Homeಚಳವಳಿಸಾಮೂಹಿಕ ಹಲ್ಲೆ ತಡೆಗೆ ಪ್ರಧಾನಿಗೆ ಪತ್ರ ಬರೆದವರ ವಿರುದ್ಧವೇ ಎಫ್ಐಆರ್ ದಾಖಲು..!

ಸಾಮೂಹಿಕ ಹಲ್ಲೆ ತಡೆಗೆ ಪ್ರಧಾನಿಗೆ ಪತ್ರ ಬರೆದವರ ವಿರುದ್ಧವೇ ಎಫ್ಐಆರ್ ದಾಖಲು..!

- Advertisement -
- Advertisement -

ದೇಶದಲ್ಲಿ ಹೆಚ್ಚುತ್ತಿರುವ ಸಾಮೂಹಿಕ ಹಲ್ಲೆ ಹಾಗೂ ಅಮಾನವೀಯ ಘಟನೆಗಳನ್ನು ಖಂಡಿಸಿ, ಪ್ರಧಾನಿ ಮೋದಿಗೆ ಬಹಿರಂಗ ಪತ್ರ ಬರೆದಿದ್ದ ೫೦ ಗಣ್ಯರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಸಾಮೂಹಿಕ ಹಲ್ಲೆ ಹಾಗೂ ಗೋ ರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ಜುಲೈನಲ್ಲಿ ಪ್ರಧಾನಿಗೆ ಪತ್ರ ಬರೆದು ಪ್ರತಿಭಟನೆ ವ್ಯಕ್ತಪಡಿಸಿದ್ದ ಇತಿಹಾಸ ತಜ್ಞ ಲೇಖಕ ರಾಮಚಂದ್ರ ಗುಹಾ, ಖ್ಯಾತ ನಿರ್ದೇಶಕ ಮಣಿರತ್ನಂ, ಅನುರಾಗ್ ಕಶ್ಯಪ್, ಅಪರ್ಣಾ ಸೇನ್ ಸೇರಿದಂತೆ 50ಕ್ಕೂ ಹೆಚ್ಚು ಸಾಹಿತಿಗಳು, ಚಿತ್ರ ನಟ, ನಟಿಯರು, ಪತ್ರಕರ್ತರ ವಿರುದ್ಧ ದೇಶದ್ರೋಹ, ಸಾರ್ವಜನಿಕರಿಗೆ ತೊಂದರೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ದೂರು ದಾಖಲಿಸಲಾಗಿದೆ.

ಪ್ರಕರಣ ದಾಖಲಾಗಿರುವುದು ಪ್ರಜ್ಞಾವಂತ ಸಮಾಜದ ನಾಗರಿಕರನ್ನು ದಿಗಿಲುಗೊಳಿಸಿದೆ. ಕೇವಲ ಪತ್ರ ಬರೆದುದ್ದಕ್ಕೆ ದೂರು ದಾಖಲಾದರೆ ಏನು ಗತಿ ಎಂದು ಚಿಂತಿತರಾಗಿದ್ದಾರೆ.

“ದೇಶದಾದ್ಯಂತ ಎಲ್ಲೆಡೆ ಮುಸ್ಲಿಂರು, ದಲಿತರು ಹಾಗೂ ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ಹಲ್ಲೆ ಪ್ರಕರಣವನ್ನು ಸರ್ಕಾರ ತಕ್ಷಣ ತಡೆಯಬೇಕು. ಭಿನ್ನಾಭಿಪ್ರಾಯವಿಲ್ಲದೆ ಪ್ರಜಾಪ್ರಭುತ್ವ ಇಲ್ಲ. ಜೈ ಶ್ರೀರಾಮ್​ ಘೋಷಣೆ ಪ್ರಚೋದನಾಕಾರಿ ಯುದ್ಧದ ಕೂಗಿನಂತೆ ಕೇಳಿಸುತ್ತಿದೆ” ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.

ಮೋದಿಗೆ ಪತ್ರ ಬರೆದಾಗ ಬಿಹಾರ ಮೂಲದ ವಕೀಲ ಸುಧೀರ್​ ಕುಮಾರ್​ ಓಝಾ, ಸ್ಥಳೀಯ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಕಳೆದ ಆಗಸ್ಟ್​ 20 ರಂದು ವಿಚಾರಣೆ ನಡೆಸಿದ್ದ ಸ್ಥಳೀಯ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ​ ಸೂರ್ಯಕಾಂತ್​ ತಿವಾರಿ, ಪತ್ರ ಬರೆದಿದ್ದ ಎಲ್ಲಾ ವ್ಯಕ್ತಿಗಳ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದ್ದರು. ಇದರನ್ವಯ ಬಿಹಾರ ಪೊಲೀಸರು ಪ್ರಕರಣದಲ್ಲಿ 50 ಕ್ಕೂ ಹೆಚ್ಚು ವಿಚಾರವಾದಿಗಳು, ಸೆಲೆಬ್ರಟಿಗಳ ವಿರುದ್ಧ ಎಫ್‌‌ಐಆರ್ ದಾಖಲಿಸಿದ್ದಾರೆ.

ಇನ್ನು ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೋಮು ಗಲಭೆ, ಸಾಮೂಹಿಕ ಹಲ್ಲೆ, ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ, ಸರ್ವಾಧಿಕಾರಿ ಧೋರಣೆ, ಪ್ರಗತಿಪರರು, ಚಿಂತಕರನ್ನು ಹತ್ತಿಕ್ಕುವ ಕೆಲಸಗಳಾಗುತ್ತಿವೆ ಎಂಬ ಆರೋಪವಿದೆ. ಉತ್ತರಪ್ರದೇಶದಲ್ಲಿ ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಹಿಂಸಾಚಾರ ದುಪ್ಪಟ್ಟಾಗಿದೆ. ನೈತಿಕ ಪೊಲೀಸ್ ಗಿರಿಯಿಂದ ಜನತೆ ಬೇಸತ್ತಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಾಹ್, ಪತ್ರವನ್ನೂ ಮರೆಯುವಂತಿಲ್ಲ! ಬಹುಷಃ ಹಿಟ್ಲರನ ಜರ್ಮನಿಯಲ್ಲಿ ಇದಕ್ಕಿಂತಲೂ ಹೆಚ್ಚು ಸ್ವಾತಂತ್ರ್ಯ ಇದ್ದಿರಬಹುದು.

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...