Homeಕರ್ನಾಟಕರಾಮಕೃಷ್ಣ ಹೆಗಡೆ ಜೊತೆಗಿನ ಸಂಬಂಧ ಕುರಿತ ಮಾತಿಗೆ ಕತ್ತರಿ: ಕನ್ನಡ & ಸಂಸ್ಕೃತಿ ಇಲಾಖೆ ನಡೆಗೆ...

ರಾಮಕೃಷ್ಣ ಹೆಗಡೆ ಜೊತೆಗಿನ ಸಂಬಂಧ ಕುರಿತ ಮಾತಿಗೆ ಕತ್ತರಿ: ಕನ್ನಡ & ಸಂಸ್ಕೃತಿ ಇಲಾಖೆ ನಡೆಗೆ ಪ್ರತಿಭಾ ಬೇಸರ

- Advertisement -
- Advertisement -

ಕನ್ನಡ ಸಂಸ್ಕೃತಿ ಇಲಾಖೆಯು ಇತ್ತೀಚೆಗೆ ನಡೆಸಿದ ಸಂವಾದ ಸರಣಿಯಲ್ಲಿ ಮಾತನಾಡಿದ್ದ ಖ್ಯಾತ ಶಾಸ್ತ್ರೀಯ ನೃತ್ಯಗಾರ್ತಿ ಪ್ರತಿಭಾ ಪ್ರಹ್ಲಾದ್ ಅವರ ಕೆಲವು ಮಾತುಗಳಿಗೆ ಕತ್ತರಿ ಪ್ರಯೋಗ ಮಾಡಿ, ಬಳಿಕ ಇಲಾಖೆಯು ಯೂಟ್ಯೂಬ್‌ನಲ್ಲಿ ವಿಡಿಯೊ ಅಪ್‌ಲೋಡ್ ಮಾಡಿದ್ದು, ಪ್ರತಿಭಾ ಅವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರೊಂದಿಗಿನ ಸಂಬಂಧ ಮತ್ತು ಒಂಟಿ ತಾಯಿಯಾಗಿ ತಾವು ಕಂಡ ಅನುಭವಗಳನ್ನು ಅವರು ಹಂಚಿಕೊಂಡಿದ್ದನ್ನು ತೆಗೆದು ಹಾಕಲಾಗಿದೆ. ಎಡಿಟ್ ಮಾಡಿದ ವಿಡಿಯೊ ಪ್ರತಿಯನ್ನೇ ಪ್ರತಿಭಾ ಅವರಿಗೂ ನೀಡಲಾಗಿದೆ ಎಂದು ವರದಿಯಾಗಿದೆ.

“ಸರ್ಕಾರ ಬಯಸಿದರೆ ನಾನು ಮಾತನಾಡಿರುವುದನ್ನು ಸೆನ್ಸಾರ್ ಮಾಡಲಿ, ಆದರೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ನನ್ನ ಭಾಷಣದ ಸಂಪೂರ್ಣ ಧ್ವನಿಮುದ್ರಣ ಪಡೆಯಲು ನಾನು ಅರ್ಹಳಾಗಿದ್ದೇನೆ” ಎಂದಿದ್ದಾರೆ.

ಕನ್ನಡ ಸಂಸ್ಕೃತಿ ಇಲಾಖೆಯು ಆಯೋಜಿಸುತ್ತಿರುವ ‘ಮನೆಯಂಗಳದಲ್ಲಿ ಮಾತುಕಥೆ’ ಎಂಬ ಸಂವಾದ ಸರಣಿಯಲ್ಲಿ ಪ್ರತಿಭಾ ಅವರು ಇತ್ತೀಚೆಗೆ ಮಾತನಾಡಿದ್ದರು. ಈ ಸರಣಿಯಲ್ಲಿ ಸಾಧಕ ಕನ್ನಡಿಗರ ಜೀವನ ಕಥೆಗಳನ್ನು ದಾಖಲಿಸಲಾಗುತ್ತಿದೆ. ಪದ್ಮಶ್ರೀ ಪುರಸ್ಕೃತೆ ಪ್ರತಿಭಾ ಅವರನ್ನು ಮೇ 21ರಂದು ಹಿರಿಯ ಪತ್ರಕರ್ತ ರಾಮಕೃಷ್ಣ ಉಪಾಧ್ಯ ಅವರು ಸಂದರ್ಶಿಸಿ ಕಾರ್ಯಕ್ರಮ ನಡೆಸಿಕೊಟ್ಟಿದ್ದರು. ಪ್ರತಿಭಾ ಅವರು ತಮ್ಮ ನೃತ್ಯ ಬದುಕು, ಕಲಾ ನಿರ್ವಹಣೆ, ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರೊಂದಿಗಿನ ಸಂಬಂಧ ಮತ್ತು ಅವಳಿ ಮಕ್ಕಳಿಗೆ ಒಂಟಿ ತಾಯಿಯಾಗಿ ಇರಲು ನಿರ್ಧರಿಸಿದ್ದು ಸೇರಿದಂತೆ ಹಲವಾರು ಸಂಗತಿಗಳನ್ನು ಹಂಚಿಕೊಂಡಿದ್ದರು.

“ವೈಯಕ್ತಿಕವಾಗಿ, ಮಕ್ಕಳನ್ನು ಹೊಂದಲು ಮದುವೆಯ ಅವಶ್ಯಕತೆಯಿದೆ ಎಂದು ನಾನು ನಂಬುವುದಿಲ್ಲ. ಕುಟುಂಬದ ಹೊರತಾಗಿ ಸಂತೋಷ ಮತ್ತು ದುಃಖಗಳನ್ನು ಹಂಚಿಕೊಳ್ಳಲು ಸಂಗಾತಿಯೂ ಮುಖ್ಯ…. ಆದರೆ, ಇದನ್ನು ಲೆಕ್ಕಿಸದೆ, ಸಮಾಜವು ಪ್ರಗತಿ ಹೊಂದಬೇಕು. ವಿವಿಧ ಮಾದರಿಗಳ ಬಗ್ಗೆ ಯೋಚಿಸಬೇಕು. ಅಂತಹ ಒಂದು ಮಾದರಿಯಲ್ಲಿ ನನ್ನ ಅವಳಿ ಮಕ್ಕಳು ಬೆಳೆದರು. ನಾನು ಒಂಟಿ ತಾಯಿಯಾಗಲು ನಿರ್ಧರಿಸಿದೆ. ಅದಕ್ಕಾಗಿ ನಾನು ಎಂದಿಗೂ ವಿಷಾದಿಸಲಿಲ್ಲ” ಎಂದು ಪ್ರತಿಭಾ ಹೇಳಿರುವುದಾಗಿ ಡೆಕ್ಕನ್‌ ಹೆರಾಲ್ಡ್ ವರದಿ ಮಾಡಿದೆ.

“ರಾಮಕೃಷ್ಣ ಹೆಗಡೆಯವರು ಅನಾರೋಗ್ಯಕ್ಕೆ ತುತ್ತಾದಾಗ ಅವರೊಂದಿಗಿನ ಸಂಬಂಧವು ಹದಗೆಟ್ಟಿತು. ರಾಮಕೃಷ್ಣ ಹೆಗಡೆಯವರಿಂದ ಪ್ರತಿಭಾ ಅವರನ್ನು ದೂರವಿರಿಸಲು ಹೆಗಡೆಯವರ ಕುಟುಂಬ ಪ್ರಯತ್ನಿಸಿತು. ಹೆಗಡೆಯವರ ಅಂತಿಮ ದಿನಗಳಲ್ಲಿ ಪ್ರತಿಭಾ ಮತ್ತು ಅವರ ಮಕ್ಕಳು ಹೆಗಡೆಯವನ್ನು ಭೇಟಿಯಾಗದಂತೆ ಹೇಗೆ ತಡಲಾಯಿತು ಎಂಬುದರ ಕುರಿತೂ ಸಂದರ್ಶನದಲ್ಲಿ ಮಾತನಾಡಿದ್ದರು” ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಪ್ರತಿಭಾ ಅವರನ್ನು ಸಂದರ್ಶಿಸಿದ ರಾಮಕೃಷ್ಣ ಉಪಾಧ್ಯ ಅವರು ‘ದಿ ಹಿಂದೂ’ಗೆ ಪ್ರತಿಕ್ರಿಯೆ ನೀಡಿದ್ದು, “ಆರಂಭದಲ್ಲಿ ಪೂರ್ಣ ಸಂದರ್ಶನವನ್ನು ಮೇ 22 ರಂದು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಆದರೆ ನಂತರದಲ್ಲಿ ಎಡಿಟ್ ಮಾಡಿ ಪ್ರಕಟಿಸಲಾಯಿತು. ಕನ್ನಡ ಸಂಸ್ಕೃತಿ ಇಲಾಖೆಯಿಂದ ಸಂದರ್ಶನದ ಪ್ರತಿಯನ್ನು ತರಿಸಿಕೊಳ್ಳಲಿದ್ದೇನೆ” ಎಂದಿದ್ದಾರೆ.

ತನಗಿಂತ 35 ವರ್ಷ ದೊಡ್ಡವರಾಗಿದ್ದ ರಾಮಕೃಷ್ಣ ಹೆಗಡೆ ಅವರೊಂದಿಗಿನ ಸಂಬಂಧದ ಬಗ್ಗೆ ಈ ಹಿಂದೆ ಕೆಲವು ಸಂದರ್ಭಗಳಲ್ಲಿ ಪ್ರತಿಭಾ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ತನ್ನ ಭಾಷಣವನ್ನು ಸೆನ್ಸಾರ್ ಮಾಡಲಾಗಿದೆ ಎಂಬ ವರದಿಗಳಿಗೆ ಪ್ರತಿಕ್ರಿಯಿಸಿರುವ ಅವರು, “ನನ್ನ ಜೀವನದ ಆಯ್ಕೆಗಳು ಮತ್ತು ಸವಾಲುಗಳ ಬಗ್ಗೆ ನಾನು ಹೇಳಿದ್ದಕ್ಕೆ ಸಂಸ್ಕೃತಿ ಇಲಾಖೆಯು ಆಕ್ಷೇಪಣೆಯನ್ನು ತೋರಿರುವುದು ವಿಚಿತ್ರವಾಗಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....