Homeಮುಖಪುಟಆರಾಧನಾ ಸ್ಥಳಗಳ ಕಾಯ್ದೆ ಪ್ರಕರಣದಲ್ಲಿ ಪ್ರತಿಕ್ರಿಯೆ ವಿಳಂಬ ಕೇಂದ್ರದ ಉದ್ದೇಶಪೂರ್ವಕ ಕ್ರಮ : ಶಾಹಿ ಈದ್ಗಾ...

ಆರಾಧನಾ ಸ್ಥಳಗಳ ಕಾಯ್ದೆ ಪ್ರಕರಣದಲ್ಲಿ ಪ್ರತಿಕ್ರಿಯೆ ವಿಳಂಬ ಕೇಂದ್ರದ ಉದ್ದೇಶಪೂರ್ವಕ ಕ್ರಮ : ಶಾಹಿ ಈದ್ಗಾ ಸಮಿತಿ

- Advertisement -
- Advertisement -

ಆರಾಧನಾ ಸ್ಥಳಗಳ ಕಾಯ್ದೆ-1991ರ ಸಾವಿಂಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರ ಉದ್ದೇಶಪೂರ್ವ ವಿಳಂಬ ಮಾಡುತ್ತಿದೆ. ಇದರಿಂದ ವಿಚಾರಣೆ ತಡವಾಗುತ್ತಿದೆ ಎಂದು ಮಥುರಾದ ಶಾಹಿ ಈದ್ಗಾ ಮಸೀದಿ ಸಮಿತಿ ಆರೋಪಿಸಿದೆ.

ಕೇಂದ್ರ ಸರ್ಕಾರ ಯಾವುದೇ ಸೂಕ್ತ ಕಾರಣ ಕೊಡದೆ ಪ್ರತಿಕ್ರಿಯೆ ನೀಡಲು ವಿಳಂಬ ಮಾಡುತ್ತಿರುವ ಕಾರಣ, ಪ್ರತಿಕ್ರಿಯೆ ನೀಡುವ ಅವರ ಹಕ್ಕನ್ನು ರದ್ದುಗೊಳಿಸಿ ವಿಚಾರಣೆ ಮುಂದುವರೆಸುವಂತೆ ಮಸೀದಿ ಸಮಿತಿ ಸುಪ್ರೀಂ ಕೋರ್ಟ್‌ಗೆ ಕೋರಿದೆ.

ಮಾರ್ಚ್ 2021ರಲ್ಲಿ ಪ್ರತಿಕ್ರಿಯೆ ಕೋರಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ. ಅವರು ಪದೇ ಪದೇ ಸಮಯ ವಿಸ್ತರಣೆ ಮಾಡುವಂತೆ ಕೋರುತ್ತಿದ್ದಾರೆ. ಇದುವರೆ ಅಫಿಡವಿಟ್ ಸಲ್ಲಿಸಿ ತಮ್ಮ ನಿಲುವು ವ್ಯಕ್ತಪಡಿಸಿಲ್ಲ. ವಿಚಾರಣೆ ವಿಳಂಬಗೊಳಿಸಲು ಉದ್ದೇಶಪೂರ್ವಕವಾಗಿ ಈ ರೀತಿ ಮಾಡುತ್ತಿದ್ದಾರೆ ಎಂದು ಮಸೀದಿ ಸಮಿತಿ ನ್ಯಾಯಾಲಯಕ್ಕೆ ತಿಳಿಸಿದೆ.

ಫೆಬ್ರವರಿ 17ಕ್ಕೆ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ನಿಗದಿ ಮಾಡಿದೆ. ನ್ಯಾಯದ ಹಿತದೃಷ್ಠಿಯಿಂದ ಅಷ್ಟರೊಳಗೆ ಕೇಂದ್ರ ಸರ್ಕಾರ ತನ್ನ ಪ್ರತಿಕ್ರಿಯೆ ನೀಡಬೇಕು ಎಂದು ಮಸೀದಿ ಸಮಿತಿ ಅಗ್ರಹಿಸಿದೆ.

ಉತ್ತರ ಪ್ರದೇಶದ ಮಥುರಾದ ಶಾಹಿ ಈದ್ಗಾ ಮಸೀದಿ ಮತ್ತು ಕೃಷ್ಣ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್‌ನಲ್ಲಿ 17 ಅರ್ಜಿಗಳು ವಿಚಾರಣೆಯ ಹಂತದಲ್ಲಿದೆ. ಇಲ್ಲಿ ಹಿಂದೂ ಪಕ್ಷಕಾರರು ಶಾಹಿ ಈದ್ಗಾ ಮಸೀದಿ ಇರುವ ಸಂಪೂರ್ಣ ಭೂಮಿಯ ಮೇಲೆ ಹಕ್ಕು ಪ್ರತಿಪಾದಿಸಿದ್ದಾರೆ. ಕೃಷ್ಣ ಜನ್ಮಸ್ಥಾನದ ಮೇಲೆ ಶಾಹಿ ಈದ್ಗಾ ಮಸೀದಿ ನಿರ್ಮಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ.

ಶಾಹಿ ಈದ್ಗಾ ಜೊತೆಗೆ ದೇಶದಲ್ಲಿ ಸಂಭಾಲ್ ಜಾಮಾ ಮಸೀದಿ, ಅಜ್ಮೀರ್ ದರ್ಗಾ ಶರೀಫ್ ಸೇರಿದಂತೆ ಹಲವು ಮಸೀದಿ-ಮಂದಿರಗಳ ವಿವಾದಗಳಿಗೆ ಸಂಬಂಧಿಸಿದಂತೆ ವಿವಿಧ ನ್ಯಾಯಾಲಯಗಳಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ.

ಈ ನಡುವೆ ಮಸೀದಿ-ಮಂದಿರ ವಿವಾದದ ಯಾವುದೇ ಅರ್ಜಿಗಳನ್ನು ಪರಿಗಣಿಸಬಾರದು 1991 ಆರಾಧನಾ ಸ್ಥಳಗಳ ಕಾಯ್ದೆ ಎತ್ತಿ ಹಿಡಿಯಬೇಕೆಂದು ಸುಪ್ರೀಂ ಕೋರ್ಟ್‌ಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿ. ಸುಪ್ರೀಂ ಕೋರ್ಟ್ ಎಲ್ಲಾ ಅರ್ಜಿ ವಿಚಾರಣೆಗಳಿಗೆ ಮಧ್ಯಂತರ ತಡೆ ನೀಡಿದೆ.

‘ಜನ್ಮಸಿದ್ದ ಪೌರತ್ವ’ ಹಕ್ಕು ರದ್ದುಗೊಳಿಸಿದ ಟ್ರಂಪ್ : ಆತಂಕದಲ್ಲಿ ಲಕ್ಷಾಂತರ ಭಾರತೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...