Homeಮುಖಪುಟಪ್ರತಿಪಕ್ಷಗಳ ಪ್ರತಿಭಟನೆಗೆ ಮಣಿದ ಕೇಂದ್ರ : ಡಿ.9ರಂದು ಸಂಸತ್ತಿನಲ್ಲಿ ಎಸ್‌ಐಆರ್ ಚರ್ಚೆ

ಪ್ರತಿಪಕ್ಷಗಳ ಪ್ರತಿಭಟನೆಗೆ ಮಣಿದ ಕೇಂದ್ರ : ಡಿ.9ರಂದು ಸಂಸತ್ತಿನಲ್ಲಿ ಎಸ್‌ಐಆರ್ ಚರ್ಚೆ

- Advertisement -
- Advertisement -

ಸಂಸತ್ತಿನ ಉಭಯ ಸದನಗಳಲ್ಲಿ ಎರಡು ದಿನಗಳಿಂದ ಪ್ರತಿಪಕ್ಷಗಳು ನಡೆಸಿದ ತೀವ್ರ ಪ್ರತಿಭಟನೆಗೆ ಕೇಂದ್ರ ಸರ್ಕಾರ ಮಣಿದಿದೆ. ಡಿಸೆಂಬರ್ 9ರಂದು ಚುನಾವಣಾ ಸುಧಾರಣೆಗಳು ಎಂಬ ವಿಷಯದ ಅಡಿಯಲ್ಲಿ ಎಸ್‌ಐಆರ್ ಕುರಿತು ಚರ್ಚೆ ನಡೆಸಲು ಒಪ್ಪಿಕೊಂಡಿದೆ.

ವರದಿಗಳ ಪ್ರಕಾರ, ಬಿಹಾರದ ಎಸ್‌ಐಆರ್‌ ಯಶಸ್ಸಿನ ಉದಾಹರಣೆ ಕೊಟ್ಟು ಎಸ್‌ಐಆರ್ ಪ್ರಕ್ರಿಯೆಯನ್ನು ಬಲವಾಗಿ ಸಮರ್ಥಿಸಿಕೊಳ್ಳಲು ಕೇಂದ್ರ ಸರ್ಕಾರ ಯೋಜಿಸಿದೆ. ಡಿಸೆಂಬರ್ 8ರಂದು ವಂದೇ ಮಾತರಂ ಕುರಿತು ಚರ್ಚೆ ನಡೆಸಲೂ ನಿರ್ಧರಿಸಿದೆ.

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಡಿಸೆಂಬರ್ 8ರಂದು ಸೋಮವಾರ ಮಧ್ಯಾಹ್ನ 12ಗಂಟೆಯಿಂದ ‘ವಂದೇ ಮಾತರಂ’ ಕುರಿತು ಹಾಗೂ ಡಿಸೆಂಬರ್ 9ರಂದು ಮಂಗಳವಾರ ಮಧ್ಯಾಹ್ನ 12 ಗಂಟೆಯಿಂದ ಚುನಾವಣಾ ಸುಧಾರಣೆಗಳ ಕುರಿತು ಚರ್ಚೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ನವೆಂಬರ್ 30ರಂದು ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಎಸ್‌ಐಆರ್ ಕುರಿತು ಚರ್ಚೆ ನಡೆಸಬೇಕು ಎಂದು ಪ್ರತಿಪಕ್ಷಗಳು ಬೇಡಿಕೆ ಇಟ್ಟಿತ್ತು. ಚರ್ಚೆಗೆ ಅವಕಾಶ ನೀಡದಿದ್ದರೆ ಕಲಾಪ ನಡೆಯಲು ಬಿಡುವುದಿಲ್ಲ ಎಂದಿತ್ತು.

ಎಸ್‌ಐಆರ್ ಮಾತ್ರವಲ್ಲದೆ ದೆಹಲಿ ಸ್ಫೋಟ ಘಟನೆಯ ನಂತರ ರಾಷ್ಟ್ರೀಯ ಭದ್ರತೆಯ ಕುರಿತು ಚರ್ಚೆಗೆ ವಿರೋಧ ಪಕ್ಷದವರು ಬಲವಾಗಿ ಒತ್ತಾಯಿಸಿದ್ದರು. ಸರ್ಕಾರ ಪ್ರಜಾಪ್ರಭುತ್ವವನ್ನು ಮುಗಿಸಿ, ಸಂಸದೀಯ ಸಂಪ್ರದಾಯಗಳನ್ನು ಸಮಾಧಿ ಮಾಡಲು ಬಯಸುತ್ತಿದೆ ಎಂದು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ಬಿಜೆಪಿ ನಾಯಕಿ ಮಗನ ಮೇಲೆ ಅತ್ಯಾಚಾರ ಆರೋಪ; ವಿಷ ಸೇವಿಸಿದ ಸಂತ್ರಸ್ತೆ ಸ್ಥಿತಿ ಗಂಭೀರ

ಮಧ್ಯಪ್ರದೇಶದ ಶಿವಪುರಿ ನಗರ ಸಭೆಯ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕಿ ಗಾಯತ್ರಿ ಶರ್ಮಾ ಅವರ ಪುತ್ರ ರಜತ್ ಶರ್ಮಾ ವಿರುದ್ಧ ಏಪ್ರಿಲ್ 30 ರಂದು ಎಫ್‌ಐಆರ್ ದಾಖಲಿಸಿದ್ದ ಮಹಿಳೆಯ ಆರೋಗ್ಯ ಹದಗೆಟ್ಟ ನಂತರ...

ದೆಹಲಿಯಲ್ಲಿ ಹೊಸ ವರ್ಷಕ್ಕೂ ಮುನ್ನ ಬೃಹತ್ ಕಾರ್ಯಾಚರಣೆ: 285 ಜನರ ಬಂಧನ, ಶಸ್ತ್ರಾಸ್ತ್ರಗಳು ಮತ್ತು ಮಾದಕ ವಸ್ತುಗಳ ವಶ

ದೆಹಲಿ ಹೊಸ ವರ್ಷಾಚರಣೆಗೆ ಸಜ್ಜಾಗುತ್ತಿದ್ದಂತೆ, ಹಬ್ಬದ ದಟ್ಟಣೆಯಲ್ಲಿ ಅಪರಾಧಗಳನ್ನು ತಡೆಗಟ್ಟುವ ಪ್ರಯತ್ನದಲ್ಲಿ, ಪೊಲೀಸರು ರಾಷ್ಟ್ರ ರಾಜಧಾನಿಯಾದ್ಯಂತ ರಾತ್ರಿಯಿಡೀ ವಿಸ್ತೃತ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ನೂರಾರು ಆರೋಪಿಗಳನ್ನು ಬಂಧಿಸಿದ್ದು, ಅಕ್ರಮ ಶಸ್ತ್ರಾಸ್ತ್ರಗಳು, ಮಾದಕ...

ಅತ್ಯಾಚಾರಿ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು; ದೆಹಲಿ ಹೈಕೋರ್ಟ್ ಮುಂದೆ ಸಂತ್ರಸ್ತೆ ತಾಯಿ ಪ್ರತಿಭಟನೆ

ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ದೆಹಲಿ ಹೈಕೋರ್ಟ್ ಹೊರಗೆ ಶುಕ್ರವಾರ (ಡಿ.26) ಪ್ರತಿಭಟನೆ ನಡೆಸಲಾಯಿತು. ಸೆಂಗಾರ್‌ಗೆ ನಿಡುರವ ಜಾಮೀನು ತಿರಸ್ಕರಿಸಬೇಕೆಂದು...

‘ಉತ್ತರ ಪ್ರದೇಶದ ಗಾಳಿ ಕರ್ನಾಟಕಕ್ಕೂ ಬೀಸಿದೆ, ಬುಲ್ಡೋಜರ್ ನೀತಿ ಇಲ್ಲೂ ಜಾರಿ ಮಾಡುವ ಕೆಲಸ ನಡೆಯುತ್ತಿದೆ: ಪಿಣರಾಯಿ ವಿಜಯನ್ ಟೀಕೆ

ಬೆಂಗಳೂರು: ಕರ್ನಾಟಕ ಸರ್ಕಾರಕ್ಕೂ ಉತ್ತರ ಪ್ರದೇಶ ಸರ್ಕಾರದ ಗಾಳಿ ಬಿಸಿದೆ. ಅಲ್ಲಿನ ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರ್ನಾಟಕದ ಕಾಂಗ್ರೆಸ್​​​ ಸರ್ಕಾರದ ವಿರುದ್ಧ...

ಡೆಹ್ರಾಡೂನ್‌ನಲ್ಲಿ ಜನಾಂಗೀಯ ದಾಳಿ; ಚಾಕು ಇರಿತಕ್ಕೆ ಒಳಗಾಗಿದ್ದ ತ್ರಿಪುರ ವಿದ್ಯಾರ್ಥಿ ಸಾವು

ಜನಾಂಗೀಯ ನಿಂದನೆಯಿಂದ ಪ್ರಾರಂಭವಾಯಿತು ಎನ್ನಲಾದ ಜಗಳವು ಹಿಂಸಾತ್ಮಕ ಪ್ರತಿಭಟನೆಗೆ ತಿರುಗಿದ್ದು, ಚಾಕು ಇರಿತದ ನಂತರ ತ್ರಿಪುರದ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಉತ್ತರಾಖಂಡ್ ಆಸ್ಪತ್ರೆಯಲ್ಲಿ ಎರಡು ವಾರಗಳಿಗೂ ಹೆಚ್ಚು ಕಾಲ ಚಿಕಿತ್ಸೆ ಪಡೆಯುತ್ತಿದ್ದ...

ಉತ್ತರ ಪ್ರದೇಶದಲ್ಲಿ ಮತ್ತೋರ್ವ ಬಿಎಲ್‌ಒ ಆತ್ಮಹತ್ಯೆ: ಎಸ್‌ಐಆರ್‌ ಕೆಲಸದ ಒತ್ತಡ ಕಾರಣವೆಂದ ಕುಟುಂಬ

ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ಶುಕ್ರವಾರ ಬೂತ್ ಮಟ್ಟದ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದ ಕೆಲಸದ ಒತ್ತಡದಿಂದಾಗಿ ಅವರು ಈ ನಿರ್ಧಾರ ಮಾಡಿದ್ದಾರೆ ಎಂದು...

ಉನ್ನಾವೋ ಅತ್ಯಾಚಾರ ಪ್ರಕರಣ: ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ 

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು "ಕಾನೂನಿಗೆ ವಿರುದ್ಧ" ಮತ್ತು "ವಿಕೃತ" ಎಂದು ಕರೆದಿರುವ ಕೇಂದ್ರ ತನಿಖಾ ದಳ (ಸಿಬಿಐ) ಶುಕ್ರವಾರ...

ಮೋದಿ-ಮಲ್ಯ ಇಬ್ಬರನ್ನೂ ಭಾರತಕ್ಕೆ ಕರೆತರುವುದಾಗಿ ವಿದೇಶಾಂಗ ಸಚಿವಾಲಯ ಭರವಸೆ

ಲಲಿತ್ ಮೋದಿ ಮತ್ತು ವಿಜಯ್ ಮಲ್ಯ ಸೇರಿದಂತೆ ಆರ್ಥಿಕವಾಗಿ ಪರಾರಿಯಾಗಿರುವವರನ್ನು ವಿದೇಶದಿಂದ ವಾಪಸ್ ಕರೆತಂದು ದೇಶದಲ್ಲಿ ಕಾನೂನು ಕ್ರಮ ಜರುಗಿಸಲು ಬದ್ಧವಾಗಿದೆ ಎಂದು ಭಾರತ ಸರ್ಕಾರ ಶುಕ್ರವಾರ ಹೇಳಿದೆ. ವಿಜಯ್ ಅವರೊಂದಿಗೆ ಸಾಮಾಜಿಕ ಮಾಧ್ಯಮ...

ಉಕ್ರೇನ್ ರಾಜಧಾನಿ ಕೈವ್ ಮೇಲೆ ರಷ್ಯಾ ದಾಳಿ: ಸೇನಾ ಅಧಿಕಾರಿಗಳ ಹೇಳಿಕೆ

ಉಕ್ರೇನಿಯನ್ ರಾಜಧಾನಿ ಕೈವ್ ನಲ್ಲಿ ಶನಿವಾರ ಮುಂಜಾನೆ ರಷ್ಯಾದಿಂದ ಬೃಹತ್ ದಾಳಿ ನಡೆದಿದೆ ಎಂದು ಸೇನಾ ಅಧಿಕಾರಿಗಳು ಹೇಳಿದ್ದಾರೆ.  ಶನಿವಾರ ಬೆಳಗಿನ ಜಾವ ನಗರದಲ್ಲಿ ಸ್ಫೋಟಗಳ ಸದ್ದು ಕೇಳಿಬಂದಿತು, ವಾಯು ರಕ್ಷಣಾ ಪಡೆಗಳು ಕಾರ್ಯಾಚರಣೆಯಲ್ಲಿವೆ...

ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಪ್ರಕರಣ: ಪ್ರತ್ಯೇಕ ಕಾಯ್ದೆಗೆ ಪ್ರಗತಿಪರ ಸಂಘಟನೆಗಳ ಆಗ್ರಹ

ಮಾದಿಗ ಸಮುದಾಯದ ಯುವಕನನ್ನು ಮದುವೆಯಾಗಿದ್ದ ಲಿಂಗಾಯತ ಸಮುದಾಯದ ಮಾನ್ಯ ಪಾಟೀಲ್ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆ ಪ್ರಕರಣವನ್ನು ಖಂಡಿಸಿ ಸಮಾನ ಮನಸ್ಕ ಪ್ರಗತಿಪರ ಸಂಘಟನೆಗಳು ಶುಕ್ರವಾರ (ಡಿ.26) ಸಂಜೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದವು. ಹುಬ್ಬಳ್ಳಿಯ...