Homeಮುಖಪುಟಎಂಎಸ್‌ಪಿ ಕಾನೂನು ಜಾರಿಗೆ ಸಮಿತಿ ರಚಿಸಲು ಕೇಂದ್ರ ನಿರ್ಧಾರ: 5 ಜನ ರೈತ ಪ್ರತಿನಿಧಿಗಳಿರಲು ಒತ್ತಾಯ

ಎಂಎಸ್‌ಪಿ ಕಾನೂನು ಜಾರಿಗೆ ಸಮಿತಿ ರಚಿಸಲು ಕೇಂದ್ರ ನಿರ್ಧಾರ: 5 ಜನ ರೈತ ಪ್ರತಿನಿಧಿಗಳಿರಲು ಒತ್ತಾಯ

- Advertisement -
- Advertisement -

ರೈತರ ನಿರಂತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ವಿವಾದಾತ್ಮಕ ಕೃಷಿ ಕಾಯ್ದೆಗನ್ನು ಹಿಂತೆಗೆದುಕೊಂಡಿದೆ. ರೈತರ ದೃಷ್ಟಿಯೀಗ ಎಂಎಸ್‌ಪಿ ಖಾತ್ರಿಗಾಗಿ ಕಾನೂನು ಮಾಡಬೇಕು ಎಂಬುದರ ಮೇಲಿದೆ. ರೈತರ ಬಹು ದಿನದ ಬೇಡಿಕೆಗಳಲ್ಲಿ ಒಂದಾದ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಕಾನೂನು ಜಾರಿಗೂ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, ಈ ಸಂಬಂಧ ಸಮಿತಿಯನ್ನು ರಚಿಸಿದೆ. ಆದರೆ, ರೈತ ಸಂಘಗಳ 5 ಜನ ಪ್ರತಿನಿಧಿಗಳನ್ನೂ ಈ ಸಮಿತಿಗೆ ನೇಮಕ ಮಾಡಲು ಬೇಡಿಕೆ ಇಟ್ಟಿದ್ದು, ಇದು ಸಾಧ್ಯವಾದರೆ ರೈತರ ಹೋರಾಟವನ್ನು ಅಂತ್ಯಗೊಳಿಸುವ ಚರ್ಚೆಗಳು ಕೇಳಿಬರುತ್ತಿವೆ.

ಜಮ್ಹುರಿ ಕಿಸಾನ್ ಸಭಾದ ಪ್ರಧಾನ ಕಾರ್ಯದರ್ಶಿ ಕುಲ್ವಂತ್ ಸಿಂಗ್ ಸಂಧು ಈ ಬಗ್ಗೆ ದಿ ಇಂಡಿಯನ್ ಎಕ್ಸ್‌ಪ್ರೆಸ್ ಜೊತೆ ಮಾತನಾಡಿದ್ದು, “ಸಮಿತಿಯಲ್ಲಿ ಸೇರಿಸಬೇಕಾದ ಐದು ಜನರ ಹೆಸರನ್ನು ನಾಮನಿರ್ದೇಶನ ಮಾಡುವ ಬಗ್ಗೆ ನಾವು ಸರ್ಕಾರದಿಂದ ಸಂದೇಶವನ್ನು ಸ್ವೀಕರಿಸಿದ್ದೇವೆ. ರೈತ ಸಂಘದ ಮುಖಂಡರು ಮತ್ತು ತಜ್ಞರನ್ನು ಒಳಗೊಂಡ ಐದು ಜನರ ಹೆಸರನ್ನು ನಿರ್ಧರಿಸಲು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಬುಧವಾರ ಸಭೆ ಸೇರಲಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರ ಈಗಾಗಲೇ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಿದೆ. ಅಲ್ಲದೆ ಎಂಎಸ್ಪಿ ಕುರಿತು ಸಮಿತಿಯನ್ನು ರಚಿಸುವುದು, ಅದರ ವಿಧಾನಗಳನ್ನು ಚರ್ಚಿಸುವುದು ಮತ್ತು ರೈತರ ವಿರುದ್ಧದ ಎಫ್ಐಆರ್ಗಳನ್ನು ಹಿಂಪಡೆಯುವುದು ಸೇರಿದಂತೆ ರೈತರ ಹಲವಾರು ಬೇಡಿಕೆಗಳನ್ನು ಈಡೇರಿಸಿದರೆ, ರೈತರಿಂದ “ಧರಣಿಯನ್ನು ಹಿಂತೆಗೆದುಕೊಳ್ಳಲು ಇದು ಬಲವಾದ ಅಂಶವಾಗಿದೆ” ಎಂದು ಅವರು ತಿಳಿಸಿದ್ದಾರೆ.

ಪಂಜಾಬ್-ಹರಿಯಾಣ ಸೇರಿದಂತೆ ಅನೇಕ ರಾಜ್ಯಗಳ ರೈತರು ದೆಹಲಿ ಗಡಿಗಳಾದ ಟಿಕ್ರಿ, ಸಿಂಘು, ಶಹಜಾನ್ಪುರ್, ಘಾಜೀಪುರ್‌ನಲ್ಲಿ ಕಳೆದ ಒಂದು ವರ್ಷದಿಂದ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಮುಂದಿನ ಎರಡು ವರ್ಷದವರೆಗೆ ಹೋರಾಟಕ್ಕೆ ಎಲ್ಲಾ ತಯಾರಿಯನ್ನು ನಡೆಸಿದ್ದರು. ಆದರೆ, ಇದೀಗ ರೈತರ ಎದುರು ಸರ್ಕಾರವೇ ಮಣಿದಿರುವ ಪರಿಣಾಮ ರೈತರ ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ತನ್ನ ಮುಂದಿನ ಕ್ರಮವನ್ನು ಡಿಸೆಂಬರ್ 4 ರಂದು ಪ್ರಕಟಿಸುವ ನಿರೀಕ್ಷೆಯಿದೆ.

ಬಿಕೆಯು ನ ಪ್ರಧಾನ ಕಾರ್ಯದರ್ಶಿ ಜಗಮೋಹನ್ ಸಿಂಗ್ ಪಟಿಯಾಲ ಸಹ ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದು, “ಎಂಎಸ್ಪಿ (MSP) ಸಮಿತಿಯ ಭಾಗವಾಗಲು ಐದು ರೈತ ಸಂಘದ ಮುಖಂಡರ ಹೆಸರುಗಳನ್ನು ಕೋರಿ ಸರ್ಕಾರ ಮಂಗಳವಾರ ನಮ್ಮನ್ನು ಸಂಪರ್ಕಿಸಿದೆ. ರೈತರ ವಿರುದ್ಧದ ಮೊಕದ್ದಮೆಗಳನ್ನು ಹಿಂಪಡೆಯುವಂತೆ ಎಲ್ಲಾ ರಾಜ್ಯಗಳಿಗೂ ಪತ್ರ ಕಳುಹಿಸಲಾಗಿದೆ ಎಂದು ಮೌಖಿಕ ಭರವಸೆ ನೀಡಿದೆ. ಆದರೆ ಇನ್ನೂ ಯಾವ ವಿಚಾರವನ್ನೂ ಬರಹದ ರೂಪದಲ್ಲಿ ಲಿಖಿತ ವಿಶ್ವಾಸ ನೀಡಿಲ್ಲ. ಗೃಹ ಸಚಿವಾಲಯ ನಮ್ಮೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಹಾಗಾಗಿ ಹೆಚ್ಚಿನ ಬೇಡಿಕೆಗಳನ್ನು ಈಡೇರಿಸಲಾಗಿದೆ ಎಂದು ನಾನು ನಂಬುತ್ತೇನೆ” ಎಂದು ಜಗಮೋಹನ್ ಸಿಂಗ್ ಪಟಿಯಾಲ ತಿಳಿಸಿದ್ದಾರೆ.

“ವಿದ್ಯುಚ್ಛಕ್ತಿ (ತಿದ್ದುಪಡಿ) ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವುದಿಲ್ಲ ಎಂದು ತಿಳಿಸಲಾಗಿದೆ ಮತ್ತು ಮಾಲಿನ್ಯ ನಿಯಂತ್ರಣ ಸುಗ್ರೀವಾಜ್ಞೆಯಲ್ಲಿ ರೈತರಿಗೆ ಹುಲ್ಲು ಸುಡುವವರಿಗೆ ದಂಡ ವಿಧಿಸುವ ವಿಭಾಗವನ್ನು ಹಿಂಪಡೆಯಲಾಗಿದೆ. ಆದರೆ ಹೆಚ್ಚಿನ ವಿಷಯಗಳನ್ನು ನಮಗೆ ಮೌಖಿಕವಾಗಿ ತಿಳಿಸಲಾಗಿದೆ, ಲಿಖಿತವಾಗಿ ಅಲ್ಲ” ಎಂದು ಅವರು ಹೇಳಿದರು.

ಕ್ರಾಂತಿಕಾರಿ ಕಿಸಾನ್ ಯೂನಿಯನ್ ಅಧ್ಯಕ್ಷ ಮತ್ತು ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕರಾದ ಡಾ.ದರ್ಶನ್ ಪಾಲ್ ಮಾತನಾಡಿ, ‘ಎಂಎಸ್ಪಿ ಸಮಿತಿಗೆ ಐದು ರೈತರ ಪ್ರತಿನಿಧಿಗಳ ಹೆಸರನ್ನು ಸರ್ಕಾರ ಕೇಳಿದೆ ಎಂದು ನನಗೆ ತಿಳಿದಿದೆ. ಆದರೆ ಯಾರೂ ನನ್ನನ್ನು ಸಂಪರ್ಕಿಸಲಿಲ್ಲ ಎಂದಿದ್ದಾರೆ.


ಇದನ್ನೂ ಓದಿ: ಕೃಷಿ ಕಾಯ್ದೆ ರದ್ದತಿಗೆ ಒಪ್ಪಿಗೆ ನೀಡಿದ ರಾಷ್ಟ್ರಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...