Homeಚಳವಳಿಕೃಷಿ ಕಾಯ್ದೆಗಳ ತಿದ್ದುಪಡಿಗೆ ಕೇಂದ್ರದ ಒಪ್ಪಿಗೆ: ಹಿಂತೆಗೆದುಕೊಳ್ಳಬೇಕೆಂದು ಪಟ್ಟು ಹಿಡಿದ ರೈತರು!

ಕೃಷಿ ಕಾಯ್ದೆಗಳ ತಿದ್ದುಪಡಿಗೆ ಕೇಂದ್ರದ ಒಪ್ಪಿಗೆ: ಹಿಂತೆಗೆದುಕೊಳ್ಳಬೇಕೆಂದು ಪಟ್ಟು ಹಿಡಿದ ರೈತರು!

ಕೇಂದ್ರದ ಈ ಮಾತುಕತೆಗಳಿಂದ ಏನೂ ಪ್ರಯೋಜನವಿಲ್ಲ. ಅದು ನಾವು ರೈತರೊಂದಿಗೆ ಮಾತನಾಡುತ್ತಿದ್ದೇವೆ ಎಂದು ತೋರಿಸಿಕೊಳ್ಳಲ್ಲಷ್ಟೇ ಮಾತುಕತೆ ನಡೆಸುತ್ತಿವೆ ವಿನಾಃ ರೈತರ ಬಗ್ಗೆ ಅದಕ್ಕೆ ಕಾಳಜಿಯಿಲ್ಲ.

- Advertisement -
- Advertisement -

ದೆಹಲಿ ಚಲೋ ಆರಂಭವಾದ ನಂತರ ರೈತಮುಖಂಡರೊಂದಿಗೆ ಕೇಂದ್ರ ಸಚಿವರು ನಡೆಸಿದ ಸುಧೀರ್ಘ 7 ಗಂಟೆಗಳ ಎರಡನೇ ಮಾತುಕತೆ ಸಹ ವಿಫಲವಾಗಿವೆ. ತಾನು ಅಂಗೀಕರಿಸಿರುವ ಮೂರು ಕೃಷಿ ಕಾಯ್ದೆಗಳಲ್ಲಿ ರೈತರು ಬಯಸಿದ ಅಗತ್ಯ ಬದಲಾವಣೆ ತರುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಆದರೆ ಮೂರು ಕಾಯ್ದೆಗಳನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳಬೇಕೆಂದು ಎಲ್ಲಾ ರೈತ ಸಂಘಟನೆಗಳ ಮುಖಂಡರು ಒಕ್ಕೊರಲಿನಿಂದ ಪಟ್ಟು ಹಿಡಿದಿದ್ದಾರೆ.

ಸರ್ಕಾರವು ಕನಿಷ್ಠ ಬೆಂಬಲ ಬೆಲೆ ಮುಂದುವರೆಯುತ್ತದೆ ಎಂದು ಲಿಖಿತ ಭರವಸೆ ನೀಡಲು ಮುಂದಾಗಿದೆ. ಅಲ್ಲದೇ ಗುತ್ತಿಗೆ ಕೃಷಿ ಪದ್ದತಿಯಲ್ಲಿ ಉದ್ಭವಿಸುವ ಸಮಸ್ಯೆಗಳಿಗೆ ರೈತರು ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಬಳಿ ಹೋಗುವ ಬದಲು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಬಹುದು ಎಂದು ಕಾಯ್ದೆಯಲ್ಲಿ ಬದಲಾವಣೆ ತರುವುದಾಗಿ ಕೇಂದ್ರ ಸಚಿವರು ಹೇಳಿದ್ದಾರೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮಾತನಾಡಿ ನಮಗೆ ಯಾವುದೇ ಅಹಂಕಾರವಿಲ್ಲ. ರೈತರ ಮಾತುಗಳನ್ನು ಮುಕ್ತವಾಗಿ ಆಲಿಸುತ್ತೇವೆ. ರೈತರ ಪ್ರತಿಭಟನೆ ನಿಲ್ಲಿಸಿದರೆ ಒಳ್ಳೆಯದು ಎಂದಿದ್ದಾರೆ. ಅಲ್ಲದೆ ಮುಂದಿನ ಸಭೆ ಡಿಸೆಂಬರ್ 05ರ ಶನಿವಾರ ನಡೆಯಲಿದೆ ಎಂದಿದ್ದಾರೆ.

ಸಭೆಯ ನಂತರ ಭಾರತೀಯ ಕಿಸಾನ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಜಗಮೋಹನ್ ಸಿಂಗ್ ಮಾತನಾಡಿ “ಸರ್ಕಾರ ಇಂದೇ ಆ ಮೂರು ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಶನಿವಾರದ ಸಭೆಗೆ ರೈತ ಮುಖಂಡರು ಹಾಜರಾಗುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

ನಮ್ಮ ಕಡೆಯಿಂದ ಕೇಂದ್ರ ಸರ್ಕಾರಕ್ಕೆ ಹೇಳಬೇಕಾದುದನ್ನೆಲ್ಲಾ ಹೇಳಿದ್ದೇವೆ. ಶುಕ್ರವಾರವೇ ಕೇಂದ್ರ ಸರ್ಕಾರ ಈ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಮುಂದಿನ ಸಭೆಗಳಿಗೆ ನಾವು ಭಾಗವಹಿಸುವುದಿಲ್ಲ ಎಂದು ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ರೈತರನ್ನು ಸಂಘಟಿಸುತ್ತಿರುವ ಲೋಕ್‌ ಸಂಘರ್ಷ್ ಮೋರ್ಚಾದ ಪ್ರತಿಭಾ ಶಿಂಧೆ ಹೇಳಿದ್ದಾರೆ.

ಕೇಂದ್ರದ ಈ ಮಾತುಕತೆಗಳಿಂದ ಏನೂ ಪ್ರಯೋಜನವಿಲ್ಲ. ಅದು ನಾವು ರೈತರೊಂದಿಗೆ ಮಾತನಾಡುತ್ತಿದ್ದೇವೆ ಎಂದು ತೋರಿಸಿಕೊಳ್ಳಲ್ಲಷ್ಟೇ ಮಾತುಕತೆ ನಡೆಸುತ್ತಿವೆ ವಿನಾಃ ರೈತರ ಬಗ್ಗೆ ಅದಕ್ಕೆ ಕಾಳಜಿಯಿಲ್ಲ. ಹಾಗಾಗಿ ನಾವು ಪ್ರತಿಭಟನೆಯನ್ನು ತೀವ್ರಗೊಳಿಸುತ್ತೇವೆ ಎಂದು ರೈತರು ಹೇಳಿದ್ದಾರೆ.

ದೆಹಲಿಗೆ ಬರುವ ಹಲವ ರಸ್ತೆಗಳನ್ನು ಇಂದು ಬೆಳಿಗ್ಗೆಯಿಂದ ರೈತರು ಬಂದ್ ಮಾಡಿದ್ದಾರೆ. ಹಾಗಾಗಿ ತೀವ್ರ ಟಾಫಿಕ್ ಉಂಟಾಗಿದೆ.


ಇದನ್ನೂ ಓದಿ: ರೈತ ಮುಖಂಡರು ಸಚಿವರೊಂದಿಗಿನ 7 ಗಂಟೆಗಳ ಮಾತುಕತೆ ಅಂತ್ಯ: ಯಾರು ಏನು ಹೇಳಿದರು?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...