Homeಮುಖಪುಟಕೇಂದ್ರದ ಸರ್ವಾಧಿಕಾರಿ ಧೋರಣೆ ಹೇಳಿಕೆ: ಮಾಧುಸ್ವಾಮಿ ಅಭಿನಂದಿಸಿದ ಕಾಂಗ್ರೆಸ್ - ತೇಜಸ್ವಿ ಸೂರ್ಯ ಆಕ್ಷೇಪ

ಕೇಂದ್ರದ ಸರ್ವಾಧಿಕಾರಿ ಧೋರಣೆ ಹೇಳಿಕೆ: ಮಾಧುಸ್ವಾಮಿ ಅಭಿನಂದಿಸಿದ ಕಾಂಗ್ರೆಸ್ – ತೇಜಸ್ವಿ ಸೂರ್ಯ ಆಕ್ಷೇಪ

- Advertisement -
- Advertisement -

‘ರಾಷ್ಟ್ರೀಯ ಐಕ್ಯತೆ ಮತ್ತು ಪ್ರಾದೇಶಿಕ ಸ್ವಾತಂತ್ಯ್ರ’ ಎಂಬ ವಿಷಯದ ಬಗ್ಗೆ ನಡೆದ ವಿಚಾರದ ಸಂಕಿರಣದಲ್ಲಿ ಮಾತನಾಡುತ್ತಾ ಸಚಿವ ಜೆ.ಸಿ. ಮಾಧುಸ್ವಾಮಿ ಅವರು, ‘ಕೇಂದ್ರದಲ್ಲಿ ಸರ್ವಾಧಿಕಾರಿ ಧೋರಣೆ ಪ್ರಾರಂಭವಾಗಿದೆ’ ಎಂದು ಕೇಂದ್ರದ ಬಿಜೆಪಿ ಸರ್ಕಾರ ವಿರುದ್ದ ಹರಿಹಾಯ್ದಿದ್ದಕ್ಕೆ ಕಾಂಗ್ರೆಸ್ ಪಕ್ಷ ಅವರನ್ನು ಅಭಿನಂದಿಸಿದೆ.

“ಕೇಂದ್ರ ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ಬಹಿರಂಗವಾಗಿ ಒಪ್ಪಿ, ಖಂಡಿಸಿದ್ದಕ್ಕೆ ಮಾಧುಸ್ವಾಮಿಯವರಿಗೆ ಅಭಿನಂದನೆಗಳು! ರಾಜ್ಯಗಳ ಅಭಿಪ್ರಾಯಕ್ಕೆ ಮನ್ನಣೆ ನೀಡದೆ ರಾಜ್ಯಗಳ ವಿಷಯವಾದ ಕೃಷಿಗೆ ಸಂಬಂಧಿತ ಕಾಯ್ದೆಗಳನ್ನು ಹೇರಿ ರೈತರಿಗೆ ಮರಣ ಶಾಸನ ಬರೆಯುತ್ತಿದೆ ಕೇಂದ್ರ ಸರ್ಕಾರ. ‘ಹಿಂದಿ’ತ್ವ ಹೇರಿಕೆ & GST ತೆರಿಗೆ ಕಬಳಿಕೆಗಳು ರಾಜ್ಯಕ್ಕೆ ಮಾರಕ” ಎಂದು ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದೆ.

ಆದರೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಚಿವ ಮಾಧುಸ್ವಾಮಿಯವರ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಕರ್ನಾಟಕದ ನೆಲೆಯಲ್ಲಿ ಯೋಚಿಸಿದಾಗ ಹಳೆ ಮೈಸೂರು ಪ್ರಾಂತ್ಯ ಅಭಿವೃದ್ದಿಯಾಗಿದೆ. ಅದರೆ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಹಿಂದುಳಿದಿವೆ. ಹಾಗಾಗಿ ನಾವು ಅವುಗಳಿಗೆ ಒತ್ತು ನೀಡಿದಂತೆ ಕೇಂದ್ರ ಸರ್ಕಾರವು ಸಹ ಹಿಂದುಳಿದ ಉತ್ತರ ಪ್ರದೇಶ, ಬಿಹಾರದಂತಹ ರಾಜ್ಯಗಳಿಗೆ ಒತ್ತು ನೀಡುವುದು ಸರಿಯಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ಮುಂದುವರಿದು, ದೇಶದ ಇತರ ರಾಜ್ಯಗಳಲ್ಲಿಯೂ ಸಹ ಹೋಗಿ ಕರ್ನಾಟಕದ ವಿದ್ಯಾರ್ಥಿಗಳು ಓದಬಹುದು ಎಂದು ನೀಟ್ ವ್ಯವಸ್ಥೆಯನ್ನು ಸಮರ್ಥಿಸಿಕೊಂಡು ಮಾಧುಸ್ವಾಮಿ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಕೇಂದ್ರ ಸರ್ಕಾರದಲ್ಲಿ ಸರ್ವಾಧಿಕಾರಿ ಧೋರಣೆ ಪ್ರಾರಂಭವಾಗಿದ್ದು, ಒಕ್ಕೂಟಕ್ಕೆ ಬಹಳ ದೊಡ್ಡ ಆತಂಕ ಎದುರಾಗಿದೆ. ಬೆಳೆದಂತೆ ಉದಾರವಾದಿಗಳಾಗಬೇಕಾಗಿದ್ದ ನಾವು ಪ್ರಸ್ತುತ ಕೇಂದ್ರೀಕರಣ ಆಗುತ್ತಿದ್ದೇವೆ. ನೀಟ್ ಪರೀಕ್ಷಗೂ, ಕರ್ನಾಟಕಕ್ಕೂ ಏನ್‌ ಸಂಬಂಧವಿದೆ?” ಎಂದು ಮಾಧುಸ್ವಾಮಿ ನಿನ್ನೆ ಹೇಳಿದ್ದರು. ಅಲ್ಲದೇ ಪಕ್ಕದಲ್ಲೇ ಕೂತಿದ್ದ ಸಂಸದ ತೇಜಸ್ವಿ ಸೂರ್ಯ ಅವರಿಗೆ ನೀವಿದನ್ನು ಸಂಸತ್ತಿನಲ್ಲಿ ಕೇಳಬೇಕು ಎಂದು ಎಚ್ಚರಿಸಿದ್ದರು.

“ಕರ್ನಾಟಕದಲ್ಲಿ ಇರುವ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕನ್ನಡಿಗರಿಗೆ ಅವಕಾಶ ಇಲ್ಲ. ತುಮಕೂರಿನಲ್ಲಿ ಪ್ರಧಾನಿ ಉದ್ಘಾಟನೆ ಮಾಡಿದ ಫುಡ್ ಪಾರ್ಕ್, ಬೆಂಗಳೂರಿನಲ್ಲಿರುವ ಕಂಪನಿಗಳು.. ಹೀಗೆ ಎಲ್ಲಿಯೂ ಕನ್ನಡಿಗರಿಗೆ ಆದ್ಯತೆ ಇಲ್ಲ. ಜಾಗ, ಸೌಲಭ್ಯ ಎಲ್ಲವೂ ನಮ್ಮದಾದರೂ ಉದ್ಯೋಗ ಮಾತ್ರ ಬೇರೆಯವರಿಗೆ ಸೇರಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ‘ಸರ್ವಾಧಿಕಾರಿ ಧೋರಣೆ ಪ್ರಾರಂಭವಾಗಿದೆ’- ಕೇಂದ್ರದ ವಿರುದ್ದವೆ ಹರಿಹಾಯ್ದ ಸಚಿವ ಮಾಧುಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...