Homeಚಳವಳಿಪಠ್ಯಕ್ರಮ ನಿರ್ಧರಿಸಲಿರುವ ಕೇಂದ್ರ: ಒಕ್ಕೂಟ ಕಲ್ಪನೆಗೇ ಅನ್ಯಾಯ ಎಂದ ಶಿಕ್ಷಣ ತಜ್ಞರು

ಪಠ್ಯಕ್ರಮ ನಿರ್ಧರಿಸಲಿರುವ ಕೇಂದ್ರ: ಒಕ್ಕೂಟ ಕಲ್ಪನೆಗೇ ಅನ್ಯಾಯ ಎಂದ ಶಿಕ್ಷಣ ತಜ್ಞರು

ಬಿಜೆಪಿ ಸರಕಾರವು ತನ್ನ ಮತೀಯವಾದಿ ನೀತಿಗಳನ್ನು ಪಠ್ಯಕ್ರಮದಲ್ಲಿ ಅಳವಡಿಸಲು ಇದು ಸಂಪೂರ್ಣವಾಗಿ ಸಹಕಾರಿಯಾಗುತ್ತದೆ.  ಅವರ ಉದ್ದೇಶವೂ ಸಹ ಇದೇ’ ಎಂದು ಶ್ರೀಪಾದ ಭಟ್‍ ಅಭಿಪ್ರಾಯ ಪಡುತ್ತಾರೆ.

- Advertisement -
- Advertisement -

ಎಲ್ಲವನ್ನೂ ನಿಯಂತ್ರಿಸಲು ಹೊರಟಿರುವ ಮೋದಿ ನೇತೃತ್ವದ ಸರ್ಕಾರ ಈಗ ರಾಜ್ಯಗಳ ಶಿಕ್ಷಣ ಕ್ಷೇತ್ರಕ್ಕೂ ಕೈ ಹಾಕಿದೆ. ಅದು ನಮ್ಮ ಮಕ್ಕಳ ಶಾಲಾ ಪುಸ್ತಕದಲ್ಲಿ ಏನಿರಬೇಕು ಎಂಬುದನ್ನು ತಾನೇ ನಿರ್ಧರಿಸಲು ಹೊರಟಿದ್ದು, ತಮಿಳುನಾಡು ಮತ್ತು ಕೇರಳ ಸರ್ಕಾರಗಳು ಮಾತ್ರ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿವೆ ಎಂದು ಶಿಕ್ಷಣ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ತಜ್ಞ, ಜನಪರ ಚಿಂತಕ ಬಿ. ಶ್ರೀಪಾದ ಭಟ್‍, ‘ಇನ್ನು ಮುಂದೆ ರಾಜ್ಯ ಸರಕಾರಗಳು ರಚಿಸಿದ ಪಠ್ಯಪುಸ್ತಕಗಳನ್ನು, ಪಠ್ಯಕ್ರಮವನ್ನು ಕೇಂದ್ರ ಸರಕಾರವು ಸೆನ್ಸಾರ್‌ಶಿಪ್ ಮಾಡಲು ಬಿಜೆಪಿ ನೇತೃತ್ವದ ಆಡಳಿತವು ನಿರ್ಧರಿಸಿದೆ…..’ ಎನ್ನುತ್ತಾರೆ.

‘ಈ ಮೂಲಕ ತನಗೆ ಸರಿ ಕಾಣದ, ಸೈದ್ದಾಂತಿಕವಾಗಿ ಭಿನ್ನ ಪಠ್ಯಗಳಿರುವ ಸಿಲಬಸ್‍ ಅನ್ನು ತೆಗೆದು ಹಾಕಿ ತನ್ನದೇ ಹೊಸ ಪಠ್ಯಗಳನ್ನು ಸೇರಿಸುವ ಪರಮಾಧಿಕಾರ ಹೊಂದಲು ನಿರ್ಧರಿಸಿದೆ…. ಈ ಹಿನ್ನೆಲೆಯಲ್ಲಿ ಎನ್‍ಸಿಇಆರ್‌ಟಿ (ರಾಷ್ಟ್ರೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ) ತಮ್ಮ ಶಿಫಾರಸ್ಸುಗಳನ್ನು ಸಲ್ಲಿಸಬೇಕೆಂದು ರಾಜ್ಯಗಳಿಗೆ ಕೇಳಿದೆ. ಎನ್‍ಸಿಇಆರ್‌ಟಿಟಿ ಈ ರೀತಿಯ ನಿರ್ದೇಶನ ನೀಡುತ್ತಿರುವುದು ಇದೇ ಮೊದಲು’ ಎನ್ನುತ್ತಾರೆ ಶ್ರೀಪಾದ ಭಟ್‍.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು ‘ಇದಕ್ಕೂ ಮುಂಚೆ  ಕೇಂದ್ರವು ಕೊಡುವ ಸ್ಥೂಲ ವಿವರಣೆ ಒಳಗೊಂಡಂತೆ ರಾಜ್ಯಗಳು  ಸಲ್ಲಿಸುವ ದಸ್ತಾವೇಜು ಆಧರಿಸಿ ‘ರಾಷ್ಟ್ರೀಯ ಪಠ್ಯಕ್ರಮ’ ರಚನೆಯಾಗುತ್ತಿತ್ತು. ರಾಜ್ಯಗಳು ಕಳುಹಿಸಿದ ಪಠ್ಯಕ್ರಮದಲ್ಲಿ ಕೆಲ ಭಾಗಗಳನ್ನು ತೆಗೆದು ತನ್ನ ಪಠ್ಯವನ್ನು ಸೇರಿಸಲು ಕೇಂದ್ರಕ್ಕೆ ಅಧಕಾರವಿದೆ. ಇದು ಕೂಡ ರಾಜ್ಯಗಳ ಸ್ವಾಯತ್ತತೆ ಮತ್ತು ಒಕ್ಕೂಟ ತತ್ವಕ್ಕೆ ವಿರೋಧ ನೀತಿಯಾಗಿದೆ. ಆದರೆ ಶಿಕ್ಷಣ ಸಮವರ್ತಿ ಪಟ್ಟಿಯಲ್ಲಿ ಬರುವುದರಿಂದ ಇದು ಸಾಮಾನ್ಯವಾದ ವಾಡಿಕೆಯಾಗಿದೆ. ಈವರೆಗೂ ಕೇಂದವು ರಾಜ್ಯಗಳ ಪಠ್ಯವಸ್ತು ರಚನೆ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡುತ್ತಿರಲಿಲ್ಲ. ಆದರೆ ಈ ರೂಢಿಯನ್ನು ಬದಲಿಸಲು ಬಿಜೆಪಿ ನಿರ್ಧರಿಸಿದೆ. ಇದರ ಅನುಸಾರ ಇನ್ನು ಮುಂದೆ ರಾಜ್ಯಗಳು ತಾವು ಶಾಲಾ ಸಿಲಬಸ್‍ ರಚನೆ ಮಾಡುವುದಕ್ಕೂ ಮುಂಚೆ ಕೇಂದ್ರಕ್ಕೆ ಅದರ ಎಲ್ಲಾ ರೂಪುರೇಷೆಗಳ, ಪಠ್ಯಗಳ ಮಾಹಿತಿ ಒದಗಿಸಬೇಕು. ನಂತರ ಕೇಂದ್ರ ಸರಕಾರವು ಅದರಲ್ಲಿ ಯಾವುದನ್ನು ಉಳಿಸಿಕೊಳ್ಳಬೇಕು, ಯಾವುದನ್ನು ತೆಗೆಯಬೇಕು ಎಂದು ನಿರ್ಧರಿಸುತ್ತದೆ. ಅದರ ಆದಾರದಲ್ಲಿ ರಾಜ್ಯಗಳು ಮರಳಿ ಪಠ್ಯಕ್ರಮ ರಚಿಸಿ ಕೇಂದ್ರಕ್ಕೆ ಕಳುಹಿಸಬೇಕು. ಇದು ಸರ್ವಾಧಿಕಾರದ ಲಕ್ಷಣವೇ ಆಗಿದ್ದು, ಒಕ್ಕೂಟ ವ್ಯವಸ್ಥೆಯನ್ನೇ ಧ್ವಂಸ ಮಾಡುವ ನಿಟ್ಟಿನಲ್ಲಿ ನಡೆಯುತ್ತಿರುವ ಕ್ರಮಗಳ ಮಗದೊಂದು ಭಾಗವೇ ಆಗಿದೆ’ ಎನ್ನುತ್ತಾರೆ.

‘2007ರಲ್ಲಿ ರಾಜ್ಯಗಳು ಸಿದ್ದಪಡಿಸಿದ್ದ ಪಠ್ಯಕ್ರಮ ಅಥವಾ ಸಿಲಬಸ್‍ ಅನ್ನು 2013ರಲ್ಲಿ ಪರಿಷ್ಕರಿಸಲಾಯಿತು. ಆಗ ಕೇಂದ್ರವು ಯಾವುದೇ ಹಸ್ತಕ್ಷೇಪ ಮಾಡಿರಲಿಲ್ಲ. ಆದರೆ ಈಗ ರಾಜ್ಯಗಳು ಪಠ್ಯಕ್ರಮ ಅಥವಾ ಸಿಲಬಸ್‍ ರಚನೆಗೆ ಮುಂಚೆ ಕೇಂದ್ರಕ್ಕೆ ಅದರ ವಿವರಗಳನ್ನು ಒದಗಿಸಬೇಕು. ಇದು ವಿಕೇಂದ್ರಿಕರಣ ನೀತಿಗೆ ತದ್ವಿರುದ್ಧ’ ಎಂದರು.

‘ಚುನಾವಣೆಗಳೇ ಬೇಡ ಬಿಡಿ. ಕೇಂದ್ರ ಸರ್ಕಾರವೇ ಮುಖ್ಯಮಂತ್ರಿಗಳನ್ನು ಮತ್ತು ರಾಜ್ಯ ಸರ್ಕಾರಗಳನ್ನು ನೇಮಿಸಿ ಬಿಡಲಿ. ಇದು ತೀರಾ ಅತಿಗೆ ಹೋಗುತ್ತಿದೆ. ಹೊಸ ಶಿಕ್ಷಣ ನೀತಿಯೇ ಒಂದು ಅಧ್ವಾನ.. ಎಲ್ಲ ರಾಜ್ಯ ಸರ್ಕಾರಗಳು ಇದನ್ನು ತಿರಸ್ಕರಿಸುವ ನಿರ್ಣಯ ಮಂಡಣೆ ಮಾಡಬೇಕು’ ಎಂದು ಶಿಕ್ಷಣ ತಜ್ಞ ಪ್ರೊ. ನಿರಂಜನಾರಾಧ್ಯ ಆಕ್ರೋಶ ವ್ಯಕ್ತಪಡಿಸಿದರು.

‘ಕೇಂದ್ರ ಸರ್ಕಾರ ಒಂದು ಪಠ್ಯ ಚೌಕಟ್ಟನ್ನು ಒದಗಿಸಬೇಕು ಅಷ್ಟೇ. ಅದರ ಅನ್ವಯ ರಾಜ್ಯಗಳು ತಮ್ಮ ಸ್ಥಳೀಯತೆಯ ಆಧಾರದಲ್ಲಿ ಪಠ್ಯ  ರಚನೆ ಮಾಡಿಕೊಳ್ಳುತ್ತವೆ. ಆದರೀಗ ತಾನು ಸೂಚಿಸಿದ ಪಠ್ಯಗಳನ್ನೇ ಅಥವಾ ಪಠ್ಯಕ್ರಮವನ್ನೇ ಎಲ್ಲರೂ ಪಾಲಿಸಬೇಕು ಎನ್ನುವುದು ಸಂವಿಧಾನ ವಿರೋಧಿ ಕ್ರಮವಾಗಿದೆ. ಸಮವರ್ತಿ ಪಟ್ಟಿಯಲ್ಲಿರುವ ಶಿಕ್ಷಣಕ್ಕೆ ಮೊದಲು ಅನುದಾನ ನೀಡುವ ಕೆಲಸವನ್ನು ಕೇಂದ್ರ ಮಾಡಲಿ. ಅದು ಬಿಟ್ಟು ಇಂತಹ ಅನಾಹುತ ಕೆಲಸ ಮಾಡುವುದನ್ನು ಕೈ ಬಿಡಲಿ. ಒಕ್ಕೂಟ ವ್ಯವಸ್ಥೆಯನ್ನೇ ನಾಶ ಮಾಡಲು ಹೊರಟ ಕೇಂದ್ರದ ವಿರುದ್ಧ ಎಲ್ಲ ರಾಜ್ಯಗಳ ಜನ ಪ್ರತಿರೋಧ ತೋರಬೇಕಾಗಿದೆ’ ಎಂದು ನಿರಂಜನಾರಾಧ್ಯ ಹೇಳಿದರು.

‘ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಸಹ ಶಿಕ್ಷಣದ ಕೇಂದ್ರೀಕರಣಕ್ಕೆ ಹೆಚ್ಚಿನ ಒತ್ತು ಕೊಡುತ್ತದೆ. ಈಗ ಪಠ್ಯದಲ್ಲೂ ತಲೆ ಹಾಕುವ ನಿರ್ಧಾರ ಪ್ರಜಾಪ್ರಭುತ್ವದ ಆಶಯಗಳಿಗೆ, ಸಂವಿಧಾನದ ನೀತಿಸಂಹಿತೆಗಳಿಗೆ ವಿರೋಧಿಯಾಗಿದೆ. ಬಿಜೆಪಿ ಸರಕಾರವು ತನ್ನ ಮತೀಯವಾದಿ ನೀತಿಗಳನ್ನು ಪಠ್ಯಕ್ರಮದಲ್ಲಿ ಅಳವಡಿಸಲು ಇದು ಸಂಪೂರ್ಣವಾಗಿ ಸಹಕಾರಿಯಾಗುತ್ತದೆ.  ಅವರ ಉದ್ದೇಶವೂ ಸಹ ಇದೇ’ ಎಂದು ಶ್ರೀಪಾದ ಭಟ್‍ ಅಭಿಪ್ರಾಯ ಪಡುತ್ತಾರೆ.

‘ಇದರಿಂದ ರಾಜ್ಯಗಳು ಪಠ್ಯಕ್ರಮ ಸಿದ್ದಪಡಿಸುವ ಸಂಬಂಧಿತ ತಮಗಿರುವ ಅಲ್ಪ ಸ್ವಲ್ಪ ಹಕ್ಕುಗಳನ್ನು ಕಳೆದುಕೊಳ್ಳುತ್ತವೆ. ಕೇರಳ, ತಮಿಳುನಾಡು ರಾಜ್ಯಗಳು ಮಾತ್ರ ಈ ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸಿವೆ. ವಿರೋಧ ಪಕ್ಷ ಆಡಳಿತವಿರುವ ಮಿಕ್ಕ 12 ರಾಜ್ಯಗಳು ದಿವ್ಯ ಮೌನದಲ್ಲಿವೆ. ಕರ್ನಾಟಕ ಬಿಡಿ, ಜಿಎಸ್‍ಟಿ ಪಾಲು, ಅತಿವೃಷ್ಟಿ ಪರಿಹಾರ ಕೊಡದಿದ್ದರೂ ತೆಪ್ಪಗಿರುತ್ತದೆ, ಎಲ್ಲ ಬಿಜೆಪಿ ಆಳ್ವಿಕೆಯ ಸರ್ಕಾರಗಳಂತೆ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಈ ಇಬ್ಬರು ಶಿಕ್ಷಣ ತಜ್ಞರು ಹೊಸ ಶಿಕ್ಷಣ ನೀತಿಯೇ ಅಪಾಯಕಾರಿ ಎನ್ನುತ್ತಾರೆ. ‘ಆ ಶಿಕ್ಷಣ ನೀತಿಯ ಕರಡುವಿನಲ್ಲಿ ಬಸವ, ಅಂಬೇಡ್ಕರ್, ಪೆರಿಯಾರ್, ತಿರುವಳ್ಳುವರ್ ಮುಂತಾದ ಸಮಾನತೆಯ ಹರಿಕಾರರ ಪ್ರಸ್ತಾಪವೇ ಇಲ್ಲ. ಚರಕ, ಶುಶ್ರೂತ ಇತ್ಯಾದಿ ವೈದಿಕ ಹೆಸರುಗಳೇ ತುಂಬಿವೆ. ಎಲ್ಲ ರಾಜ್ಯ ಸರ್ಕಾರಗಳೂ ಮೊದಲು ಹೊಸ ಶಿಕ್ಷಣ ನೀತಿಯನ್ನು ತಿರಸ್ಕರಿಸಬೇಕು. ಸಂವಿಧಾನ ಆ ಅವಕಾಶವನ್ನೂ ನೀಡಿದೆ’ ಎಂದು ಪ್ರೊ. ನಿರಂಜನಾರಾಧ್ಯ ನಾನುಗೌರಿ.ಕಾಂಗೆ ತಿಳಿಸಿದರು.


ಇದನ್ನೂ ಓದಿ: ಪದವಿ ಶಿಕ್ಷಣ ನಾಲ್ಕು ವರ್ಷಕ್ಕೆ ಏರಿಸುವುದಕ್ಕೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ ವಿರೋಧ   

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...