲ್ಲರ ಹೆಸರುಗಳನ್ನು ಪಟ್ಟಿ ಮಾಡಿ’’ ಎಂದು ಸೂಚಿಸಿದರು. ನೂರಕ್ಕು ಹೆಚ್ಚು ಜನರು ಸಿದ್ಧರಿದ್ದರು. ಆದರೆ ಅಚ್ಚರಿಯ ಸಂಗತಿ ಯಾವುದೆಂದರೆ ಮಂಡೂರಿನ ಮಹಿಳೆಯರೂ ಆ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿದ್ದರು.

ಪರಿಸ್ಥಿತಿ ಬಿಗಡಾಯಿಸಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಈ ಸಮಸ್ಯೆಯನ್ನು ಬಗೆಹರಿಸಲು ಮುಂದಾದರು. ಅವರು ಕರೆದ ಸಭೆಗೆ ಮಂಡೂರಿನ ನೂರಾರು ಜನ ಹಾಜರಾದರು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದರಲ್ಲದೆ ತಮ್ಮ ಚಿಕ್ಕಪುಟ್ಟ ಮಕ್ಕಳನ್ನೂ ಕರೆತಂದಿದ್ದರು. ಆ ಸಭೆಯಲ್ಲಿ ಅಧಿಕಾರಿಗಳು ಮತ್ತದೆ ಅಸಹಾಯಕತೆ ವ್ಯಕ್ತಪಡಿಸಿದರಲ್ಲದೆ ಮತ್ತೆ ಕಾಲಾವಕಾಶವನ್ನು ಕೋರಿದರು.

ತಮ್ಮ ಬದುಕೇ ನರಕವಾಗಿದ್ದರೂ ಮುಖ್ಯಮಂತ್ರಿ ಕರೆದಿದ್ದ ಸಭೆಯಲ್ಲೂ ತಮಗೆ ಪರಿಹಾರ ಸಿಗದಿದ್ದಾಗ ಮಹಿಳೆಯರೆಲ್ಲ ಕಣ್ಣೀರಿಟ್ಟರು. ದೊರೆಸ್ವಾಮಿಯವರು ಹೇಳುವಂತೆ “ಆ ಕ್ಷಣ ಸಿದ್ದರಾಮಯ್ಯನವರಿಗೆ ಇಲ್ಲಿನ ಜನರ ಕಷ್ಟಗಳು ಅರ್ಥವಾಯಿತು. ಮಹಿಳೆಯರು ಕಣ್ಣೀರು ಹಾಕುವಂತೆ ಮಾಡಿರುವುದು ಸರಿಯಲ್ಲ, ಇದನ್ನು ಬಗೆಹರಿಸಬೇಕೆಂದು ಅವರು ನಿರ್ಧರಿಸಿದರು. 2014ರ ನವೆಂಬರ್ ತಿಂಗಳ ನಂತರ ಮಂಡೂರಿನಲ್ಲಿ ಕಸವನ್ನು ಹಾಕುವುದಿಲ್ಲ ಎಂದು ಅವತ್ತು ಸಿದ್ದರಾಮಯ್ಯ ಮಾತು ಕೊಟ್ಟರು. ಅದರಂತೆ ನಡೆದುಕೊಂಡಿದ್ದಾರೆ.’’

ಮಂಡೂರು ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದ ಮಹಿಳೆಯರೇ ಕಾರ್ಯಕ್ರಮಕ್ಕೂ ದೊಡ್ಡ ಸಂಖ್ಯೆಯಲ್ಲಿ ಹಾಜರಾಗಿದ್ದರು. ಬೆಂಗಳೂರು ಎಂಬ ಬೃಹತ್ ನಗರದ ಪಾಪಿಷ್ಟ ನಿವಾಸಿಗಳು ತಮ್ಮ ಸೋಂಬೇರಿತನದಿಂದಾಗಿ ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸದೆ ಇರುವುದರಿಂದ, ಪ್ಲಾಸ್ಟಿಕ್ ಬಳಕೆಯನ್ನು ಮುಂದುವರೆಸಿರುವುದರಿಂದ, ಭ್ರಷ್ಟ ರಾಜಕಾರಣಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾಗಿರುವುದರಿಂದ, ಅಧಿಕಾರಿಗಳು ಜನರ ಸಂಕಷ್ಟಗಳಿಗೆ ಸ್ಪಂದಿಸದಿರುವುದರಿಂದ ಮಂಡೂರು ಎಂಬ ಒಂದು ಪುಟ್ಟ ಹಳ್ಳಿ ಯಾವ ತಪ್ಪು ಮಾಡದಿದ್ದರೂ ಶಾಪಗ್ರಸ್ತವಾಗಿತ್ತು.

ಆದರೆ ಮಂಡೂರಿನ ಜನ ತಮ್ಮ ಸಂಘಟಿತ ಹೋರಾಟದಿಂದಲೇ ತಮ್ಮ ಊರಿಗೆ ಹಿಡಿದ ಶಾಪವನ್ನು ಹೊಗಲಾಡಿಸಿದ್ದಾರೆ. ಅವತ್ತು ಮಂಡೂರಿನ ಜನರ ಸಂಭ್ರಮದಲ್ಲಿ ‘ಜನಶಕ್ತಿ’ ಎಂತಹದ್ದು ಎಂಬುದು ಎದ್ದು ಕಾಣಿಸುತ್ತಿತ್ತು…

ಫೆಬ್ರವರಿ 4, 2015


ಇದನ್ನು ಓದಿ: ಅಪ್ಪನ ಆ ಭಾಷಣ ಮತ್ತು ಜಾಗೃತ ಸಾಹಿತ್ಯ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....