Homeಮುಖಪುಟಕೇಂದ್ರದ ಸರ್ವಾಧಿಕಾರಿ ಧೋರಣೆ ಹೇಳಿಕೆ: ಮಾಧುಸ್ವಾಮಿ ಅಭಿನಂದಿಸಿದ ಕಾಂಗ್ರೆಸ್ - ತೇಜಸ್ವಿ ಸೂರ್ಯ ಆಕ್ಷೇಪ

ಕೇಂದ್ರದ ಸರ್ವಾಧಿಕಾರಿ ಧೋರಣೆ ಹೇಳಿಕೆ: ಮಾಧುಸ್ವಾಮಿ ಅಭಿನಂದಿಸಿದ ಕಾಂಗ್ರೆಸ್ – ತೇಜಸ್ವಿ ಸೂರ್ಯ ಆಕ್ಷೇಪ

- Advertisement -
- Advertisement -

‘ರಾಷ್ಟ್ರೀಯ ಐಕ್ಯತೆ ಮತ್ತು ಪ್ರಾದೇಶಿಕ ಸ್ವಾತಂತ್ಯ್ರ’ ಎಂಬ ವಿಷಯದ ಬಗ್ಗೆ ನಡೆದ ವಿಚಾರದ ಸಂಕಿರಣದಲ್ಲಿ ಮಾತನಾಡುತ್ತಾ ಸಚಿವ ಜೆ.ಸಿ. ಮಾಧುಸ್ವಾಮಿ ಅವರು, ‘ಕೇಂದ್ರದಲ್ಲಿ ಸರ್ವಾಧಿಕಾರಿ ಧೋರಣೆ ಪ್ರಾರಂಭವಾಗಿದೆ’ ಎಂದು ಕೇಂದ್ರದ ಬಿಜೆಪಿ ಸರ್ಕಾರ ವಿರುದ್ದ ಹರಿಹಾಯ್ದಿದ್ದಕ್ಕೆ ಕಾಂಗ್ರೆಸ್ ಪಕ್ಷ ಅವರನ್ನು ಅಭಿನಂದಿಸಿದೆ.

“ಕೇಂದ್ರ ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ಬಹಿರಂಗವಾಗಿ ಒಪ್ಪಿ, ಖಂಡಿಸಿದ್ದಕ್ಕೆ ಮಾಧುಸ್ವಾಮಿಯವರಿಗೆ ಅಭಿನಂದನೆಗಳು! ರಾಜ್ಯಗಳ ಅಭಿಪ್ರಾಯಕ್ಕೆ ಮನ್ನಣೆ ನೀಡದೆ ರಾಜ್ಯಗಳ ವಿಷಯವಾದ ಕೃಷಿಗೆ ಸಂಬಂಧಿತ ಕಾಯ್ದೆಗಳನ್ನು ಹೇರಿ ರೈತರಿಗೆ ಮರಣ ಶಾಸನ ಬರೆಯುತ್ತಿದೆ ಕೇಂದ್ರ ಸರ್ಕಾರ. ‘ಹಿಂದಿ’ತ್ವ ಹೇರಿಕೆ & GST ತೆರಿಗೆ ಕಬಳಿಕೆಗಳು ರಾಜ್ಯಕ್ಕೆ ಮಾರಕ” ಎಂದು ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದೆ.

ಆದರೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಚಿವ ಮಾಧುಸ್ವಾಮಿಯವರ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಕರ್ನಾಟಕದ ನೆಲೆಯಲ್ಲಿ ಯೋಚಿಸಿದಾಗ ಹಳೆ ಮೈಸೂರು ಪ್ರಾಂತ್ಯ ಅಭಿವೃದ್ದಿಯಾಗಿದೆ. ಅದರೆ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಹಿಂದುಳಿದಿವೆ. ಹಾಗಾಗಿ ನಾವು ಅವುಗಳಿಗೆ ಒತ್ತು ನೀಡಿದಂತೆ ಕೇಂದ್ರ ಸರ್ಕಾರವು ಸಹ ಹಿಂದುಳಿದ ಉತ್ತರ ಪ್ರದೇಶ, ಬಿಹಾರದಂತಹ ರಾಜ್ಯಗಳಿಗೆ ಒತ್ತು ನೀಡುವುದು ಸರಿಯಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ಮುಂದುವರಿದು, ದೇಶದ ಇತರ ರಾಜ್ಯಗಳಲ್ಲಿಯೂ ಸಹ ಹೋಗಿ ಕರ್ನಾಟಕದ ವಿದ್ಯಾರ್ಥಿಗಳು ಓದಬಹುದು ಎಂದು ನೀಟ್ ವ್ಯವಸ್ಥೆಯನ್ನು ಸಮರ್ಥಿಸಿಕೊಂಡು ಮಾಧುಸ್ವಾಮಿ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಕೇಂದ್ರ ಸರ್ಕಾರದಲ್ಲಿ ಸರ್ವಾಧಿಕಾರಿ ಧೋರಣೆ ಪ್ರಾರಂಭವಾಗಿದ್ದು, ಒಕ್ಕೂಟಕ್ಕೆ ಬಹಳ ದೊಡ್ಡ ಆತಂಕ ಎದುರಾಗಿದೆ. ಬೆಳೆದಂತೆ ಉದಾರವಾದಿಗಳಾಗಬೇಕಾಗಿದ್ದ ನಾವು ಪ್ರಸ್ತುತ ಕೇಂದ್ರೀಕರಣ ಆಗುತ್ತಿದ್ದೇವೆ. ನೀಟ್ ಪರೀಕ್ಷಗೂ, ಕರ್ನಾಟಕಕ್ಕೂ ಏನ್‌ ಸಂಬಂಧವಿದೆ?” ಎಂದು ಮಾಧುಸ್ವಾಮಿ ನಿನ್ನೆ ಹೇಳಿದ್ದರು. ಅಲ್ಲದೇ ಪಕ್ಕದಲ್ಲೇ ಕೂತಿದ್ದ ಸಂಸದ ತೇಜಸ್ವಿ ಸೂರ್ಯ ಅವರಿಗೆ ನೀವಿದನ್ನು ಸಂಸತ್ತಿನಲ್ಲಿ ಕೇಳಬೇಕು ಎಂದು ಎಚ್ಚರಿಸಿದ್ದರು.

“ಕರ್ನಾಟಕದಲ್ಲಿ ಇರುವ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕನ್ನಡಿಗರಿಗೆ ಅವಕಾಶ ಇಲ್ಲ. ತುಮಕೂರಿನಲ್ಲಿ ಪ್ರಧಾನಿ ಉದ್ಘಾಟನೆ ಮಾಡಿದ ಫುಡ್ ಪಾರ್ಕ್, ಬೆಂಗಳೂರಿನಲ್ಲಿರುವ ಕಂಪನಿಗಳು.. ಹೀಗೆ ಎಲ್ಲಿಯೂ ಕನ್ನಡಿಗರಿಗೆ ಆದ್ಯತೆ ಇಲ್ಲ. ಜಾಗ, ಸೌಲಭ್ಯ ಎಲ್ಲವೂ ನಮ್ಮದಾದರೂ ಉದ್ಯೋಗ ಮಾತ್ರ ಬೇರೆಯವರಿಗೆ ಸೇರಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ‘ಸರ್ವಾಧಿಕಾರಿ ಧೋರಣೆ ಪ್ರಾರಂಭವಾಗಿದೆ’- ಕೇಂದ್ರದ ವಿರುದ್ದವೆ ಹರಿಹಾಯ್ದ ಸಚಿವ ಮಾಧುಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....