Homeಮುಖಪುಟಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

- Advertisement -
- Advertisement -

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ.

ಸುನಾಲಿ ಖಾತೂನ್ ಎಂಬ ಗರ್ಭಿಣಿ ಮಹಿಳೆ, ಆಕೆಯ ಪತಿ ಮತ್ತು ಮಗ, ಹಾಗೆಯೇ ಸ್ವೀಟಿ ಬಿಬಿ ಎಂಬ ಮಹಿಳೆ ಮತ್ತು ಅವರ ಇಬ್ಬರು ಗಂಡು ಮಕ್ಕಳನ್ನು ದೆಹಲಿಯಲ್ಲಿ ವಶಕ್ಕೆ ಪಡೆದು ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಲಾಗಿತ್ತು. ಸುನಾಲಿ ಖಾತುನ್, ಅವರ ಪತಿ ಮತ್ತು ಮಗ, ಹಾಗೆಯೇ ಸ್ವೀಟಿ ಬಿಬಿ ಮತ್ತು ಅವರ ಇಬ್ಬರು ಗಂಡು ಮಕ್ಕಳನ್ನು ದೆಹಲಿಯಲ್ಲಿ ವಶಕ್ಕೆ ಪಡೆದು ಬಾಂಗ್ಲಾ ಗಡಿಯಾಚೆಗೆ ತಳ್ಳಲಾಗಿತ್ತು. ಈ ಆರೂ ಜನರು ತಾವು ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ನಿವಾಸಿಗಳೆಂದು ಪ್ರತಿಪಾದಿಸುತ್ತಲೇ ಬಂದಿದ್ದರು.

ಸುನಾಲಿ ಖಾತೂನ್ ಎಂಬ ಗರ್ಭಿಣಿ ಮಹಿಳೆ, ಆಕೆಯ ಪತಿ ಮತ್ತು ಮಗ, ಹಾಗೆಯೇ ಸ್ವೀಟಿ ಬಿಬಿ ಎಂಬ ಮಹಿಳೆ ಮತ್ತು ಅವರ ಇಬ್ಬರು ಗಂಡು ಮಕ್ಕಳನ್ನು ದೆಹಲಿಯಲ್ಲಿ ವಶಕ್ಕೆ ಪಡೆದು ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಲಾಗಿತ್ತು. ಈ ಆರೂ ಜನರು ತಾವು ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ನಿವಾಸಿಗಳೆಂದು ಪ್ರತಿಪಾದಿಸುತ್ತಲೇ ಬಂದಿದ್ದರು.

ಗಡಿಯಾಚೆಗೆ ತಳ್ಳುವಾಗ ತುಂಬು ಗರ್ಭಿಣಿಯಾಗಿದ್ದ ಕಾರಣ, ಸುನಾಲಿ ಖಾತೂನ್ ಮತ್ತು ಅವರ ಮಗ ಸಾಬಿರ್‌ನನ್ನು ಮಾನವೀಯತೆಯ ಆಧಾರದ ಮೇಲೆ 2025ರ ಡಿಸೆಂಬರ್‌ನಲ್ಲಿ ಮರಳಿ ಭಾರತಕ್ಕೆ ಕರೆತರಲಾಗಿತ್ತು.

ಬುಧವಾರ ಖಾತೂನ್ ಅವರ ಪತಿ ಡ್ಯಾನಿಶ್ ಶೇಖ್, ಸ್ವೀಟಿ ಬಿಬಿ ಮತ್ತು ಅವರ ಇಬ್ಬರು ಗಂಡು ಮಕ್ಕಳು ಪಶ್ಚಿಮ ಬಂಗಾಳವನ್ನು ಪ್ರವೇಶಿಸಿದ್ದಾರೆ ಎಂದು ಇವರ ಊರಿನವರಾದ ಬೀರ್‌ಭೂಮ್‌ನ ಪೈಕರ್ ಗ್ರಾಮದ ನಿವಾಸಿಸೋಯೆಫ್ ಅಲಿ ತಿಳಿಸಿರುವುದಾಗಿ scroll.in ವರದಿ ಮಾಡಿದೆ.

ನಾಲ್ವರು ಮಾಲ್ಡಾ ಜಿಲ್ಲೆಯ ಮಹಾದಿಪುರ ಗಡಿ ಕ್ರಾಸಿಂಗ್ ಮೂಲಕ ಪಶ್ಚಿಮ ಬಂಗಾಳ ಪ್ರವೇಶಿಸಿದ್ದಾರೆ ಎಂದು ತಿಳಿದು ಬಂದಿದೆ.

ಗಡಿಯಾಚೆಗೆ ತಳ್ಳಿರುವ ಆರು ಜನರ ಪೈಕಿ ಸುನಾಲಿ ಖಾತೂನ್ ಮತ್ತು ಅವರ ಮಗನನ್ನು ಈಗಾಗಲೇ ಭಾರತಕ್ಕೆ ಕರೆ ತಂದಿರುವುದರಿಂದ, ಇನ್ನುಳಿದ ನಾಲ್ವರನ್ನು ಭಾರತಕ್ಕೆ ವಾಪಸ್ ಕರೆತಂದು ಅವರ ಪೌರತ್ವವನ್ನು ಮರು ಪರಿಶೀಲಿಸುವುದಾಗಿ ಮೇ 22ರಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿತ್ತು.

ಆರೂ ಜನರ ಗಡಿಪಾರು ಆದೇಶವನ್ನು ವಜಾಗೊಳಿಸಿದ್ದ ಕಲ್ಕತ್ತಾ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ವೇಳೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿಕೆ ನೀಡಿತ್ತು.

ಗಡಿಯಾಚೆಗೆ ತಳ್ಳಿದವರನ್ನು ನಾಲ್ಕು ವಾರಗಳ ಒಳಗಾಗಿ ಪಶ್ಚಿಮ ಬಂಗಾಳ ಮರಳಿ ಕರೆತರಬೇಕು ಎಂದು ಕಲ್ಕತ್ತಾ ಹೈಕೋರ್ಟ್ ನಿರ್ದೇಶಿಸಿತ್ತು. ಸುನಾಲಿ ಖಾತೂನ್ ಅವರ ತಂದೆ ಭೋದು ಸೇಖ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಈ ಆದೇಶ ನೀಡಿತ್ತು.

ನಾಲ್ಕು ವಾರಗಳ ಅವಧಿ ಮುಗಿಯಲು ಎರಡು ದಿನಗಳು ಬಾಕಿ ಇರುವಾಗ, ಅಕ್ಟೋಬರ್‌ನಲ್ಲಿ ಕೇಂದ್ರ ಸರ್ಕಾರ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಈ ಪ್ರಕರಣದ ವಿಚಾರಣೆ ನಡೆಸಲು ಹೈಕೋರ್ಟ್‌ಗೆ ವ್ಯಾಪ್ತಿ ಇದೆಯೇ ಎಂದು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಪ್ರಶ್ನಿಸಿದ್ದರು.

ನಾಲ್ವರನ್ನು ಭಾರತಕ್ಕೆ ವಾಪಸ್ ಕರೆ ತಂದಿರುವ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸಂಸದ ಸಮೀರುಲ್ ಇಸ್ಲಾಂ ಪ್ರತಿಕ್ರಿಯಿಸಿದ್ದು, “ನ್ಯಾಯಾಂಗದ ಮಧ್ಯಸ್ಥಿಕೆಯ ಕಾರಣದಿಂದಾಗಿ ಮಾತ್ರ ಕೇಂದ್ರ ಸರ್ಕಾರ ಕೊನೆಗೂ ಬಡ ಭಾರತೀಯ ನಾಗರಿಕರನ್ನು ಮರಳಿ ಕರೆ ತಂದಿದೆ” ಎಂದು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಅವರು, “ನಿಜವಾಗಿಯೂ ಅಕ್ರಮ ನುಸುಳುಕೋರರಾಗಿರುವವರನ್ನು ಗಡಿಪಾರು ಮಾಡುವುದಕ್ಕೆ ನಮ್ಮ ಯಾವುದೇ ಆಕ್ಷೇಪಣೆ ಇಲ್ಲ” ಎಂದಿದ್ದಾರೆ. “ನಮ್ಮ ಮೂಲಭೂತ ಪ್ರಶ್ನೆ ಏನೆಂದರೆ: ಗಡಿಪಾರು ಹೆಸರಿನಲ್ಲಿ ಬಡ ಮತ್ತು ನಿಜವಾದ ಭಾರತೀಯ ನಾಗರಿಕರನ್ನು ಏಕೆ ಇಂತಹ ಕಿರುಕುಳ ಮತ್ತು ಅನ್ಯಾಯಕ್ಕೆ ಒಳಪಡಿಸಬೇಕು?” ಎಂದು ಇಸ್ಲಾಂ ಪ್ರಶ್ನಿಸಿದ್ದಾರೆ.

ಏಪ್ರಿಲ್ 2025ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಬಿಜೆಪಿ ಆಡಳಿತವಿರುವ ಹಲವಾರು ರಾಜ್ಯಗಳ ಪೊಲೀಸರು ಬಂಗಾಳಿ ಮಾತನಾಡುವ ವ್ಯಕ್ತಿಗಳನ್ನು, ಹೆಚ್ಚಾಗಿ ಮುಸ್ಲಿಮರನ್ನು ವಶಕ್ಕೆ ಪಡೆಯುತ್ತಿದ್ದಾರೆ ಮತ್ತು ಅವರು ಭಾರತೀಯ ನಾಗರಿಕರು ಎಂಬುದನ್ನು ಸಾಬೀತುಪಡಿಸುವಂತೆ ಒತ್ತಾಯಿಸುತ್ತಿದ್ದಾರೆ.

ತಮ್ಮ ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಹಲವಾರು ವ್ಯಕ್ತಿಗಳನ್ನು ಬಲವಂತವಾಗಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಲಾಗಿದೆ. ಈ ಪೈಕಿ ಹಲವು ಮಂದಿಯನ್ನು ತಪ್ಪಾಗಿ ಬಾಂಗ್ಲಾ ಗಡಿಯಾಚೆಗೆ ತಳ್ಳಲಾಗಿದೆ ಎಂದು ಇಲ್ಲಿನ ರಾಜ್ಯ ಅಧಿಕಾರಿಗಳು ಸಾಬೀತುಪಡಿಸಿದ ನಂತರ, ಮರಳಿ ಕರೆ ತರಲಾಗಿದೆ.ಈ ಆರೂ ಜನರು ತಾವು ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ನಿವಾಸಿಗಳೆಂದು ಪ್ರತಿಪಾದಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...