Homeಮುಖಪುಟಎಂಎಸ್‌ಪಿ ಕಾನೂನು ಜಾರಿಗೆ ಸಮಿತಿ ರಚಿಸಲು ಕೇಂದ್ರ ನಿರ್ಧಾರ: 5 ಜನ ರೈತ ಪ್ರತಿನಿಧಿಗಳಿರಲು ಒತ್ತಾಯ

ಎಂಎಸ್‌ಪಿ ಕಾನೂನು ಜಾರಿಗೆ ಸಮಿತಿ ರಚಿಸಲು ಕೇಂದ್ರ ನಿರ್ಧಾರ: 5 ಜನ ರೈತ ಪ್ರತಿನಿಧಿಗಳಿರಲು ಒತ್ತಾಯ

- Advertisement -
- Advertisement -

ರೈತರ ನಿರಂತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ವಿವಾದಾತ್ಮಕ ಕೃಷಿ ಕಾಯ್ದೆಗನ್ನು ಹಿಂತೆಗೆದುಕೊಂಡಿದೆ. ರೈತರ ದೃಷ್ಟಿಯೀಗ ಎಂಎಸ್‌ಪಿ ಖಾತ್ರಿಗಾಗಿ ಕಾನೂನು ಮಾಡಬೇಕು ಎಂಬುದರ ಮೇಲಿದೆ. ರೈತರ ಬಹು ದಿನದ ಬೇಡಿಕೆಗಳಲ್ಲಿ ಒಂದಾದ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಕಾನೂನು ಜಾರಿಗೂ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, ಈ ಸಂಬಂಧ ಸಮಿತಿಯನ್ನು ರಚಿಸಿದೆ. ಆದರೆ, ರೈತ ಸಂಘಗಳ 5 ಜನ ಪ್ರತಿನಿಧಿಗಳನ್ನೂ ಈ ಸಮಿತಿಗೆ ನೇಮಕ ಮಾಡಲು ಬೇಡಿಕೆ ಇಟ್ಟಿದ್ದು, ಇದು ಸಾಧ್ಯವಾದರೆ ರೈತರ ಹೋರಾಟವನ್ನು ಅಂತ್ಯಗೊಳಿಸುವ ಚರ್ಚೆಗಳು ಕೇಳಿಬರುತ್ತಿವೆ.

ಜಮ್ಹುರಿ ಕಿಸಾನ್ ಸಭಾದ ಪ್ರಧಾನ ಕಾರ್ಯದರ್ಶಿ ಕುಲ್ವಂತ್ ಸಿಂಗ್ ಸಂಧು ಈ ಬಗ್ಗೆ ದಿ ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡಿದ್ದು, “ಸಮಿತಿಯಲ್ಲಿ ಸೇರಿಸಬೇಕಾದ ಐದು ಜನರ ಹೆಸರನ್ನು ನಾಮನಿರ್ದೇಶನ ಮಾಡುವ ಬಗ್ಗೆ ನಾವು ಸರ್ಕಾರದಿಂದ ಸಂದೇಶವನ್ನು ಸ್ವೀಕರಿಸಿದ್ದೇವೆ. ರೈತ ಸಂಘದ ಮುಖಂಡರು ಮತ್ತು ತಜ್ಞರನ್ನು ಒಳಗೊಂಡ ಐದು ಜನರ ಹೆಸರನ್ನು ನಿರ್ಧರಿಸಲು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಬುಧವಾರ ಸಭೆ ಸೇರಲಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರ ಈಗಾಗಲೇ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಿದೆ. ಅಲ್ಲದೆ ಎಂಎಸ್ಪಿ ಕುರಿತು ಸಮಿತಿಯನ್ನು ರಚಿಸುವುದು, ಅದರ ವಿಧಾನಗಳನ್ನು ಚರ್ಚಿಸುವುದು ಮತ್ತು ರೈತರ ವಿರುದ್ಧದ ಎಫ್ಐಆರ್ಗಳನ್ನು ಹಿಂಪಡೆಯುವುದು ಸೇರಿದಂತೆ ರೈತರ ಹಲವಾರು ಬೇಡಿಕೆಗಳನ್ನು ಈಡೇರಿಸಿದರೆ, ರೈತರಿಂದ “ಧರಣಿಯನ್ನು ಹಿಂತೆಗೆದುಕೊಳ್ಳಲು ಇದು ಬಲವಾದ ಅಂಶವಾಗಿದೆ” ಎಂದು ಅವರು ತಿಳಿಸಿದ್ದಾರೆ.

ಪಂಜಾಬ್-ಹರಿಯಾಣ ಸೇರಿದಂತೆ ಅನೇಕ ರಾಜ್ಯಗಳ ರೈತರು ದೆಹಲಿ ಗಡಿಗಳಾದ ಟಿಕ್ರಿ, ಸಿಂಘು, ಶಹಜಾನ್ಪುರ್, ಘಾಜೀಪುರ್‌ನಲ್ಲಿ ಕಳೆದ ಒಂದು ವರ್ಷದಿಂದ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಮುಂದಿನ ಎರಡು ವರ್ಷದವರೆಗೆ ಹೋರಾಟಕ್ಕೆ ಎಲ್ಲಾ ತಯಾರಿಯನ್ನು ನಡೆಸಿದ್ದರು. ಆದರೆ, ಇದೀಗ ರೈತರ ಎದುರು ಸರ್ಕಾರವೇ ಮಣಿದಿರುವ ಪರಿಣಾಮ ರೈತರ ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ತನ್ನ ಮುಂದಿನ ಕ್ರಮವನ್ನು ಡಿಸೆಂಬರ್ 4 ರಂದು ಪ್ರಕಟಿಸುವ ನಿರೀಕ್ಷೆಯಿದೆ.

ಬಿಕೆಯು ನ ಪ್ರಧಾನ ಕಾರ್ಯದರ್ಶಿ ಜಗಮೋಹನ್ ಸಿಂಗ್ ಪಟಿಯಾಲ ಸಹ ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದು, “ಎಂಎಸ್ಪಿ (MSP) ಸಮಿತಿಯ ಭಾಗವಾಗಲು ಐದು ರೈತ ಸಂಘದ ಮುಖಂಡರ ಹೆಸರುಗಳನ್ನು ಕೋರಿ ಸರ್ಕಾರ ಮಂಗಳವಾರ ನಮ್ಮನ್ನು ಸಂಪರ್ಕಿಸಿದೆ. ರೈತರ ವಿರುದ್ಧದ ಮೊಕದ್ದಮೆಗಳನ್ನು ಹಿಂಪಡೆಯುವಂತೆ ಎಲ್ಲಾ ರಾಜ್ಯಗಳಿಗೂ ಪತ್ರ ಕಳುಹಿಸಲಾಗಿದೆ ಎಂದು ಮೌಖಿಕ ಭರವಸೆ ನೀಡಿದೆ. ಆದರೆ ಇನ್ನೂ ಯಾವ ವಿಚಾರವನ್ನೂ ಬರಹದ ರೂಪದಲ್ಲಿ ಲಿಖಿತ ವಿಶ್ವಾಸ ನೀಡಿಲ್ಲ. ಗೃಹ ಸಚಿವಾಲಯ ನಮ್ಮೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಹಾಗಾಗಿ ಹೆಚ್ಚಿನ ಬೇಡಿಕೆಗಳನ್ನು ಈಡೇರಿಸಲಾಗಿದೆ ಎಂದು ನಾನು ನಂಬುತ್ತೇನೆ” ಎಂದು ಜಗಮೋಹನ್ ಸಿಂಗ್ ಪಟಿಯಾಲ ತಿಳಿಸಿದ್ದಾರೆ.

“ವಿದ್ಯುಚ್ಛಕ್ತಿ (ತಿದ್ದುಪಡಿ) ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವುದಿಲ್ಲ ಎಂದು ತಿಳಿಸಲಾಗಿದೆ ಮತ್ತು ಮಾಲಿನ್ಯ ನಿಯಂತ್ರಣ ಸುಗ್ರೀವಾಜ್ಞೆಯಲ್ಲಿ ರೈತರಿಗೆ ಹುಲ್ಲು ಸುಡುವವರಿಗೆ ದಂಡ ವಿಧಿಸುವ ವಿಭಾಗವನ್ನು ಹಿಂಪಡೆಯಲಾಗಿದೆ. ಆದರೆ ಹೆಚ್ಚಿನ ವಿಷಯಗಳನ್ನು ನಮಗೆ ಮೌಖಿಕವಾಗಿ ತಿಳಿಸಲಾಗಿದೆ, ಲಿಖಿತವಾಗಿ ಅಲ್ಲ” ಎಂದು ಅವರು ಹೇಳಿದರು.

ಕ್ರಾಂತಿಕಾರಿ ಕಿಸಾನ್ ಯೂನಿಯನ್ ಅಧ್ಯಕ್ಷ ಮತ್ತು ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕರಾದ ಡಾ.ದರ್ಶನ್ ಪಾಲ್ ಮಾತನಾಡಿ, ‘ಎಂಎಸ್ಪಿ ಸಮಿತಿಗೆ ಐದು ರೈತರ ಪ್ರತಿನಿಧಿಗಳ ಹೆಸರನ್ನು ಸರ್ಕಾರ ಕೇಳಿದೆ ಎಂದು ನನಗೆ ತಿಳಿದಿದೆ. ಆದರೆ ಯಾರೂ ನನ್ನನ್ನು ಸಂಪರ್ಕಿಸಲಿಲ್ಲ ಎಂದಿದ್ದಾರೆ.


ಇದನ್ನೂ ಓದಿ: ಕೃಷಿ ಕಾಯ್ದೆ ರದ್ದತಿಗೆ ಒಪ್ಪಿಗೆ ನೀಡಿದ ರಾಷ್ಟ್ರಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...