Homeಮುಖಪುಟರೈತರನ್ನು ಬಂಧಿಸಿಡಲು ಕ್ರೀಡಾಂಗಣಕ್ಕೆ ಬೇಡಿಕೆ ಇಟ್ಟ ಕೇಂದ್ರ; ನಿರಾಕರಿಸಿದ ಆಪ್ ಸರ್ಕಾರ

ರೈತರನ್ನು ಬಂಧಿಸಿಡಲು ಕ್ರೀಡಾಂಗಣಕ್ಕೆ ಬೇಡಿಕೆ ಇಟ್ಟ ಕೇಂದ್ರ; ನಿರಾಕರಿಸಿದ ಆಪ್ ಸರ್ಕಾರ

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲು ಸಾವಿರಾರು ರೈತರು ದೆಹಲಿಯತ್ತ ಸಾಗುತ್ತಿರುವಾಗ, ಅವರನ್ನು ಬಂಧಿಸಲು ಕ್ರೀಡಾಂಗಣವನ್ನು ತಾತ್ಕಾಲಿಕ ಜೈಲಾಗಿ ಪರಿವರ್ತಿಸುವ ಕೇಂದ್ರದ ಪ್ರಸ್ತಾವನೆಯನ್ನು ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರ ತಿರಸ್ಕರಿಸಿದೆ. ಅರವಿಂದ್ ಕೇಜ್ರಿವಾಲ್ ಸರ್ಕಾರವು ‘ರೈತರ ಬೇಡಿಕೆಗಳು ನ್ಯಾಯಯುತವಾಗಿವೆ; ಶಾಂತಿಯುತ ಪ್ರತಿಭಟನೆ ಮಾಡುವ ಹಕ್ಕು ಪ್ರತಿಯೊಬ್ಬ ನಾಗರಿಕನಿಗೂ ಇದೆ’ ಎಂದು ಹೇಳಿದೆ.

‘ರೈತರ ಬೇಡಿಕೆಗಳು ನೈಜವಾದವು; ಎರಡನೆಯದಾಗಿ, ಶಾಂತಿಯುತ ಪ್ರತಿಭಟನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಸಾಂವಿಧಾನಿಕ ಹಕ್ಕು. ಆದ್ದರಿಂದ, ರೈತರನ್ನು ಬಂಧಿಸುವುದು ಸರಿಯಲ್ಲ’ ಎಂದು ದೆಹಲಿ ಗೃಹ ಸಚಿವ ಕೈಲಾಶ್ ಗೆಹ್ಲೋಟ್ ಕೇಂದ್ರ ಸರ್ಕಾರಕ್ಕೆ ಉತ್ತರಿಸಿದರು. ಪ್ರತಿಭಟನಾ ನಿರತ ರೈತರನ್ನು ಬಂಧಿಸಲು ಬವಾನಾದ ರಾಜೀವ್ ಗಾಂಧಿ ಕ್ರೀಡಾಂಗಣವನ್ನು ತಾತ್ಕಾಲಿಕ ಜೈಲಾಗಿ ಪರಿವರ್ತಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ಆಪ್ ಸರ್ಕಾರದ ಮುಂದಿಟ್ಟಿತ್ತು.

‘ಕೇಂದ್ರ ಸರ್ಕಾರವು ರೈತರನ್ನು ಮಾತುಕತೆಗೆ ಆಹ್ವಾನಿಸಿ, ಅವರ ನಿಜವಾದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು. ದೇಶದ ರೈತರು ನಮಗೆ ಅನ್ನದಾತರು, ಅವರನ್ನು ಬಂಧಿಸುವ ಮೂಲಕ ಈ ರೀತಿ ನಡೆಸಿಕೊಳ್ಳುವುದು ಗಾಯಕ್ಕೆ ಉಪ್ಪು ಸವರಿದಂತಾಗುತ್ತದೆ. ಕೇಂದ್ರ ಸರ್ಕಾರದ ಈ ನಿರ್ಧಾರದಲ್ಲಿ ನಾವು ಪಕ್ಷೇತರರಾಗಿರಲು ಸಾಧ್ಯವಿಲ್ಲ’ ಎಂದು ಸಚಿವರು ಹೇಳಿದರು.

ರಾಜೀವ್ ಗಾಂಧಿ ಕ್ರೀಡಾಂಗಣ ದೆಹಲಿ.

ರೈತರು ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿಪಡಿಸುವ ಕಾನೂನು, ಪಿಂಚಣಿ ಮತ್ತು ವಿಮಾ ಸೌಲಭ್ಯಗಳು ಸೇರಿದಂತೆ ಹಲವು ಬೇಡಿಕೆಗಳ ಮೇಲೆ ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವು ಸುತ್ತಿನ ಸಭೆಗಳ ನಂತರ ರೈತರು ಮತ್ತು ಕೇಂದ್ರದ ನಡುವಿನ ಮಾತುಕತೆ ಸಫಲವಾಗಿಲ್ಲ.

ರೈತರು ದೆಹಲಿ ನಗರಕ್ಕೆ ಬರದಂತೆ ತಡೆಯಲು ರಾಷ್ಟ್ರ ರಾಜಧಾನಿಯನ್ನು ಕೋಟೆಯನ್ನಾಗಿ ಮಾಡಲಾಗಿದೆ. ಹರಿಯಾಣ ಮತ್ತು ಉತ್ತರ ಪ್ರದೇಶದೊಂದಿಗೆ ದೆಹಲಿಯ ಗಡಿಯನ್ನು ಮುಚ್ಚಲಾಗಿದೆ. ಸಿಮೆಂಟ್ ತಡೆಗೋಡೆಗಳಿಂದ ಹಿಡಿದು, ಮರಳಿನ ಚೀಲ, ಟೈರ್ ಡಿಫ್ಲೇಟರ್‌ಗಳವರೆಗೆ ಗಡಿಯಲ್ಲಿ ರೈತರನ್ನು ತಡೆಯಲು ಪೊಲೀಸರು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ರೈತರು ಪಂಜಾಬ್‌ನ ಫತೇಘರ್ ಸಾಹಿಬ್‌ನಿಂದ ಮೆರವಣಿಗೆ ಆರಂಭಿಸಿದ್ದು, ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಯೋಜಿಸಿರುವುದಾಗಿ ಹೇಳಿದ್ದಾರೆ. ರೈತರು ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಪರ್ಕ ಹೊಂದಿಲ್ಲ ಎಂದು ಹೇಳಿದ್ದಾರೆ. ಅವರ ಮೆರವಣಿಗೆಯನ್ನು ತಡೆಯಲು ಪೊಲೀಸರು ಭಾರೀ ಸಿದ್ಧತೆ ನಡೆಸಿರುವ ಬಗ್ಗೆ ಕೇಳಿದಾಗ, ಅವರು ಗಡಿ ತಲುಪಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉತ್ತರಿಸಿದರು.

ರೈತರ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಹೇಳಿದರು. ‘ಕೆಲವು ವಿಷಯಗಳಲ್ಲಿ, ನಾವು ರಾಜ್ಯಗಳೊಂದಿಗೆ ಸಮಾಲೋಚಿಸಬೇಕು. ನಾವು ಒಂದು ಮಾರ್ಗವನ್ನು ಕಂಡುಕೊಳ್ಳುತ್ತೇವೆ; ಯಾವಾಗ ಬೇಕಾದರೂ ಮಾತನಾಡಲು ಮತ್ತು ಪರಿಹಾರವನ್ನು ಕಂಡುಕೊಳ್ಳಲು ಸಿದ್ಧರಿದ್ದೇವೆ’ ಎಂದು ಅವರು ಹೇಳಿದರು.

ರೈತರ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಲ್ಲಿ ಒಂದು ತಿಂಗಳ ಕಾಲ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ದೊಡ್ಡ ಸಭೆಗಳು ಮತ್ತು ಯಾವುದೇ ರೀತಿಯ ಪ್ರತಿಭಟನಾ ಮೆರವಣಿಗೆಗಳನ್ನು ನಿಷೇಧಿಸಲಾಗಿದೆ. ಗಡಿಯಲ್ಲಿ ವಾಹನಗಳ ಸಂಚಾರಕ್ಕೂ ನಿರ್ಬಂಧ ಹೇರಲಾಗಿದೆ.

2021ರ ಜನವರಿ 26 ರಂದು ದೆಹಲಿಯ ಬೀದಿಗಳಲ್ಲಿ ಪ್ರತಿಭಟನಾ ನಿರತ ರೈತರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ ಘಟನೆ ಪುನರಾವರ್ತನೆಯಾಗದಂತೆ ತಡೆಯಲು ದೆಹಲಿ ಪೊಲೀಸರು ನಿರ್ಧರಿಸಿದ್ದಾರೆ ಎಂದು ಅವರ ಭಾರಿ ಸಿದ್ಧತೆಗಳು ಸೂಚಿಸುತ್ತವೆ.

ದೆಹಲಿ ಗಡಿಯಲ್ಲಿ 2020-2021ರ ಪ್ರತಿಭಟನೆಯ ಭಾಗವಾಗಿರುವ ಅನೇಕ ಸಂಘಟನೆಗಳು ಇಂದಿನ ಮೆರವಣಿಗೆಯಲ್ಲಿ ಭಾಗವಹಿಸುತ್ತಿಲ್ಲ. ಆದರೆ, ರೈತರ ಮೇಲೆ ಹಲ್ಲೆ ನಡೆಸಿದರೆ ಬೀದಿಗಿಳಿಯುವುದಾಗಿ ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ; ಮೆರವಣಿಗೆ ಆರಂಭಿಸಿದ ರೈತರು; ದೆಹಲಿ-ಹರಿಯಾಣ ಗಡಿಯಲ್ಲಿ ಕಂದಕ, ಮುಳ್ಳಿನ ಬೇಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...