Homeಚಳವಳಿಸಾಮೂಹಿಕ ಹಲ್ಲೆ ತಡೆಗೆ ಪ್ರಧಾನಿಗೆ ಪತ್ರ ಬರೆದವರ ವಿರುದ್ಧವೇ ಎಫ್ಐಆರ್ ದಾಖಲು..!

ಸಾಮೂಹಿಕ ಹಲ್ಲೆ ತಡೆಗೆ ಪ್ರಧಾನಿಗೆ ಪತ್ರ ಬರೆದವರ ವಿರುದ್ಧವೇ ಎಫ್ಐಆರ್ ದಾಖಲು..!

- Advertisement -
- Advertisement -

ದೇಶದಲ್ಲಿ ಹೆಚ್ಚುತ್ತಿರುವ ಸಾಮೂಹಿಕ ಹಲ್ಲೆ ಹಾಗೂ ಅಮಾನವೀಯ ಘಟನೆಗಳನ್ನು ಖಂಡಿಸಿ, ಪ್ರಧಾನಿ ಮೋದಿಗೆ ಬಹಿರಂಗ ಪತ್ರ ಬರೆದಿದ್ದ ೫೦ ಗಣ್ಯರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಸಾಮೂಹಿಕ ಹಲ್ಲೆ ಹಾಗೂ ಗೋ ರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ಜುಲೈನಲ್ಲಿ ಪ್ರಧಾನಿಗೆ ಪತ್ರ ಬರೆದು ಪ್ರತಿಭಟನೆ ವ್ಯಕ್ತಪಡಿಸಿದ್ದ ಇತಿಹಾಸ ತಜ್ಞ ಲೇಖಕ ರಾಮಚಂದ್ರ ಗುಹಾ, ಖ್ಯಾತ ನಿರ್ದೇಶಕ ಮಣಿರತ್ನಂ, ಅನುರಾಗ್ ಕಶ್ಯಪ್, ಅಪರ್ಣಾ ಸೇನ್ ಸೇರಿದಂತೆ 50ಕ್ಕೂ ಹೆಚ್ಚು ಸಾಹಿತಿಗಳು, ಚಿತ್ರ ನಟ, ನಟಿಯರು, ಪತ್ರಕರ್ತರ ವಿರುದ್ಧ ದೇಶದ್ರೋಹ, ಸಾರ್ವಜನಿಕರಿಗೆ ತೊಂದರೆ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ದೂರು ದಾಖಲಿಸಲಾಗಿದೆ.

ಪ್ರಕರಣ ದಾಖಲಾಗಿರುವುದು ಪ್ರಜ್ಞಾವಂತ ಸಮಾಜದ ನಾಗರಿಕರನ್ನು ದಿಗಿಲುಗೊಳಿಸಿದೆ. ಕೇವಲ ಪತ್ರ ಬರೆದುದ್ದಕ್ಕೆ ದೂರು ದಾಖಲಾದರೆ ಏನು ಗತಿ ಎಂದು ಚಿಂತಿತರಾಗಿದ್ದಾರೆ.

“ದೇಶದಾದ್ಯಂತ ಎಲ್ಲೆಡೆ ಮುಸ್ಲಿಂರು, ದಲಿತರು ಹಾಗೂ ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ಹಲ್ಲೆ ಪ್ರಕರಣವನ್ನು ಸರ್ಕಾರ ತಕ್ಷಣ ತಡೆಯಬೇಕು. ಭಿನ್ನಾಭಿಪ್ರಾಯವಿಲ್ಲದೆ ಪ್ರಜಾಪ್ರಭುತ್ವ ಇಲ್ಲ. ಜೈ ಶ್ರೀರಾಮ್​ ಘೋಷಣೆ ಪ್ರಚೋದನಾಕಾರಿ ಯುದ್ಧದ ಕೂಗಿನಂತೆ ಕೇಳಿಸುತ್ತಿದೆ” ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.

ಮೋದಿಗೆ ಪತ್ರ ಬರೆದಾಗ ಬಿಹಾರ ಮೂಲದ ವಕೀಲ ಸುಧೀರ್​ ಕುಮಾರ್​ ಓಝಾ, ಸ್ಥಳೀಯ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಕಳೆದ ಆಗಸ್ಟ್​ 20 ರಂದು ವಿಚಾರಣೆ ನಡೆಸಿದ್ದ ಸ್ಥಳೀಯ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ​ ಸೂರ್ಯಕಾಂತ್​ ತಿವಾರಿ, ಪತ್ರ ಬರೆದಿದ್ದ ಎಲ್ಲಾ ವ್ಯಕ್ತಿಗಳ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದ್ದರು. ಇದರನ್ವಯ ಬಿಹಾರ ಪೊಲೀಸರು ಪ್ರಕರಣದಲ್ಲಿ 50 ಕ್ಕೂ ಹೆಚ್ಚು ವಿಚಾರವಾದಿಗಳು, ಸೆಲೆಬ್ರಟಿಗಳ ವಿರುದ್ಧ ಎಫ್‌‌ಐಆರ್ ದಾಖಲಿಸಿದ್ದಾರೆ.

ಇನ್ನು ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೋಮು ಗಲಭೆ, ಸಾಮೂಹಿಕ ಹಲ್ಲೆ, ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ, ಸರ್ವಾಧಿಕಾರಿ ಧೋರಣೆ, ಪ್ರಗತಿಪರರು, ಚಿಂತಕರನ್ನು ಹತ್ತಿಕ್ಕುವ ಕೆಲಸಗಳಾಗುತ್ತಿವೆ ಎಂಬ ಆರೋಪವಿದೆ. ಉತ್ತರಪ್ರದೇಶದಲ್ಲಿ ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಹಿಂಸಾಚಾರ ದುಪ್ಪಟ್ಟಾಗಿದೆ. ನೈತಿಕ ಪೊಲೀಸ್ ಗಿರಿಯಿಂದ ಜನತೆ ಬೇಸತ್ತಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಾಹ್, ಪತ್ರವನ್ನೂ ಮರೆಯುವಂತಿಲ್ಲ! ಬಹುಷಃ ಹಿಟ್ಲರನ ಜರ್ಮನಿಯಲ್ಲಿ ಇದಕ್ಕಿಂತಲೂ ಹೆಚ್ಚು ಸ್ವಾತಂತ್ರ್ಯ ಇದ್ದಿರಬಹುದು.

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...