Homeಚಳವಳಿಸಾಮೂಹಿಕ ಹಲ್ಲೆ ತಡೆಗೆ ಪ್ರಧಾನಿಗೆ ಪತ್ರ ಬರೆದವರ ವಿರುದ್ಧವೇ ಎಫ್ಐಆರ್ ದಾಖಲು..!

ಸಾಮೂಹಿಕ ಹಲ್ಲೆ ತಡೆಗೆ ಪ್ರಧಾನಿಗೆ ಪತ್ರ ಬರೆದವರ ವಿರುದ್ಧವೇ ಎಫ್ಐಆರ್ ದಾಖಲು..!

- Advertisement -
- Advertisement -

ದೇಶದಲ್ಲಿ ಹೆಚ್ಚುತ್ತಿರುವ ಸಾಮೂಹಿಕ ಹಲ್ಲೆ ಹಾಗೂ ಅಮಾನವೀಯ ಘಟನೆಗಳನ್ನು ಖಂಡಿಸಿ, ಪ್ರಧಾನಿ ಮೋದಿಗೆ ಬಹಿರಂಗ ಪತ್ರ ಬರೆದಿದ್ದ ೫೦ ಗಣ್ಯರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಸಾಮೂಹಿಕ ಹಲ್ಲೆ ಹಾಗೂ ಗೋ ರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ಜುಲೈನಲ್ಲಿ ಪ್ರಧಾನಿಗೆ ಪತ್ರ ಬರೆದು ಪ್ರತಿಭಟನೆ ವ್ಯಕ್ತಪಡಿಸಿದ್ದ ಇತಿಹಾಸ ತಜ್ಞ ಲೇಖಕ ರಾಮಚಂದ್ರ ಗುಹಾ, ಖ್ಯಾತ ನಿರ್ದೇಶಕ ಮಣಿರತ್ನಂ, ಅನುರಾಗ್ ಕಶ್ಯಪ್, ಅಪರ್ಣಾ ಸೇನ್ ಸೇರಿದಂತೆ 50ಕ್ಕೂ ಹೆಚ್ಚು ಸಾಹಿತಿಗಳು, ಚಿತ್ರ ನಟ, ನಟಿಯರು, ಪತ್ರಕರ್ತರ ವಿರುದ್ಧ ದೇಶದ್ರೋಹ, ಸಾರ್ವಜನಿಕರಿಗೆ ತೊಂದರೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ದೂರು ದಾಖಲಿಸಲಾಗಿದೆ.

ಪ್ರಕರಣ ದಾಖಲಾಗಿರುವುದು ಪ್ರಜ್ಞಾವಂತ ಸಮಾಜದ ನಾಗರಿಕರನ್ನು ದಿಗಿಲುಗೊಳಿಸಿದೆ. ಕೇವಲ ಪತ್ರ ಬರೆದುದ್ದಕ್ಕೆ ದೂರು ದಾಖಲಾದರೆ ಏನು ಗತಿ ಎಂದು ಚಿಂತಿತರಾಗಿದ್ದಾರೆ.

“ದೇಶದಾದ್ಯಂತ ಎಲ್ಲೆಡೆ ಮುಸ್ಲಿಂರು, ದಲಿತರು ಹಾಗೂ ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ಹಲ್ಲೆ ಪ್ರಕರಣವನ್ನು ಸರ್ಕಾರ ತಕ್ಷಣ ತಡೆಯಬೇಕು. ಭಿನ್ನಾಭಿಪ್ರಾಯವಿಲ್ಲದೆ ಪ್ರಜಾಪ್ರಭುತ್ವ ಇಲ್ಲ. ಜೈ ಶ್ರೀರಾಮ್​ ಘೋಷಣೆ ಪ್ರಚೋದನಾಕಾರಿ ಯುದ್ಧದ ಕೂಗಿನಂತೆ ಕೇಳಿಸುತ್ತಿದೆ” ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.

ಮೋದಿಗೆ ಪತ್ರ ಬರೆದಾಗ ಬಿಹಾರ ಮೂಲದ ವಕೀಲ ಸುಧೀರ್​ ಕುಮಾರ್​ ಓಝಾ, ಸ್ಥಳೀಯ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಕಳೆದ ಆಗಸ್ಟ್​ 20 ರಂದು ವಿಚಾರಣೆ ನಡೆಸಿದ್ದ ಸ್ಥಳೀಯ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ​ ಸೂರ್ಯಕಾಂತ್​ ತಿವಾರಿ, ಪತ್ರ ಬರೆದಿದ್ದ ಎಲ್ಲಾ ವ್ಯಕ್ತಿಗಳ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದ್ದರು. ಇದರನ್ವಯ ಬಿಹಾರ ಪೊಲೀಸರು ಪ್ರಕರಣದಲ್ಲಿ 50 ಕ್ಕೂ ಹೆಚ್ಚು ವಿಚಾರವಾದಿಗಳು, ಸೆಲೆಬ್ರಟಿಗಳ ವಿರುದ್ಧ ಎಫ್‌‌ಐಆರ್ ದಾಖಲಿಸಿದ್ದಾರೆ.

ಇನ್ನು ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೋಮು ಗಲಭೆ, ಸಾಮೂಹಿಕ ಹಲ್ಲೆ, ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ, ಸರ್ವಾಧಿಕಾರಿ ಧೋರಣೆ, ಪ್ರಗತಿಪರರು, ಚಿಂತಕರನ್ನು ಹತ್ತಿಕ್ಕುವ ಕೆಲಸಗಳಾಗುತ್ತಿವೆ ಎಂಬ ಆರೋಪವಿದೆ. ಉತ್ತರಪ್ರದೇಶದಲ್ಲಿ ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಹಿಂಸಾಚಾರ ದುಪ್ಪಟ್ಟಾಗಿದೆ. ನೈತಿಕ ಪೊಲೀಸ್ ಗಿರಿಯಿಂದ ಜನತೆ ಬೇಸತ್ತಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಾಹ್, ಪತ್ರವನ್ನೂ ಮರೆಯುವಂತಿಲ್ಲ! ಬಹುಷಃ ಹಿಟ್ಲರನ ಜರ್ಮನಿಯಲ್ಲಿ ಇದಕ್ಕಿಂತಲೂ ಹೆಚ್ಚು ಸ್ವಾತಂತ್ರ್ಯ ಇದ್ದಿರಬಹುದು.

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...