Homeಮುಖಪುಟಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಕೇಂದ್ರದಿಂದ ಅನುಮೋದನೆ: ಗುಜರಾತ್‌ ಸರ್ಕಾರದ ಅಫಿಡವಿಟ್‌ನಲ್ಲಿ ಉಲ್ಲೇಖ

ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಕೇಂದ್ರದಿಂದ ಅನುಮೋದನೆ: ಗುಜರಾತ್‌ ಸರ್ಕಾರದ ಅಫಿಡವಿಟ್‌ನಲ್ಲಿ ಉಲ್ಲೇಖ

ಸನ್ನಡತೆಯ ಆಧಾರದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ, ಕೇಂದ್ರದ ಒಪ್ಪಿಗೆಯೂ ಸಿಕ್ಕಿದೆ ಎಂದು ಸರ್ವೋಚ್ಚ ನ್ಯಾಯಾಲಯಕ್ಕೆ ಗುಜರಾತ್‌ ಸರ್ಕಾರ ತಿಳಿಸಿದೆ.

- Advertisement -
- Advertisement -

“ಬಿಲ್ಕಿಸ್ ಬಾನೋ ಪ್ರಕರಣದ 11 ಅಪರಾಧಿಗಳು 14 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಅವರ ನಡವಳಿಕೆ ಉತ್ತಮವಾಗಿದೆ ಎಂದು ಕಂಡುಬಂದಿದೆ ಮತ್ತು ಕೇಂದ್ರ ಸರ್ಕಾರವು ಅಪರಾಧಿಗಳ ಬಿಡುಗಡೆಗೆ ಅನುಮೋದನೆ ನೀಡಿದೆ” ಎಂದು ಗುಜರಾತ್ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಕೈದಿಗಳಿಗೆ ನೀಡಲಾದ ವಿನಾಯಿತಿಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ಗುಜರಾತ್ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. “ಪೊಲೀಸ್ ವರಿಷ್ಠಾಧಿಕಾರಿ, ಸಿಬಿಐ, ಮುಂಬೈ ವಿಶೇಷ ಅಪರಾಧ ವಿಭಾಗ ಮತ್ತು ವಿಶೇಷ ಸಿವಿಲ್ ನ್ಯಾಯಾಧೀಶರು (ಸಿಬಿಐ), ಗ್ರೇಟರ್ ಬಾಂಬೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್” ಕಳೆದ ವರ್ಷದ ಮಾರ್ಚ್‌ನಲ್ಲಿ ಕೈದಿಗಳ ಬಿಡುಗಡೆಯನ್ನು ವಿರೋಧಿಸಿತ್ತು.

ಗೋಧ್ರಾ ಉಪ ಕಾರಾಗೃಹದ ಅಧೀಕ್ಷಕರಿಗೆ ಬರೆದ ಪತ್ರದಲ್ಲಿ ಸಿಬಿಐ ಅಧಿಕಾರಿಯು, “ಇಲ್ಲಿನ ಅಪರಾಧವು ಘೋರ ಮತ್ತು ಗಂಭೀರವಾಗಿದೆ. ಆದ್ದರಿಂದ ಅವರನ್ನು ಅಕಾಲಿಕವಾಗಿ ಬಿಡುಗಡೆ ಮಾಡಲಾಗುವುದಿಲ್ಲ. ಅವರಿಗೆ ಯಾವುದೇ ವಿನಯವನ್ನು ನೀಡಲಾಗುವುದಿಲ್ಲ” ಎಂದು ಹೇಳಿದ್ದರು.

ಮುಂಬೈನಲ್ಲಿ ವಿಚಾರಣೆ ನಡೆಸಲಾಗಿರುವುದರಿಂದ ಮಹಾರಾಷ್ಟ್ರ ಸರ್ಕಾರದ 2008ರ ನೀತಿ ಅನ್ವಯವಾಗಬೇಕು ಎಂದು ಸಿವಿಲ್ ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದರು.

“ಇಲ್ಲಿನ ಎಲ್ಲಾ ಆರೋಪಿಗಳು ಅಮಾಯಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಗಳೆಂದು ಕಂಡುಬಂದಿದೆ. ಅಪರಾಧಿಗಳಿಗೆ ಸಂತ್ರಸ್ತರು ಶತ್ರುಗಳಾಗಿರಲಿಲ್ಲ ಅಥವಾ ಸಂತ್ರಸ್ತೆಯೊಂದಿಗೆ ಯಾವುದೇ ಸಂಬಂಧವೂ ಇರಲಿಲ್ಲ. ಸಂತ್ರಸ್ತರು ನಿರ್ದಿಷ್ಟ ಧರ್ಮಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಮಾತ್ರ ಅಪರಾಧ ಎಸಗಲಾಗಿದೆ. ಈ ವೇಳೆ ಅಪ್ರಾಪ್ತ ಮಕ್ಕಳನ್ನೂ ಬಿಡಲಿಲ್ಲ. ಇದು ಮಾನವೀಯತೆಯ ವಿರುದ್ಧದ ಅಪರಾಧದ ಅತ್ಯಂತ ಕೆಟ್ಟ ರೂಪವಾಗಿದೆ. ಇದು ಸಮಾಜದ ಆತ್ಮಸಾಕ್ಷಿಯ ಮೇಲೆ ಪರಿಣಾಮ ಬೀರುತ್ತದೆ” ಎಂದು ಸಿವಿಲ್ ನ್ಯಾಯಾಧೀಶರು ಹೇಳಿದ್ದರು.

ಆದರೆ ಮೇ 13, 2022ರಂದು ಸುಪ್ರೀಂಕೋರ್ಟ್ ಅಪರಾಧಿಗಳಲ್ಲಿ ಒಬ್ಬರು ಸಲ್ಲಿಸಿದ ಮನವಿಯನ್ನು ‌ಪರಿಶೀಲಿಸುತ್ತಾ, “ಸೂಕ್ತ ಸರ್ಕಾರ” ತೆಗೆದುಕೊಳ್ಳಲು ಸರ್ಕಾರಕ್ಕೆ ತಿಳಿಸಿತ್ತು.

ಗುಜರಾತ್ ಸರ್ಕಾರದ ಅಫಿಡವಿಟ್‌ನಲ್ಲಿ 1992ರ ನೀತಿಯನ್ನು ಉಲ್ಲೇಖಿಸಲಾಗಿದೆ. “ಈ ನೀತಿಯ ಪ್ರಕಾರ ಜೈಲಿನ ಇನ್ಸ್‌ಪೆಕ್ಟರ್ ಜನರಲ್ ರವರು ಅಪರಾಧಿಯನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಜಿಲ್ಲಾ ಪೊಲೀಸ್ ಅಧಿಕಾರಿ, ಜಿಲ್ಲಾ ಮ್ಯಾಜಿಸ್ಟ್ರೇಟ್, ಜೈಲು ಅಧೀಕ್ಷಕರು ಮತ್ತು ಸಲಹಾ ಮಂಡಳಿ ಸಮಿತಿಯ ಅಭಿಪ್ರಾಯವನ್ನು ಪಡೆಯುವುದು ಕಡ್ಡಾಯವಾಗಿದೆ. ಅದರ ನಂತರ, ಜೈಲಿನ ಇನ್ಸ್‌ಪೆಕ್ಟರ್ ಜನರಲ್ ಅವರು ನಾಮಮಾತ್ರ ಪಟ್ಟಿಯ ಪ್ರತಿ ಮತ್ತು ತೀರ್ಪಿನ ಪ್ರತಿಯೊಂದಿಗೆ ತಮ್ಮ ಅಭಿಪ್ರಾಯವನ್ನು ನೀಡುವುದಕ್ಕಾಗಿ ಸರ್ಕಾರಕ್ಕೆ ಶಿಫಾರಸನ್ನು ಕಳುಹಿಸಲು ಕಡ್ಡಾಯ. ಇದಲ್ಲದೆ ಅಕಾಲಿಕ ಬಿಡುಗಡೆಯ ಅರ್ಜಿಯ ಪರಿಗಣನೆಯ ಸಮಯದಲ್ಲಿ ಜೈಲ್ ಸಲಹಾ ಮಂಡಳಿಯು 1992ರ ನೀತಿಯನ್ನು ಅನುಸರಿಸುತ್ತದೆ” ಎಂದು ಸರ್ಕಾರ ತಿಳಿಸಿದೆ.

ಸರ್ಕಾರವು ಹಲವಾರು ಅಧಿಕಾರಿಗಳ ಅಭಿಪ್ರಾಯವನ್ನು ಕೇಳಿದ ಬಳಿಕ ನಿರ್ಧಾರ ಪ್ರಕಟಿಸಿರುವುದಾಗಿ ತಿಳಿಸಿದೆ. ಪೊಲೀಸ್ ಸೂಪರಿಂಟೆಂಡೆಂಟ್, ಸಿಬಿಐ, ವಿಶೇಷ ಅಪರಾಧ ವಿಭಾಗ (ಮುಂಬೈ); ಗ್ರೇಟರ್ ಬಾಂಬೆಯ ವಿಶೇಷ ಸಿವಿಲ್ ನ್ಯಾಯಾಧೀಶರು (CBI), ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್; ದಾಹೋದ್ ಪೊಲೀಸ್ ಸೂಪರಿಂಟೆಂಡೆಂಟ್; ದಾಹೋದ್‌ನ ಕಲೆಕ್ಟರ್ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ; ಗೋಧ್ರಾ ಉಪ-ಜೈಲಿನ ಜೈಲ್ ಸೂಪರಿಂಟೆಂಡೆಂಟ್, ಜೈಲು ಸಲಹಾ ಸಮಿತಿ; ಅಹಮದಾಬಾದ್‌ ಜೈಲುಗಳ ಹೆಚ್ಚುವರಿ ಡೈರೆಕ್ಟರ್ ಜನರಲ್ ಅವರ ಅಭಿಪ್ರಾಯಗಳನ್ನು ಬಿಡುಗಡೆಯ ಮೊದಲು ಕೇಳಲಾಗಿದೆ. ಮೊದಲ ಇಬ್ಬರನ್ನು ಹೊರತುಪಡಿಸಿ, ಉಳಿದವರೆಲ್ಲರೂ ಅವರ ಬಿಡುಗಡೆಗೆ ಶಿಫಾರಸು ಮಾಡಿದ್ದಾರೆ ಎಂದು ಸರ್ಕಾರ ಹೇಳಿದೆ.

ಪ್ರಕರಣವನ್ನು ಕೇಂದ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲಾಗಿರುವುದರಿಂದ, ರಾಜ್ಯವು ತನ್ನ ಶಿಫಾರಸನ್ನು ಕೇಂದ್ರಕ್ಕೆ ಸಲ್ಲಿಸಿದೆ. “ಕೇಂದ್ರವು 11 ಕೈದಿಗಳನ್ನು ಬಿಡುಗಡೆ ಮಾಡಲು ಒಪ್ಪಿಗೆ ಸೂಚಿಸಿದೆ” ಎಂದು 11.07.2022ರ ಪತ್ರವನ್ನು ಅಫಡವಿಟ್‌ನಲ್ಲಿ ಸಲ್ಲಿಸಲಾಗಿದೆ.

“…ರಾಜ್ಯ ಸರ್ಕಾರವು ಎಲ್ಲಾ ಅಭಿಪ್ರಾಯಗಳನ್ನು ಪರಿಗಣಿಸಿದೆ. 11 ಕೈದಿಗಳು ಜೈಲಿನಲ್ಲಿ 14 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಅವರ ನಡವಳಿಕೆ ಉತ್ತಮವಾಗಿದೆ ಎಂದು ಕಂಡುಬಂದ ಕಾರಣ ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ” ಎಂದು ಸಮರ್ಥಿಸಿಕೊಂಡಿದೆ.

ಸರ್ಕಾರವು ತನ್ನ 1992ರ ನೀತಿಯ ಪ್ರಕಾರ ಕೈದಿಗಳನ್ನು ಬಿಡುಗಡೆ ಮಾಡಿದೆ ಹೊರತು, ಆಜಾದಿ ಕಾ ಅಮೃತ್ ಮಹೋತ್ಸವದ ಭಾಗವಾಗಿ ಕೈದಿಗಳಿಗೆ ನೀಡಿದ ಉಪಶಮನದ ನಿರ್ಣಯದಿಂದ ಅಲ್ಲ ಎಂದು ಸ್ಪಷ್ಟಪಡಿಸಿದೆ.

ಗೋಧ್ರಾ ನಂತರದ ಗಲಭೆಗಳ ಸಂದರ್ಭದಲ್ಲಿ ದಹೋದ್ ಜಿಲ್ಲೆಯ ಲಿಮ್ಖೇಡಾ ತಾಲೂಕಿನಲ್ಲಿ ಮಾರ್ಚ್ 3, 2002 ರಂದು ಜನಸಮೂಹದಿಂದ ಹತ್ಯೆಗೀಡಾದ 14 ಮಂದಿಯಲ್ಲಿ ಬಿಲ್ಕಿಸ್ ಅವರ ಮೂರು ವರ್ಷದ ಮಗಳು ಸಲೇಹಳೂ ಸೇರಿದ್ದರು. ಆ ಸಮಯದಲ್ಲಿ ಬಿಲ್ಕಿಸ್ ಗರ್ಭಿಣಿಯಾಗಿದ್ದರು.

ಈ ವರ್ಷದ ಆಗಸ್ಟ್ 15ರಂದು ಗುಜರಾತ್ ಸರ್ಕಾರವು 2008ರಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾದ ಪ್ರಕರಣದ ಎಲ್ಲಾ 11 ಅಪರಾಧಿಗಳನ್ನು ಬಿಡುಗಡೆ ಮಾಡಿತು.

ಸಿಪಿಐ(ಎಂ) ನಾಯಕಿ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲಾಲ್ ಮತ್ತು ಶಿಕ್ಷಣತಜ್ಞೆ ರೂಪ್ ರೇಖಾ ವರ್ಮಾ, ಟಿಎಂಸಿ ಸಂಸದ ಮಹುವಾ ಮೊಯಿತ್ರಾ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಬಿಲ್ಕಿಸ್ ಬಾನೋ ಪ್ರಕರಣದ ಆರೋಪಿಗಳ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಸಿದ ಎರಡು ಅರ್ಜಿಗಳ ಆಧಾರದಲ್ಲಿ ಸುಪ್ರೀಂಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತ್ತು. ಕೇಂದ್ರ ಸರ್ಕಾರದ ಅನುಮತಿ ಇಲ್ಲದೆಯೇ ಕ್ರಮ ಜರುಗಿಸಲಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದಕ್ಕಿಂತಲೂ ದುಃಕಕರವಾದ ಮತ್ತು ಹೀನಾಯವಾದ ಸಂಗತಿ ಮತ್ತೊಂದು ಇರಲಾರದು. ಪ್ರಬುತ್ವ ಜಾತಿ, ಜನಾಂಗ, ದರ್ಮಗಳ ನಡುವೆ ತಾರತಮ್ಯವನ್ನು ಮಾಡಬಾರದು.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...