Homeಮುಖಪುಟರೈತರನ್ನು ಬಂಧಿಸಿಡಲು ಕ್ರೀಡಾಂಗಣಕ್ಕೆ ಬೇಡಿಕೆ ಇಟ್ಟ ಕೇಂದ್ರ; ನಿರಾಕರಿಸಿದ ಆಪ್ ಸರ್ಕಾರ

ರೈತರನ್ನು ಬಂಧಿಸಿಡಲು ಕ್ರೀಡಾಂಗಣಕ್ಕೆ ಬೇಡಿಕೆ ಇಟ್ಟ ಕೇಂದ್ರ; ನಿರಾಕರಿಸಿದ ಆಪ್ ಸರ್ಕಾರ

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲು ಸಾವಿರಾರು ರೈತರು ದೆಹಲಿಯತ್ತ ಸಾಗುತ್ತಿರುವಾಗ, ಅವರನ್ನು ಬಂಧಿಸಲು ಕ್ರೀಡಾಂಗಣವನ್ನು ತಾತ್ಕಾಲಿಕ ಜೈಲಾಗಿ ಪರಿವರ್ತಿಸುವ ಕೇಂದ್ರದ ಪ್ರಸ್ತಾವನೆಯನ್ನು ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರ ತಿರಸ್ಕರಿಸಿದೆ. ಅರವಿಂದ್ ಕೇಜ್ರಿವಾಲ್ ಸರ್ಕಾರವು ‘ರೈತರ ಬೇಡಿಕೆಗಳು ನ್ಯಾಯಯುತವಾಗಿವೆ; ಶಾಂತಿಯುತ ಪ್ರತಿಭಟನೆ ಮಾಡುವ ಹಕ್ಕು ಪ್ರತಿಯೊಬ್ಬ ನಾಗರಿಕನಿಗೂ ಇದೆ’ ಎಂದು ಹೇಳಿದೆ.

‘ರೈತರ ಬೇಡಿಕೆಗಳು ನೈಜವಾದವು; ಎರಡನೆಯದಾಗಿ, ಶಾಂತಿಯುತ ಪ್ರತಿಭಟನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಸಾಂವಿಧಾನಿಕ ಹಕ್ಕು. ಆದ್ದರಿಂದ, ರೈತರನ್ನು ಬಂಧಿಸುವುದು ಸರಿಯಲ್ಲ’ ಎಂದು ದೆಹಲಿ ಗೃಹ ಸಚಿವ ಕೈಲಾಶ್ ಗೆಹ್ಲೋಟ್ ಕೇಂದ್ರ ಸರ್ಕಾರಕ್ಕೆ ಉತ್ತರಿಸಿದರು. ಪ್ರತಿಭಟನಾ ನಿರತ ರೈತರನ್ನು ಬಂಧಿಸಲು ಬವಾನಾದ ರಾಜೀವ್ ಗಾಂಧಿ ಕ್ರೀಡಾಂಗಣವನ್ನು ತಾತ್ಕಾಲಿಕ ಜೈಲಾಗಿ ಪರಿವರ್ತಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ಆಪ್ ಸರ್ಕಾರದ ಮುಂದಿಟ್ಟಿತ್ತು.

‘ಕೇಂದ್ರ ಸರ್ಕಾರವು ರೈತರನ್ನು ಮಾತುಕತೆಗೆ ಆಹ್ವಾನಿಸಿ, ಅವರ ನಿಜವಾದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು. ದೇಶದ ರೈತರು ನಮಗೆ ಅನ್ನದಾತರು, ಅವರನ್ನು ಬಂಧಿಸುವ ಮೂಲಕ ಈ ರೀತಿ ನಡೆಸಿಕೊಳ್ಳುವುದು ಗಾಯಕ್ಕೆ ಉಪ್ಪು ಸವರಿದಂತಾಗುತ್ತದೆ. ಕೇಂದ್ರ ಸರ್ಕಾರದ ಈ ನಿರ್ಧಾರದಲ್ಲಿ ನಾವು ಪಕ್ಷೇತರರಾಗಿರಲು ಸಾಧ್ಯವಿಲ್ಲ’ ಎಂದು ಸಚಿವರು ಹೇಳಿದರು.

ರಾಜೀವ್ ಗಾಂಧಿ ಕ್ರೀಡಾಂಗಣ ದೆಹಲಿ.

ರೈತರು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿಪಡಿಸುವ ಕಾನೂನು, ಪಿಂಚಣಿ ಮತ್ತು ವಿಮಾ ಸೌಲಭ್ಯಗಳು ಸೇರಿದಂತೆ ಹಲವು ಬೇಡಿಕೆಗಳ ಮೇಲೆ ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವು ಸುತ್ತಿನ ಸಭೆಗಳ ನಂತರ ರೈತರು ಮತ್ತು ಕೇಂದ್ರದ ನಡುವಿನ ಮಾತುಕತೆ ಸಫಲವಾಗಿಲ್ಲ.

ರೈತರು ದೆಹಲಿ ನಗರಕ್ಕೆ ಬರದಂತೆ ತಡೆಯಲು ರಾಷ್ಟ್ರ ರಾಜಧಾನಿಯನ್ನು ಕೋಟೆಯನ್ನಾಗಿ ಮಾಡಲಾಗಿದೆ. ಹರಿಯಾಣ ಮತ್ತು ಉತ್ತರ ಪ್ರದೇಶದೊಂದಿಗೆ ದೆಹಲಿಯ ಗಡಿಯನ್ನು ಮುಚ್ಚಲಾಗಿದೆ. ಸಿಮೆಂಟ್ ತಡೆಗೋಡೆಗಳಿಂದ ಹಿಡಿದು, ಮರಳಿನ ಚೀಲ, ಟೈರ್ ಡಿಫ್ಲೇಟರ್‌ಗಳವರೆಗೆ ಗಡಿಯಲ್ಲಿ ರೈತರನ್ನು ತಡೆಯಲು ಪೊಲೀಸರು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ರೈತರು ಪಂಜಾಬ್‌ನ ಫತೇಘರ್ ಸಾಹಿಬ್‌ನಿಂದ ಮೆರವಣಿಗೆ ಆರಂಭಿಸಿದ್ದು, ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಯೋಜಿಸಿರುವುದಾಗಿ ಹೇಳಿದ್ದಾರೆ. ರೈತರು ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಪರ್ಕ ಹೊಂದಿಲ್ಲ ಎಂದು ಹೇಳಿದ್ದಾರೆ. ಅವರ ಮೆರವಣಿಗೆಯನ್ನು ತಡೆಯಲು ಪೊಲೀಸರು ಭಾರೀ ಸಿದ್ಧತೆ ನಡೆಸಿರುವ ಬಗ್ಗೆ ಕೇಳಿದಾಗ, ಅವರು ಗಡಿ ತಲುಪಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉತ್ತರಿಸಿದರು.

ರೈತರ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಹೇಳಿದರು. ‘ಕೆಲವು ವಿಷಯಗಳಲ್ಲಿ, ನಾವು ರಾಜ್ಯಗಳೊಂದಿಗೆ ಸಮಾಲೋಚಿಸಬೇಕು. ನಾವು ಒಂದು ಮಾರ್ಗವನ್ನು ಕಂಡುಕೊಳ್ಳುತ್ತೇವೆ; ಯಾವಾಗ ಬೇಕಾದರೂ ಮಾತನಾಡಲು ಮತ್ತು ಪರಿಹಾರವನ್ನು ಕಂಡುಕೊಳ್ಳಲು ಸಿದ್ಧರಿದ್ದೇವೆ’ ಎಂದು ಅವರು ಹೇಳಿದರು.

ರೈತರ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಲ್ಲಿ ಒಂದು ತಿಂಗಳ ಕಾಲ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ದೊಡ್ಡ ಸಭೆಗಳು ಮತ್ತು ಯಾವುದೇ ರೀತಿಯ ಪ್ರತಿಭಟನಾ ಮೆರವಣಿಗೆಗಳನ್ನು ನಿಷೇಧಿಸಲಾಗಿದೆ. ಗಡಿಯಲ್ಲಿ ವಾಹನಗಳ ಸಂಚಾರಕ್ಕೂ ನಿರ್ಬಂಧ ಹೇರಲಾಗಿದೆ.

2021ರ ಜನವರಿ 26 ರಂದು ದೆಹಲಿಯ ಬೀದಿಗಳಲ್ಲಿ ಪ್ರತಿಭಟನಾ ನಿರತ ರೈತರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ ಘಟನೆ ಪುನರಾವರ್ತನೆಯಾಗದಂತೆ ತಡೆಯಲು ದೆಹಲಿ ಪೊಲೀಸರು ನಿರ್ಧರಿಸಿದ್ದಾರೆ ಎಂದು ಅವರ ಭಾರಿ ಸಿದ್ಧತೆಗಳು ಸೂಚಿಸುತ್ತವೆ.

ದೆಹಲಿ ಗಡಿಯಲ್ಲಿ 2020-2021ರ ಪ್ರತಿಭಟನೆಯ ಭಾಗವಾಗಿರುವ ಅನೇಕ ಸಂಘಟನೆಗಳು ಇಂದಿನ ಮೆರವಣಿಗೆಯಲ್ಲಿ ಭಾಗವಹಿಸುತ್ತಿಲ್ಲ. ಆದರೆ, ರೈತರ ಮೇಲೆ ಹಲ್ಲೆ ನಡೆಸಿದರೆ ಬೀದಿಗಿಳಿಯುವುದಾಗಿ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ; ಮೆರವಣಿಗೆ ಆರಂಭಿಸಿದ ರೈತರು; ದೆಹಲಿ-ಹರಿಯಾಣ ಗಡಿಯಲ್ಲಿ ಕಂದಕ, ಮುಳ್ಳಿನ ಬೇಲಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...