Homeಮುಖಪುಟಜನಗಣತಿ, ಎನ್‌ಪಿಆರ್ ಫೀಲ್ಡ್ ಟ್ರಯಲ್ಸ್‌ಗೆ ಸಿದ್ಧತೆ: ಹಾಗೇ ಉಳಿದಿರುವ ಸಂದೇಹ, ಆಕ್ಷೇಪಗಳು

ಜನಗಣತಿ, ಎನ್‌ಪಿಆರ್ ಫೀಲ್ಡ್ ಟ್ರಯಲ್ಸ್‌ಗೆ ಸಿದ್ಧತೆ: ಹಾಗೇ ಉಳಿದಿರುವ ಸಂದೇಹ, ಆಕ್ಷೇಪಗಳು

- Advertisement -
- Advertisement -

ಭಾರತದ ರಿಜಿಸ್ಟ್ರಾರ್-ಜನರಲ್ (ಆರ್‌ಜಿಐ) ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೊಬೈಲ್ ಅಪ್ಲಿಕೇಶನ್ ಬಳಸಿ ಮೊದಲ ಹಂತದ ಜನಗಣತಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಕ್ಷೇತ್ರ ಪ್ರಯೋಗಗಳನ್ನು (ಫೀಲ್ಡ್ ಟ್ರಯಲ್ಸ್) ನಡೆಸಲು ಸಿದ್ಧತೆ ನಡೆಸುತ್ತಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ’ದಿ ಹಿಂದೂ’ಗೆ ತಿಳಿಸಿದ್ದಾರೆ.

ಕಳೆದ ವರ್ಷ ಏಪ್ರಿಲ್ 1 ರಿಂದ ಮನೆಗಳ ಪಟ್ಟಿ ಮಾಡುವುದು ಮತ್ತು ವಸತಿ ಗಣತಿಯನ್ನು ಒಳಗೊಂಡ ಮೊದಲ ಹಂತವನ್ನು ಎನ್‌ಪಿಆರ್ ಜೊತೆಗೇ ಮಾಡಲು ನಿರ್ಧರಿಸಲಾಗಿತ್ತು. ಆದರೆ ಸಾಂಕ್ರಾಮಿಕ ರೋಗದಿಂದಾಗಿ ಅನಿರ್ದಿಷ್ಟವಾಗಿ ಮುಂದೂಡಲಾಯಿತು. ವ್ಯಾಕ್ಸಿನೇಷನ್ ಡ್ರೈವ್ (ಲಸಿಕಾ ಅಭಿಯಾನ) ಇನ್ನೂ ಆರಂಭಿಕ ಹಂತದಲ್ಲಿರುವ ಕಾರಣ ಈ ವರ್ಷ ಕೂಡ ಪರಿಪೂರ್ಣ ಜನಗಣತಿ ಮತ್ತು ಎನ್‌ಪಿಆರ್ ಪ್ರಕ್ರಿಯೆ ನಡೆಸುವುದು ಅಸಂಭವವಾಗಿದೆ.

ಆದಾಗ್ಯೂ, ಪ್ರತಿಯೊಂದು ಜಿಲ್ಲೆಯಲ್ಲೂ ಒಂದು ಬ್ಲಾಕ್‌ನಲ್ಲಿ 50 ರಿಂದ 60 ಮನೆಗಳನ್ನು ಒಳಗೊಳ್ಳುವ ಪೂರ್ವ ಪರೀಕ್ಷೆಗಳು ಅಥವಾ ಕ್ಷೇತ್ರ ಪ್ರಯೋಗಗಳನ್ನು ಆಪ್ ಮೂಲಕ ನಡೆಸಲು ಅಧಿಕಾರಿಗಳು ಯೋಜಿಸುತ್ತಿದ್ದಾರೆ. ಆಪ್ ನಲ್ಲಿ ಮನೆ ಪಟ್ಟಿ, ವಸತಿ ಗಣತಿ ಮತ್ತು ಎನ್‌ಪಿಆರ್ ಕುರಿತು ಪ್ರಶ್ನಾವಳಿಗಳು ಇರಲಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

“ಜನಗಣತಿ ಪ್ರಕ್ರಿಯೆಯನ್ನು ನಡೆಸುವ ದಿನಾಂಕಗಳನ್ನು ಇನ್ನೂ ಅಂತಿಮಗೊಳಿಸಿಲ್ಲ. ಆದರೆ ಗಣತಿದಾರರಿಗೆ ಅಪ್ಲಿಕೇಶನ್ ಬಳಸುವ ಬಗ್ಗೆ ತರಬೇತಿ ನೀಡಬೇಕಾಗುತ್ತದೆ. ಅನೇಕ ಗಣತಿದಾರರು ಯುವ ಶಾಲಾ ಶಿಕ್ಷಕರಾಗಿದ್ದು, ಅವರು ಕಾಗದದ ವೇಳಾಪಟ್ಟಿ (ಫಾರ್ಮ್) ಬದಲಿಗೆ ಅಪ್ಲಿಕೇಶನ್ ಅನ್ನು ಬಳಸುವ ನಿರೀಕ್ಷೆಯಿದೆ. ಎಲೆಕ್ಟ್ರಾನಿಕ್ ರೂಪಕ್ಕೆ ಪ್ರೋತ್ಸಾಹ ಧನ ನೀಡಲಾಗುವುದು” ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಕೇರಳ: ಶಬರಿಮಲೆ ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರ ಮೇಲಿನ ಪ್ರಕರಣ ರದ್ದು

ಜನಗಣತಿಯ ಎರಡನೇ ಹಂತವೆಂದರೆ ಜನಸಂಖ್ಯೆ ಎಣಿಕೆ.

ಆರ್‌ಜಿಐ, ಜನವರಿ 9, 2020 ರಂದು 31 ಕಾಲಂಗಳನ್ನು ಸೂಚಿಸಿದ್ದು, ಗಣತಿದಾರರು ಮನೆ ಪಟ್ಟಿ ಮತ್ತು ವಸತಿ ಗಣತಿ ಮಾಡುವಾಗ ಈ ಕಾಲಂಗಳಿಗೆ ಜನರ ಪ್ರತಿಕ್ರಿಯೆ ಪಡೆಯಲಿದ್ದಾರೆ.

ಪ್ರಶ್ನೆಗಳು ಪ್ರತಿವಾದಿಗೆ ಎಲ್‌ಪಿಜಿ ಸಿಲಿಂಡರ್ ಬಳಸುತ್ತಿದ್ದೀರೋ ಅಥವಾ ಕೊಳವೆ ನೈಸರ್ಗಿಕ ಅನಿಲ ಸಂಪರ್ಕವನ್ನು ಹೊಂದಿರುವಿರೋ ಎಂಬಂತಹ ಪ್ರಶ್ನೆಗಳನ್ನು ಪ್ರಶ್ನಾವಳಿ ಒಳಗೊಂಡಿದೆ. ರೇಡಿಯೋ, ಟ್ರಾನ್ಸಿಸ್ಟರ್, ಟೆಲಿವಿಷನ್, ಲ್ಯಾಪ್‌ಟಾಪ್, ಕಂಪ್ಯೂಟರ್, ಟೆಲಿಫೋನ್, ಮೊಬೈಲ್ ಫೋನ್ ಅಥವಾ ಸ್ಮಾರ್ಟ್‌ಫೋನ್ ಹೊಂದಿದ್ದೀರಾ ಮತ್ತು ಇಂಟರ್ನೆಟ್ ಸಂಪರ್ಕ ಹೊಂದಿದ್ದೀರಾ ಎಂಬ ಪ್ರಶ್ನೆಗಳನ್ನು ಒಳಗೊಂಡಿದೆ.

ಎನ್‌ಪಿಆರ್‌ನ ಪ್ರಶ್ನೆಗಳು ಇನ್ನೂ ಸಾರ್ವಜನಿಕವಾಗಿ ಪ್ರಕಟವಾಗಿಲ್ಲ, ಆದರೆ 2019 ರಲ್ಲಿ ನಡೆಸಿದ ಪೂರ್ವ ಪರೀಕ್ಷೆಯಲ್ಲಿ ತಂದೆ ಮತ್ತು ತಾಯಿಯ ಹುಟ್ಟಿದ ದಿನಾಂಕ ಮತ್ತು ಸ್ಥಳ, ಕೊನೆಯ ವಾಸಸ್ಥಳ ಮತ್ತು ಮಾತೃಭಾಷ, ಆಧಾರ್ ನಂಬರ್ (ಆಪ್ಶನಲ್), ಮತದಾರರ ವಿವರ ಎಂಬ ಹೆಚ್ಚುವರಿ ಪ್ರಶ್ನೆಗಳು ಸೇರಿವೆ. ಗುರುತಿನ ಚೀಟಿ, ಮೊಬೈಲ್ ಫೋನ್ ಮತ್ತು ಚಾಲನಾ ಪರವಾನಗಿ ಸಂಖ್ಯೆಗಳ ಕುರಿತೂ ಪ್ರಶ್ನೆಗಳಿವೆ. ಪ್ರತಿಪಕ್ಷ ಆಡಳಿತ ನಡೆಸುವ ರಾಜ್ಯಗಳು ಹೆಚ್ಚುವರಿ ಪ್ರಶ್ನೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಸಿಎಎ ಜಾರಿ ಮಾಡುವುದಿಲ್ಲ: ಅಮಿತ್ ಶಾಗೆ ಸ್ಪಷ್ಟ ಉತ್ತರ ನೀಡಿದ ಕೇರಳ ಮುಖ್ಯಮಂತ್ರಿ

ಎಲೆಕ್ಟ್ರಾನಿಕ್ ಡೇಟಾಬೇಸ್

2010 ಮತ್ತು 2015 ರಲ್ಲಿ, ಎನ್‌ಪಿಆರ್ 14 ಪ್ಯಾರಾಮೀಟರ್‌ಗಳಲ್ಲಿ (ನಿಯತಾಂಕಗಳಲ್ಲಿ) ಮಾತ್ರ ವಿವರಗಳನ್ನು ಸಂಗ್ರಹಿಸಿದೆ. ಇದು ಈಗಾಗಲೇ 119 ಕೋಟಿಗೂ ಹೆಚ್ಚು ನಿವಾಸಿಗಳ ಎಲೆಕ್ಟ್ರಾನಿಕ್ ಡೇಟಾಬೇಸ್ ಹೊಂದಿದೆ.

ಅಪ್ಲಿಕೇಶನ್ ಎನ್‌ಪಿಆರ್ ವೇಳಾಪಟ್ಟಿಯನ್ನು ಸಹ ಹೊಂದಿರುತ್ತದೆ. ಇದನ್ನು ಹೊರತರುವ ಮೊದಲು, ಆಪ್ ಅನ್ನು ತೊಂದರೆಗಳಿಗಾಗಿ ಪರೀಕ್ಷಿಸಬೇಕಾಗಿದೆ, ಮತ್ತು ಕ್ಷೇತ್ರ ಪ್ರಯೋಗಗಳನ್ನು ನಡೆಸಬೇಕಾಗಿದೆ, ಎಂದು ಅಧಿಕಾರಿ ಹೇಳಿದರು.

ಫೆಬ್ರವರಿ 9 ರಂದು, ಆರ್‌ಜಿಐ ಮತ್ತು ಭಾರತದ ಜನಗಣತಿ ಆಯುಕ್ತ ವಿವೇಕ್ ಜೋಶಿ ಅವರು ಎಲ್ಲಾ ರಾಜ್ಯಗಳ ಜನಗಣತಿ ಕಾರ್ಯಾಚರಣೆಗಳ ನಿರ್ದೇಶಕರ ವಾಸ್ತವಿಕ ಸಭೆಯ ಅಧ್ಯಕ್ಷತೆ ವಹಿಸಿ, ಮುಂಬರುವ ಜನಗಣತಿಗೆ ಸಿದ್ಧತೆಗಳನ್ನು ಪರಿಶೀಲಿಸಿದರು. ಅಲ್ಲಿ ಅಪ್ಲಿಕೇಶನ್ ಬಳಸುವ ಕ್ಷೇತ್ರ ಪ್ರಯೋಗಗಳನ್ನು ಚರ್ಚಿಸಲಾಯಿತು.

ಸಭೆಯಲ್ಲಿ ಭಾಗವಹಿಸಿದ ರಾಜ್ಯಗಳ ಜನಗಣತಿ ಕಾರ್ಯಾಚರಣೆಯ ನಿರ್ದೇಶಕರು ದಿ ಹಿಂದೂಗೆ, 2019 ರ ಪ್ರಯೋಗಗಳ ನಂತರ ಅಪ್ಲಿಕೇಶನ್ ಅನ್ನು ಸುಧಾರಿಸಲಾಗಿದೆ ಮತ್ತು ಕ್ಷೇತ್ರ ಪ್ರಯೋಗಗಳು ಹೊಸದಾಗಿ ನಡೆಯಲಿದೆ. ನಾವು ಆರ್‌ಜಿಐ ನಿರ್ದೇಶನಗಳಿಗಾಗಿ ಕಾಯುತ್ತಿದ್ದೇವೆ; ಎಂದಿದ್ದಾರೆ.

ಫೆಬ್ರವರಿ 10 ರಂದು ಕೇಂದ್ರ ಗೃಹ ಸಚಿವ ನಿತ್ಯಾನಂದ್ ರಾಯ್ ರಾಜ್ಯಸಭೆಗೆ ಈ ಮಾಹಿತಿ ನೀಡಿದರು. “ದತ್ತಾಂಶ ಸಂಗ್ರಹಣೆಗಾಗಿ ಒಂದು ಅಪ್ಲಿಕೇಶನ್ ಮತ್ತು ಜನಗಣತಿ-ಸಂಬಂಧಿತ ಚಟುವಟಿಕೆಗಳ ನಿರ್ವಹಣೆ ಮತ್ತು ಮೇಲ್ವಿಚಾರಣೆಗಾಗಿ ಜನಗಣತಿ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಲಾಗಿದೆ” ಎಂದರು.

“ಗಣತಿದಾರರು ಮತ್ತು ಇತರ ಜನಗಣತಿ ಕಾರ್ಯಕರ್ತರಿಗೆ ಸೂಚನಾ ಕೈಪಿಡಿಗಳನ್ನು ಸಿದ್ಧಪಡಿಸಲಾಗಿದೆ. ಜನಗಣತಿಯ ಪ್ರಶ್ನಾವಳಿ ಮತ್ತು ವಿಧಾನವನ್ನು ಪರೀಕ್ಷಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಯ್ದ ಪ್ರದೇಶಗಳಲ್ಲಿ 2019 ರ ಆಗಸ್ಟ್ 12 ರಿಂದ 2019 ರ ಸೆಪ್ಟೆಂಬರ್ 30 ರವರೆಗೆ ಜನಗಣತಿಯ ಪೂರ್ವ ಪರೀಕ್ಷೆಯನ್ನು ಕೈಗೊಳ್ಳಲಾಯಿತು ಎಂದು ಅವರು ಹೇಳಿದರು.

2021-22ರ ಆರ್ಥಿಕ ವರ್ಷದಲ್ಲಿ ಜನಗಣತಿಗಾಗಿ, 73,768 ಕೋಟಿಗಳನ್ನು ಮೀಸಲಿಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಘೋಷಿಸಿದರು.

ಎನ್‌ಪಿಆರ್ ಪ್ರಕ್ರಿಯೆಯನ್ನು ಅನೇಕ ರಾಜ್ಯಗಳು ಮತ್ತು ನಾಗರಿಕರ ಗುಂಪುಗಳು ವಿರೋಧಿಸಿವೆ. ಏಕೆಂದರೆ ಪೌರತ್ವ ನಿಯಮಗಳು 2003, ಇದನ್ನು ಭಾರತೀಯ ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಐಸಿ) ಅಥವಾ ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ರಚನೆಗೆ ಲಿಂಕ್ ಮಾಡುತ್ತದೆ. ಮುಸ್ಲಿಮರನ್ನು ಹೊರತುಪಡಿಸುವ 2019 ರ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಅಂಗೀಕಾರದೊಂದಿಗೆ, ಎನ್‌ಪಿಆರ್-ಎನ್‌ಆರ್‌ಸಿಯ ಭಯವು ಸಾವಿರಾರು ಜನರನ್ನು ಬೀದಿಗಿಳಿಸಿತ್ತು. ಎನ್‌ಆರ್‌ಸಿ ಮತ್ತು ಎನ್‌ಪಿಆರ್ ನಡುವೆ ಸಂಬಂಧವಿದೆ ಎಂಬ ಆರೋವನ್ನು ಸರ್ಕಾರ ನಿರಾಕರಿಸಿದೆ.

ಡಿಸೆಂಬರ್ 11, 2019 ರಂದು ಸಂಸತ್ತು ಸಿಎಎ ಅಂಗೀಕರಿಸಿದ ನಂತರದ ದಿನಗಳಲ್ಲಿ ವಿವಿಧ ಘಟನೆಗಳಲ್ಲಿ 69 ಜನರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ದಾಖಲೆರಹಿತ ಮುಸ್ಲಿಮೇತರ ಸಮುದಾಯಗಳಿಗೆ ಧರ್ಮದ ಆಧಾರದ ಮೇಲೆ ಪೌರತ್ವವನ್ನು ಸಿಎಎ ಅನುಮತಿಸುತ್ತದೆ.


ಇದನ್ನೂ ಓದಿ: ಎನ್‌ಆರ್‌ಸಿ ಗುಮ್ಮ: ಬೆಂಗಳೂರಿನಲ್ಲಿ ಭಾರತೀಯರು ಬೀದಿಗೆ – ಎನ್‌ಆರ್‌ಸಿ, ಸಿಎಎ ಅಪಾಯವನ್ನು ಸಾಬೀತುಪಡಿಸಿದ ಬೆಂಗಳೂರು ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...