Homeಮುಖಪುಟಆರಾಧನಾ ಸ್ಥಳಗಳ ಕಾಯ್ದೆ ಪ್ರಕರಣದಲ್ಲಿ ಪ್ರತಿಕ್ರಿಯೆ ವಿಳಂಬ ಕೇಂದ್ರದ ಉದ್ದೇಶಪೂರ್ವಕ ಕ್ರಮ : ಶಾಹಿ ಈದ್ಗಾ...

ಆರಾಧನಾ ಸ್ಥಳಗಳ ಕಾಯ್ದೆ ಪ್ರಕರಣದಲ್ಲಿ ಪ್ರತಿಕ್ರಿಯೆ ವಿಳಂಬ ಕೇಂದ್ರದ ಉದ್ದೇಶಪೂರ್ವಕ ಕ್ರಮ : ಶಾಹಿ ಈದ್ಗಾ ಸಮಿತಿ

- Advertisement -
- Advertisement -

ಆರಾಧನಾ ಸ್ಥಳಗಳ ಕಾಯ್ದೆ-1991ರ ಸಾವಿಂಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರ ಉದ್ದೇಶಪೂರ್ವ ವಿಳಂಬ ಮಾಡುತ್ತಿದೆ. ಇದರಿಂದ ವಿಚಾರಣೆ ತಡವಾಗುತ್ತಿದೆ ಎಂದು ಮಥುರಾದ ಶಾಹಿ ಈದ್ಗಾ ಮಸೀದಿ ಸಮಿತಿ ಆರೋಪಿಸಿದೆ.

ಕೇಂದ್ರ ಸರ್ಕಾರ ಯಾವುದೇ ಸೂಕ್ತ ಕಾರಣ ಕೊಡದೆ ಪ್ರತಿಕ್ರಿಯೆ ನೀಡಲು ವಿಳಂಬ ಮಾಡುತ್ತಿರುವ ಕಾರಣ, ಪ್ರತಿಕ್ರಿಯೆ ನೀಡುವ ಅವರ ಹಕ್ಕನ್ನು ರದ್ದುಗೊಳಿಸಿ ವಿಚಾರಣೆ ಮುಂದುವರೆಸುವಂತೆ ಮಸೀದಿ ಸಮಿತಿ ಸುಪ್ರೀಂ ಕೋರ್ಟ್‌ಗೆ ಕೋರಿದೆ.

ಮಾರ್ಚ್ 2021ರಲ್ಲಿ ಪ್ರತಿಕ್ರಿಯೆ ಕೋರಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ. ಅವರು ಪದೇ ಪದೇ ಸಮಯ ವಿಸ್ತರಣೆ ಮಾಡುವಂತೆ ಕೋರುತ್ತಿದ್ದಾರೆ. ಇದುವರೆ ಅಫಿಡವಿಟ್ ಸಲ್ಲಿಸಿ ತಮ್ಮ ನಿಲುವು ವ್ಯಕ್ತಪಡಿಸಿಲ್ಲ. ವಿಚಾರಣೆ ವಿಳಂಬಗೊಳಿಸಲು ಉದ್ದೇಶಪೂರ್ವಕವಾಗಿ ಈ ರೀತಿ ಮಾಡುತ್ತಿದ್ದಾರೆ ಎಂದು ಮಸೀದಿ ಸಮಿತಿ ನ್ಯಾಯಾಲಯಕ್ಕೆ ತಿಳಿಸಿದೆ.

ಫೆಬ್ರವರಿ 17ಕ್ಕೆ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ನಿಗದಿ ಮಾಡಿದೆ. ನ್ಯಾಯದ ಹಿತದೃಷ್ಠಿಯಿಂದ ಅಷ್ಟರೊಳಗೆ ಕೇಂದ್ರ ಸರ್ಕಾರ ತನ್ನ ಪ್ರತಿಕ್ರಿಯೆ ನೀಡಬೇಕು ಎಂದು ಮಸೀದಿ ಸಮಿತಿ ಅಗ್ರಹಿಸಿದೆ.

ಉತ್ತರ ಪ್ರದೇಶದ ಮಥುರಾದ ಶಾಹಿ ಈದ್ಗಾ ಮಸೀದಿ ಮತ್ತು ಕೃಷ್ಣ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್‌ನಲ್ಲಿ 17 ಅರ್ಜಿಗಳು ವಿಚಾರಣೆಯ ಹಂತದಲ್ಲಿದೆ. ಇಲ್ಲಿ ಹಿಂದೂ ಪಕ್ಷಕಾರರು ಶಾಹಿ ಈದ್ಗಾ ಮಸೀದಿ ಇರುವ ಸಂಪೂರ್ಣ ಭೂಮಿಯ ಮೇಲೆ ಹಕ್ಕು ಪ್ರತಿಪಾದಿಸಿದ್ದಾರೆ. ಕೃಷ್ಣ ಜನ್ಮಸ್ಥಾನದ ಮೇಲೆ ಶಾಹಿ ಈದ್ಗಾ ಮಸೀದಿ ನಿರ್ಮಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ.

ಶಾಹಿ ಈದ್ಗಾ ಜೊತೆಗೆ ದೇಶದಲ್ಲಿ ಸಂಭಾಲ್ ಜಾಮಾ ಮಸೀದಿ, ಅಜ್ಮೀರ್ ದರ್ಗಾ ಶರೀಫ್ ಸೇರಿದಂತೆ ಹಲವು ಮಸೀದಿ-ಮಂದಿರಗಳ ವಿವಾದಗಳಿಗೆ ಸಂಬಂಧಿಸಿದಂತೆ ವಿವಿಧ ನ್ಯಾಯಾಲಯಗಳಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ.

ಈ ನಡುವೆ ಮಸೀದಿ-ಮಂದಿರ ವಿವಾದದ ಯಾವುದೇ ಅರ್ಜಿಗಳನ್ನು ಪರಿಗಣಿಸಬಾರದು 1991 ಆರಾಧನಾ ಸ್ಥಳಗಳ ಕಾಯ್ದೆ ಎತ್ತಿ ಹಿಡಿಯಬೇಕೆಂದು ಸುಪ್ರೀಂ ಕೋರ್ಟ್‌ಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿ. ಸುಪ್ರೀಂ ಕೋರ್ಟ್ ಎಲ್ಲಾ ಅರ್ಜಿ ವಿಚಾರಣೆಗಳಿಗೆ ಮಧ್ಯಂತರ ತಡೆ ನೀಡಿದೆ.

‘ಜನ್ಮಸಿದ್ದ ಪೌರತ್ವ’ ಹಕ್ಕು ರದ್ದುಗೊಳಿಸಿದ ಟ್ರಂಪ್ : ಆತಂಕದಲ್ಲಿ ಲಕ್ಷಾಂತರ ಭಾರತೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...