Homeಮುಖಪುಟಕೇಂದ್ರ ಸರ್ಕಾರದ ಪರ ಸೆಲೆಬ್ರಿಟಿಗಳ ಒಂದೇ ಥರದ ಟ್ವೀಟ್: ತನಿಖೆಗೆ ಆದೇಶಿಸಿದ ಮಹಾರಾಷ್ಟ್ರ ಸರ್ಕಾರ

ಕೇಂದ್ರ ಸರ್ಕಾರದ ಪರ ಸೆಲೆಬ್ರಿಟಿಗಳ ಒಂದೇ ಥರದ ಟ್ವೀಟ್: ತನಿಖೆಗೆ ಆದೇಶಿಸಿದ ಮಹಾರಾಷ್ಟ್ರ ಸರ್ಕಾರ

ಆ ಟ್ವೀಟ್‌ಗಳಲ್ಲಿ ಯಾವುದೇ ಪದಗಳ ವ್ಯತ್ಯಾಸವಿರಲಿಲ್ಲ. ಎಲ್ಲರ ವಾಕ್ಯಗಳು ಒಂದೇ ರೀತಿ ಇದ್ದವು. ಒಂದೇ ಸಮಯದಲ್ಲಿ ಟ್ವೀಟ್ ಮಾಡಲಾಗಿದೆ. ಇದು ಗಂಭೀರ ವಿಷಯ - ಅನಿಲ್ ದೇಶ್ಮುಖ್

- Advertisement -
- Advertisement -

ರೈತ ಹೋರಾಟದ ವಿಷಯದಲ್ಲಿ ಕೇಂದ್ರ ಸರ್ಕಾರವನ್ನು ಬೆಂಬಲಿಸಿ ಟ್ವೀಟ್ ಮಾಡಿದ ಸೆಲೆಬ್ರಿಟಿಗಳ ಒಂದೇ ಥರದ ಟ್ವೀಟ್ ಕುರಿತು ತನಿಖೆ ನಡೆಸುವಂತೆ ಮಹಾರಾಷ್ಟ್ರದ ಗೃಹ ಮಂತ್ರಿ ಅನಿಲ್ ದೇಶ್ಮುಖ್ ಆದೇಶಿಸಿದ್ದಾರೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ 74 ದಿನಗಳಿಂದ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಸರ್ಕಾರ ರೈತರ ಹೋರಾಟ ತಡೆಯಲು ಇಂಟರ್ನೆಟ್ ಕಡಿತ, ರಸ್ತೆಗಳಲ್ಲಿ ಮುಳ್ಳು ನೆಡುವುದು ಮಾಡಿತ್ತು. ಇದನ್ನು ವಿರೋಧಿಸಿ ಅಮೆರಿಕದ ಪಾಪ್ ತಾರೆ ರಿಹಾನ್ನ ಕೇವಲ ಆರು ಪದಗಳಲ್ಲಿ ಟ್ವೀಟ್ ಮಾಡಿದ್ದರು. ಪರಿಸರ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್‌ ಕೂಡ ರೈತ ಹೋರಾಟ ಬೆಂಬಲಿಸಿ ಟ್ವೀಟ್ ಮಾಡಿದ್ದರು. ಇದು ಇಡೀ ವಿಶ್ವಾದಾದ್ಯಂತ ವೈರಲ್ ಆಗಿ ಭಾರತ ಸರ್ಕಾರಕ್ಕೆ ಮುಜುಗರ ತಂದಿತ್ತು.

ಆನಂತರ ವಿದೇಶಾಂಗ ಸಚಿವಾಲಯವು ಇದು ಭಾರತದ ಆಂತರಿಕ ವಿಷಯ ವಿದೇಶಿಗರು ತಲೆಹಾಕಬಾರದು ಎಂದು ಹೇಳಿಕೆ ನೀಡಿತ್ತು. ಅಲ್ಲದೆ ‘ಪ್ರೊಪಗಂಡಾ ವಿರುದ್ದ ಭಾರತ’ ಎಂಬ ಹ್ಯಾಷ್‌ಟ್ಯಾಗ್‌ ನೀಡಿತ್ತು. ನಂತರ ಒಂದೇ ರೀತಿಯ ಹೇಳಿಕೆ ಮತ್ತು ಹ್ಯಾಷ್‌ಟ್ಯಾಗ್‌ ಬಳಸಿ ಸಚಿನ್, ಲತಾ ಮಂಗೇಶ್ಕರ್, ಅಕ್ಷಯ್ ಕುಮಾರ್, ವಿರಾಟ್ ಕೊಹ್ಲಿ, ಸೈನಾ ನೆಹವಾಲ್, ಅಜಯ್ ದೇವಗನ್ ಸೇರಿ ಹಲವರು ಟ್ವೀಟ್ ಮಾಡಿದ್ದರು.

ಈ ಕುರಿತು ಕಾಂಗ್ರೆಸ್ ಮುಖಂಡ ಸಚಿನ್ ಸಾವಂತ್ “ಈ ಸೆಲೆಬ್ರಿಟಿಗಳು ಈ ರೀತಿ ಒಂದೇ ಥರನಾಗಿ, ಒಂದೇ ಹ್ಯಾಷ್‌ಟ್ಯಾಗ್‌ ಬಳಸಿ ಟ್ವೀಟ್ ಮಾಡುವಂತೆ ಸರ್ಕಾರ ಅವರ ಮೇಲೆ ಒತ್ತಡ ಹೇರಲಾಗಿತ್ತೆ” ಎಂಬುದರ ಕುರಿತು ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದರು. ಮಹಾರಾಷ್ಟ್ರದ ಗೃಹ ಮಂತ್ರಿ ಅನಿಲ್ ದೇಶ್ಮುಖ್ ಕೊರೊನಾ ಸೋಂಕಿನ ಕಾರಣಕ್ಕಾಗಿ ಕ್ವಾರಂಟೈನ್‌ನಲ್ಲಿದ್ದು ಜೂಮ್ ಮೂಲಕ ನಡೆದ ಮಾತುಕತೆಯಲ್ಲಿ ತನಿಖೆಗೆ ಆದೇಶಿಸಿದ್ದಾರೆ.

ನೀವು ಎತ್ತಿರುವ ಆಕ್ಷೇಪಗಳಿಗೆ ನಮ್ಮ ಗುಪ್ತಚರ ಇಲಾಖೆಯ ಮೂಲಕ ತನಿಖೆ ನಡೆಸುತ್ತೇವೆ ಎಂದು ದೇಶ್ಮುಖ್ ಹೇಳಿದ್ದಾರೆ. ಆ ಟ್ವೀಟ್‌ಗಳಲ್ಲಿ ಯಾವುದೇ ಪದಗಳ ವ್ಯತ್ಯಾಸವಿರಲಿಲ್ಲ. ಎಲ್ಲರ ವಾಕ್ಯಗಳು ಒಂದೇ ರೀತಿ ಇದ್ದವು. ಒಂದೇ ಸಮಯದಲ್ಲಿ ಟ್ವೀಟ್ ಮಾಡಲಾಗಿದೆ. ಇದು ಗಂಭೀರ ವಿಷಯ ಎಂದು ಅವರು ಹೇಳಿದ್ದಾರೆ.

ಸಚಿನ್ ಸಾವಂತ್ ಮಾತನಾಡಿ amicable ಎಂಬ ಪದವನ್ನು ಈ ಎಲ್ಲಾ ಸೆಲೆಬ್ರಿಟಿಗಳು ಸಹ ಬಳಸಿದ್ದಾರೆ. ಬಿಜೆಪಿ ಅವರ ಮೇಲೆ ಈ ರೀತಿ ಮಾಡುವಂತೆ ಒತ್ತಡ ಹೇರಿತ್ತೆ? ಅವರೆಲ್ಲರಿಗೂ ಈಗ ರಕ್ಷಣೆ ನೀಡಬೇಕಾಗಿದೆ ಎಂದು ತಿಳಿಸಿದ್ದಾರೆ.

ರೈತರ ಹೋರಾಟದ ವಿಷಯದಲ್ಲಿ ಸರ್ಕಾರವನ್ನು ಬೆಂಬಲಿಸಿ ಟ್ವೀಟ್ ಮಾಡುವಂತೆ ಕೇಳುವ ಮೂಲಕ ಕೇಂದ್ರ ಸರ್ಕಾರವು ಲತಾ ಮಂಗೇಶ್ಕರ್ ಮತ್ತು ಸಚಿನ್ ತೆಂಡೂಲ್ಕರ್ ಅವರ  ಪ್ರತಿಷ್ಠೆಯನ್ನು ಕಸಿದುಕೊಳ್ಳಬಾರದಿತ್ತು ಎಂದು ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದರು. ಇವರೆಲ್ಲರೂ ದೊಡ್ಡ ವ್ಯಕ್ತಿಗಳು. ಆದರೆ ಅವರೀಗ ಕೇಂದ್ರ ಹೇಳಿದಂತೆ ಟ್ವೀಟ್ ಮಾಡಿದ್ದರಿಂದ ಸಾಕಷ್ಟು ಟ್ರೋಲ್‌ಗೊಳಗಾಗುತ್ತಿದ್ದಾರೆ, ಇದಕ್ಕೆ ಕೇಂದ್ರ ಸರ್ಕಾರವೇ ನೇರ ಕಾರಣ ಎಂದು‌ ಅವರು ಶನಿವಾರ ದೂರಿದ್ದರು.

ಭಾನುವಾರ ಮಾತನಾಡಿದ್ದ ಎನ್‌ಸಿಪಿ ನಾಯಕ ಶರದ್ ಪವಾರ್ ಕೂಡ ‘ಮಾತನಾಡುವ ಮುನ್ನ ಅದರ ಪರಿಣಾಮದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಚಿನ್‌ಗೆ ಸಲಹೆ ನೀಡುತ್ತೇನೆ’ ಎಂದು ತಿಳಿಸಿದ್ದರು.


ಇದನ್ನೂ ಓದಿ: ಸಚಿನ್, ಲತಾ ಮಂಗೇಶ್ಕರ್ ಟ್ರೋಲ್‌ಗೊಳಗಾಗಲು ಕೇಂದ್ರ ಸರ್ಕಾರವೇ ಕಾರಣ: ರಾಜ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...