Homeಕರ್ನಾಟಕರಾಮಕೃಷ್ಣ ಹೆಗಡೆ ಜೊತೆಗಿನ ಸಂಬಂಧ ಕುರಿತ ಮಾತಿಗೆ ಕತ್ತರಿ: ಕನ್ನಡ & ಸಂಸ್ಕೃತಿ ಇಲಾಖೆ ನಡೆಗೆ...

ರಾಮಕೃಷ್ಣ ಹೆಗಡೆ ಜೊತೆಗಿನ ಸಂಬಂಧ ಕುರಿತ ಮಾತಿಗೆ ಕತ್ತರಿ: ಕನ್ನಡ & ಸಂಸ್ಕೃತಿ ಇಲಾಖೆ ನಡೆಗೆ ಪ್ರತಿಭಾ ಬೇಸರ

- Advertisement -
- Advertisement -

ಕನ್ನಡ ಸಂಸ್ಕೃತಿ ಇಲಾಖೆಯು ಇತ್ತೀಚೆಗೆ ನಡೆಸಿದ ಸಂವಾದ ಸರಣಿಯಲ್ಲಿ ಮಾತನಾಡಿದ್ದ ಖ್ಯಾತ ಶಾಸ್ತ್ರೀಯ ನೃತ್ಯಗಾರ್ತಿ ಪ್ರತಿಭಾ ಪ್ರಹ್ಲಾದ್ ಅವರ ಕೆಲವು ಮಾತುಗಳಿಗೆ ಕತ್ತರಿ ಪ್ರಯೋಗ ಮಾಡಿ, ಬಳಿಕ ಇಲಾಖೆಯು ಯೂಟ್ಯೂಬ್‌ನಲ್ಲಿ ವಿಡಿಯೊ ಅಪ್‌ಲೋಡ್ ಮಾಡಿದ್ದು, ಪ್ರತಿಭಾ ಅವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರೊಂದಿಗಿನ ಸಂಬಂಧ ಮತ್ತು ಒಂಟಿ ತಾಯಿಯಾಗಿ ತಾವು ಕಂಡ ಅನುಭವಗಳನ್ನು ಅವರು ಹಂಚಿಕೊಂಡಿದ್ದನ್ನು ತೆಗೆದು ಹಾಕಲಾಗಿದೆ. ಎಡಿಟ್ ಮಾಡಿದ ವಿಡಿಯೊ ಪ್ರತಿಯನ್ನೇ ಪ್ರತಿಭಾ ಅವರಿಗೂ ನೀಡಲಾಗಿದೆ ಎಂದು ವರದಿಯಾಗಿದೆ.

“ಸರ್ಕಾರ ಬಯಸಿದರೆ ನಾನು ಮಾತನಾಡಿರುವುದನ್ನು ಸೆನ್ಸಾರ್ ಮಾಡಲಿ, ಆದರೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ನನ್ನ ಭಾಷಣದ ಸಂಪೂರ್ಣ ಧ್ವನಿಮುದ್ರಣ ಪಡೆಯಲು ನಾನು ಅರ್ಹಳಾಗಿದ್ದೇನೆ” ಎಂದಿದ್ದಾರೆ.

ಕನ್ನಡ ಸಂಸ್ಕೃತಿ ಇಲಾಖೆಯು ಆಯೋಜಿಸುತ್ತಿರುವ ‘ಮನೆಯಂಗಳದಲ್ಲಿ ಮಾತುಕಥೆ’ ಎಂಬ ಸಂವಾದ ಸರಣಿಯಲ್ಲಿ ಪ್ರತಿಭಾ ಅವರು ಇತ್ತೀಚೆಗೆ ಮಾತನಾಡಿದ್ದರು. ಈ ಸರಣಿಯಲ್ಲಿ ಸಾಧಕ ಕನ್ನಡಿಗರ ಜೀವನ ಕಥೆಗಳನ್ನು ದಾಖಲಿಸಲಾಗುತ್ತಿದೆ. ಪದ್ಮಶ್ರೀ ಪುರಸ್ಕೃತೆ ಪ್ರತಿಭಾ ಅವರನ್ನು ಮೇ 21ರಂದು ಹಿರಿಯ ಪತ್ರಕರ್ತ ರಾಮಕೃಷ್ಣ ಉಪಾಧ್ಯ ಅವರು ಸಂದರ್ಶಿಸಿ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಪ್ರತಿಭಾ ಅವರು ತಮ್ಮ ನೃತ್ಯ ಬದುಕು, ಕಲಾ ನಿರ್ವಹಣೆ, ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರೊಂದಿಗಿನ ಸಂಬಂಧ ಮತ್ತು ಅವಳಿ ಮಕ್ಕಳಿಗೆ ಒಂಟಿ ತಾಯಿಯಾಗಿ ಇರಲು ನಿರ್ಧರಿಸಿದ್ದು ಸೇರಿದಂತೆ ಹಲವಾರು ಸಂಗತಿಗಳನ್ನು ಹಂಚಿಕೊಂಡಿದ್ದರು.

“ವೈಯಕ್ತಿಕವಾಗಿ, ಮಕ್ಕಳನ್ನು ಹೊಂದಲು ಮದುವೆಯ ಅವಶ್ಯಕತೆಯಿದೆ ಎಂದು ನಾನು ನಂಬುವುದಿಲ್ಲ. ಕುಟುಂಬದ ಹೊರತಾಗಿ ಸಂತೋಷ ಮತ್ತು ದುಃಖಗಳನ್ನು ಹಂಚಿಕೊಳ್ಳಲು ಸಂಗಾತಿಯೂ ಮುಖ್ಯ…. ಆದರೆ, ಇದನ್ನು ಲೆಕ್ಕಿಸದೆ, ಸಮಾಜವು ಪ್ರಗತಿ ಹೊಂದಬೇಕು. ವಿವಿಧ ಮಾದರಿಗಳ ಬಗ್ಗೆ ಯೋಚಿಸಬೇಕು. ಅಂತಹ ಒಂದು ಮಾದರಿಯಲ್ಲಿ ನನ್ನ ಅವಳಿ ಮಕ್ಕಳು ಬೆಳೆದರು. ನಾನು ಒಂಟಿ ತಾಯಿಯಾಗಲು ನಿರ್ಧರಿಸಿದೆ. ಅದಕ್ಕಾಗಿ ನಾನು ಎಂದಿಗೂ ವಿಷಾದಿಸಲಿಲ್ಲ” ಎಂದು ಪ್ರತಿಭಾ ಹೇಳಿರುವುದಾಗಿ ಡೆಕ್ಕನ್‌ ಹೆರಾಲ್ಡ್ ವರದಿ ಮಾಡಿದೆ.

“ರಾಮಕೃಷ್ಣ ಹೆಗಡೆಯವರು ಅನಾರೋಗ್ಯಕ್ಕೆ ತುತ್ತಾದಾಗ ಅವರೊಂದಿಗಿನ ಸಂಬಂಧವು ಹದಗೆಟ್ಟಿತು. ರಾಮಕೃಷ್ಣ ಹೆಗಡೆಯವರಿಂದ ಪ್ರತಿಭಾ ಅವರನ್ನು ದೂರವಿರಿಸಲು ಹೆಗಡೆಯವರ ಕುಟುಂಬ ಪ್ರಯತ್ನಿಸಿತು. ಹೆಗಡೆಯವರ ಅಂತಿಮ ದಿನಗಳಲ್ಲಿ ಪ್ರತಿಭಾ ಮತ್ತು ಅವರ ಮಕ್ಕಳು ಹೆಗಡೆಯವನ್ನು ಭೇಟಿಯಾಗದಂತೆ ಹೇಗೆ ತಡಲಾಯಿತು ಎಂಬುದರ ಕುರಿತೂ ಸಂದರ್ಶನದಲ್ಲಿ ಮಾತನಾಡಿದ್ದರು” ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಪ್ರತಿಭಾ ಅವರನ್ನು ಸಂದರ್ಶಿಸಿದ ರಾಮಕೃಷ್ಣ ಉಪಾಧ್ಯ ಅವರು ‘ದಿ ಹಿಂದೂ’ಗೆ ಪ್ರತಿಕ್ರಿಯೆ ನೀಡಿದ್ದು, “ಆರಂಭದಲ್ಲಿ ಪೂರ್ಣ ಸಂದರ್ಶನವನ್ನು ಮೇ 22 ರಂದು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಆದರೆ ನಂತರದಲ್ಲಿ ಎಡಿಟ್ ಮಾಡಿ ಪ್ರಕಟಿಸಲಾಯಿತು. ಕನ್ನಡ ಸಂಸ್ಕೃತಿ ಇಲಾಖೆಯಿಂದ ಸಂದರ್ಶನದ ಪ್ರತಿಯನ್ನು ತರಿಸಿಕೊಳ್ಳಲಿದ್ದೇನೆ” ಎಂದಿದ್ದಾರೆ.

ತನಗಿಂತ 35 ವರ್ಷ ದೊಡ್ಡವರಾಗಿದ್ದ ರಾಮಕೃಷ್ಣ ಹೆಗಡೆ ಅವರೊಂದಿಗಿನ ಸಂಬಂಧದ ಬಗ್ಗೆ ಈ ಹಿಂದೆ ಕೆಲವು ಸಂದರ್ಭಗಳಲ್ಲಿ ಪ್ರತಿಭಾ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ತನ್ನ ಭಾಷಣವನ್ನು ಸೆನ್ಸಾರ್ ಮಾಡಲಾಗಿದೆ ಎಂಬ ವರದಿಗಳಿಗೆ ಪ್ರತಿಕ್ರಿಯಿಸಿರುವ ಅವರು, “ನನ್ನ ಜೀವನದ ಆಯ್ಕೆಗಳು ಮತ್ತು ಸವಾಲುಗಳ ಬಗ್ಗೆ ನಾನು ಹೇಳಿದ್ದಕ್ಕೆ ಸಂಸ್ಕೃತಿ ಇಲಾಖೆಯು ಆಕ್ಷೇಪಣೆಯನ್ನು ತೋರಿರುವುದು ವಿಚಿತ್ರವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...