Homeಕರ್ನಾಟಕರಾಮಕೃಷ್ಣ ಹೆಗಡೆ ಜೊತೆಗಿನ ಸಂಬಂಧ ಕುರಿತ ಮಾತಿಗೆ ಕತ್ತರಿ: ಕನ್ನಡ & ಸಂಸ್ಕೃತಿ ಇಲಾಖೆ ನಡೆಗೆ...

ರಾಮಕೃಷ್ಣ ಹೆಗಡೆ ಜೊತೆಗಿನ ಸಂಬಂಧ ಕುರಿತ ಮಾತಿಗೆ ಕತ್ತರಿ: ಕನ್ನಡ & ಸಂಸ್ಕೃತಿ ಇಲಾಖೆ ನಡೆಗೆ ಪ್ರತಿಭಾ ಬೇಸರ

- Advertisement -
- Advertisement -

ಕನ್ನಡ ಸಂಸ್ಕೃತಿ ಇಲಾಖೆಯು ಇತ್ತೀಚೆಗೆ ನಡೆಸಿದ ಸಂವಾದ ಸರಣಿಯಲ್ಲಿ ಮಾತನಾಡಿದ್ದ ಖ್ಯಾತ ಶಾಸ್ತ್ರೀಯ ನೃತ್ಯಗಾರ್ತಿ ಪ್ರತಿಭಾ ಪ್ರಹ್ಲಾದ್ ಅವರ ಕೆಲವು ಮಾತುಗಳಿಗೆ ಕತ್ತರಿ ಪ್ರಯೋಗ ಮಾಡಿ, ಬಳಿಕ ಇಲಾಖೆಯು ಯೂಟ್ಯೂಬ್‌ನಲ್ಲಿ ವಿಡಿಯೊ ಅಪ್‌ಲೋಡ್ ಮಾಡಿದ್ದು, ಪ್ರತಿಭಾ ಅವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರೊಂದಿಗಿನ ಸಂಬಂಧ ಮತ್ತು ಒಂಟಿ ತಾಯಿಯಾಗಿ ತಾವು ಕಂಡ ಅನುಭವಗಳನ್ನು ಅವರು ಹಂಚಿಕೊಂಡಿದ್ದನ್ನು ತೆಗೆದು ಹಾಕಲಾಗಿದೆ. ಎಡಿಟ್ ಮಾಡಿದ ವಿಡಿಯೊ ಪ್ರತಿಯನ್ನೇ ಪ್ರತಿಭಾ ಅವರಿಗೂ ನೀಡಲಾಗಿದೆ ಎಂದು ವರದಿಯಾಗಿದೆ.

“ಸರ್ಕಾರ ಬಯಸಿದರೆ ನಾನು ಮಾತನಾಡಿರುವುದನ್ನು ಸೆನ್ಸಾರ್ ಮಾಡಲಿ, ಆದರೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ನನ್ನ ಭಾಷಣದ ಸಂಪೂರ್ಣ ಧ್ವನಿಮುದ್ರಣ ಪಡೆಯಲು ನಾನು ಅರ್ಹಳಾಗಿದ್ದೇನೆ” ಎಂದಿದ್ದಾರೆ.

ಕನ್ನಡ ಸಂಸ್ಕೃತಿ ಇಲಾಖೆಯು ಆಯೋಜಿಸುತ್ತಿರುವ ‘ಮನೆಯಂಗಳದಲ್ಲಿ ಮಾತುಕಥೆ’ ಎಂಬ ಸಂವಾದ ಸರಣಿಯಲ್ಲಿ ಪ್ರತಿಭಾ ಅವರು ಇತ್ತೀಚೆಗೆ ಮಾತನಾಡಿದ್ದರು. ಈ ಸರಣಿಯಲ್ಲಿ ಸಾಧಕ ಕನ್ನಡಿಗರ ಜೀವನ ಕಥೆಗಳನ್ನು ದಾಖಲಿಸಲಾಗುತ್ತಿದೆ. ಪದ್ಮಶ್ರೀ ಪುರಸ್ಕೃತೆ ಪ್ರತಿಭಾ ಅವರನ್ನು ಮೇ 21ರಂದು ಹಿರಿಯ ಪತ್ರಕರ್ತ ರಾಮಕೃಷ್ಣ ಉಪಾಧ್ಯ ಅವರು ಸಂದರ್ಶಿಸಿ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಪ್ರತಿಭಾ ಅವರು ತಮ್ಮ ನೃತ್ಯ ಬದುಕು, ಕಲಾ ನಿರ್ವಹಣೆ, ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರೊಂದಿಗಿನ ಸಂಬಂಧ ಮತ್ತು ಅವಳಿ ಮಕ್ಕಳಿಗೆ ಒಂಟಿ ತಾಯಿಯಾಗಿ ಇರಲು ನಿರ್ಧರಿಸಿದ್ದು ಸೇರಿದಂತೆ ಹಲವಾರು ಸಂಗತಿಗಳನ್ನು ಹಂಚಿಕೊಂಡಿದ್ದರು.

“ವೈಯಕ್ತಿಕವಾಗಿ, ಮಕ್ಕಳನ್ನು ಹೊಂದಲು ಮದುವೆಯ ಅವಶ್ಯಕತೆಯಿದೆ ಎಂದು ನಾನು ನಂಬುವುದಿಲ್ಲ. ಕುಟುಂಬದ ಹೊರತಾಗಿ ಸಂತೋಷ ಮತ್ತು ದುಃಖಗಳನ್ನು ಹಂಚಿಕೊಳ್ಳಲು ಸಂಗಾತಿಯೂ ಮುಖ್ಯ…. ಆದರೆ, ಇದನ್ನು ಲೆಕ್ಕಿಸದೆ, ಸಮಾಜವು ಪ್ರಗತಿ ಹೊಂದಬೇಕು. ವಿವಿಧ ಮಾದರಿಗಳ ಬಗ್ಗೆ ಯೋಚಿಸಬೇಕು. ಅಂತಹ ಒಂದು ಮಾದರಿಯಲ್ಲಿ ನನ್ನ ಅವಳಿ ಮಕ್ಕಳು ಬೆಳೆದರು. ನಾನು ಒಂಟಿ ತಾಯಿಯಾಗಲು ನಿರ್ಧರಿಸಿದೆ. ಅದಕ್ಕಾಗಿ ನಾನು ಎಂದಿಗೂ ವಿಷಾದಿಸಲಿಲ್ಲ” ಎಂದು ಪ್ರತಿಭಾ ಹೇಳಿರುವುದಾಗಿ ಡೆಕ್ಕನ್‌ ಹೆರಾಲ್ಡ್ ವರದಿ ಮಾಡಿದೆ.

“ರಾಮಕೃಷ್ಣ ಹೆಗಡೆಯವರು ಅನಾರೋಗ್ಯಕ್ಕೆ ತುತ್ತಾದಾಗ ಅವರೊಂದಿಗಿನ ಸಂಬಂಧವು ಹದಗೆಟ್ಟಿತು. ರಾಮಕೃಷ್ಣ ಹೆಗಡೆಯವರಿಂದ ಪ್ರತಿಭಾ ಅವರನ್ನು ದೂರವಿರಿಸಲು ಹೆಗಡೆಯವರ ಕುಟುಂಬ ಪ್ರಯತ್ನಿಸಿತು. ಹೆಗಡೆಯವರ ಅಂತಿಮ ದಿನಗಳಲ್ಲಿ ಪ್ರತಿಭಾ ಮತ್ತು ಅವರ ಮಕ್ಕಳು ಹೆಗಡೆಯವನ್ನು ಭೇಟಿಯಾಗದಂತೆ ಹೇಗೆ ತಡಲಾಯಿತು ಎಂಬುದರ ಕುರಿತೂ ಸಂದರ್ಶನದಲ್ಲಿ ಮಾತನಾಡಿದ್ದರು” ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಪ್ರತಿಭಾ ಅವರನ್ನು ಸಂದರ್ಶಿಸಿದ ರಾಮಕೃಷ್ಣ ಉಪಾಧ್ಯ ಅವರು ‘ದಿ ಹಿಂದೂ’ಗೆ ಪ್ರತಿಕ್ರಿಯೆ ನೀಡಿದ್ದು, “ಆರಂಭದಲ್ಲಿ ಪೂರ್ಣ ಸಂದರ್ಶನವನ್ನು ಮೇ 22 ರಂದು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಆದರೆ ನಂತರದಲ್ಲಿ ಎಡಿಟ್ ಮಾಡಿ ಪ್ರಕಟಿಸಲಾಯಿತು. ಕನ್ನಡ ಸಂಸ್ಕೃತಿ ಇಲಾಖೆಯಿಂದ ಸಂದರ್ಶನದ ಪ್ರತಿಯನ್ನು ತರಿಸಿಕೊಳ್ಳಲಿದ್ದೇನೆ” ಎಂದಿದ್ದಾರೆ.

ತನಗಿಂತ 35 ವರ್ಷ ದೊಡ್ಡವರಾಗಿದ್ದ ರಾಮಕೃಷ್ಣ ಹೆಗಡೆ ಅವರೊಂದಿಗಿನ ಸಂಬಂಧದ ಬಗ್ಗೆ ಈ ಹಿಂದೆ ಕೆಲವು ಸಂದರ್ಭಗಳಲ್ಲಿ ಪ್ರತಿಭಾ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ತನ್ನ ಭಾಷಣವನ್ನು ಸೆನ್ಸಾರ್ ಮಾಡಲಾಗಿದೆ ಎಂಬ ವರದಿಗಳಿಗೆ ಪ್ರತಿಕ್ರಿಯಿಸಿರುವ ಅವರು, “ನನ್ನ ಜೀವನದ ಆಯ್ಕೆಗಳು ಮತ್ತು ಸವಾಲುಗಳ ಬಗ್ಗೆ ನಾನು ಹೇಳಿದ್ದಕ್ಕೆ ಸಂಸ್ಕೃತಿ ಇಲಾಖೆಯು ಆಕ್ಷೇಪಣೆಯನ್ನು ತೋರಿರುವುದು ವಿಚಿತ್ರವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...