Homeಮುಖಪುಟಜನಗಣತಿ, ಎನ್‌ಪಿಆರ್‌ಗೆ ಸಿದ್ಧತೆ: ಹಾಗೇ ಉಳಿದಿರುವ ಸಂದೇಹ, ಆಕ್ಷೇಪಗಳು

ಜನಗಣತಿ, ಎನ್‌ಪಿಆರ್‌ಗೆ ಸಿದ್ಧತೆ: ಹಾಗೇ ಉಳಿದಿರುವ ಸಂದೇಹ, ಆಕ್ಷೇಪಗಳು

- Advertisement -
- Advertisement -

ಭಾರತದ ರಿಜಿಸ್ಟ್ರಾರ್-ಜನರಲ್ (ಆರ್‌ಜಿಐ) ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೊಬೈಲ್ ಅಪ್ಲಿಕೇಶನ್ ಬಳಸಿ ಮೊದಲ ಹಂತದ ಜನಗಣತಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಕ್ಷೇತ್ರ ಪ್ರಯೋಗಗಳನ್ನು (ಫೀಲ್ಡ್ ಟ್ರಯಲ್ಸ್) ನಡೆಸಲು ಸಿದ್ಧತೆ ನಡೆಸುತ್ತಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರ ಹೇಳಿಕೆ ಉಲ್ಲೇಖಿಸಿ ‘ದಿ ಹಿಂದೂ’ ವರದಿ ಮಾಡಿದೆ.

ಕಳೆದ ವರ್ಷ ಏಪ್ರಿಲ್ 1 ರಿಂದ ಮನೆಗಳ ಪಟ್ಟಿ ಮಾಡುವುದು ಮತ್ತು ವಸತಿ ಗಣತಿಯನ್ನು ಒಳಗೊಂಡ ಮೊದಲ ಹಂತವನ್ನು ಎನ್‌ಪಿಆರ್ ಜೊತೆಗೇ ಮಾಡಲು ನಿರ್ಧರಿಸಲಾಗಿತ್ತು. ಆದರೆ ಸಾಂಕ್ರಾಮಿಕ ರೋಗದಿಂದಾಗಿ ಅನಿರ್ದಿಷ್ಟವಾಗಿ ಮುಂದೂಡಲಾಯಿತು. ವ್ಯಾಕ್ಸಿನೇಷನ್ ಡ್ರೈವ್ (ಲಸಿಕಾ ಅಭಿಯಾನ) ಇನ್ನೂ ಆರಂಭಿಕ ಹಂತದಲ್ಲಿರುವ ಕಾರಣ ಈ ವರ್ಷ ಕೂಡ ಪರಿಪೂರ್ಣ ಜನಗಣತಿ ಮತ್ತು ಎನ್‌ಪಿಆರ್ ಪ್ರಕ್ರಿಯೆ ನಡೆಸುವುದು ಅಸಂಭವವಾಗಿದೆ.

ಆದರೂ ಪ್ರತಿಯೊಂದು ಜಿಲ್ಲೆಯಲ್ಲೂ ಒಂದು ಬ್ಲಾಕ್‌ನಲ್ಲಿ 50 ರಿಂದ 60 ಮನೆಗಳನ್ನು ಒಳಗೊಳ್ಳುವ ಪೂರ್ವ ಪರೀಕ್ಷೆಗಳು ಅಥವಾ ಕ್ಷೇತ್ರ ಪ್ರಯೋಗಗಳನ್ನು ಆ್ಯಪ್ ಮೂಲಕ ನಡೆಸಲು ಅಧಿಕಾರಿಗಳು ಯೋಜಿಸುತ್ತಿದ್ದಾರೆ. ಆ್ಯಪ್ ನಲ್ಲಿ ಮನೆ ಪಟ್ಟಿ, ವಸತಿ ಗಣತಿ ಮತ್ತು ಎನ್‌ಪಿಆರ್ ಕುರಿತು ಪ್ರಶ್ನಾವಳಿಗಳು ಇರಲಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

“ಜನಗಣತಿ ಪ್ರಕ್ರಿಯೆಯನ್ನು ನಡೆಸುವ ದಿನಾಂಕಗಳನ್ನು ಇನ್ನೂ ಅಂತಿಮಗೊಳಿಸಿಲ್ಲ. ಆದರೆ ಗಣತಿದಾರರಿಗೆ ಅಪ್ಲಿಕೇಶನ್ ಬಳಸುವ ಬಗ್ಗೆ ತರಬೇತಿ ನೀಡಬೇಕಾಗುತ್ತದೆ. ಅನೇಕ ಗಣತಿದಾರರು ಯುವ ಶಾಲಾ ಶಿಕ್ಷಕರಾಗಿದ್ದು, ಅವರು ಕಾಗದದ ವೇಳಾಪಟ್ಟಿ (ಫಾರ್ಮ್) ಬದಲಿಗೆ ಅಪ್ಲಿಕೇಶನ್ ಅನ್ನು ಬಳಸುವ ನಿರೀಕ್ಷೆಯಿದೆ. ಎಲೆಕ್ಟ್ರಾನಿಕ್ ರೂಪಕ್ಕೆ ಪ್ರೋತ್ಸಾಹ ಧನ ನೀಡಲಾಗುವುದು” ಎಂದು ಅಧಿಕಾರಿ ತಿಳಿಸಿದ್ದಾರೆ.

ಜನಗಣತಿಯ ಎರಡನೇ ಹಂತವೆಂದರೆ ಜನಸಂಖ್ಯೆ ಎಣಿಕೆ.

ಆರ್‌ಜಿಐ, ಜನವರಿ 9, 2020 ರಂದು 31 ಕಾಲಂಗಳನ್ನು ಸೂಚಿಸಿದ್ದು, ಗಣತಿದಾರರು ಮನೆ ಪಟ್ಟಿ ಮತ್ತು ವಸತಿ ಗಣತಿ ಮಾಡುವಾಗ ಈ ಕಾಲಂಗಳಿಗೆ ಜನರ ಪ್ರತಿಕ್ರಿಯೆ ಪಡೆಯಲಿದ್ದಾರೆ.

ಪ್ರಶ್ನೆಗಳು ಪ್ರತಿವಾದಿಗೆ ಎಲ್ಪಿಜಿ ಸಿಲಿಂಡರ್ ಬಳಸುತ್ತಿದ್ದೀರೋ ಅಥವಾ ಕೊಳವೆ ನೈಸರ್ಗಿಕ ಅನಿಲ ಸಂಪರ್ಕವನ್ನು ಹೊಂದಿರುವಿರೋ ಎಂಬಂತಹ ಪ್ರಶ್ನಾವಳಿ ಒಳಗೊಂಡಿದೆ. ರೇಡಿಯೋ, ಟ್ರಾನ್ಸಿಸ್ಟರ್, ಟೆಲಿವಿಷನ್, ಲ್ಯಾಪ್‌ಟಾಪ್, ಕಂಪ್ಯೂಟರ್, ಟೆಲಿಫೋನ್, ಮೊಬೈಲ್ ಫೋನ್ ಅಥವಾ ಸ್ಮಾರ್ಟ್‌ಫೋನ್ ಹೊಂದಿದ್ದೀರಾ ಮತ್ತು ಇಂಟರ್ನೆಟ್ ಸಂಪರ್ಕ ಹೊಂದಿದ್ದೀರಾ ಎಂಬ ಪ್ರಶ್ನೆಗಳನ್ನು ಒಳಗೊಂಡಿದೆ.

ಎನ್‌ಪಿಆರ್‌ನ ಪ್ರಶ್ನೆಗಳನ್ನು ಇನ್ನೂ ಸಾರ್ವಜನಿಕವಾಗಿ ಪ್ರಕಟವಾಗಿಲ್ಲ, ಆದರೆ 2019 ರಲ್ಲಿ ನಡೆಸಿದ ಪೂರ್ವ ಪರೀಕ್ಷೆಯಲ್ಲಿ ತಂದೆ ಮತ್ತು ತಾಯಿಯ ಹುಟ್ಟಿದ ದಿನಾಂಕ ಮತ್ತು ಸ್ಥಳ, ಕೊನೆಯ ವಾಸಸ್ಥಳ ಮತ್ತು ಮಾತೃಭಾಷೆ, ಆಧಾರ್ ನಂಬರ್ (ಐಚ್ಛಿಕ), ಮತದಾರರ ವಿವರ ಎಂಬ ಹೆಚ್ಚುವರಿ ಪ್ರಶ್ನೆಗಳು ಸೇರಿವೆ. ಗುರುತಿನ ಚೀಟಿ, ಮೊಬೈಲ್ ಫೋನ್ ಮತ್ತು ಚಾಲನಾ ಪರವಾನಗಿ ಸಂಖ್ಯೆಗಳ ಕುರಿತೂ ಪ್ರಶ್ನೆಗಳಿವೆ. ಪ್ರತಿಪಕ್ಷ ಆಡಳಿತ ನಡೆಸುವ ರಾಜ್ಯಗಳು ಹೆಚ್ಚುವರಿ ಪ್ರಶ್ನೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿವೆ.

ಎಲೆಕ್ಟ್ರಾನಿಕ್ ಡೇಟಾಬೇಸ್

2010 ಮತ್ತು 2015 ರಲ್ಲಿ, ಎನ್‌ಪಿಆರ್ 14 ಪ್ಯಾರಾಮೀಟರ್‌ಗಳಲ್ಲಿ (ನಿಯತಾಂಕಗಳಲ್ಲಿ) ಮಾತ್ರ ವಿವರಗಳನ್ನು ಸಂಗ್ರಹಿಸಿದೆ. ಇದು ಈಗಾಗಲೇ 119 ಕೋಟಿಗೂ ಹೆಚ್ಚು ನಿವಾಸಿಗಳ ಎಲೆಕ್ಟ್ರಾನಿಕ್ ಡೇಟಾಬೇಸ್ ಹೊಂದಿದೆ.

“ಅಪ್ಲಿಕೇಶನ್ ಎನ್‌ಪಿಆರ್ ವೇಳಾಪಟ್ಟಿಯನ್ನು ಸಹ ಹೊಂದಿರುತ್ತದೆ. ಇದನ್ನು ಹೊರತರುವ ಮೊದಲು, ಆ್ಯಪ್ ಅನ್ನು ತೊಂದರೆಗಳಿಗಾಗಿ ಪರೀಕ್ಷಿಸಬೇಕಾಗಿದೆ, ಮತ್ತು ಕ್ಷೇತ್ರ ಪ್ರಯೋಗಗಳನ್ನು ನಡೆಸಬೇಕಾಗಿದೆ” ಎಂದು ಅಧಿಕಾರಿ ಹೇಳಿದರು.

ಫೆಬ್ರವರಿ 9 ರಂದು, ಆರ್‌ಜಿಐ ಮತ್ತು ಭಾರತದ ಜನಗಣತಿ ಆಯುಕ್ತ ವಿವೇಕ್ ಜೋಶಿ ಅವರು ಎಲ್ಲಾ ರಾಜ್ಯಗಳ ಜನಗಣತಿ ಕಾರ್ಯಾಚರಣೆಗಳ ನಿರ್ದೇಶಕರ ವಾಸ್ತವಿಕ ಸಭೆಯ ಅಧ್ಯಕ್ಷತೆ ವಹಿಸಿ, ಮುಂಬರುವ ಜನಗಣತಿಗೆ ಸಿದ್ಧತೆಗಳನ್ನು ಪರಿಶೀಲಿಸಿದರು, ಅಲ್ಲಿ ಅಪ್ಲಿಕೇಶನ್ ಬಳಸುವ ಕ್ಷೇತ್ರ ಪ್ರಯೋಗಗಳನ್ನು ಚರ್ಚಿಸಲಾಯಿತು.

ಸಭೆಯಲ್ಲಿ ಭಾಗವಹಿಸಿದ ರಾಜ್ಯಗಳ ಜನಗಣತಿ ಕಾರ್ಯಾಚರಣೆಯ ನಿರ್ದೇಶಕರು ದಿ ಹಿಂದೂ ಜೊತೆ ಮಾತನಾಡಿ, “2019 ರ ಪ್ರಯೋಗಗಳ ನಂತರ ಅಪ್ಲಿಕೇಶನ್ ಅನ್ನು ಸುಧಾರಿಸಲಾಗಿದೆ, ಮತ್ತು ಕ್ಷೇತ್ರ ಪ್ರಯೋಗಗಳು ಹೊಸದಾಗಿ ನಡೆಯಲಿದೆ. ನಾವು ಆರ್‌ಜಿಐ ನಿರ್ದೇಶನಗಳಿಗಾಗಿ ಕಾಯುತ್ತಿದ್ದೇವೆ” ಎಂದಿದ್ದಾರೆ.

ಫೆಬ್ರವರಿ 10 ರಂದು ಕೇಂದ್ರ ಗೃಹ ಸಚಿವ ನಿತ್ಯಾನಂದ್ ರಾಯ್ ರಾಜ್ಯಸಭೆಗೆ ಈ ಮಾಹಿತಿ ನೀಡಿದರು, “ದತ್ತಾಂಶ ಸಂಗ್ರಹಣೆಗಾಗಿ ಒಂದು ಅಪ್ಲಿಕೇಶನ್ ಮತ್ತು ಜನಗಣತಿ-ಸಂಬಂಧಿತ ಚಟುವಟಿಕೆಗಳ ನಿರ್ವಹಣೆ ಮತ್ತು ಮೇಲ್ವಿಚಾರಣೆಗಾಗಿ ಜನಗಣತಿ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಲಾಗಿದೆ” ಎಂದರು.

“ಗಣತಿದಾರರು ಮತ್ತು ಇತರ ಜನಗಣತಿ ಕಾರ್ಯಕರ್ತರಿಗೆ ಸೂಚನಾ ಕೈಪಿಡಿಗಳನ್ನು ಸಿದ್ಧಪಡಿಸಲಾಗಿದೆ. ಜನಗಣತಿಯ ಪ್ರಶ್ನಾವಳಿ ಮತ್ತು ವಿಧಾನವನ್ನು ಪರೀಕ್ಷಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಯ್ದ ಪ್ರದೇಶಗಳಲ್ಲಿ 2019 ರ ಆಗಸ್ಟ್ 12 ರಿಂದ 2019 ರ ಸೆಪ್ಟೆಂಬರ್ 30 ರವರೆಗೆ ಜನಗಣತಿಯ ಪೂರ್ವ ಪರೀಕ್ಷೆಯನ್ನು ಕೈಗೊಳ್ಳಲಾಯಿತು” ಎಂದು ಅವರು ಹೇಳಿದರು.

2021-22ರ ಆರ್ಥಿಕ ವರ್ಷದಲ್ಲಿ ಜನಗಣತಿಗಾಗಿ, 73,768 ಕೋಟಿಗಳನ್ನು ಮೀಸಲಿಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಘೋಷಿಸಿದರು.

ಎನ್‌ಪಿಆರ್ ಪ್ರಕ್ರಿಯೆಯನ್ನು ಅನೇಕ ರಾಜ್ಯಗಳು ಮತ್ತು ನಾಗರಿಕರ ಗುಂಪುಗಳು ವಿರೋಧಿಸಿವೆ, ಏಕೆಂದರೆ ಪೌರತ್ವ ನಿಯಮಗಳು 2003 ಇದನ್ನು ಭಾರತೀಯ ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಐಸಿ) ಅಥವಾ ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ರಚನೆಗೆ ಲಿಂಕ್ ಮಾಡುತ್ತದೆ. ಮುಸ್ಲಿಮರನ್ನು ಹೊರತುಪಡಿಸುವ 2019 ರ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಅಂಗೀಕಾರದೊಂದಿಗೆ, ಎನ್‌ಪಿಆರ್-ಎನ್‌ಆರ್‌ಸಿಯ ಭಯವು ಸಾವಿರಾರು ಜನರನ್ನು ಬೀದಿಗಿಳಿಸಿತ್ತು.. ಎನ್‌ಆರ್‌ಸಿ ಮತ್ತು ಎನ್‌ಪಿಆರ್ ನಡುವೆ ಸಂಬಂಧವಿದೆ ಎಂಬ ಆರೋಪವನ್ನು ಸರ್ಕಾರ ನಿರಾಕರಿಸಿದೆ.

ಡಿಸೆಂಬರ್ 11, 2019 ರಂದು ಸಂಸತ್ತು ಸಿಎಎ ಅಂಗೀಕರಿಸಿದ ನಂತರದ ದಿನಗಳಲ್ಲಿ ವಿವಿಧ ಘಟನೆಗಳಲ್ಲಿ 69 ಜನರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ದಾಖಲೆರಹಿತ ಮುಸ್ಲಿಮೇತರ ಸಮುದಾಯಗಳಿಗೆ ಧರ್ಮದ ಆಧಾರದ ಮೇಲೆ ಪೌರತ್ವವನ್ನು ಸಿಎಎ ಅನುಮತಿಸುತ್ತದೆ.


ಇದನ್ನೂ ಓದಿ: ಆಧಾರರಹಿತ ಕ್ಷುಲ್ಲಕ ದೇಶದ್ರೋಹ ಪ್ರಕರಣಗಳ ಇತ್ತೀಚಿನ 10 ಉದಾಹರಣೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...