Homeಮುಖಪುಟಜನಗಣತಿ, ಎನ್‌ಪಿಆರ್ ಫೀಲ್ಡ್ ಟ್ರಯಲ್ಸ್‌ಗೆ ಸಿದ್ಧತೆ: ಹಾಗೇ ಉಳಿದಿರುವ ಸಂದೇಹ, ಆಕ್ಷೇಪಗಳು

ಜನಗಣತಿ, ಎನ್‌ಪಿಆರ್ ಫೀಲ್ಡ್ ಟ್ರಯಲ್ಸ್‌ಗೆ ಸಿದ್ಧತೆ: ಹಾಗೇ ಉಳಿದಿರುವ ಸಂದೇಹ, ಆಕ್ಷೇಪಗಳು

- Advertisement -
- Advertisement -

ಭಾರತದ ರಿಜಿಸ್ಟ್ರಾರ್-ಜನರಲ್ (ಆರ್‌ಜಿಐ) ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೊಬೈಲ್ ಅಪ್ಲಿಕೇಶನ್ ಬಳಸಿ ಮೊದಲ ಹಂತದ ಜನಗಣತಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಕ್ಷೇತ್ರ ಪ್ರಯೋಗಗಳನ್ನು (ಫೀಲ್ಡ್ ಟ್ರಯಲ್ಸ್) ನಡೆಸಲು ಸಿದ್ಧತೆ ನಡೆಸುತ್ತಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ’ದಿ ಹಿಂದೂ’ಗೆ ತಿಳಿಸಿದ್ದಾರೆ.

ಕಳೆದ ವರ್ಷ ಏಪ್ರಿಲ್ 1 ರಿಂದ ಮನೆಗಳ ಪಟ್ಟಿ ಮಾಡುವುದು ಮತ್ತು ವಸತಿ ಗಣತಿಯನ್ನು ಒಳಗೊಂಡ ಮೊದಲ ಹಂತವನ್ನು ಎನ್‌ಪಿಆರ್ ಜೊತೆಗೇ ಮಾಡಲು ನಿರ್ಧರಿಸಲಾಗಿತ್ತು. ಆದರೆ ಸಾಂಕ್ರಾಮಿಕ ರೋಗದಿಂದಾಗಿ ಅನಿರ್ದಿಷ್ಟವಾಗಿ ಮುಂದೂಡಲಾಯಿತು. ವ್ಯಾಕ್ಸಿನೇಷನ್ ಡ್ರೈವ್ (ಲಸಿಕಾ ಅಭಿಯಾನ) ಇನ್ನೂ ಆರಂಭಿಕ ಹಂತದಲ್ಲಿರುವ ಕಾರಣ ಈ ವರ್ಷ ಕೂಡ ಪರಿಪೂರ್ಣ ಜನಗಣತಿ ಮತ್ತು ಎನ್‌ಪಿಆರ್ ಪ್ರಕ್ರಿಯೆ ನಡೆಸುವುದು ಅಸಂಭವವಾಗಿದೆ.

ಆದಾಗ್ಯೂ, ಪ್ರತಿಯೊಂದು ಜಿಲ್ಲೆಯಲ್ಲೂ ಒಂದು ಬ್ಲಾಕ್‌ನಲ್ಲಿ 50 ರಿಂದ 60 ಮನೆಗಳನ್ನು ಒಳಗೊಳ್ಳುವ ಪೂರ್ವ ಪರೀಕ್ಷೆಗಳು ಅಥವಾ ಕ್ಷೇತ್ರ ಪ್ರಯೋಗಗಳನ್ನು ಆಪ್ ಮೂಲಕ ನಡೆಸಲು ಅಧಿಕಾರಿಗಳು ಯೋಜಿಸುತ್ತಿದ್ದಾರೆ. ಆಪ್ ನಲ್ಲಿ ಮನೆ ಪಟ್ಟಿ, ವಸತಿ ಗಣತಿ ಮತ್ತು ಎನ್‌ಪಿಆರ್ ಕುರಿತು ಪ್ರಶ್ನಾವಳಿಗಳು ಇರಲಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

“ಜನಗಣತಿ ಪ್ರಕ್ರಿಯೆಯನ್ನು ನಡೆಸುವ ದಿನಾಂಕಗಳನ್ನು ಇನ್ನೂ ಅಂತಿಮಗೊಳಿಸಿಲ್ಲ. ಆದರೆ ಗಣತಿದಾರರಿಗೆ ಅಪ್ಲಿಕೇಶನ್ ಬಳಸುವ ಬಗ್ಗೆ ತರಬೇತಿ ನೀಡಬೇಕಾಗುತ್ತದೆ. ಅನೇಕ ಗಣತಿದಾರರು ಯುವ ಶಾಲಾ ಶಿಕ್ಷಕರಾಗಿದ್ದು, ಅವರು ಕಾಗದದ ವೇಳಾಪಟ್ಟಿ (ಫಾರ್ಮ್) ಬದಲಿಗೆ ಅಪ್ಲಿಕೇಶನ್ ಅನ್ನು ಬಳಸುವ ನಿರೀಕ್ಷೆಯಿದೆ. ಎಲೆಕ್ಟ್ರಾನಿಕ್ ರೂಪಕ್ಕೆ ಪ್ರೋತ್ಸಾಹ ಧನ ನೀಡಲಾಗುವುದು” ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಕೇರಳ: ಶಬರಿಮಲೆ ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರ ಮೇಲಿನ ಪ್ರಕರಣ ರದ್ದು

ಜನಗಣತಿಯ ಎರಡನೇ ಹಂತವೆಂದರೆ ಜನಸಂಖ್ಯೆ ಎಣಿಕೆ.

ಆರ್‌ಜಿಐ, ಜನವರಿ 9, 2020 ರಂದು 31 ಕಾಲಂಗಳನ್ನು ಸೂಚಿಸಿದ್ದು, ಗಣತಿದಾರರು ಮನೆ ಪಟ್ಟಿ ಮತ್ತು ವಸತಿ ಗಣತಿ ಮಾಡುವಾಗ ಈ ಕಾಲಂಗಳಿಗೆ ಜನರ ಪ್ರತಿಕ್ರಿಯೆ ಪಡೆಯಲಿದ್ದಾರೆ.

ಪ್ರಶ್ನೆಗಳು ಪ್ರತಿವಾದಿಗೆ ಎಲ್‌ಪಿಜಿ ಸಿಲಿಂಡರ್ ಬಳಸುತ್ತಿದ್ದೀರೋ ಅಥವಾ ಕೊಳವೆ ನೈಸರ್ಗಿಕ ಅನಿಲ ಸಂಪರ್ಕವನ್ನು ಹೊಂದಿರುವಿರೋ ಎಂಬಂತಹ ಪ್ರಶ್ನೆಗಳನ್ನು ಪ್ರಶ್ನಾವಳಿ ಒಳಗೊಂಡಿದೆ. ರೇಡಿಯೋ, ಟ್ರಾನ್ಸಿಸ್ಟರ್, ಟೆಲಿವಿಷನ್, ಲ್ಯಾಪ್‌ಟಾಪ್, ಕಂಪ್ಯೂಟರ್, ಟೆಲಿಫೋನ್, ಮೊಬೈಲ್ ಫೋನ್ ಅಥವಾ ಸ್ಮಾರ್ಟ್‌ಫೋನ್ ಹೊಂದಿದ್ದೀರಾ ಮತ್ತು ಇಂಟರ್ನೆಟ್ ಸಂಪರ್ಕ ಹೊಂದಿದ್ದೀರಾ ಎಂಬ ಪ್ರಶ್ನೆಗಳನ್ನು ಒಳಗೊಂಡಿದೆ.

ಎನ್‌ಪಿಆರ್‌ನ ಪ್ರಶ್ನೆಗಳು ಇನ್ನೂ ಸಾರ್ವಜನಿಕವಾಗಿ ಪ್ರಕಟವಾಗಿಲ್ಲ, ಆದರೆ 2019 ರಲ್ಲಿ ನಡೆಸಿದ ಪೂರ್ವ ಪರೀಕ್ಷೆಯಲ್ಲಿ ತಂದೆ ಮತ್ತು ತಾಯಿಯ ಹುಟ್ಟಿದ ದಿನಾಂಕ ಮತ್ತು ಸ್ಥಳ, ಕೊನೆಯ ವಾಸಸ್ಥಳ ಮತ್ತು ಮಾತೃಭಾಷ, ಆಧಾರ್ ನಂಬರ್ (ಆಪ್ಶನಲ್), ಮತದಾರರ ವಿವರ ಎಂಬ ಹೆಚ್ಚುವರಿ ಪ್ರಶ್ನೆಗಳು ಸೇರಿವೆ. ಗುರುತಿನ ಚೀಟಿ, ಮೊಬೈಲ್ ಫೋನ್ ಮತ್ತು ಚಾಲನಾ ಪರವಾನಗಿ ಸಂಖ್ಯೆಗಳ ಕುರಿತೂ ಪ್ರಶ್ನೆಗಳಿವೆ. ಪ್ರತಿಪಕ್ಷ ಆಡಳಿತ ನಡೆಸುವ ರಾಜ್ಯಗಳು ಹೆಚ್ಚುವರಿ ಪ್ರಶ್ನೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಸಿಎಎ ಜಾರಿ ಮಾಡುವುದಿಲ್ಲ: ಅಮಿತ್ ಶಾಗೆ ಸ್ಪಷ್ಟ ಉತ್ತರ ನೀಡಿದ ಕೇರಳ ಮುಖ್ಯಮಂತ್ರಿ

ಎಲೆಕ್ಟ್ರಾನಿಕ್ ಡೇಟಾಬೇಸ್

2010 ಮತ್ತು 2015 ರಲ್ಲಿ, ಎನ್‌ಪಿಆರ್ 14 ಪ್ಯಾರಾಮೀಟರ್‌ಗಳಲ್ಲಿ (ನಿಯತಾಂಕಗಳಲ್ಲಿ) ಮಾತ್ರ ವಿವರಗಳನ್ನು ಸಂಗ್ರಹಿಸಿದೆ. ಇದು ಈಗಾಗಲೇ 119 ಕೋಟಿಗೂ ಹೆಚ್ಚು ನಿವಾಸಿಗಳ ಎಲೆಕ್ಟ್ರಾನಿಕ್ ಡೇಟಾಬೇಸ್ ಹೊಂದಿದೆ.

ಅಪ್ಲಿಕೇಶನ್ ಎನ್‌ಪಿಆರ್ ವೇಳಾಪಟ್ಟಿಯನ್ನು ಸಹ ಹೊಂದಿರುತ್ತದೆ. ಇದನ್ನು ಹೊರತರುವ ಮೊದಲು, ಆಪ್ ಅನ್ನು ತೊಂದರೆಗಳಿಗಾಗಿ ಪರೀಕ್ಷಿಸಬೇಕಾಗಿದೆ, ಮತ್ತು ಕ್ಷೇತ್ರ ಪ್ರಯೋಗಗಳನ್ನು ನಡೆಸಬೇಕಾಗಿದೆ, ಎಂದು ಅಧಿಕಾರಿ ಹೇಳಿದರು.

ಫೆಬ್ರವರಿ 9 ರಂದು, ಆರ್‌ಜಿಐ ಮತ್ತು ಭಾರತದ ಜನಗಣತಿ ಆಯುಕ್ತ ವಿವೇಕ್ ಜೋಶಿ ಅವರು ಎಲ್ಲಾ ರಾಜ್ಯಗಳ ಜನಗಣತಿ ಕಾರ್ಯಾಚರಣೆಗಳ ನಿರ್ದೇಶಕರ ವಾಸ್ತವಿಕ ಸಭೆಯ ಅಧ್ಯಕ್ಷತೆ ವಹಿಸಿ, ಮುಂಬರುವ ಜನಗಣತಿಗೆ ಸಿದ್ಧತೆಗಳನ್ನು ಪರಿಶೀಲಿಸಿದರು. ಅಲ್ಲಿ ಅಪ್ಲಿಕೇಶನ್ ಬಳಸುವ ಕ್ಷೇತ್ರ ಪ್ರಯೋಗಗಳನ್ನು ಚರ್ಚಿಸಲಾಯಿತು.

ಸಭೆಯಲ್ಲಿ ಭಾಗವಹಿಸಿದ ರಾಜ್ಯಗಳ ಜನಗಣತಿ ಕಾರ್ಯಾಚರಣೆಯ ನಿರ್ದೇಶಕರು ದಿ ಹಿಂದೂಗೆ, 2019 ರ ಪ್ರಯೋಗಗಳ ನಂತರ ಅಪ್ಲಿಕೇಶನ್ ಅನ್ನು ಸುಧಾರಿಸಲಾಗಿದೆ ಮತ್ತು ಕ್ಷೇತ್ರ ಪ್ರಯೋಗಗಳು ಹೊಸದಾಗಿ ನಡೆಯಲಿದೆ. ನಾವು ಆರ್‌ಜಿಐ ನಿರ್ದೇಶನಗಳಿಗಾಗಿ ಕಾಯುತ್ತಿದ್ದೇವೆ; ಎಂದಿದ್ದಾರೆ.

ಫೆಬ್ರವರಿ 10 ರಂದು ಕೇಂದ್ರ ಗೃಹ ಸಚಿವ ನಿತ್ಯಾನಂದ್ ರಾಯ್ ರಾಜ್ಯಸಭೆಗೆ ಈ ಮಾಹಿತಿ ನೀಡಿದರು. “ದತ್ತಾಂಶ ಸಂಗ್ರಹಣೆಗಾಗಿ ಒಂದು ಅಪ್ಲಿಕೇಶನ್ ಮತ್ತು ಜನಗಣತಿ-ಸಂಬಂಧಿತ ಚಟುವಟಿಕೆಗಳ ನಿರ್ವಹಣೆ ಮತ್ತು ಮೇಲ್ವಿಚಾರಣೆಗಾಗಿ ಜನಗಣತಿ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಲಾಗಿದೆ” ಎಂದರು.

“ಗಣತಿದಾರರು ಮತ್ತು ಇತರ ಜನಗಣತಿ ಕಾರ್ಯಕರ್ತರಿಗೆ ಸೂಚನಾ ಕೈಪಿಡಿಗಳನ್ನು ಸಿದ್ಧಪಡಿಸಲಾಗಿದೆ. ಜನಗಣತಿಯ ಪ್ರಶ್ನಾವಳಿ ಮತ್ತು ವಿಧಾನವನ್ನು ಪರೀಕ್ಷಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಯ್ದ ಪ್ರದೇಶಗಳಲ್ಲಿ 2019 ರ ಆಗಸ್ಟ್ 12 ರಿಂದ 2019 ರ ಸೆಪ್ಟೆಂಬರ್ 30 ರವರೆಗೆ ಜನಗಣತಿಯ ಪೂರ್ವ ಪರೀಕ್ಷೆಯನ್ನು ಕೈಗೊಳ್ಳಲಾಯಿತು ಎಂದು ಅವರು ಹೇಳಿದರು.

2021-22ರ ಆರ್ಥಿಕ ವರ್ಷದಲ್ಲಿ ಜನಗಣತಿಗಾಗಿ, 73,768 ಕೋಟಿಗಳನ್ನು ಮೀಸಲಿಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಘೋಷಿಸಿದರು.

ಎನ್‌ಪಿಆರ್ ಪ್ರಕ್ರಿಯೆಯನ್ನು ಅನೇಕ ರಾಜ್ಯಗಳು ಮತ್ತು ನಾಗರಿಕರ ಗುಂಪುಗಳು ವಿರೋಧಿಸಿವೆ. ಏಕೆಂದರೆ ಪೌರತ್ವ ನಿಯಮಗಳು 2003, ಇದನ್ನು ಭಾರತೀಯ ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಐಸಿ) ಅಥವಾ ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ರಚನೆಗೆ ಲಿಂಕ್ ಮಾಡುತ್ತದೆ. ಮುಸ್ಲಿಮರನ್ನು ಹೊರತುಪಡಿಸುವ 2019 ರ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಅಂಗೀಕಾರದೊಂದಿಗೆ, ಎನ್‌ಪಿಆರ್-ಎನ್‌ಆರ್‌ಸಿಯ ಭಯವು ಸಾವಿರಾರು ಜನರನ್ನು ಬೀದಿಗಿಳಿಸಿತ್ತು. ಎನ್‌ಆರ್‌ಸಿ ಮತ್ತು ಎನ್‌ಪಿಆರ್ ನಡುವೆ ಸಂಬಂಧವಿದೆ ಎಂಬ ಆರೋವನ್ನು ಸರ್ಕಾರ ನಿರಾಕರಿಸಿದೆ.

ಡಿಸೆಂಬರ್ 11, 2019 ರಂದು ಸಂಸತ್ತು ಸಿಎಎ ಅಂಗೀಕರಿಸಿದ ನಂತರದ ದಿನಗಳಲ್ಲಿ ವಿವಿಧ ಘಟನೆಗಳಲ್ಲಿ 69 ಜನರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ದಾಖಲೆರಹಿತ ಮುಸ್ಲಿಮೇತರ ಸಮುದಾಯಗಳಿಗೆ ಧರ್ಮದ ಆಧಾರದ ಮೇಲೆ ಪೌರತ್ವವನ್ನು ಸಿಎಎ ಅನುಮತಿಸುತ್ತದೆ.


ಇದನ್ನೂ ಓದಿ: ಎನ್‌ಆರ್‌ಸಿ ಗುಮ್ಮ: ಬೆಂಗಳೂರಿನಲ್ಲಿ ಭಾರತೀಯರು ಬೀದಿಗೆ – ಎನ್‌ಆರ್‌ಸಿ, ಸಿಎಎ ಅಪಾಯವನ್ನು ಸಾಬೀತುಪಡಿಸಿದ ಬೆಂಗಳೂರು ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....