Homeಮುಖಪುಟರೈತರನ್ನು ಬಂಧಿಸಿಡಲು ಕ್ರೀಡಾಂಗಣಕ್ಕೆ ಬೇಡಿಕೆ ಇಟ್ಟ ಕೇಂದ್ರ; ನಿರಾಕರಿಸಿದ ಆಪ್ ಸರ್ಕಾರ

ರೈತರನ್ನು ಬಂಧಿಸಿಡಲು ಕ್ರೀಡಾಂಗಣಕ್ಕೆ ಬೇಡಿಕೆ ಇಟ್ಟ ಕೇಂದ್ರ; ನಿರಾಕರಿಸಿದ ಆಪ್ ಸರ್ಕಾರ

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲು ಸಾವಿರಾರು ರೈತರು ದೆಹಲಿಯತ್ತ ಸಾಗುತ್ತಿರುವಾಗ, ಅವರನ್ನು ಬಂಧಿಸಲು ಕ್ರೀಡಾಂಗಣವನ್ನು ತಾತ್ಕಾಲಿಕ ಜೈಲಾಗಿ ಪರಿವರ್ತಿಸುವ ಕೇಂದ್ರದ ಪ್ರಸ್ತಾವನೆಯನ್ನು ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರ ತಿರಸ್ಕರಿಸಿದೆ. ಅರವಿಂದ್ ಕೇಜ್ರಿವಾಲ್ ಸರ್ಕಾರವು ‘ರೈತರ ಬೇಡಿಕೆಗಳು ನ್ಯಾಯಯುತವಾಗಿವೆ; ಶಾಂತಿಯುತ ಪ್ರತಿಭಟನೆ ಮಾಡುವ ಹಕ್ಕು ಪ್ರತಿಯೊಬ್ಬ ನಾಗರಿಕನಿಗೂ ಇದೆ’ ಎಂದು ಹೇಳಿದೆ.

‘ರೈತರ ಬೇಡಿಕೆಗಳು ನೈಜವಾದವು; ಎರಡನೆಯದಾಗಿ, ಶಾಂತಿಯುತ ಪ್ರತಿಭಟನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಸಾಂವಿಧಾನಿಕ ಹಕ್ಕು. ಆದ್ದರಿಂದ, ರೈತರನ್ನು ಬಂಧಿಸುವುದು ಸರಿಯಲ್ಲ’ ಎಂದು ದೆಹಲಿ ಗೃಹ ಸಚಿವ ಕೈಲಾಶ್ ಗೆಹ್ಲೋಟ್ ಕೇಂದ್ರ ಸರ್ಕಾರಕ್ಕೆ ಉತ್ತರಿಸಿದರು. ಪ್ರತಿಭಟನಾ ನಿರತ ರೈತರನ್ನು ಬಂಧಿಸಲು ಬವಾನಾದ ರಾಜೀವ್ ಗಾಂಧಿ ಕ್ರೀಡಾಂಗಣವನ್ನು ತಾತ್ಕಾಲಿಕ ಜೈಲಾಗಿ ಪರಿವರ್ತಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ಆಪ್ ಸರ್ಕಾರದ ಮುಂದಿಟ್ಟಿತ್ತು.

‘ಕೇಂದ್ರ ಸರ್ಕಾರವು ರೈತರನ್ನು ಮಾತುಕತೆಗೆ ಆಹ್ವಾನಿಸಿ, ಅವರ ನಿಜವಾದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು. ದೇಶದ ರೈತರು ನಮಗೆ ಅನ್ನದಾತರು, ಅವರನ್ನು ಬಂಧಿಸುವ ಮೂಲಕ ಈ ರೀತಿ ನಡೆಸಿಕೊಳ್ಳುವುದು ಗಾಯಕ್ಕೆ ಉಪ್ಪು ಸವರಿದಂತಾಗುತ್ತದೆ. ಕೇಂದ್ರ ಸರ್ಕಾರದ ಈ ನಿರ್ಧಾರದಲ್ಲಿ ನಾವು ಪಕ್ಷೇತರರಾಗಿರಲು ಸಾಧ್ಯವಿಲ್ಲ’ ಎಂದು ಸಚಿವರು ಹೇಳಿದರು.

ರಾಜೀವ್ ಗಾಂಧಿ ಕ್ರೀಡಾಂಗಣ ದೆಹಲಿ.

ರೈತರು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿಪಡಿಸುವ ಕಾನೂನು, ಪಿಂಚಣಿ ಮತ್ತು ವಿಮಾ ಸೌಲಭ್ಯಗಳು ಸೇರಿದಂತೆ ಹಲವು ಬೇಡಿಕೆಗಳ ಮೇಲೆ ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವು ಸುತ್ತಿನ ಸಭೆಗಳ ನಂತರ ರೈತರು ಮತ್ತು ಕೇಂದ್ರದ ನಡುವಿನ ಮಾತುಕತೆ ಸಫಲವಾಗಿಲ್ಲ.

ರೈತರು ದೆಹಲಿ ನಗರಕ್ಕೆ ಬರದಂತೆ ತಡೆಯಲು ರಾಷ್ಟ್ರ ರಾಜಧಾನಿಯನ್ನು ಕೋಟೆಯನ್ನಾಗಿ ಮಾಡಲಾಗಿದೆ. ಹರಿಯಾಣ ಮತ್ತು ಉತ್ತರ ಪ್ರದೇಶದೊಂದಿಗೆ ದೆಹಲಿಯ ಗಡಿಯನ್ನು ಮುಚ್ಚಲಾಗಿದೆ. ಸಿಮೆಂಟ್ ತಡೆಗೋಡೆಗಳಿಂದ ಹಿಡಿದು, ಮರಳಿನ ಚೀಲ, ಟೈರ್ ಡಿಫ್ಲೇಟರ್‌ಗಳವರೆಗೆ ಗಡಿಯಲ್ಲಿ ರೈತರನ್ನು ತಡೆಯಲು ಪೊಲೀಸರು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ರೈತರು ಪಂಜಾಬ್‌ನ ಫತೇಘರ್ ಸಾಹಿಬ್‌ನಿಂದ ಮೆರವಣಿಗೆ ಆರಂಭಿಸಿದ್ದು, ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಯೋಜಿಸಿರುವುದಾಗಿ ಹೇಳಿದ್ದಾರೆ. ರೈತರು ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಪರ್ಕ ಹೊಂದಿಲ್ಲ ಎಂದು ಹೇಳಿದ್ದಾರೆ. ಅವರ ಮೆರವಣಿಗೆಯನ್ನು ತಡೆಯಲು ಪೊಲೀಸರು ಭಾರೀ ಸಿದ್ಧತೆ ನಡೆಸಿರುವ ಬಗ್ಗೆ ಕೇಳಿದಾಗ, ಅವರು ಗಡಿ ತಲುಪಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉತ್ತರಿಸಿದರು.

ರೈತರ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಹೇಳಿದರು. ‘ಕೆಲವು ವಿಷಯಗಳಲ್ಲಿ, ನಾವು ರಾಜ್ಯಗಳೊಂದಿಗೆ ಸಮಾಲೋಚಿಸಬೇಕು. ನಾವು ಒಂದು ಮಾರ್ಗವನ್ನು ಕಂಡುಕೊಳ್ಳುತ್ತೇವೆ; ಯಾವಾಗ ಬೇಕಾದರೂ ಮಾತನಾಡಲು ಮತ್ತು ಪರಿಹಾರವನ್ನು ಕಂಡುಕೊಳ್ಳಲು ಸಿದ್ಧರಿದ್ದೇವೆ’ ಎಂದು ಅವರು ಹೇಳಿದರು.

ರೈತರ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಲ್ಲಿ ಒಂದು ತಿಂಗಳ ಕಾಲ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ದೊಡ್ಡ ಸಭೆಗಳು ಮತ್ತು ಯಾವುದೇ ರೀತಿಯ ಪ್ರತಿಭಟನಾ ಮೆರವಣಿಗೆಗಳನ್ನು ನಿಷೇಧಿಸಲಾಗಿದೆ. ಗಡಿಯಲ್ಲಿ ವಾಹನಗಳ ಸಂಚಾರಕ್ಕೂ ನಿರ್ಬಂಧ ಹೇರಲಾಗಿದೆ.

2021ರ ಜನವರಿ 26 ರಂದು ದೆಹಲಿಯ ಬೀದಿಗಳಲ್ಲಿ ಪ್ರತಿಭಟನಾ ನಿರತ ರೈತರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ ಘಟನೆ ಪುನರಾವರ್ತನೆಯಾಗದಂತೆ ತಡೆಯಲು ದೆಹಲಿ ಪೊಲೀಸರು ನಿರ್ಧರಿಸಿದ್ದಾರೆ ಎಂದು ಅವರ ಭಾರಿ ಸಿದ್ಧತೆಗಳು ಸೂಚಿಸುತ್ತವೆ.

ದೆಹಲಿ ಗಡಿಯಲ್ಲಿ 2020-2021ರ ಪ್ರತಿಭಟನೆಯ ಭಾಗವಾಗಿರುವ ಅನೇಕ ಸಂಘಟನೆಗಳು ಇಂದಿನ ಮೆರವಣಿಗೆಯಲ್ಲಿ ಭಾಗವಹಿಸುತ್ತಿಲ್ಲ. ಆದರೆ, ರೈತರ ಮೇಲೆ ಹಲ್ಲೆ ನಡೆಸಿದರೆ ಬೀದಿಗಿಳಿಯುವುದಾಗಿ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ; ಮೆರವಣಿಗೆ ಆರಂಭಿಸಿದ ರೈತರು; ದೆಹಲಿ-ಹರಿಯಾಣ ಗಡಿಯಲ್ಲಿ ಕಂದಕ, ಮುಳ್ಳಿನ ಬೇಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...