Homeಮುಖಪುಟಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಕೇಂದ್ರದಿಂದ ಅನುಮೋದನೆ: ಗುಜರಾತ್‌ ಸರ್ಕಾರದ ಅಫಿಡವಿಟ್‌ನಲ್ಲಿ ಉಲ್ಲೇಖ

ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಕೇಂದ್ರದಿಂದ ಅನುಮೋದನೆ: ಗುಜರಾತ್‌ ಸರ್ಕಾರದ ಅಫಿಡವಿಟ್‌ನಲ್ಲಿ ಉಲ್ಲೇಖ

ಸನ್ನಡತೆಯ ಆಧಾರದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ, ಕೇಂದ್ರದ ಒಪ್ಪಿಗೆಯೂ ಸಿಕ್ಕಿದೆ ಎಂದು ಸರ್ವೋಚ್ಚ ನ್ಯಾಯಾಲಯಕ್ಕೆ ಗುಜರಾತ್‌ ಸರ್ಕಾರ ತಿಳಿಸಿದೆ.

- Advertisement -
- Advertisement -

“ಬಿಲ್ಕಿಸ್ ಬಾನೋ ಪ್ರಕರಣದ 11 ಅಪರಾಧಿಗಳು 14 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಅವರ ನಡವಳಿಕೆ ಉತ್ತಮವಾಗಿದೆ ಎಂದು ಕಂಡುಬಂದಿದೆ ಮತ್ತು ಕೇಂದ್ರ ಸರ್ಕಾರವು ಅಪರಾಧಿಗಳ ಬಿಡುಗಡೆಗೆ ಅನುಮೋದನೆ ನೀಡಿದೆ” ಎಂದು ಗುಜರಾತ್ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಕೈದಿಗಳಿಗೆ ನೀಡಲಾದ ವಿನಾಯಿತಿಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ಗುಜರಾತ್ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. “ಪೊಲೀಸ್ ವರಿಷ್ಠಾಧಿಕಾರಿ, ಸಿಬಿಐ, ಮುಂಬೈ ವಿಶೇಷ ಅಪರಾಧ ವಿಭಾಗ ಮತ್ತು ವಿಶೇಷ ಸಿವಿಲ್ ನ್ಯಾಯಾಧೀಶರು (ಸಿಬಿಐ), ಗ್ರೇಟರ್ ಬಾಂಬೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್” ಕಳೆದ ವರ್ಷದ ಮಾರ್ಚ್‌ನಲ್ಲಿ ಕೈದಿಗಳ ಬಿಡುಗಡೆಯನ್ನು ವಿರೋಧಿಸಿತ್ತು.

ಗೋಧ್ರಾ ಉಪ ಕಾರಾಗೃಹದ ಅಧೀಕ್ಷಕರಿಗೆ ಬರೆದ ಪತ್ರದಲ್ಲಿ ಸಿಬಿಐ ಅಧಿಕಾರಿಯು, “ಇಲ್ಲಿನ ಅಪರಾಧವು ಘೋರ ಮತ್ತು ಗಂಭೀರವಾಗಿದೆ. ಆದ್ದರಿಂದ ಅವರನ್ನು ಅಕಾಲಿಕವಾಗಿ ಬಿಡುಗಡೆ ಮಾಡಲಾಗುವುದಿಲ್ಲ. ಅವರಿಗೆ ಯಾವುದೇ ವಿನಯವನ್ನು ನೀಡಲಾಗುವುದಿಲ್ಲ” ಎಂದು ಹೇಳಿದ್ದರು.

ಮುಂಬೈನಲ್ಲಿ ವಿಚಾರಣೆ ನಡೆಸಲಾಗಿರುವುದರಿಂದ ಮಹಾರಾಷ್ಟ್ರ ಸರ್ಕಾರದ 2008ರ ನೀತಿ ಅನ್ವಯವಾಗಬೇಕು ಎಂದು ಸಿವಿಲ್ ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದರು.

“ಇಲ್ಲಿನ ಎಲ್ಲಾ ಆರೋಪಿಗಳು ಅಮಾಯಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಗಳೆಂದು ಕಂಡುಬಂದಿದೆ. ಅಪರಾಧಿಗಳಿಗೆ ಸಂತ್ರಸ್ತರು ಶತ್ರುಗಳಾಗಿರಲಿಲ್ಲ ಅಥವಾ ಸಂತ್ರಸ್ತೆಯೊಂದಿಗೆ ಯಾವುದೇ ಸಂಬಂಧವೂ ಇರಲಿಲ್ಲ. ಸಂತ್ರಸ್ತರು ನಿರ್ದಿಷ್ಟ ಧರ್ಮಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಮಾತ್ರ ಅಪರಾಧ ಎಸಗಲಾಗಿದೆ. ಈ ವೇಳೆ ಅಪ್ರಾಪ್ತ ಮಕ್ಕಳನ್ನೂ ಬಿಡಲಿಲ್ಲ. ಇದು ಮಾನವೀಯತೆಯ ವಿರುದ್ಧದ ಅಪರಾಧದ ಅತ್ಯಂತ ಕೆಟ್ಟ ರೂಪವಾಗಿದೆ. ಇದು ಸಮಾಜದ ಆತ್ಮಸಾಕ್ಷಿಯ ಮೇಲೆ ಪರಿಣಾಮ ಬೀರುತ್ತದೆ” ಎಂದು ಸಿವಿಲ್ ನ್ಯಾಯಾಧೀಶರು ಹೇಳಿದ್ದರು.

ಆದರೆ ಮೇ 13, 2022ರಂದು ಸುಪ್ರೀಂಕೋರ್ಟ್ ಅಪರಾಧಿಗಳಲ್ಲಿ ಒಬ್ಬರು ಸಲ್ಲಿಸಿದ ಮನವಿಯನ್ನು ‌ಪರಿಶೀಲಿಸುತ್ತಾ, “ಸೂಕ್ತ ಸರ್ಕಾರ” ತೆಗೆದುಕೊಳ್ಳಲು ಸರ್ಕಾರಕ್ಕೆ ತಿಳಿಸಿತ್ತು.

ಗುಜರಾತ್ ಸರ್ಕಾರದ ಅಫಿಡವಿಟ್‌ನಲ್ಲಿ 1992ರ ನೀತಿಯನ್ನು ಉಲ್ಲೇಖಿಸಲಾಗಿದೆ. “ಈ ನೀತಿಯ ಪ್ರಕಾರ ಜೈಲಿನ ಇನ್ಸ್‌ಪೆಕ್ಟರ್ ಜನರಲ್ ರವರು ಅಪರಾಧಿಯನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಜಿಲ್ಲಾ ಪೊಲೀಸ್ ಅಧಿಕಾರಿ, ಜಿಲ್ಲಾ ಮ್ಯಾಜಿಸ್ಟ್ರೇಟ್, ಜೈಲು ಅಧೀಕ್ಷಕರು ಮತ್ತು ಸಲಹಾ ಮಂಡಳಿ ಸಮಿತಿಯ ಅಭಿಪ್ರಾಯವನ್ನು ಪಡೆಯುವುದು ಕಡ್ಡಾಯವಾಗಿದೆ. ಅದರ ನಂತರ, ಜೈಲಿನ ಇನ್ಸ್‌ಪೆಕ್ಟರ್ ಜನರಲ್ ಅವರು ನಾಮಮಾತ್ರ ಪಟ್ಟಿಯ ಪ್ರತಿ ಮತ್ತು ತೀರ್ಪಿನ ಪ್ರತಿಯೊಂದಿಗೆ ತಮ್ಮ ಅಭಿಪ್ರಾಯವನ್ನು ನೀಡುವುದಕ್ಕಾಗಿ ಸರ್ಕಾರಕ್ಕೆ ಶಿಫಾರಸನ್ನು ಕಳುಹಿಸಲು ಕಡ್ಡಾಯ. ಇದಲ್ಲದೆ ಅಕಾಲಿಕ ಬಿಡುಗಡೆಯ ಅರ್ಜಿಯ ಪರಿಗಣನೆಯ ಸಮಯದಲ್ಲಿ ಜೈಲ್ ಸಲಹಾ ಮಂಡಳಿಯು 1992ರ ನೀತಿಯನ್ನು ಅನುಸರಿಸುತ್ತದೆ” ಎಂದು ಸರ್ಕಾರ ತಿಳಿಸಿದೆ.

ಸರ್ಕಾರವು ಹಲವಾರು ಅಧಿಕಾರಿಗಳ ಅಭಿಪ್ರಾಯವನ್ನು ಕೇಳಿದ ಬಳಿಕ ನಿರ್ಧಾರ ಪ್ರಕಟಿಸಿರುವುದಾಗಿ ತಿಳಿಸಿದೆ. ಪೊಲೀಸ್ ಸೂಪರಿಂಟೆಂಡೆಂಟ್, ಸಿಬಿಐ, ವಿಶೇಷ ಅಪರಾಧ ವಿಭಾಗ (ಮುಂಬೈ); ಗ್ರೇಟರ್ ಬಾಂಬೆಯ ವಿಶೇಷ ಸಿವಿಲ್ ನ್ಯಾಯಾಧೀಶರು (CBI), ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್; ದಾಹೋದ್ ಪೊಲೀಸ್ ಸೂಪರಿಂಟೆಂಡೆಂಟ್; ದಾಹೋದ್‌ನ ಕಲೆಕ್ಟರ್ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ; ಗೋಧ್ರಾ ಉಪ-ಜೈಲಿನ ಜೈಲ್ ಸೂಪರಿಂಟೆಂಡೆಂಟ್, ಜೈಲು ಸಲಹಾ ಸಮಿತಿ; ಅಹಮದಾಬಾದ್‌ ಜೈಲುಗಳ ಹೆಚ್ಚುವರಿ ಡೈರೆಕ್ಟರ್ ಜನರಲ್ ಅವರ ಅಭಿಪ್ರಾಯಗಳನ್ನು ಬಿಡುಗಡೆಯ ಮೊದಲು ಕೇಳಲಾಗಿದೆ. ಮೊದಲ ಇಬ್ಬರನ್ನು ಹೊರತುಪಡಿಸಿ, ಉಳಿದವರೆಲ್ಲರೂ ಅವರ ಬಿಡುಗಡೆಗೆ ಶಿಫಾರಸು ಮಾಡಿದ್ದಾರೆ ಎಂದು ಸರ್ಕಾರ ಹೇಳಿದೆ.

ಪ್ರಕರಣವನ್ನು ಕೇಂದ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲಾಗಿರುವುದರಿಂದ, ರಾಜ್ಯವು ತನ್ನ ಶಿಫಾರಸನ್ನು ಕೇಂದ್ರಕ್ಕೆ ಸಲ್ಲಿಸಿದೆ. “ಕೇಂದ್ರವು 11 ಕೈದಿಗಳನ್ನು ಬಿಡುಗಡೆ ಮಾಡಲು ಒಪ್ಪಿಗೆ ಸೂಚಿಸಿದೆ” ಎಂದು 11.07.2022ರ ಪತ್ರವನ್ನು ಅಫಡವಿಟ್‌ನಲ್ಲಿ ಸಲ್ಲಿಸಲಾಗಿದೆ.

“…ರಾಜ್ಯ ಸರ್ಕಾರವು ಎಲ್ಲಾ ಅಭಿಪ್ರಾಯಗಳನ್ನು ಪರಿಗಣಿಸಿದೆ. 11 ಕೈದಿಗಳು ಜೈಲಿನಲ್ಲಿ 14 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಅವರ ನಡವಳಿಕೆ ಉತ್ತಮವಾಗಿದೆ ಎಂದು ಕಂಡುಬಂದ ಕಾರಣ ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ” ಎಂದು ಸಮರ್ಥಿಸಿಕೊಂಡಿದೆ.

ಸರ್ಕಾರವು ತನ್ನ 1992ರ ನೀತಿಯ ಪ್ರಕಾರ ಕೈದಿಗಳನ್ನು ಬಿಡುಗಡೆ ಮಾಡಿದೆ ಹೊರತು, ಆಜಾದಿ ಕಾ ಅಮೃತ್ ಮಹೋತ್ಸವದ ಭಾಗವಾಗಿ ಕೈದಿಗಳಿಗೆ ನೀಡಿದ ಉಪಶಮನದ ನಿರ್ಣಯದಿಂದ ಅಲ್ಲ ಎಂದು ಸ್ಪಷ್ಟಪಡಿಸಿದೆ.

ಗೋಧ್ರಾ ನಂತರದ ಗಲಭೆಗಳ ಸಂದರ್ಭದಲ್ಲಿ ದಹೋದ್ ಜಿಲ್ಲೆಯ ಲಿಮ್ಖೇಡಾ ತಾಲೂಕಿನಲ್ಲಿ ಮಾರ್ಚ್ 3, 2002 ರಂದು ಜನಸಮೂಹದಿಂದ ಹತ್ಯೆಗೀಡಾದ 14 ಮಂದಿಯಲ್ಲಿ ಬಿಲ್ಕಿಸ್ ಅವರ ಮೂರು ವರ್ಷದ ಮಗಳು ಸಲೇಹಳೂ ಸೇರಿದ್ದರು. ಆ ಸಮಯದಲ್ಲಿ ಬಿಲ್ಕಿಸ್ ಗರ್ಭಿಣಿಯಾಗಿದ್ದರು.

ಈ ವರ್ಷದ ಆಗಸ್ಟ್ 15ರಂದು ಗುಜರಾತ್ ಸರ್ಕಾರವು 2008ರಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾದ ಪ್ರಕರಣದ ಎಲ್ಲಾ 11 ಅಪರಾಧಿಗಳನ್ನು ಬಿಡುಗಡೆ ಮಾಡಿತು.

ಸಿಪಿಐ(ಎಂ) ನಾಯಕಿ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲಾಲ್ ಮತ್ತು ಶಿಕ್ಷಣತಜ್ಞೆ ರೂಪ್ ರೇಖಾ ವರ್ಮಾ, ಟಿಎಂಸಿ ಸಂಸದ ಮಹುವಾ ಮೊಯಿತ್ರಾ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಬಿಲ್ಕಿಸ್ ಬಾನೋ ಪ್ರಕರಣದ ಆರೋಪಿಗಳ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಸಿದ ಎರಡು ಅರ್ಜಿಗಳ ಆಧಾರದಲ್ಲಿ ಸುಪ್ರೀಂಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತ್ತು. ಕೇಂದ್ರ ಸರ್ಕಾರದ ಅನುಮತಿ ಇಲ್ಲದೆಯೇ ಕ್ರಮ ಜರುಗಿಸಲಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದಕ್ಕಿಂತಲೂ ದುಃಕಕರವಾದ ಮತ್ತು ಹೀನಾಯವಾದ ಸಂಗತಿ ಮತ್ತೊಂದು ಇರಲಾರದು. ಪ್ರಬುತ್ವ ಜಾತಿ, ಜನಾಂಗ, ದರ್ಮಗಳ ನಡುವೆ ತಾರತಮ್ಯವನ್ನು ಮಾಡಬಾರದು.

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...