Homeಚಳವಳಿಸಾಮೂಹಿಕ ಹಲ್ಲೆ ತಡೆಗೆ ಪ್ರಧಾನಿಗೆ ಪತ್ರ ಬರೆದವರ ವಿರುದ್ಧವೇ ಎಫ್ಐಆರ್ ದಾಖಲು..!

ಸಾಮೂಹಿಕ ಹಲ್ಲೆ ತಡೆಗೆ ಪ್ರಧಾನಿಗೆ ಪತ್ರ ಬರೆದವರ ವಿರುದ್ಧವೇ ಎಫ್ಐಆರ್ ದಾಖಲು..!

- Advertisement -
- Advertisement -

ದೇಶದಲ್ಲಿ ಹೆಚ್ಚುತ್ತಿರುವ ಸಾಮೂಹಿಕ ಹಲ್ಲೆ ಹಾಗೂ ಅಮಾನವೀಯ ಘಟನೆಗಳನ್ನು ಖಂಡಿಸಿ, ಪ್ರಧಾನಿ ಮೋದಿಗೆ ಬಹಿರಂಗ ಪತ್ರ ಬರೆದಿದ್ದ ೫೦ ಗಣ್ಯರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಸಾಮೂಹಿಕ ಹಲ್ಲೆ ಹಾಗೂ ಗೋ ರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ಜುಲೈನಲ್ಲಿ ಪ್ರಧಾನಿಗೆ ಪತ್ರ ಬರೆದು ಪ್ರತಿಭಟನೆ ವ್ಯಕ್ತಪಡಿಸಿದ್ದ ಇತಿಹಾಸ ತಜ್ಞ ಲೇಖಕ ರಾಮಚಂದ್ರ ಗುಹಾ, ಖ್ಯಾತ ನಿರ್ದೇಶಕ ಮಣಿರತ್ನಂ, ಅನುರಾಗ್ ಕಶ್ಯಪ್, ಅಪರ್ಣಾ ಸೇನ್ ಸೇರಿದಂತೆ 50ಕ್ಕೂ ಹೆಚ್ಚು ಸಾಹಿತಿಗಳು, ಚಿತ್ರ ನಟ, ನಟಿಯರು, ಪತ್ರಕರ್ತರ ವಿರುದ್ಧ ದೇಶದ್ರೋಹ, ಸಾರ್ವಜನಿಕರಿಗೆ ತೊಂದರೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ದೂರು ದಾಖಲಿಸಲಾಗಿದೆ.

ಪ್ರಕರಣ ದಾಖಲಾಗಿರುವುದು ಪ್ರಜ್ಞಾವಂತ ಸಮಾಜದ ನಾಗರಿಕರನ್ನು ದಿಗಿಲುಗೊಳಿಸಿದೆ. ಕೇವಲ ಪತ್ರ ಬರೆದುದ್ದಕ್ಕೆ ದೂರು ದಾಖಲಾದರೆ ಏನು ಗತಿ ಎಂದು ಚಿಂತಿತರಾಗಿದ್ದಾರೆ.

“ದೇಶದಾದ್ಯಂತ ಎಲ್ಲೆಡೆ ಮುಸ್ಲಿಂರು, ದಲಿತರು ಹಾಗೂ ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ಹಲ್ಲೆ ಪ್ರಕರಣವನ್ನು ಸರ್ಕಾರ ತಕ್ಷಣ ತಡೆಯಬೇಕು. ಭಿನ್ನಾಭಿಪ್ರಾಯವಿಲ್ಲದೆ ಪ್ರಜಾಪ್ರಭುತ್ವ ಇಲ್ಲ. ಜೈ ಶ್ರೀರಾಮ್​ ಘೋಷಣೆ ಪ್ರಚೋದನಾಕಾರಿ ಯುದ್ಧದ ಕೂಗಿನಂತೆ ಕೇಳಿಸುತ್ತಿದೆ” ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.

ಮೋದಿಗೆ ಪತ್ರ ಬರೆದಾಗ ಬಿಹಾರ ಮೂಲದ ವಕೀಲ ಸುಧೀರ್​ ಕುಮಾರ್​ ಓಝಾ, ಸ್ಥಳೀಯ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಕಳೆದ ಆಗಸ್ಟ್​ 20 ರಂದು ವಿಚಾರಣೆ ನಡೆಸಿದ್ದ ಸ್ಥಳೀಯ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ​ ಸೂರ್ಯಕಾಂತ್​ ತಿವಾರಿ, ಪತ್ರ ಬರೆದಿದ್ದ ಎಲ್ಲಾ ವ್ಯಕ್ತಿಗಳ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದ್ದರು. ಇದರನ್ವಯ ಬಿಹಾರ ಪೊಲೀಸರು ಪ್ರಕರಣದಲ್ಲಿ 50 ಕ್ಕೂ ಹೆಚ್ಚು ವಿಚಾರವಾದಿಗಳು, ಸೆಲೆಬ್ರಟಿಗಳ ವಿರುದ್ಧ ಎಫ್‌‌ಐಆರ್ ದಾಖಲಿಸಿದ್ದಾರೆ.

ಇನ್ನು ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೋಮು ಗಲಭೆ, ಸಾಮೂಹಿಕ ಹಲ್ಲೆ, ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ, ಸರ್ವಾಧಿಕಾರಿ ಧೋರಣೆ, ಪ್ರಗತಿಪರರು, ಚಿಂತಕರನ್ನು ಹತ್ತಿಕ್ಕುವ ಕೆಲಸಗಳಾಗುತ್ತಿವೆ ಎಂಬ ಆರೋಪವಿದೆ. ಉತ್ತರಪ್ರದೇಶದಲ್ಲಿ ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಹಿಂಸಾಚಾರ ದುಪ್ಪಟ್ಟಾಗಿದೆ. ನೈತಿಕ ಪೊಲೀಸ್ ಗಿರಿಯಿಂದ ಜನತೆ ಬೇಸತ್ತಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಾಹ್, ಪತ್ರವನ್ನೂ ಮರೆಯುವಂತಿಲ್ಲ! ಬಹುಷಃ ಹಿಟ್ಲರನ ಜರ್ಮನಿಯಲ್ಲಿ ಇದಕ್ಕಿಂತಲೂ ಹೆಚ್ಚು ಸ್ವಾತಂತ್ರ್ಯ ಇದ್ದಿರಬಹುದು.

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...