Homeಮುಖಪುಟರೈತರನ್ನು ಬಂಧಿಸಿಡಲು ಕ್ರೀಡಾಂಗಣಕ್ಕೆ ಬೇಡಿಕೆ ಇಟ್ಟ ಕೇಂದ್ರ; ನಿರಾಕರಿಸಿದ ಆಪ್ ಸರ್ಕಾರ

ರೈತರನ್ನು ಬಂಧಿಸಿಡಲು ಕ್ರೀಡಾಂಗಣಕ್ಕೆ ಬೇಡಿಕೆ ಇಟ್ಟ ಕೇಂದ್ರ; ನಿರಾಕರಿಸಿದ ಆಪ್ ಸರ್ಕಾರ

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲು ಸಾವಿರಾರು ರೈತರು ದೆಹಲಿಯತ್ತ ಸಾಗುತ್ತಿರುವಾಗ, ಅವರನ್ನು ಬಂಧಿಸಲು ಕ್ರೀಡಾಂಗಣವನ್ನು ತಾತ್ಕಾಲಿಕ ಜೈಲಾಗಿ ಪರಿವರ್ತಿಸುವ ಕೇಂದ್ರದ ಪ್ರಸ್ತಾವನೆಯನ್ನು ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರ ತಿರಸ್ಕರಿಸಿದೆ. ಅರವಿಂದ್ ಕೇಜ್ರಿವಾಲ್ ಸರ್ಕಾರವು ‘ರೈತರ ಬೇಡಿಕೆಗಳು ನ್ಯಾಯಯುತವಾಗಿವೆ; ಶಾಂತಿಯುತ ಪ್ರತಿಭಟನೆ ಮಾಡುವ ಹಕ್ಕು ಪ್ರತಿಯೊಬ್ಬ ನಾಗರಿಕನಿಗೂ ಇದೆ’ ಎಂದು ಹೇಳಿದೆ.

‘ರೈತರ ಬೇಡಿಕೆಗಳು ನೈಜವಾದವು; ಎರಡನೆಯದಾಗಿ, ಶಾಂತಿಯುತ ಪ್ರತಿಭಟನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಸಾಂವಿಧಾನಿಕ ಹಕ್ಕು. ಆದ್ದರಿಂದ, ರೈತರನ್ನು ಬಂಧಿಸುವುದು ಸರಿಯಲ್ಲ’ ಎಂದು ದೆಹಲಿ ಗೃಹ ಸಚಿವ ಕೈಲಾಶ್ ಗೆಹ್ಲೋಟ್ ಕೇಂದ್ರ ಸರ್ಕಾರಕ್ಕೆ ಉತ್ತರಿಸಿದರು. ಪ್ರತಿಭಟನಾ ನಿರತ ರೈತರನ್ನು ಬಂಧಿಸಲು ಬವಾನಾದ ರಾಜೀವ್ ಗಾಂಧಿ ಕ್ರೀಡಾಂಗಣವನ್ನು ತಾತ್ಕಾಲಿಕ ಜೈಲಾಗಿ ಪರಿವರ್ತಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ಆಪ್ ಸರ್ಕಾರದ ಮುಂದಿಟ್ಟಿತ್ತು.

‘ಕೇಂದ್ರ ಸರ್ಕಾರವು ರೈತರನ್ನು ಮಾತುಕತೆಗೆ ಆಹ್ವಾನಿಸಿ, ಅವರ ನಿಜವಾದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು. ದೇಶದ ರೈತರು ನಮಗೆ ಅನ್ನದಾತರು, ಅವರನ್ನು ಬಂಧಿಸುವ ಮೂಲಕ ಈ ರೀತಿ ನಡೆಸಿಕೊಳ್ಳುವುದು ಗಾಯಕ್ಕೆ ಉಪ್ಪು ಸವರಿದಂತಾಗುತ್ತದೆ. ಕೇಂದ್ರ ಸರ್ಕಾರದ ಈ ನಿರ್ಧಾರದಲ್ಲಿ ನಾವು ಪಕ್ಷೇತರರಾಗಿರಲು ಸಾಧ್ಯವಿಲ್ಲ’ ಎಂದು ಸಚಿವರು ಹೇಳಿದರು.

ರಾಜೀವ್ ಗಾಂಧಿ ಕ್ರೀಡಾಂಗಣ ದೆಹಲಿ.

ರೈತರು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿಪಡಿಸುವ ಕಾನೂನು, ಪಿಂಚಣಿ ಮತ್ತು ವಿಮಾ ಸೌಲಭ್ಯಗಳು ಸೇರಿದಂತೆ ಹಲವು ಬೇಡಿಕೆಗಳ ಮೇಲೆ ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವು ಸುತ್ತಿನ ಸಭೆಗಳ ನಂತರ ರೈತರು ಮತ್ತು ಕೇಂದ್ರದ ನಡುವಿನ ಮಾತುಕತೆ ಸಫಲವಾಗಿಲ್ಲ.

ರೈತರು ದೆಹಲಿ ನಗರಕ್ಕೆ ಬರದಂತೆ ತಡೆಯಲು ರಾಷ್ಟ್ರ ರಾಜಧಾನಿಯನ್ನು ಕೋಟೆಯನ್ನಾಗಿ ಮಾಡಲಾಗಿದೆ. ಹರಿಯಾಣ ಮತ್ತು ಉತ್ತರ ಪ್ರದೇಶದೊಂದಿಗೆ ದೆಹಲಿಯ ಗಡಿಯನ್ನು ಮುಚ್ಚಲಾಗಿದೆ. ಸಿಮೆಂಟ್ ತಡೆಗೋಡೆಗಳಿಂದ ಹಿಡಿದು, ಮರಳಿನ ಚೀಲ, ಟೈರ್ ಡಿಫ್ಲೇಟರ್‌ಗಳವರೆಗೆ ಗಡಿಯಲ್ಲಿ ರೈತರನ್ನು ತಡೆಯಲು ಪೊಲೀಸರು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ರೈತರು ಪಂಜಾಬ್‌ನ ಫತೇಘರ್ ಸಾಹಿಬ್‌ನಿಂದ ಮೆರವಣಿಗೆ ಆರಂಭಿಸಿದ್ದು, ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಯೋಜಿಸಿರುವುದಾಗಿ ಹೇಳಿದ್ದಾರೆ. ರೈತರು ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಪರ್ಕ ಹೊಂದಿಲ್ಲ ಎಂದು ಹೇಳಿದ್ದಾರೆ. ಅವರ ಮೆರವಣಿಗೆಯನ್ನು ತಡೆಯಲು ಪೊಲೀಸರು ಭಾರೀ ಸಿದ್ಧತೆ ನಡೆಸಿರುವ ಬಗ್ಗೆ ಕೇಳಿದಾಗ, ಅವರು ಗಡಿ ತಲುಪಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉತ್ತರಿಸಿದರು.

ರೈತರ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಹೇಳಿದರು. ‘ಕೆಲವು ವಿಷಯಗಳಲ್ಲಿ, ನಾವು ರಾಜ್ಯಗಳೊಂದಿಗೆ ಸಮಾಲೋಚಿಸಬೇಕು. ನಾವು ಒಂದು ಮಾರ್ಗವನ್ನು ಕಂಡುಕೊಳ್ಳುತ್ತೇವೆ; ಯಾವಾಗ ಬೇಕಾದರೂ ಮಾತನಾಡಲು ಮತ್ತು ಪರಿಹಾರವನ್ನು ಕಂಡುಕೊಳ್ಳಲು ಸಿದ್ಧರಿದ್ದೇವೆ’ ಎಂದು ಅವರು ಹೇಳಿದರು.

ರೈತರ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಲ್ಲಿ ಒಂದು ತಿಂಗಳ ಕಾಲ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ದೊಡ್ಡ ಸಭೆಗಳು ಮತ್ತು ಯಾವುದೇ ರೀತಿಯ ಪ್ರತಿಭಟನಾ ಮೆರವಣಿಗೆಗಳನ್ನು ನಿಷೇಧಿಸಲಾಗಿದೆ. ಗಡಿಯಲ್ಲಿ ವಾಹನಗಳ ಸಂಚಾರಕ್ಕೂ ನಿರ್ಬಂಧ ಹೇರಲಾಗಿದೆ.

2021ರ ಜನವರಿ 26 ರಂದು ದೆಹಲಿಯ ಬೀದಿಗಳಲ್ಲಿ ಪ್ರತಿಭಟನಾ ನಿರತ ರೈತರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ ಘಟನೆ ಪುನರಾವರ್ತನೆಯಾಗದಂತೆ ತಡೆಯಲು ದೆಹಲಿ ಪೊಲೀಸರು ನಿರ್ಧರಿಸಿದ್ದಾರೆ ಎಂದು ಅವರ ಭಾರಿ ಸಿದ್ಧತೆಗಳು ಸೂಚಿಸುತ್ತವೆ.

ದೆಹಲಿ ಗಡಿಯಲ್ಲಿ 2020-2021ರ ಪ್ರತಿಭಟನೆಯ ಭಾಗವಾಗಿರುವ ಅನೇಕ ಸಂಘಟನೆಗಳು ಇಂದಿನ ಮೆರವಣಿಗೆಯಲ್ಲಿ ಭಾಗವಹಿಸುತ್ತಿಲ್ಲ. ಆದರೆ, ರೈತರ ಮೇಲೆ ಹಲ್ಲೆ ನಡೆಸಿದರೆ ಬೀದಿಗಿಳಿಯುವುದಾಗಿ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ; ಮೆರವಣಿಗೆ ಆರಂಭಿಸಿದ ರೈತರು; ದೆಹಲಿ-ಹರಿಯಾಣ ಗಡಿಯಲ್ಲಿ ಕಂದಕ, ಮುಳ್ಳಿನ ಬೇಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...