Homeಚಳವಳಿಕೃಷಿ ಕಾಯ್ದೆಗಳ ತಿದ್ದುಪಡಿಗೆ ಕೇಂದ್ರದ ಒಪ್ಪಿಗೆ: ಹಿಂತೆಗೆದುಕೊಳ್ಳಬೇಕೆಂದು ಪಟ್ಟು ಹಿಡಿದ ರೈತರು!

ಕೃಷಿ ಕಾಯ್ದೆಗಳ ತಿದ್ದುಪಡಿಗೆ ಕೇಂದ್ರದ ಒಪ್ಪಿಗೆ: ಹಿಂತೆಗೆದುಕೊಳ್ಳಬೇಕೆಂದು ಪಟ್ಟು ಹಿಡಿದ ರೈತರು!

ಕೇಂದ್ರದ ಈ ಮಾತುಕತೆಗಳಿಂದ ಏನೂ ಪ್ರಯೋಜನವಿಲ್ಲ. ಅದು ನಾವು ರೈತರೊಂದಿಗೆ ಮಾತನಾಡುತ್ತಿದ್ದೇವೆ ಎಂದು ತೋರಿಸಿಕೊಳ್ಳಲ್ಲಷ್ಟೇ ಮಾತುಕತೆ ನಡೆಸುತ್ತಿವೆ ವಿನಾಃ ರೈತರ ಬಗ್ಗೆ ಅದಕ್ಕೆ ಕಾಳಜಿಯಿಲ್ಲ.

- Advertisement -
- Advertisement -

ದೆಹಲಿ ಚಲೋ ಆರಂಭವಾದ ನಂತರ ರೈತಮುಖಂಡರೊಂದಿಗೆ ಕೇಂದ್ರ ಸಚಿವರು ನಡೆಸಿದ ಸುಧೀರ್ಘ 7 ಗಂಟೆಗಳ ಎರಡನೇ ಮಾತುಕತೆ ಸಹ ವಿಫಲವಾಗಿವೆ. ತಾನು ಅಂಗೀಕರಿಸಿರುವ ಮೂರು ಕೃಷಿ ಕಾಯ್ದೆಗಳಲ್ಲಿ ರೈತರು ಬಯಸಿದ ಅಗತ್ಯ ಬದಲಾವಣೆ ತರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಆದರೆ ಮೂರು ಕಾಯ್ದೆಗಳನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳಬೇಕೆಂದು ಎಲ್ಲಾ ರೈತ ಸಂಘಟನೆಗಳ ಮುಖಂಡರು ಒಕ್ಕೊರಲಿನಿಂದ ಪಟ್ಟು ಹಿಡಿದಿದ್ದಾರೆ.

ಸರ್ಕಾರವು ಕನಿಷ್ಠ ಬೆಂಬಲ ಬೆಲೆ ಮುಂದುವರೆಯುತ್ತದೆ ಎಂದು ಲಿಖಿತ ಭರವಸೆ ನೀಡಲು ಮುಂದಾಗಿದೆ. ಅಲ್ಲದೇ ಗುತ್ತಿಗೆ ಕೃಷಿ ಪದ್ದತಿಯಲ್ಲಿ ಉದ್ಭವಿಸುವ ಸಮಸ್ಯೆಗಳಿಗೆ ರೈತರು ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಬಳಿ ಹೋಗುವ ಬದಲು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಬಹುದು ಎಂದು ಕಾಯ್ದೆಯಲ್ಲಿ ಬದಲಾವಣೆ ತರುವುದಾಗಿ ಕೇಂದ್ರ ಸಚಿವರು ಹೇಳಿದ್ದಾರೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮಾತನಾಡಿ ನಮಗೆ ಯಾವುದೇ ಅಹಂಕಾರವಿಲ್ಲ. ರೈತರ ಮಾತುಗಳನ್ನು ಮುಕ್ತವಾಗಿ ಆಲಿಸುತ್ತೇವೆ. ರೈತರ ಪ್ರತಿಭಟನೆ ನಿಲ್ಲಿಸಿದರೆ ಒಳ್ಳೆಯದು ಎಂದಿದ್ದಾರೆ. ಅಲ್ಲದೆ ಮುಂದಿನ ಸಭೆ ಡಿಸೆಂಬರ್ 05ರ ಶನಿವಾರ ನಡೆಯಲಿದೆ ಎಂದಿದ್ದಾರೆ.

ಸಭೆಯ ನಂತರ ಭಾರತೀಯ ಕಿಸಾನ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಜಗಮೋಹನ್ ಸಿಂಗ್ ಮಾತನಾಡಿ “ಸರ್ಕಾರ ಇಂದೇ ಆ ಮೂರು ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಶನಿವಾರದ ಸಭೆಗೆ ರೈತ ಮುಖಂಡರು ಹಾಜರಾಗುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

ನಮ್ಮ ಕಡೆಯಿಂದ ಕೇಂದ್ರ ಸರ್ಕಾರಕ್ಕೆ ಹೇಳಬೇಕಾದುದನ್ನೆಲ್ಲಾ ಹೇಳಿದ್ದೇವೆ. ಶುಕ್ರವಾರವೇ ಕೇಂದ್ರ ಸರ್ಕಾರ ಈ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಮುಂದಿನ ಸಭೆಗಳಿಗೆ ನಾವು ಭಾಗವಹಿಸುವುದಿಲ್ಲ ಎಂದು ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ರೈತರನ್ನು ಸಂಘಟಿಸುತ್ತಿರುವ ಲೋಕ್‌ ಸಂಘರ್ಷ್ ಮೋರ್ಚಾದ ಪ್ರತಿಭಾ ಶಿಂಧೆ ಹೇಳಿದ್ದಾರೆ.

ಕೇಂದ್ರದ ಈ ಮಾತುಕತೆಗಳಿಂದ ಏನೂ ಪ್ರಯೋಜನವಿಲ್ಲ. ಅದು ನಾವು ರೈತರೊಂದಿಗೆ ಮಾತನಾಡುತ್ತಿದ್ದೇವೆ ಎಂದು ತೋರಿಸಿಕೊಳ್ಳಲ್ಲಷ್ಟೇ ಮಾತುಕತೆ ನಡೆಸುತ್ತಿವೆ ವಿನಾಃ ರೈತರ ಬಗ್ಗೆ ಅದಕ್ಕೆ ಕಾಳಜಿಯಿಲ್ಲ. ಹಾಗಾಗಿ ನಾವು ಪ್ರತಿಭಟನೆಯನ್ನು ತೀವ್ರಗೊಳಿಸುತ್ತೇವೆ ಎಂದು ರೈತರು ಹೇಳಿದ್ದಾರೆ.

ದೆಹಲಿಗೆ ಬರುವ ಹಲವ ರಸ್ತೆಗಳನ್ನು ಇಂದು ಬೆಳಿಗ್ಗೆಯಿಂದ ರೈತರು ಬಂದ್ ಮಾಡಿದ್ದಾರೆ. ಹಾಗಾಗಿ ತೀವ್ರ ಟಾಫಿಕ್ ಉಂಟಾಗಿದೆ.


ಇದನ್ನೂ ಓದಿ: ರೈತ ಮುಖಂಡರು ಸಚಿವರೊಂದಿಗಿನ 7 ಗಂಟೆಗಳ ಮಾತುಕತೆ ಅಂತ್ಯ: ಯಾರು ಏನು ಹೇಳಿದರು?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...