Homeಕರ್ನಾಟಕರಾಮಕೃಷ್ಣ ಹೆಗಡೆ ಜೊತೆಗಿನ ಸಂಬಂಧ ಕುರಿತ ಮಾತಿಗೆ ಕತ್ತರಿ: ಕನ್ನಡ & ಸಂಸ್ಕೃತಿ ಇಲಾಖೆ ನಡೆಗೆ...

ರಾಮಕೃಷ್ಣ ಹೆಗಡೆ ಜೊತೆಗಿನ ಸಂಬಂಧ ಕುರಿತ ಮಾತಿಗೆ ಕತ್ತರಿ: ಕನ್ನಡ & ಸಂಸ್ಕೃತಿ ಇಲಾಖೆ ನಡೆಗೆ ಪ್ರತಿಭಾ ಬೇಸರ

- Advertisement -
- Advertisement -

ಕನ್ನಡ ಸಂಸ್ಕೃತಿ ಇಲಾಖೆಯು ಇತ್ತೀಚೆಗೆ ನಡೆಸಿದ ಸಂವಾದ ಸರಣಿಯಲ್ಲಿ ಮಾತನಾಡಿದ್ದ ಖ್ಯಾತ ಶಾಸ್ತ್ರೀಯ ನೃತ್ಯಗಾರ್ತಿ ಪ್ರತಿಭಾ ಪ್ರಹ್ಲಾದ್ ಅವರ ಕೆಲವು ಮಾತುಗಳಿಗೆ ಕತ್ತರಿ ಪ್ರಯೋಗ ಮಾಡಿ, ಬಳಿಕ ಇಲಾಖೆಯು ಯೂಟ್ಯೂಬ್‌ನಲ್ಲಿ ವಿಡಿಯೊ ಅಪ್‌ಲೋಡ್ ಮಾಡಿದ್ದು, ಪ್ರತಿಭಾ ಅವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರೊಂದಿಗಿನ ಸಂಬಂಧ ಮತ್ತು ಒಂಟಿ ತಾಯಿಯಾಗಿ ತಾವು ಕಂಡ ಅನುಭವಗಳನ್ನು ಅವರು ಹಂಚಿಕೊಂಡಿದ್ದನ್ನು ತೆಗೆದು ಹಾಕಲಾಗಿದೆ. ಎಡಿಟ್ ಮಾಡಿದ ವಿಡಿಯೊ ಪ್ರತಿಯನ್ನೇ ಪ್ರತಿಭಾ ಅವರಿಗೂ ನೀಡಲಾಗಿದೆ ಎಂದು ವರದಿಯಾಗಿದೆ.

“ಸರ್ಕಾರ ಬಯಸಿದರೆ ನಾನು ಮಾತನಾಡಿರುವುದನ್ನು ಸೆನ್ಸಾರ್ ಮಾಡಲಿ, ಆದರೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ನನ್ನ ಭಾಷಣದ ಸಂಪೂರ್ಣ ಧ್ವನಿಮುದ್ರಣ ಪಡೆಯಲು ನಾನು ಅರ್ಹಳಾಗಿದ್ದೇನೆ” ಎಂದಿದ್ದಾರೆ.

ಕನ್ನಡ ಸಂಸ್ಕೃತಿ ಇಲಾಖೆಯು ಆಯೋಜಿಸುತ್ತಿರುವ ‘ಮನೆಯಂಗಳದಲ್ಲಿ ಮಾತುಕಥೆ’ ಎಂಬ ಸಂವಾದ ಸರಣಿಯಲ್ಲಿ ಪ್ರತಿಭಾ ಅವರು ಇತ್ತೀಚೆಗೆ ಮಾತನಾಡಿದ್ದರು. ಈ ಸರಣಿಯಲ್ಲಿ ಸಾಧಕ ಕನ್ನಡಿಗರ ಜೀವನ ಕಥೆಗಳನ್ನು ದಾಖಲಿಸಲಾಗುತ್ತಿದೆ. ಪದ್ಮಶ್ರೀ ಪುರಸ್ಕೃತೆ ಪ್ರತಿಭಾ ಅವರನ್ನು ಮೇ 21ರಂದು ಹಿರಿಯ ಪತ್ರಕರ್ತ ರಾಮಕೃಷ್ಣ ಉಪಾಧ್ಯ ಅವರು ಸಂದರ್ಶಿಸಿ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಪ್ರತಿಭಾ ಅವರು ತಮ್ಮ ನೃತ್ಯ ಬದುಕು, ಕಲಾ ನಿರ್ವಹಣೆ, ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರೊಂದಿಗಿನ ಸಂಬಂಧ ಮತ್ತು ಅವಳಿ ಮಕ್ಕಳಿಗೆ ಒಂಟಿ ತಾಯಿಯಾಗಿ ಇರಲು ನಿರ್ಧರಿಸಿದ್ದು ಸೇರಿದಂತೆ ಹಲವಾರು ಸಂಗತಿಗಳನ್ನು ಹಂಚಿಕೊಂಡಿದ್ದರು.

“ವೈಯಕ್ತಿಕವಾಗಿ, ಮಕ್ಕಳನ್ನು ಹೊಂದಲು ಮದುವೆಯ ಅವಶ್ಯಕತೆಯಿದೆ ಎಂದು ನಾನು ನಂಬುವುದಿಲ್ಲ. ಕುಟುಂಬದ ಹೊರತಾಗಿ ಸಂತೋಷ ಮತ್ತು ದುಃಖಗಳನ್ನು ಹಂಚಿಕೊಳ್ಳಲು ಸಂಗಾತಿಯೂ ಮುಖ್ಯ…. ಆದರೆ, ಇದನ್ನು ಲೆಕ್ಕಿಸದೆ, ಸಮಾಜವು ಪ್ರಗತಿ ಹೊಂದಬೇಕು. ವಿವಿಧ ಮಾದರಿಗಳ ಬಗ್ಗೆ ಯೋಚಿಸಬೇಕು. ಅಂತಹ ಒಂದು ಮಾದರಿಯಲ್ಲಿ ನನ್ನ ಅವಳಿ ಮಕ್ಕಳು ಬೆಳೆದರು. ನಾನು ಒಂಟಿ ತಾಯಿಯಾಗಲು ನಿರ್ಧರಿಸಿದೆ. ಅದಕ್ಕಾಗಿ ನಾನು ಎಂದಿಗೂ ವಿಷಾದಿಸಲಿಲ್ಲ” ಎಂದು ಪ್ರತಿಭಾ ಹೇಳಿರುವುದಾಗಿ ಡೆಕ್ಕನ್‌ ಹೆರಾಲ್ಡ್ ವರದಿ ಮಾಡಿದೆ.

“ರಾಮಕೃಷ್ಣ ಹೆಗಡೆಯವರು ಅನಾರೋಗ್ಯಕ್ಕೆ ತುತ್ತಾದಾಗ ಅವರೊಂದಿಗಿನ ಸಂಬಂಧವು ಹದಗೆಟ್ಟಿತು. ರಾಮಕೃಷ್ಣ ಹೆಗಡೆಯವರಿಂದ ಪ್ರತಿಭಾ ಅವರನ್ನು ದೂರವಿರಿಸಲು ಹೆಗಡೆಯವರ ಕುಟುಂಬ ಪ್ರಯತ್ನಿಸಿತು. ಹೆಗಡೆಯವರ ಅಂತಿಮ ದಿನಗಳಲ್ಲಿ ಪ್ರತಿಭಾ ಮತ್ತು ಅವರ ಮಕ್ಕಳು ಹೆಗಡೆಯವನ್ನು ಭೇಟಿಯಾಗದಂತೆ ಹೇಗೆ ತಡಲಾಯಿತು ಎಂಬುದರ ಕುರಿತೂ ಸಂದರ್ಶನದಲ್ಲಿ ಮಾತನಾಡಿದ್ದರು” ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಪ್ರತಿಭಾ ಅವರನ್ನು ಸಂದರ್ಶಿಸಿದ ರಾಮಕೃಷ್ಣ ಉಪಾಧ್ಯ ಅವರು ‘ದಿ ಹಿಂದೂ’ಗೆ ಪ್ರತಿಕ್ರಿಯೆ ನೀಡಿದ್ದು, “ಆರಂಭದಲ್ಲಿ ಪೂರ್ಣ ಸಂದರ್ಶನವನ್ನು ಮೇ 22 ರಂದು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಆದರೆ ನಂತರದಲ್ಲಿ ಎಡಿಟ್ ಮಾಡಿ ಪ್ರಕಟಿಸಲಾಯಿತು. ಕನ್ನಡ ಸಂಸ್ಕೃತಿ ಇಲಾಖೆಯಿಂದ ಸಂದರ್ಶನದ ಪ್ರತಿಯನ್ನು ತರಿಸಿಕೊಳ್ಳಲಿದ್ದೇನೆ” ಎಂದಿದ್ದಾರೆ.

ತನಗಿಂತ 35 ವರ್ಷ ದೊಡ್ಡವರಾಗಿದ್ದ ರಾಮಕೃಷ್ಣ ಹೆಗಡೆ ಅವರೊಂದಿಗಿನ ಸಂಬಂಧದ ಬಗ್ಗೆ ಈ ಹಿಂದೆ ಕೆಲವು ಸಂದರ್ಭಗಳಲ್ಲಿ ಪ್ರತಿಭಾ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ತನ್ನ ಭಾಷಣವನ್ನು ಸೆನ್ಸಾರ್ ಮಾಡಲಾಗಿದೆ ಎಂಬ ವರದಿಗಳಿಗೆ ಪ್ರತಿಕ್ರಿಯಿಸಿರುವ ಅವರು, “ನನ್ನ ಜೀವನದ ಆಯ್ಕೆಗಳು ಮತ್ತು ಸವಾಲುಗಳ ಬಗ್ಗೆ ನಾನು ಹೇಳಿದ್ದಕ್ಕೆ ಸಂಸ್ಕೃತಿ ಇಲಾಖೆಯು ಆಕ್ಷೇಪಣೆಯನ್ನು ತೋರಿರುವುದು ವಿಚಿತ್ರವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...