Homeಅಂಕಣಗಳುಆ ವಾರದ ಕಣ್ಣೋಟ | ಗೌರಿ ಲಂಕೇಶ್ಮಂಡೂರಿನಲ್ಲಿ ಒಂದು ಸಂಭ್ರಮ: ಸಂಘಟಿತ ಹೋರಾಟಕ್ಕೆ ಸಿಕ್ಕ ಜಯ

ಮಂಡೂರಿನಲ್ಲಿ ಒಂದು ಸಂಭ್ರಮ: ಸಂಘಟಿತ ಹೋರಾಟಕ್ಕೆ ಸಿಕ್ಕ ಜಯ

ಮಂಡೂರಿನ ಜನ ತಮ್ಮ ಸಂಘಟಿತ ಹೋರಾಟದಿಂದಲೇ ತಮ್ಮ ಊರಿಗೆ ಹಿಡಿದ ಶಾಪವನ್ನು ಹೊಗಲಾಡಿಸಿದ್ದಾರೆ. ಅವತ್ತು ಮಂಡೂರಿನ ಜನರ ಸಂಭ್ರಮದಲ್ಲಿ 'ಜನಶಕ್ತಿ’ ಎಂತಹದ್ದು ಎಂಬುದು ಎದ್ದು ಕಾಣಿಸುತ್ತಿತ್ತು...

- Advertisement -
- Advertisement -

ಕಳೆದ ಭಾನುವಾರ ಮಂಡೂರಿನಲ್ಲಿ ಹಬ್ಬದ ವಾತಾವರಣ. ಮಂಡೂರು ಮತ್ತು ಸುತ್ತಮುತ್ತಲಿನ ಹಳ್ಳಿಗಳ ಮಹಿಳೆಯರು ಬೆಳಗ್ಗೆಯೇ ತಮ್ಮ ಮನೆಕೆಲಸಗಳನ್ನು ಮುಗಿಸಿ, ನೀಟಾದ ಸೀರೆ ತೊಟ್ಟು, ಕೂದಲಲ್ಲಿ ಹೂಮುಡಿದು ಹಾಜರಾಗಿದ್ದರು. ಯುವಕರು ಉತ್ಸಾಹದಿಂದ ಓಡಾಡುತ್ತಿದ್ದರು. ಮಕ್ಕಳು ಅಲ್ಲಲ್ಲಿ ಆಟದಲ್ಲಿ ಮುಳುಗಿದ್ದರು. ಹತ್ತಾರು ವೃದ್ಧರೂ ಕಾರ್ಯಕ್ರಮ ಶುರುವಾಗಲು ಕಾಯುತ್ತಿದ್ದರು.

ಕಾರಣ: ಕಳೆದ ವರ್ಷ ಅವರೆಲ್ಲ ಜೊತೆಗೂಡಿ ನಡೆಸಿದ ಹೋರಾಟ ಯಶಸ್ವಿಯಾಗಿತ್ತು. ಅವರೆಲ್ಲರಿಗೆ ನೈತಿಕ ಬೆಂಬಲ ನೀಡಿದ್ದಲ್ಲದೆ ಅವರ ಹೆಗಲಿಗೆ ಹೆಗಲು ಕೊಟ್ಟು ಹೋರಾಡಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ರವಿಕೃಷ್ಣ ರೆಡ್ಡಿ ಅವರಿಗೆ ಸನ್ಮಾನಿಸಿ ಧನ್ಯವಾದಗಳನ್ನು ವ್ಯಕ್ತಪಡಿಸಲು ಮಂಡೂರಿನ ಜನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಎಲ್ಲರಿಗೂ ಗೊತ್ತಿರುವಂತೆ ಮಂಡೂರು ಹೋದ ವರ್ಷ ದೊಡ್ಡ ಸುದ್ದಿಯಾಗಿತ್ತು. ಕಳೆದ ಏಳು ವರ್ಷಗಳಿಂದ ಬೆಂಗಳೂರಿನ ಜನ ಪ್ರತಿದಿನ `ಉತ್ಪಾದಿಸುವ’ 4,500 ಟನ್ ಕಸವನ್ನು ನಗರಪಾಲಿಕೆಯ ಗುತ್ತಿಗೆದಾರರು ಮಂಡೂರಿಗೆ ಸಾಗಿಸಿ ಅಲ್ಲಿ ಬಿಸಾಡುತ್ತಿದ್ದರು. ನೋಡುನೋಡುತ್ತಿದ್ದಂತೆ ಅಲ್ಲಿನ 150 ಎಕರೆಗಳಲ್ಲಿ ಕಸದ ಬೆಟ್ಟಗಳೇ ನಿರ್ಮಾಣವಾದವು. 2013ರ ಹೊತ್ತಿಗೆ ಅಲ್ಲಿ ಒಟ್ಟು ಬಿಸಾಡಿದ್ದ ಕಸದ ರಾಶಿ 40 ಲಕ್ಷ ಟನ್‍ನಷ್ಟಾಯಿತು.

ಈ ಕಸದ ರಾಶಿಯಿಂದಾಗಿ ಎಲ್ಲೆಡೆ ಗಬ್ಬುನಾತ. ವಾಯು ಮಾಲಿನ್ಯದ ಜೊತೆಗೆ ಕುಡಿಯುವ ನೀರು ವಿಷಕಾರಿ ಆಯಿತು. ನಾಯಿ ಮತ್ತು ಸೊಳ್ಳೆಗಳ ಕಾಟ ನಿರಂತರವಾಯಿತು. ಸೊಳ್ಳೆಗಳು ಕಾಯಿಲೆಗಳನ್ನು ಹಬ್ಬಿಸುವುದರಿಂದ ಸುತ್ತಮುತ್ತ ಹಳ್ಳಿಗಳ ಮಕ್ಕಳು ಅನಾರೋಗ್ಯಪೀಡಿತರಾದರು. ಹಿರಿಯರು ಶ್ವಾಸಕೋಶ ಸಮಸ್ಯೆಗಳಿಗೆ ಬಲಿಯಾಗಲಾರಂಭಿಸಿದರು. ಆದರೆ ಕಸ ವಿಲೇವಾರಿ ಮಾಡುತ್ತಿದ್ದ ಗುತ್ತಿಗೆದಾರರೊಂದಿಗೆ ರಾಜಕಾರಣಿಗಳು ಕೈಜೋಡಿಸಿದ್ದರಿಂದ ಮಂಡೂರಿನ ಜನತೆಯ ಗೋಳನ್ನು ಕೇಳುವವರೇ ಇಲ್ಲದಂತಾಗಿತ್ತು.

ದಿನನಿತ್ಯ ಅಲ್ಲಿನ ಜನರು ಅನುಭವಿಸುತ್ತಿದ್ದ ಕಷ್ಟಗಳು ಅಸಹನೀಯವಾದಾಗ ಅವರು ಅಧಿಕಾರಸ್ಥರನ್ನು ಎಡತಾಕಲಾರಂಭಿಸಿದರು. ಆಗ ಶಾಸಕರಾಗಿದ್ದ ಬಿಜೆಪಿಯ ನಿಂಬಾವಳಿ “ನಿಮ್ಮ ಸಮಸ್ಯೆ ಬಗೆಹರಿಸುತ್ತೇನೆ’’ ಎಂದರೆ ಹೊರತು ಆ ನಿಟ್ಟಿನಲ್ಲಿ ಏನನ್ನೂ ಮಾಡಲಿಲ್ಲ. ಇನ್ನು ನಗರಪಾಲಿಕೆಯ ಅಧಿಕಾರಿಗಳು “ಪರ್ಯಾಯ ವ್ಯವಸ್ಥೆಯನ್ನು ಮಾಡುವವರೆಗೂ ಸಹಕರಿಸಿ, ಸಮಯ ಕೊಡಿ’’ ಎನ್ನುತ್ತಿದ್ದರೇ ಹೊರತು ಅಲ್ಲಿ ಕಸದ ರಾಶಿಯನ್ನು ಹಾಕುವುದನ್ನು ಮಾತ್ರ ನಿಲ್ಲಿಸಲಿಲ್ಲ, ಪರ್ಯಾಯವನ್ನೂ ಹುಡುಕಲಿಲ್ಲ.

ಕೊನೆಗೂ ಮಂಡೂರಿನ ಜನರ ತಾಳ್ಮೆಯ ಕಟ್ಟಲೆ ಒಡೆಯಿತು. ಯಾವ ರಾಜಕಾರಣಿಯನ್ನಾಗಲಿ, ನಗರಪಾಲಿಕೆಯ ಅಧಿಕಾರಿಯನ್ನಾಗಲಿ ನಂಬದೆ ಹೋರಾಟ ಮಾಡಲು ನಿರ್ಧರಿಸಿದರು. “ಇನ್ನು ಮುಂದೆ ಯಾವ ಕಾರಣಕ್ಕೂ ನಮ್ಮೂರಲ್ಲಿ ಕಸ ಹಾಕಲು ಬಿಡುವುದಿಲ್ಲ’’ ಎಂದು ಎದ್ದು ನಿಂತರು. ಆಗ ಅವರ ನೆರವಿಗೆ ಧಾವಿಸಿದ್ದು ದೊರೆಸ್ವಾಮಿಯವರು. ಕಸದ ಲಾರಿಗಳು ತಮ್ಮೂರನ್ನು ಪ್ರವೇಶಿಸದಂತೆ ಊರಿನ ಅಂಚಿನಲ್ಲೇ ಅಡ್ಡಗಟ್ಟಿ ನಿಂತರು. ಆಗ ಪೊಲೀಸರು ನಿಷೇಧಾಜ್ಞೆಯನ್ನು ಘೋಷಿಸಿ ಲಾರಿಗಳು ಮುಂದೆ ಸಾಗುವಂತೆ ನೋಡಿಕೊಂಡರು. ಲಾರಿಗಳು ಊರಿನ ಹತ್ತಿರ ಬಂದರೆ ತಾನೆ ಮುಂದೆ ಸಾಗುವುದು ಎಂದು ತರ್ಕಿಸಿದ ಗ್ರಾಮಸ್ಥರು ಅವುಗಳನ್ನು ಹೈವೇಯಲ್ಲೇ ತಡೆಗಟ್ಟಲಾರಂಭಿಸಿದರು. ಅಲ್ಲಿಗೂ ಪೊಲೀಸರು ಬಂದಾಗ ತಮ್ಮ ಹೋರಾಟವನ್ನು ಕೆ.ಆರ್. ಪುರಂವರೆಗೂ ತೆಗೆದುಕೊಂಡು ಹೋದರು.

ಅಷ್ಟು ಹೊತ್ತಿಗೆ ರವಿಕೃಷ್ಣ ರೆಡ್ಡಿ ಕೂಡ ಮಂಡೂರು ಹೋರಾಟಗರರ ಜೊತೆ ಸೇರಿದ್ದರು. ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ದೊರೆಸ್ವಾಮಿಯವರ ಮಾರ್ಗದರ್ಶನದಲ್ಲಿ ಜೂನ್ 1 ರಿಂದ ಸರಣಿ ಉಪವಾಸ ಪ್ರಾರಂಭಿಸಲು ನಿರ್ಧರಿಸಿದರು. ದೊರೆಸ್ವಾಮಿಯವರಿಗೆ 96 ವರ್ಷ ವಯಸ್ಸಾಗಿದ್ದರೂ ಪ್ರತಿದಿನ ತಮ್ಮ ಮನೆಯಿಂದ ಸುಮಾರು 40 ಕಿಲೋಮೀಟರ್ ದೂರವಿರುವ ಮಂಡೂರಿಗೆ ಹೋಗಿ ಅಲ್ಲಿನ ಜನರ ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದರು. ಇಷ್ಟೆಲ್ಲ ಆಗುತ್ತಿದ್ದರೂ ಸರ್ಕಾರ “ಸಮಸ್ಯೆ ಬಗೆಹರಿಸುವುದಕ್ಕೆ ಆರು ತಿಂಗಳ ಸಮಯ ಕೊಡಿ’’ ಎನ್ನುತ್ತಿದ್ದರೆ ಹೊರತು ಅದಕ್ಕಿಂತ ಹೆಚ್ಚಿನದ್ದೇನನ್ನೂ ಮಾಡಲು ಮುಂದಾಗಲಿಲ್ಲ.

ಆಗ ದೊರೆಸ್ವಾಮಿಯವರು “ಬಂಧನಕ್ಕೆ ಒಳಗಾದರೂ ಪರವಾಗಿಲ್ಲ, ನೀವೆಷ್ಟು ಶಾಪಗ್ರಸ್ಥರು ಎಂಬುದು ಅಧಿಕಾರಿಗಳಿಗೆ ಅರ್ಥವಾಗಬೇಕು. ನಿಮ್ಮಲ್ಲಿ ಎಷ್ಟು ಜನ ಬಂಧನಕ್ಕೆ ಸಿದ್ಧರಿದ್ದೀರಿ? ಅವರೆಲ್ಲರ ಹೆಸರುಗಳನ್ನು ಪಟ್ಟಿ ಮಾಡಿ’’ ಎಂದು ಸೂಚಿಸಿದರು. ನೂರಕ್ಕು ಹೆಚ್ಚು ಜನರು ಸಿದ್ಧರಿದ್ದರು. ಆದರೆ ಅಚ್ಚರಿಯ ಸಂಗತಿ ಯಾವುದೆಂದರೆ ಮಂಡೂರಿನ ಮಹಿಳೆಯರೂ ಆ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿದ್ದರು.

ಪರಿಸ್ಥಿತಿ ಬಿಗಡಾಯಿಸಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಈ ಸಮಸ್ಯೆಯನ್ನು ಬಗೆಹರಿಸಲು ಮುಂದಾದರು. ಅವರು ಕರೆದ ಸಭೆಗೆ ಮಂಡೂರಿನ ನೂರಾರು ಜನ ಹಾಜರಾದರು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದರಲ್ಲದೆ ತಮ್ಮ ಚಿಕ್ಕಪುಟ್ಟ ಮಕ್ಕಳನ್ನೂ ಕರೆತಂದಿದ್ದರು. ಆ ಸಭೆಯಲ್ಲಿ ಅಧಿಕಾರಿಗಳು ಮತ್ತದೆ ಅಸಹಾಯಕತೆ ವ್ಯಕ್ತಪಡಿಸಿದರಲ್ಲದೆ ಮತ್ತೆ ಕಾಲಾವಕಾಶವನ್ನು ಕೋರಿದರು.

ತಮ್ಮ ಬದುಕೇ ನರಕವಾಗಿದ್ದರೂ ಮುಖ್ಯಮಂತ್ರಿ ಕರೆದಿದ್ದ ಸಭೆಯಲ್ಲೂ ತಮಗೆ ಪರಿಹಾರ ಸಿಗದಿದ್ದಾಗ ಮಹಿಳೆಯರೆಲ್ಲ ಕಣ್ಣೀರಿಟ್ಟರು. ದೊರೆಸ್ವಾಮಿಯವರು ಹೇಳುವಂತೆ “ಆ ಕ್ಷಣ ಸಿದ್ದರಾಮಯ್ಯನವರಿಗೆ ಇಲ್ಲಿನ ಜನರ ಕಷ್ಟಗಳು ಅರ್ಥವಾಯಿತು. ಮಹಿಳೆಯರು ಕಣ್ಣೀರು ಹಾಕುವಂತೆ ಮಾಡಿರುವುದು ಸರಿಯಲ್ಲ, ಇದನ್ನು ಬಗೆಹರಿಸಬೇಕೆಂದು ಅವರು ನಿರ್ಧರಿಸಿದರು. 2014ರ ನವೆಂಬರ್ ತಿಂಗಳ ನಂತರ ಮಂಡೂರಿನಲ್ಲಿ ಕಸವನ್ನು ಹಾಕುವುದಿಲ್ಲ ಎಂದು ಅವತ್ತು ಸಿದ್ದರಾಮಯ್ಯ ಮಾತು ಕೊಟ್ಟರು. ಅದರಂತೆ ನಡೆದುಕೊಂಡಿದ್ದಾರೆ.’’

ಮಂಡೂರು ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದ ಮಹಿಳೆಯರೇ ಕಾರ್ಯಕ್ರಮಕ್ಕೂ ದೊಡ್ಡ ಸಂಖ್ಯೆಯಲ್ಲಿ ಹಾಜರಾಗಿದ್ದರು. ಬೆಂಗಳೂರು ಎಂಬ ಬೃಹತ್ ನಗರದ ಪಾಪಿಷ್ಟ ನಿವಾಸಿಗಳು ತಮ್ಮ ಸೋಂಬೇರಿತನದಿಂದಾಗಿ ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸದೆ ಇರುವುದರಿಂದ, ಪ್ಲಾಸ್ಟಿಕ್ ಬಳಕೆಯನ್ನು ಮುಂದುವರೆಸಿರುವುದರಿಂದ, ಭ್ರಷ್ಟ ರಾಜಕಾರಣಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾಗಿರುವುದರಿಂದ, ಅಧಿಕಾರಿಗಳು ಜನರ ಸಂಕಷ್ಟಗಳಿಗೆ ಸ್ಪಂದಿಸದಿರುವುದರಿಂದ ಮಂಡೂರು ಎಂಬ ಒಂದು ಪುಟ್ಟ ಹಳ್ಳಿ ಯಾವ ತಪ್ಪು ಮಾಡದಿದ್ದರೂ ಶಾಪಗ್ರಸ್ತವಾಗಿತ್ತು.

ಆದರೆ ಮಂಡೂರಿನ ಜನ ತಮ್ಮ ಸಂಘಟಿತ ಹೋರಾಟದಿಂದಲೇ ತಮ್ಮ ಊರಿಗೆ ಹಿಡಿದ ಶಾಪವನ್ನು ಹೊಗಲಾಡಿಸಿದ್ದಾರೆ. ಅವತ್ತು ಮಂಡೂರಿನ ಜನರ ಸಂಭ್ರಮದಲ್ಲಿ ‘ಜನಶಕ್ತಿ’ ಎಂತಹದ್ದು ಎಂಬುದು ಎದ್ದು ಕಾಣಿಸುತ್ತಿತ್ತು…

ಫೆಬ್ರವರಿ 4, 2015


ಇದನ್ನು ಓದಿ: ಅಪ್ಪನ ಆ ಭಾಷಣ ಮತ್ತು ಜಾಗೃತ ಸಾಹಿತ್ಯ ಸಮಾವೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...