Homeಮುಖಪುಟಕೇಂದ್ರ ಸರ್ಕಾರದ ಪರ ಸೆಲೆಬ್ರಿಟಿಗಳ ಒಂದೇ ಥರದ ಟ್ವೀಟ್: ತನಿಖೆಗೆ ಆದೇಶಿಸಿದ ಮಹಾರಾಷ್ಟ್ರ ಸರ್ಕಾರ

ಕೇಂದ್ರ ಸರ್ಕಾರದ ಪರ ಸೆಲೆಬ್ರಿಟಿಗಳ ಒಂದೇ ಥರದ ಟ್ವೀಟ್: ತನಿಖೆಗೆ ಆದೇಶಿಸಿದ ಮಹಾರಾಷ್ಟ್ರ ಸರ್ಕಾರ

ಆ ಟ್ವೀಟ್‌ಗಳಲ್ಲಿ ಯಾವುದೇ ಪದಗಳ ವ್ಯತ್ಯಾಸವಿರಲಿಲ್ಲ. ಎಲ್ಲರ ವಾಕ್ಯಗಳು ಒಂದೇ ರೀತಿ ಇದ್ದವು. ಒಂದೇ ಸಮಯದಲ್ಲಿ ಟ್ವೀಟ್ ಮಾಡಲಾಗಿದೆ. ಇದು ಗಂಭೀರ ವಿಷಯ - ಅನಿಲ್ ದೇಶ್ಮುಖ್

- Advertisement -
- Advertisement -

ರೈತ ಹೋರಾಟದ ವಿಷಯದಲ್ಲಿ ಕೇಂದ್ರ ಸರ್ಕಾರವನ್ನು ಬೆಂಬಲಿಸಿ ಟ್ವೀಟ್ ಮಾಡಿದ ಸೆಲೆಬ್ರಿಟಿಗಳ ಒಂದೇ ಥರದ ಟ್ವೀಟ್ ಕುರಿತು ತನಿಖೆ ನಡೆಸುವಂತೆ ಮಹಾರಾಷ್ಟ್ರದ ಗೃಹ ಮಂತ್ರಿ ಅನಿಲ್ ದೇಶ್ಮುಖ್ ಆದೇಶಿಸಿದ್ದಾರೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ 74 ದಿನಗಳಿಂದ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ. ಆದರೆ ಸರ್ಕಾರ ರೈತರ ಹೋರಾಟ ತಡೆಯಲು ಇಂಟರ್ನೆಟ್ ಕಡಿತ, ರಸ್ತೆಗಳಲ್ಲಿ ಮುಳ್ಳು ನೆಡುವುದು ಮಾಡಿತ್ತು. ಇದನ್ನು ವಿರೋಧಿಸಿ ಅಮೆರಿಕದ ಪಾಪ್ ತಾರೆ ರಿಹಾನ್ನ ಕೇವಲ ಆರು ಪದಗಳಲ್ಲಿ ಟ್ವೀಟ್ ಮಾಡಿದ್ದರು. ಪರಿಸರ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್‌ ಕೂಡ ರೈತ ಹೋರಾಟ ಬೆಂಬಲಿಸಿ ಟ್ವೀಟ್ ಮಾಡಿದ್ದರು. ಇದು ಇಡೀ ವಿಶ್ವಾದಾದ್ಯಂತ ವೈರಲ್ ಆಗಿ ಭಾರತ ಸರ್ಕಾರಕ್ಕೆ ಮುಜುಗರ ತಂದಿತ್ತು.

ಆನಂತರ ವಿದೇಶಾಂಗ ಸಚಿವಾಲಯವು ಇದು ಭಾರತದ ಆಂತರಿಕ ವಿಷಯ ವಿದೇಶಿಗರು ತಲೆಹಾಕಬಾರದು ಎಂದು ಹೇಳಿಕೆ ನೀಡಿತ್ತು. ಅಲ್ಲದೆ ‘ಪ್ರೊಪಗಂಡಾ ವಿರುದ್ದ ಭಾರತ’ ಎಂಬ ಹ್ಯಾಷ್‌ಟ್ಯಾಗ್‌ ನೀಡಿತ್ತು. ನಂತರ ಒಂದೇ ರೀತಿಯ ಹೇಳಿಕೆ ಮತ್ತು ಹ್ಯಾಷ್‌ಟ್ಯಾಗ್‌ ಬಳಸಿ ಸಚಿನ್, ಲತಾ ಮಂಗೇಶ್ಕರ್, ಅಕ್ಷಯ್ ಕುಮಾರ್, ವಿರಾಟ್ ಕೊಹ್ಲಿ, ಸೈನಾ ನೆಹವಾಲ್, ಅಜಯ್ ದೇವಗನ್ ಸೇರಿ ಹಲವರು ಟ್ವೀಟ್ ಮಾಡಿದ್ದರು.

ಈ ಕುರಿತು ಕಾಂಗ್ರೆಸ್ ಮುಖಂಡ ಸಚಿನ್ ಸಾವಂತ್ “ಈ ಸೆಲೆಬ್ರಿಟಿಗಳು ಈ ರೀತಿ ಒಂದೇ ಥರನಾಗಿ, ಒಂದೇ ಹ್ಯಾಷ್‌ಟ್ಯಾಗ್‌ ಬಳಸಿ ಟ್ವೀಟ್ ಮಾಡುವಂತೆ ಸರ್ಕಾರ ಅವರ ಮೇಲೆ ಒತ್ತಡ ಹೇರಲಾಗಿತ್ತೆ” ಎಂಬುದರ ಕುರಿತು ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದರು. ಮಹಾರಾಷ್ಟ್ರದ ಗೃಹ ಮಂತ್ರಿ ಅನಿಲ್ ದೇಶ್ಮುಖ್ ಕೊರೊನಾ ಸೋಂಕಿನ ಕಾರಣಕ್ಕಾಗಿ ಕ್ವಾರಂಟೈನ್‌ನಲ್ಲಿದ್ದು ಜೂಮ್ ಮೂಲಕ ನಡೆದ ಮಾತುಕತೆಯಲ್ಲಿ ತನಿಖೆಗೆ ಆದೇಶಿಸಿದ್ದಾರೆ.

ನೀವು ಎತ್ತಿರುವ ಆಕ್ಷೇಪಗಳಿಗೆ ನಮ್ಮ ಗುಪ್ತಚರ ಇಲಾಖೆಯ ಮೂಲಕ ತನಿಖೆ ನಡೆಸುತ್ತೇವೆ ಎಂದು ದೇಶ್ಮುಖ್ ಹೇಳಿದ್ದಾರೆ. ಆ ಟ್ವೀಟ್‌ಗಳಲ್ಲಿ ಯಾವುದೇ ಪದಗಳ ವ್ಯತ್ಯಾಸವಿರಲಿಲ್ಲ. ಎಲ್ಲರ ವಾಕ್ಯಗಳು ಒಂದೇ ರೀತಿ ಇದ್ದವು. ಒಂದೇ ಸಮಯದಲ್ಲಿ ಟ್ವೀಟ್ ಮಾಡಲಾಗಿದೆ. ಇದು ಗಂಭೀರ ವಿಷಯ ಎಂದು ಅವರು ಹೇಳಿದ್ದಾರೆ.

ಸಚಿನ್ ಸಾವಂತ್ ಮಾತನಾಡಿ amicable ಎಂಬ ಪದವನ್ನು ಈ ಎಲ್ಲಾ ಸೆಲೆಬ್ರಿಟಿಗಳು ಸಹ ಬಳಸಿದ್ದಾರೆ. ಬಿಜೆಪಿ ಅವರ ಮೇಲೆ ಈ ರೀತಿ ಮಾಡುವಂತೆ ಒತ್ತಡ ಹೇರಿತ್ತೆ? ಅವರೆಲ್ಲರಿಗೂ ಈಗ ರಕ್ಷಣೆ ನೀಡಬೇಕಾಗಿದೆ ಎಂದು ತಿಳಿಸಿದ್ದಾರೆ.

ರೈತರ ಹೋರಾಟದ ವಿಷಯದಲ್ಲಿ ಸರ್ಕಾರವನ್ನು ಬೆಂಬಲಿಸಿ ಟ್ವೀಟ್ ಮಾಡುವಂತೆ ಕೇಳುವ ಮೂಲಕ ಕೇಂದ್ರ ಸರ್ಕಾರವು ಲತಾ ಮಂಗೇಶ್ಕರ್ ಮತ್ತು ಸಚಿನ್ ತೆಂಡೂಲ್ಕರ್ ಅವರ  ಪ್ರತಿಷ್ಠೆಯನ್ನು ಕಸಿದುಕೊಳ್ಳಬಾರದಿತ್ತು ಎಂದು ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದರು. ಇವರೆಲ್ಲರೂ ದೊಡ್ಡ ವ್ಯಕ್ತಿಗಳು. ಆದರೆ ಅವರೀಗ ಕೇಂದ್ರ ಹೇಳಿದಂತೆ ಟ್ವೀಟ್ ಮಾಡಿದ್ದರಿಂದ ಸಾಕಷ್ಟು ಟ್ರೋಲ್‌ಗೊಳಗಾಗುತ್ತಿದ್ದಾರೆ, ಇದಕ್ಕೆ ಕೇಂದ್ರ ಸರ್ಕಾರವೇ ನೇರ ಕಾರಣ ಎಂದು‌ ಅವರು ಶನಿವಾರ ದೂರಿದ್ದರು.

ಭಾನುವಾರ ಮಾತನಾಡಿದ್ದ ಎನ್‌ಸಿಪಿ ನಾಯಕ ಶರದ್ ಪವಾರ್ ಕೂಡ ‘ಮಾತನಾಡುವ ಮುನ್ನ ಅದರ ಪರಿಣಾಮದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಚಿನ್‌ಗೆ ಸಲಹೆ ನೀಡುತ್ತೇನೆ’ ಎಂದು ತಿಳಿಸಿದ್ದರು.


ಇದನ್ನೂ ಓದಿ: ಸಚಿನ್, ಲತಾ ಮಂಗೇಶ್ಕರ್ ಟ್ರೋಲ್‌ಗೊಳಗಾಗಲು ಕೇಂದ್ರ ಸರ್ಕಾರವೇ ಕಾರಣ: ರಾಜ್ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...